Homeಮುಖಪುಟಭಾರತದ ಸಂಸತ್ತಿಗೆ ಫೇಸ್‌ಬುಕ್ ಸುಳ್ಳು ಹೇಳುತ್ತಿದೆಯೇ? - ರಾಹುಲ್ ಗಾಂಧಿ ಪ್ರಶ್ನೆ

ಭಾರತದ ಸಂಸತ್ತಿಗೆ ಫೇಸ್‌ಬುಕ್ ಸುಳ್ಳು ಹೇಳುತ್ತಿದೆಯೇ? – ರಾಹುಲ್ ಗಾಂಧಿ ಪ್ರಶ್ನೆ

"ಬಜರಂಗದಳದ ವರ್ತನೆ ಕಾನೂನುಬಾಹಿರವಾದದ್ದು. ಹಾಗಾಗಿ ಅದನ್ನು ನಿಷೇಧಿಸಬೇಕು ಎಂದು ಅಮೆರಿಕಾದ ಫೇಸ್‌ಬುಕ್ ಹೇಳುತ್ತದೆ. ಆದರೆ ಫೇಸ್‌ಬುಕ್ ಇಂಡಿಯಾ, ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲ ಎಂದು ಹೇಳುತ್ತದೆ"

- Advertisement -
- Advertisement -

‘ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲ’ ಎಂದು ಫೇಸ್‌ಬುಕ್ ಇಂಡಿಯಾ ಸಂಸದೀಯ ಸಮಿತಿಗೆ ಸ್ಪಷ್ಟನೆ ನೀಡಿತ್ತು. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಫೇಸ್‌ಬುಕ್ ಇಂಡಿಯಾ ಭಾರತದ ಸಂಸತ್ತಿಗೆ ಸುಳ್ಳು ಹೇಳುತ್ತಿದೆಯೇ” ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಬಜರಂಗದಳದ ವರ್ತನೆ ಕಾನೂನುಬಾಹಿರವಾದದ್ದು. ಹಾಗಾಗಿ ಅದನ್ನು ನಿಷೇಧಿಸಬೇಕು ಎಂದು ಅಮೆರಿಕಾದ ಫೇಸ್‌ಬುಕ್ ಹೇಳುತ್ತದೆ. ಆದರೆ ಫೇಸ್‌ಬುಕ್ ಇಂಡಿಯಾ, ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲ ಎಂದು ಹೇಳುತ್ತದೆ. ಫೇಸ್‌ಬುಕ್ ಸಂಸತ್ತಿಗೆ ಸುಳ್ಳು ಹೇಳುತ್ತಿದೆಯೇ?” ಎಂದು ಅಮೆರಿಕಾ ಪತ್ರಿಕೆಗಳ ವರದಿಯನ್ನು ಉಲ್ಲೇಖಿಸಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಡ್ರಗ್ ಕೇಸ್: ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್​ಗೆ ಎನ್​ಸಿಬಿ ನೋಟಿಸ್

ಬಜರಂಗದಳವು ಭಾರತದಾದ್ಯಂತ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರವನ್ನು ಬೆಂಬಲಿಸುವ ಅಪಾಯಕಾರಿ ಸಂಘಟನೆಯೆಂದು ಫೇಸ್‌ಬುಕ್‌ನ ಭದ್ರತಾ ತಂಡವು ಗುರುತಿಸಿದ್ದರೂ, ರಾಜಕೀಯ ಮತ್ತು ವ್ಯವಹಾರದ ರಕ್ಷಣೆಯ ಕಾರಣಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಅದಕ್ಕೆ ಮುಂದುವರೆಯಲು ಅವಕಾಶ ನೀಡಲಾಗಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು.

ಇದನ್ನೂ ಓದಿ: ’ಮೋದಿಯವರಂತೆ ಆಗಬೇಡಿ, ಮಾಸ್ಕ್ ಧರಿಸಿ’: ಮೋದಿ ವಿಡಿಯೋ ಟ್ರೋಲ್ ಮಾಡಿದ ಆಪ್

ಬಜರಂಗದಳವು ಆಡಳಿತಾರೂಢ ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ಬಗ್ಗೆ ಫೇಸ್‌ಬುಕ್ ಅರಿತುಕೊಂಡು, “ಬಜರಂಗದಳದ ವಿರುದ್ದ ಕ್ರಮ ಕೈಗೊಂಡರೆ ಕಂಪನಿ ವ್ಯವಹಾರದ ಭವಿಷ್ಯ ಮತ್ತು ಭಾರತದಲ್ಲಿನ ತನ್ನ ಸಿಬ್ಬಂದಿಗೆ ಅಪಾಯವಾಗಬಹುದು” ಎಂದು ಫೇಸ್‌ಬುಕ್ ಹೆದರಿತ್ತು‌‌ ಎಂದು ಪತ್ರಿಕೆ ಉಲ್ಲೇಖಿಸಿದೆ.

ಕಳೆದ ಆಗಸ್ಟ್‌‌ನಲ್ಲಿ ತನ್ನ ನೀತಿಗಳಲ್ಲಿ ಫೇಸ್‌ಬುಕ್ ಪಕ್ಷಪಾತ ಮಾಡುತ್ತಿದೆ ಎಂದು ವಾಲ್‌ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು. ವರದಿಯಲ್ಲಿ, “ಆಡಳಿತರೂಡ ಬಿಜೆಪಿಯ ಬಗ್ಗೆ ತನ್ನ ವ್ಯಾಪಾರ ಹಿತಾಸಕ್ತಿಗಳಿಗಾಗಿ ಒಲವು ತೋರಿಸಿದೆ ಹಾಗೂ ಫೇಸ್‌ಬುಕ್‌ನ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಮುಸ್ಲಿಂ ವಿರೋಧಿ ಟೀಕೆಗಳನ್ನು ಮಾಡಿದ್ದ ಬಿಜೆಪಿ ನಾಯಕನ ಪರವಾಗಿ ಲಾಬಿ ಮಾಡಿದ್ದಾರೆ” ಎಂದು ಹೇಳಲಾಗಿತ್ತು.

ಇದನ್ನೂ ಓದಿ: ಬ್ರಾಹ್ಮಣ ವಿರೋಧಿ ಪಠ್ಯಪುಸ್ತಕ ವಿವಾದ: ಸಿಎಂ ವಿರುದ್ದ ಆಕ್ರೋಶ

ಈ ವರದಿ ಪ್ರಕಟವಾದ ಕೆಲವೇ ದಿನಗಳಲ್ಲಿ ರಾಜಕಾರಣಿಯೊಬ್ಬರ ಖಾತೆಯನ್ನು ಅಮಾನತ್ತು ಮಾಡಿದ್ದ ಫೇಸ್‌ಬುಕ್, ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿತ್ತಾದರೂ ದ್ವೇಷ ಭಾಷಣಗಳನ್ನು ನಿಗ್ರಹಿಸಲು ಇನ್ನೂ ಉತ್ತಮವಾಗಿ ಕ್ರಮಕೈಗೊಳ್ಳಬೇಕಾಗಿದೆ ಎಂದು ಒಪ್ಪಿಕೊಂಡಿತ್ತು. ಅಲ್ಲದೆ ಅದರ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಕೂಡಾ ಫೇಸ್‌ಬುಕ್ ತೊರೆದಿದ್ದರು.

ಭಾರತದಲ್ಲಿ ಐದು ಕಚೇರಿಗಳನ್ನು ನಡೆಸುತ್ತಿರು ಫೇಸ್‌ಬುಕ್, ಅಕ್ಟೋಬರ್ ತಿಂಗಳೊಂದರಲ್ಲೇ ಶತಕೋಟಿ ಡಾಲರ್‌ಗಳಷ್ಟು ದುಡ್ಡನ್ನು ಹೂಡಿಕೆ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಫೇಸ್‌ಬುಕ್ ಭಾರತವನ್ನು ಬಳಕೆದಾರರ ವಿಷಯದಲ್ಲಿ ತನ್ನ ಅತಿದೊಡ್ಡ ಮಾರುಕಟ್ಟೆಯೆಂದು ಪರಿಗಣಿಸಿದೆ.


ಇದನ್ನೂ ಓದಿ: ಟೊಯೋಟಾ ಕಾರ್ಮಿಕರ ಸ್ವಾಭಿಮಾನಿ ಹೋರಾಟ 39 ನೇ ದಿನಕ್ಕೆ; ನಾಳೆ ಡಿಸಿ ಕಚೇರಿ ಮುತ್ತಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...