Homeಮುಖಪುಟಭಾರತದ ಸಂಸತ್ತಿಗೆ ಫೇಸ್‌ಬುಕ್ ಸುಳ್ಳು ಹೇಳುತ್ತಿದೆಯೇ? - ರಾಹುಲ್ ಗಾಂಧಿ ಪ್ರಶ್ನೆ

ಭಾರತದ ಸಂಸತ್ತಿಗೆ ಫೇಸ್‌ಬುಕ್ ಸುಳ್ಳು ಹೇಳುತ್ತಿದೆಯೇ? – ರಾಹುಲ್ ಗಾಂಧಿ ಪ್ರಶ್ನೆ

"ಬಜರಂಗದಳದ ವರ್ತನೆ ಕಾನೂನುಬಾಹಿರವಾದದ್ದು. ಹಾಗಾಗಿ ಅದನ್ನು ನಿಷೇಧಿಸಬೇಕು ಎಂದು ಅಮೆರಿಕಾದ ಫೇಸ್‌ಬುಕ್ ಹೇಳುತ್ತದೆ. ಆದರೆ ಫೇಸ್‌ಬುಕ್ ಇಂಡಿಯಾ, ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲ ಎಂದು ಹೇಳುತ್ತದೆ"

- Advertisement -
- Advertisement -

‘ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲ’ ಎಂದು ಫೇಸ್‌ಬುಕ್ ಇಂಡಿಯಾ ಸಂಸದೀಯ ಸಮಿತಿಗೆ ಸ್ಪಷ್ಟನೆ ನೀಡಿತ್ತು. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಫೇಸ್‌ಬುಕ್ ಇಂಡಿಯಾ ಭಾರತದ ಸಂಸತ್ತಿಗೆ ಸುಳ್ಳು ಹೇಳುತ್ತಿದೆಯೇ” ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಬಜರಂಗದಳದ ವರ್ತನೆ ಕಾನೂನುಬಾಹಿರವಾದದ್ದು. ಹಾಗಾಗಿ ಅದನ್ನು ನಿಷೇಧಿಸಬೇಕು ಎಂದು ಅಮೆರಿಕಾದ ಫೇಸ್‌ಬುಕ್ ಹೇಳುತ್ತದೆ. ಆದರೆ ಫೇಸ್‌ಬುಕ್ ಇಂಡಿಯಾ, ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲ ಎಂದು ಹೇಳುತ್ತದೆ. ಫೇಸ್‌ಬುಕ್ ಸಂಸತ್ತಿಗೆ ಸುಳ್ಳು ಹೇಳುತ್ತಿದೆಯೇ?” ಎಂದು ಅಮೆರಿಕಾ ಪತ್ರಿಕೆಗಳ ವರದಿಯನ್ನು ಉಲ್ಲೇಖಿಸಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಡ್ರಗ್ ಕೇಸ್: ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್​ಗೆ ಎನ್​ಸಿಬಿ ನೋಟಿಸ್

ಬಜರಂಗದಳವು ಭಾರತದಾದ್ಯಂತ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರವನ್ನು ಬೆಂಬಲಿಸುವ ಅಪಾಯಕಾರಿ ಸಂಘಟನೆಯೆಂದು ಫೇಸ್‌ಬುಕ್‌ನ ಭದ್ರತಾ ತಂಡವು ಗುರುತಿಸಿದ್ದರೂ, ರಾಜಕೀಯ ಮತ್ತು ವ್ಯವಹಾರದ ರಕ್ಷಣೆಯ ಕಾರಣಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಅದಕ್ಕೆ ಮುಂದುವರೆಯಲು ಅವಕಾಶ ನೀಡಲಾಗಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು.

ಇದನ್ನೂ ಓದಿ: ’ಮೋದಿಯವರಂತೆ ಆಗಬೇಡಿ, ಮಾಸ್ಕ್ ಧರಿಸಿ’: ಮೋದಿ ವಿಡಿಯೋ ಟ್ರೋಲ್ ಮಾಡಿದ ಆಪ್

ಬಜರಂಗದಳವು ಆಡಳಿತಾರೂಢ ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ಬಗ್ಗೆ ಫೇಸ್‌ಬುಕ್ ಅರಿತುಕೊಂಡು, “ಬಜರಂಗದಳದ ವಿರುದ್ದ ಕ್ರಮ ಕೈಗೊಂಡರೆ ಕಂಪನಿ ವ್ಯವಹಾರದ ಭವಿಷ್ಯ ಮತ್ತು ಭಾರತದಲ್ಲಿನ ತನ್ನ ಸಿಬ್ಬಂದಿಗೆ ಅಪಾಯವಾಗಬಹುದು” ಎಂದು ಫೇಸ್‌ಬುಕ್ ಹೆದರಿತ್ತು‌‌ ಎಂದು ಪತ್ರಿಕೆ ಉಲ್ಲೇಖಿಸಿದೆ.

ಕಳೆದ ಆಗಸ್ಟ್‌‌ನಲ್ಲಿ ತನ್ನ ನೀತಿಗಳಲ್ಲಿ ಫೇಸ್‌ಬುಕ್ ಪಕ್ಷಪಾತ ಮಾಡುತ್ತಿದೆ ಎಂದು ವಾಲ್‌ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು. ವರದಿಯಲ್ಲಿ, “ಆಡಳಿತರೂಡ ಬಿಜೆಪಿಯ ಬಗ್ಗೆ ತನ್ನ ವ್ಯಾಪಾರ ಹಿತಾಸಕ್ತಿಗಳಿಗಾಗಿ ಒಲವು ತೋರಿಸಿದೆ ಹಾಗೂ ಫೇಸ್‌ಬುಕ್‌ನ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಮುಸ್ಲಿಂ ವಿರೋಧಿ ಟೀಕೆಗಳನ್ನು ಮಾಡಿದ್ದ ಬಿಜೆಪಿ ನಾಯಕನ ಪರವಾಗಿ ಲಾಬಿ ಮಾಡಿದ್ದಾರೆ” ಎಂದು ಹೇಳಲಾಗಿತ್ತು.

ಇದನ್ನೂ ಓದಿ: ಬ್ರಾಹ್ಮಣ ವಿರೋಧಿ ಪಠ್ಯಪುಸ್ತಕ ವಿವಾದ: ಸಿಎಂ ವಿರುದ್ದ ಆಕ್ರೋಶ

ಈ ವರದಿ ಪ್ರಕಟವಾದ ಕೆಲವೇ ದಿನಗಳಲ್ಲಿ ರಾಜಕಾರಣಿಯೊಬ್ಬರ ಖಾತೆಯನ್ನು ಅಮಾನತ್ತು ಮಾಡಿದ್ದ ಫೇಸ್‌ಬುಕ್, ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿತ್ತಾದರೂ ದ್ವೇಷ ಭಾಷಣಗಳನ್ನು ನಿಗ್ರಹಿಸಲು ಇನ್ನೂ ಉತ್ತಮವಾಗಿ ಕ್ರಮಕೈಗೊಳ್ಳಬೇಕಾಗಿದೆ ಎಂದು ಒಪ್ಪಿಕೊಂಡಿತ್ತು. ಅಲ್ಲದೆ ಅದರ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಕೂಡಾ ಫೇಸ್‌ಬುಕ್ ತೊರೆದಿದ್ದರು.

ಭಾರತದಲ್ಲಿ ಐದು ಕಚೇರಿಗಳನ್ನು ನಡೆಸುತ್ತಿರು ಫೇಸ್‌ಬುಕ್, ಅಕ್ಟೋಬರ್ ತಿಂಗಳೊಂದರಲ್ಲೇ ಶತಕೋಟಿ ಡಾಲರ್‌ಗಳಷ್ಟು ದುಡ್ಡನ್ನು ಹೂಡಿಕೆ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಫೇಸ್‌ಬುಕ್ ಭಾರತವನ್ನು ಬಳಕೆದಾರರ ವಿಷಯದಲ್ಲಿ ತನ್ನ ಅತಿದೊಡ್ಡ ಮಾರುಕಟ್ಟೆಯೆಂದು ಪರಿಗಣಿಸಿದೆ.


ಇದನ್ನೂ ಓದಿ: ಟೊಯೋಟಾ ಕಾರ್ಮಿಕರ ಸ್ವಾಭಿಮಾನಿ ಹೋರಾಟ 39 ನೇ ದಿನಕ್ಕೆ; ನಾಳೆ ಡಿಸಿ ಕಚೇರಿ ಮುತ್ತಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...