Homeಮುಖಪುಟಭಾರತದ ಸಂಸತ್ತಿಗೆ ಫೇಸ್‌ಬುಕ್ ಸುಳ್ಳು ಹೇಳುತ್ತಿದೆಯೇ? - ರಾಹುಲ್ ಗಾಂಧಿ ಪ್ರಶ್ನೆ

ಭಾರತದ ಸಂಸತ್ತಿಗೆ ಫೇಸ್‌ಬುಕ್ ಸುಳ್ಳು ಹೇಳುತ್ತಿದೆಯೇ? – ರಾಹುಲ್ ಗಾಂಧಿ ಪ್ರಶ್ನೆ

"ಬಜರಂಗದಳದ ವರ್ತನೆ ಕಾನೂನುಬಾಹಿರವಾದದ್ದು. ಹಾಗಾಗಿ ಅದನ್ನು ನಿಷೇಧಿಸಬೇಕು ಎಂದು ಅಮೆರಿಕಾದ ಫೇಸ್‌ಬುಕ್ ಹೇಳುತ್ತದೆ. ಆದರೆ ಫೇಸ್‌ಬುಕ್ ಇಂಡಿಯಾ, ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲ ಎಂದು ಹೇಳುತ್ತದೆ"

- Advertisement -
- Advertisement -

‘ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲ’ ಎಂದು ಫೇಸ್‌ಬುಕ್ ಇಂಡಿಯಾ ಸಂಸದೀಯ ಸಮಿತಿಗೆ ಸ್ಪಷ್ಟನೆ ನೀಡಿತ್ತು. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಫೇಸ್‌ಬುಕ್ ಇಂಡಿಯಾ ಭಾರತದ ಸಂಸತ್ತಿಗೆ ಸುಳ್ಳು ಹೇಳುತ್ತಿದೆಯೇ” ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಬಜರಂಗದಳದ ವರ್ತನೆ ಕಾನೂನುಬಾಹಿರವಾದದ್ದು. ಹಾಗಾಗಿ ಅದನ್ನು ನಿಷೇಧಿಸಬೇಕು ಎಂದು ಅಮೆರಿಕಾದ ಫೇಸ್‌ಬುಕ್ ಹೇಳುತ್ತದೆ. ಆದರೆ ಫೇಸ್‌ಬುಕ್ ಇಂಡಿಯಾ, ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲ ಎಂದು ಹೇಳುತ್ತದೆ. ಫೇಸ್‌ಬುಕ್ ಸಂಸತ್ತಿಗೆ ಸುಳ್ಳು ಹೇಳುತ್ತಿದೆಯೇ?” ಎಂದು ಅಮೆರಿಕಾ ಪತ್ರಿಕೆಗಳ ವರದಿಯನ್ನು ಉಲ್ಲೇಖಿಸಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಡ್ರಗ್ ಕೇಸ್: ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್​ಗೆ ಎನ್​ಸಿಬಿ ನೋಟಿಸ್

ಬಜರಂಗದಳವು ಭಾರತದಾದ್ಯಂತ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರವನ್ನು ಬೆಂಬಲಿಸುವ ಅಪಾಯಕಾರಿ ಸಂಘಟನೆಯೆಂದು ಫೇಸ್‌ಬುಕ್‌ನ ಭದ್ರತಾ ತಂಡವು ಗುರುತಿಸಿದ್ದರೂ, ರಾಜಕೀಯ ಮತ್ತು ವ್ಯವಹಾರದ ರಕ್ಷಣೆಯ ಕಾರಣಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಅದಕ್ಕೆ ಮುಂದುವರೆಯಲು ಅವಕಾಶ ನೀಡಲಾಗಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು.

ಇದನ್ನೂ ಓದಿ: ’ಮೋದಿಯವರಂತೆ ಆಗಬೇಡಿ, ಮಾಸ್ಕ್ ಧರಿಸಿ’: ಮೋದಿ ವಿಡಿಯೋ ಟ್ರೋಲ್ ಮಾಡಿದ ಆಪ್

ಬಜರಂಗದಳವು ಆಡಳಿತಾರೂಢ ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ಬಗ್ಗೆ ಫೇಸ್‌ಬುಕ್ ಅರಿತುಕೊಂಡು, “ಬಜರಂಗದಳದ ವಿರುದ್ದ ಕ್ರಮ ಕೈಗೊಂಡರೆ ಕಂಪನಿ ವ್ಯವಹಾರದ ಭವಿಷ್ಯ ಮತ್ತು ಭಾರತದಲ್ಲಿನ ತನ್ನ ಸಿಬ್ಬಂದಿಗೆ ಅಪಾಯವಾಗಬಹುದು” ಎಂದು ಫೇಸ್‌ಬುಕ್ ಹೆದರಿತ್ತು‌‌ ಎಂದು ಪತ್ರಿಕೆ ಉಲ್ಲೇಖಿಸಿದೆ.

ಕಳೆದ ಆಗಸ್ಟ್‌‌ನಲ್ಲಿ ತನ್ನ ನೀತಿಗಳಲ್ಲಿ ಫೇಸ್‌ಬುಕ್ ಪಕ್ಷಪಾತ ಮಾಡುತ್ತಿದೆ ಎಂದು ವಾಲ್‌ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು. ವರದಿಯಲ್ಲಿ, “ಆಡಳಿತರೂಡ ಬಿಜೆಪಿಯ ಬಗ್ಗೆ ತನ್ನ ವ್ಯಾಪಾರ ಹಿತಾಸಕ್ತಿಗಳಿಗಾಗಿ ಒಲವು ತೋರಿಸಿದೆ ಹಾಗೂ ಫೇಸ್‌ಬುಕ್‌ನ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಮುಸ್ಲಿಂ ವಿರೋಧಿ ಟೀಕೆಗಳನ್ನು ಮಾಡಿದ್ದ ಬಿಜೆಪಿ ನಾಯಕನ ಪರವಾಗಿ ಲಾಬಿ ಮಾಡಿದ್ದಾರೆ” ಎಂದು ಹೇಳಲಾಗಿತ್ತು.

ಇದನ್ನೂ ಓದಿ: ಬ್ರಾಹ್ಮಣ ವಿರೋಧಿ ಪಠ್ಯಪುಸ್ತಕ ವಿವಾದ: ಸಿಎಂ ವಿರುದ್ದ ಆಕ್ರೋಶ

ಈ ವರದಿ ಪ್ರಕಟವಾದ ಕೆಲವೇ ದಿನಗಳಲ್ಲಿ ರಾಜಕಾರಣಿಯೊಬ್ಬರ ಖಾತೆಯನ್ನು ಅಮಾನತ್ತು ಮಾಡಿದ್ದ ಫೇಸ್‌ಬುಕ್, ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿತ್ತಾದರೂ ದ್ವೇಷ ಭಾಷಣಗಳನ್ನು ನಿಗ್ರಹಿಸಲು ಇನ್ನೂ ಉತ್ತಮವಾಗಿ ಕ್ರಮಕೈಗೊಳ್ಳಬೇಕಾಗಿದೆ ಎಂದು ಒಪ್ಪಿಕೊಂಡಿತ್ತು. ಅಲ್ಲದೆ ಅದರ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಕೂಡಾ ಫೇಸ್‌ಬುಕ್ ತೊರೆದಿದ್ದರು.

ಭಾರತದಲ್ಲಿ ಐದು ಕಚೇರಿಗಳನ್ನು ನಡೆಸುತ್ತಿರು ಫೇಸ್‌ಬುಕ್, ಅಕ್ಟೋಬರ್ ತಿಂಗಳೊಂದರಲ್ಲೇ ಶತಕೋಟಿ ಡಾಲರ್‌ಗಳಷ್ಟು ದುಡ್ಡನ್ನು ಹೂಡಿಕೆ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಫೇಸ್‌ಬುಕ್ ಭಾರತವನ್ನು ಬಳಕೆದಾರರ ವಿಷಯದಲ್ಲಿ ತನ್ನ ಅತಿದೊಡ್ಡ ಮಾರುಕಟ್ಟೆಯೆಂದು ಪರಿಗಣಿಸಿದೆ.


ಇದನ್ನೂ ಓದಿ: ಟೊಯೋಟಾ ಕಾರ್ಮಿಕರ ಸ್ವಾಭಿಮಾನಿ ಹೋರಾಟ 39 ನೇ ದಿನಕ್ಕೆ; ನಾಳೆ ಡಿಸಿ ಕಚೇರಿ ಮುತ್ತಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...