Homeಕರ್ನಾಟಕಮುಸ್ಲಿಮರಿಗೆ ಮೀಸಲಾತಿ ನೀಡಲು 'ಸಂವಿಧಾನ ಬದಲಾಯಿಸುತ್ತೇವೆ' ಅಂದ್ರಾ ಡಿಕೆಶಿ...ಡಿಸಿಎಂ ಮೇಲೆ ಬಿಜೆಪಿ ಮುಗಿಬಿದ್ದಿದ್ದೇಕೆ?

ಮುಸ್ಲಿಮರಿಗೆ ಮೀಸಲಾತಿ ನೀಡಲು ‘ಸಂವಿಧಾನ ಬದಲಾಯಿಸುತ್ತೇವೆ’ ಅಂದ್ರಾ ಡಿಕೆಶಿ…ಡಿಸಿಎಂ ಮೇಲೆ ಬಿಜೆಪಿ ಮುಗಿಬಿದ್ದಿದ್ದೇಕೆ?

- Advertisement -
- Advertisement -

“ಮುಸ್ಲಿಮರಿಗೆ ಮೀಸಲಾತಿ ನೀಡಲು ನಾವು ಸಂವಿಧಾನ ಬದಲಾಯಿಸುತ್ತೇವೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿರುವುದಾಗಿ ಬಿಜೆಪಿ ಆರೋಪಿಸಿದ್ದು, ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದೆ.

ಇಂದು (ಮಾ.24) ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು,”ಸ್ಪೀಕರ್ ಸರ್, ನಾನು ಬಹಳ ಗಂಭೀರವಾದ ವಿಷಯವನ್ನು ಪ್ರಸ್ತಾಪಿಸಲು ಎದ್ದು ನಿಂತಿದ್ದೇನೆ. ಎನ್‌ಡಿಎ ಸಂಸದರು ನನ್ನನ್ನು ಭೇಟಿಯಾಗಿ ಬಹಳ ಪ್ರಮುಖವಾದ ಈ ವಿಷಯವನ್ನು ಸಂಸತ್‌ನಲ್ಲಿ ಪ್ರಸ್ತಾಪಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸರ್..ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರು, ಬಹಳ ಜವಾಬ್ದಾರಿಯುತ ಕಾಂಗ್ರೆಸ್ ನಾಯಕ, ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವವರು ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಭಾರತದ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ನಾವು ಹಗುರವಾಗಿ ತೆಗೆದುಕೊಳ್ಳುವುದಿಲ್ಲ” ಎಂದರು.

“ಈ ಹೇಳಿಕೆಯನ್ನು ಯಾವುದಾದರು ಸಾಮಾನ್ಯ ವ್ಯಕ್ತಿ ನೀಡಿದ್ದರೆ ನಾವು ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ. ನಾವು ಸಂಸತ್ತಿನ ಹೊರಗೆ ಪ್ರತಿಕ್ರಿಯಿಸುತ್ತಿದ್ದೆವು. ಇದು ಒಬ್ಬರು ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿ ನೀಡಿರುವ ಹೇಳಿಕೆ. ಕಾಂಗ್ರೆಸ್ ಪಕ್ಷ ಮುಸ್ಲಿಮರಿಗೆ ಮೀಸಲಾತಿ ನೀಡಲಿದೆ, ಅದಕ್ಕಾಗಿ ಸಂವಿಧಾನ ಬದಲಾಯಿಸಲಿದೆ ಎಂದು ಹೇಳಿದ್ದಾರೆ. ಇದು ಅತ್ಯಂತ ಗಂಭೀರ ವಿಚಾರ, ಇದನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಇದು ಭಾರತದ ಸಂವಿಧಾನದ ಮೇಲಿನ ದಾಳಿ. ಡಾ.ಬಿಆರ್ ಅವರು ಕೊಟ್ಟಿರುವ ಸಂವಿಧಾನದ ಮೇಲಿನ ದಾಳಿ” ಎಂದು ಕಿಡಿಕಾರಿದರು.

“ಈ ಜನರು ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಫೋಟೋ ಹಿಡಿದುಕೊಂಡು ಬರುತ್ತಾರೆ. ಅದೇ ಜನರು ಭಾರತದ ಸಂವಿಧಾನವನ್ನು ಬದಲಾಯಿಸುವುದಾಗಿ ಅಧಿಕೃತ ಹೇಳಿಕೆ ನೀಡುತ್ತಾರೆ. ಇಲ್ಲಿ ಕುಳಿತಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಈ ವಿಚಾರದ ಬಗ್ಗೆ ತಮ್ಮ ನಿಲುವು ವ್ಯಕ್ತಪಡಿಸಬೇಕೆಂದು ನಾನು ಆಗ್ರಹಿಸುತ್ತೇನೆ. ಮುಸ್ಲಿಮರಿಗೆ ಮೀಸಲಾತಿ ನೀಡಲು ನೀವು ಹೇಗೆ ಮತ್ತು ಯಾವ ಕಾರಣಕ್ಕೆ ಭಾರತದ ಸಂವಿಧಾನ ಬದಲಾಯಿಸಲು ಬಯಸುತ್ತಿದ್ದೀರಿ? ನನಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಿಂದ ಅವರ ನಿಲುವಿನ ಕುರಿತು ಸ್ಪಷ್ಟವಾದ ಪ್ರತಿಕ್ರಿಯೆ ಬೇಕು” ಎಂದು ಒತ್ತಾಯಿಸಿದರು.

ಡಿ.ಕೆ ಶಿವಕುಮಾರ್ ಅವರ ಹೇಳಿಕೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್ ಮಾಳವೀಯ, “ಕರ್ನಾಟಕದ ಉಪಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರು ಮುಸ್ಲಿಮರಿಗೆ ಮೀಸಲಾತಿ ನೀಡಲು ಕಾಂಗ್ರೆಸ್ ಸಂವಿಧಾನವನ್ನು ತಿದ್ದುಪಡಿ ಮಾಡಲಿದೆ ಎಂದು ಬಹಿರಂಗವಾಗಿ ಘೋಷಿಸಿದ್ದಾರೆ” ಎಂದಿದ್ದಾರೆ.

“ಸ್ವಯಂ ಘೋಷಿತ ಸಂವಿಧಾನದ ರಕ್ಷಕ ರಾಹುಲ್ ಗಾಂಧಿ ಈಗ ಎಲ್ಲಿದ್ದಾರೆ? ಕಾಂಗ್ರೆಸ್ ಯಾವಾಗಲೂ ರಾಷ್ಟ್ರೀಯ ಹಿತಾಸಕ್ತಿಗಿಂತ ಸಮಾಧಾನಕ್ಕೆ ಆದ್ಯತೆ ನೀಡಿದೆ. ಅವರು ಧಾರ್ಮಿಕ ಆಧಾರದ ಮೇಲೆ ದೇಶವನ್ನು ವಿಭಜಿಸಲು ಹಿಂಜರಿಯಲಿಲ್ಲ ಮತ್ತು ಅದರ ನಂತರವೂ ಮುಸ್ಲಿಮರು ಹಿಂದೆ ಉಳಿಯುವಂತೆ ನೋಡಿಕೊಂಡರು. ಇದಕ್ಕಿಂತ ದೊಡ್ಡ ದ್ರೋಹ ಇನ್ನೊಂದಿಲ್ಲ”ಎಂದು ಹೇಳಿದ್ದಾರೆ.

“ಕಾಂಗ್ರೆಸ್ ಎಂದಿಗೂ ಹಿಂದೂಗಳಿಗೆ ನ್ಯಾಯಯುತವಾಗಿ ವರ್ತಿಸಿಲ್ಲ – ಮತ್ತು ಅದು ಎಂದಿಗೂ ಆಗುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

ಬಿಜೆಪಿಗರ ಆರೋಪದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, “ನಾನು ನಡ್ಡಾ ಅವರಿಗಿಂತ ಸಂವೇದನಾಶೀಲ, ಹಿರಿಯ ರಾಜಕಾರಣಿ. ನಾನು ಕಳೆದ 36 ವರ್ಷಗಳಿಂದ ವಿಧಾನಸಭೆಯಲ್ಲಿದ್ದೇನೆ. ನನಗೆ ಸಾಮಾನ್ಯ ಜ್ಞಾನವಿದೆ. ವಿವಿಧ ತೀರ್ಪುಗಳ ನಂತರ ಹಲವು ಬದಲಾವಣೆಗಳಾಗುತ್ತವೆ ಎಂದು ನಾನು ಸಾಂದರ್ಭಿಕವಾಗಿ ಹೇಳಿದ್ದೇನೆ. ಹಿಂದುಳಿದ ವರ್ಗಗಳ ಕೋಟಾದ ಪ್ರಕಾರ ಮೀಸಲಾತಿ ನೀಡಲಾಗಿದೆ. ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ನಾನು ಹೇಳಿಲ್ಲ. ಅವರು ಏನು ಉಲ್ಲೇಖಿಸುತ್ತಾರೋ ಅದು ತಪ್ಪು. ಅವರು ಅದನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ನಾವು ರಾಷ್ಟ್ರೀಯ ಪಕ್ಷ… ಈ ದೇಶಕ್ಕೆ ಸಂವಿಧಾನವನ್ನು ತಂದಿದ್ದು ನಮ್ಮ ಪಕ್ಷ… ನಾನು ಇದರ ಮೇಲೆ ಹಕ್ಕುಚ್ಯುತಿ ನೋಟಿಸ್ ನೀಡುತ್ತೇನೆ. ನಾನು ಪ್ರಕರಣದ ವಿರುದ್ಧ ಹೋರಾಡುತ್ತೇನೆ. ಅವರು ನನ್ನನ್ನು ತಪ್ಪಾಗಿ ಉಲ್ಲೇಖಿಸುತ್ತಿದ್ದಾರೆ…” ಎಂದಿದ್ದಾರೆ.

ಡಿ.ಕೆ ಶಿವಕುಮಾರ್ ಸಂವಿಧಾನ ಬದಲಾಯಿಸುವುದಾಗಿ ಹೇಳಿದ್ದು ನಿಜಾನಾ?

ನ್ಯೂಸ್ 18 ಇಂಡಿಯಾ ಸುದ್ದಿ ಸಂಸ್ಥೆ ಆಯೋಜಿಸಿದ್ದ ‘ಡೈಮಂಡ್ ಸ್ಟೇಟ್ಸ್ ಸಮ್ಮಿಟ್’ ಎಂಬ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್ ಭಾಗವಹಿಸಿದ್ದರು. ಅಲ್ಲಿ ರಾಜಕೀಯ, ಸರ್ಕಾರ, ಕಾಂಗ್ರೆಸ್ ಪಕ್ಷ ಹಾಗೂ ವೈಯಕ್ತಿಕ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳಿಗೆ ಡಿ.ಕೆ ಶಿವಕುಮಾರ್ ಉತ್ತರಿಸಿದ್ದಾರೆ.

ಕಾರ್ಯಕ್ರಮದ ನಿರೂಪಕ ಇತ್ತೀಚೆಗೆ ಕರ್ನಾಟಕ ಸರ್ಕಾರ ಮಸೂದೆ ಮಂಡಿಸಿದ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇಖಡ 4ರಷ್ಟು ಮೀಸಲಾತಿ ನೀಡುವ ವಿಚಾರವನ್ನು ಡಿ.ಕೆ ಶಿವಕುಮಾರ್ ಮುಂದೆ ಪ್ರಸ್ತಾಪಿಸಿ, “ಸಂವಿಧಾನದಲ್ಲಿ ಧರ್ಮಧಾರಿತ ಮೀಸಲಾತಿಗೆ ಅವಕಾಶ ಇಲ್ವಲ್ಲಾ”? ಎಂದಿದ್ದಾರೆ. ಅದಕ್ಕೆ ಉತ್ತರಿಸಿದ ಡಿಕೆಶಿ, “ಹೌದು, ನಾನು ಒಪ್ಪುತ್ತೇನೆ..ನೋಡೋಣ, ಕಾದು ನೋಡೋಣ. ನ್ಯಾಯಾಲಯದಲ್ಲಿ ಏನು ಬರುತ್ತದೆ ಎಂದು ಕಾದು ನೋಡೋಣ. ನಾವು ಏನೋ ಒಂದು ಪ್ರಾರಂಭಿಸಿದ್ದೇವೆ. ಎಲ್ಲರೂ ನ್ಯಾಯಾಲಯಕ್ಕೆ ಹೋಗುತ್ತಾರೆ ಎಂದು ನನಗೆ ಗೊತ್ತಿದೆ. ಶುಭದಿನಕ್ಕೆ ನಾವೆಲ್ಲ ಸ್ವಲ್ಪ ಕಾಯೋಣ.. ಶುಭದಿನ ಬರಲಿದೆ. ತುಂಬಾ ಬದಲಾವಣೆಗಳಿವೆ, ಸಂವಿಧಾನ ಬದಲಾಗಲಿದೆ. ಸಂವಿಧಾನದಲ್ಲಿ ಬದಲಾವಣೆಗಳನ್ನು ತಂದ ಕಾನೂನುಗಳಿವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...