Homeಬಹುಜನ ಭಾರತಬಹುಜನ ಭಾರತ; ಸಾರವನು ಧಿಕ್ಕರಿಸಿ ರೂಪವನು ಪೂಜಿಸುವ ಮೋಸ

ಬಹುಜನ ಭಾರತ; ಸಾರವನು ಧಿಕ್ಕರಿಸಿ ರೂಪವನು ಪೂಜಿಸುವ ಮೋಸ

- Advertisement -
- Advertisement -

ಮೊನ್ನೆ ಸರಿದು ಹೋದಸಂವಿಧಾನ ದಿನಾಚರಣೆಯಂದು ಮಾತನಾಡಿದ ಪ್ರಧಾನಮಂತ್ರಿಯವರು, “ನಾವು ಇಂದೇನಾದರೂ ಸಂವಿಧಾನವನ್ನು ಬರೆಯಬೇಕಾಗುವ ಪರಿಸ್ಥಿತಿ ಇದ್ದಿದ್ದರೆ, ಅದರ ಒಂದೇ ಒಂದು ಪುಟವನ್ನು ಕೂಡ ಬರೆಯಲಾಗುತ್ತಿರಲಿಲ್ಲ” ಎಂದರು.

ಆದರೆ ಸಂವಿಧಾನವನ್ನು ತಿದ್ದಿ ಬರೆಯುವ ಮಾತುಗಳನ್ನು ಅವರ ಪರಿವಾರ ಕಾಲಕಾಲಕ್ಕೆ ಆಡುತ್ತಲೇ ಬರುತ್ತಿದೆ. ಪ್ರಧಾನಿಯವರು ಒಂದೆಡೆ ಸಂವಿಧಾನವನ್ನು ಹೊಗಳುತ್ತ ಮತ್ತೊಂದೆಡೆ ಅದನ್ನು ಬೀಳುಗಳೆಯುವ ಹೆಜ್ಜೆಗಳನ್ನೇ ಇಡುತ್ತ ಬಂದಿದ್ದಾರೆ. ಅವರ ಪರಿವಾರ ಸಾವಿರ ಲಕ್ಷ ನಾಲಗೆಗಳಲ್ಲಿ ಸಂವಿಧಾನವನ್ನು ಹಳಿಯುತ್ತಲೇ ಬಂದಿದೆ.

ಧನಿಕರು-ದರಿದ್ರರು, ಬಲಾಢ್ಯ ಜಾತಿಗಳು-ತಳವರ್ಗಗಳ ನಡುವಣ ಅಂತರ ತಗ್ಗುವ ಬದಲು ಹೆಚ್ಚುತ್ತಲೇ ನಡೆದಿದೆ. ನೂರಾರು ವರ್ಷಗಳಿಂದ ವಂಚಿತವಾಗಿರುವ ಸಮುದಾಯಗಳಿಗೆ ದೊರೆತಿರುವ ಮೀಸಲಾತಿಯನ್ನು ಪ್ರತ್ಯಕ್ಷವಾಗಿ ಪರೋಕ್ಷವಾಗಿ ಕಿತ್ತುಕೊಳ್ಳುವ ಹುನ್ನಾರಗಳಿಗೆ ಹೆಚ್ಚು ಬಲ ಬಂದಿದೆ. ಕರುಬುವ ತೆಗಳುವ ಹಂಗಿಸುವ ದನಿಗಳಿಗೆ ಧಾರಾಳ ಧ್ವನಿವರ್ಧಕಗಳು ಒದಗಿವೆ. ಆದಿವಾಸಿಗಳು-ದಲಿತರ ಶೋಷಣೆಗೆ ಕೊನೆಯೇ ಕಾಣದಾಗಿದೆ. ದಲಿತರು, ದಮನಿತರು ಆದಿವಾಸಿಗಳು ಅಲ್ಪಸಂಖ್ಯಾತರು, ಪ್ರಗತಿಪರರು ಮಾತ್ರವೇ ಸಂವಿಧಾನವನ್ನು ಪ್ರಾಣಪದಕವೆಂದು ಬಗೆದು ಎದೆಗೆ ಅಪ್ಪಿ ಹಿಡಿದಿದ್ದಾರೆ.

ಸಂವಿಧಾನವು ಅದೆಷ್ಟೇ ಒಳ್ಳೆಯದಾಗಿರಲಿ, ಅದನ್ನು ಜಾರಿಗೆ ತರುವವರು ಒಳ್ಳೆಯವರಾಗಿರದಿದ್ದರೆ ಸಂವಿಧಾನವೂ ಕೆಟ್ಟದೆನಿಸಿಕೊಳ್ಳುತ್ತದೆ. ಸಂವಿಧಾನವು ಅದೆಷ್ಟೇ ಕೆಟ್ಟದಾಗಿದ್ದರೂ ಜಾರಿಗೆ ತರುವವರು ಒಳ್ಳೆಯವರಾಗಿದ್ದರೆ ಸಂವಿಧಾನ ಕೂಡ ಒಳ್ಳೆಯದೇ ಎನಿಸಿಕೊಳ್ಳುತ್ತದೆ ಎಂದಿದ್ದರು ಬಾಬಾಸಾಹೇಬರು.

ಆಳುವವರು ಟೀಕೆ ವಿಮರ್ಶೆಗಳಿಗೆ ಅಸಹನೆ ತೋರಿ ವಿಮರ್ಶಿಸುವವರನ್ನು ಜೈಲುಗಳಿಗೆ ತಳ್ಳುತ್ತಿರುವಾಗ, ಪ್ರಭುತ್ವದ ಮುಂದೆ ಪ್ರಜೆಗಳು ಮಂಡಿಯೂರಬೇಕೆಂದು ಬಯಸುವಾಗ, ಆಳುವವರ ನಡೆ ಮತ್ತು ನುಡಿಗೆ ಸಂಬಂಧವೇ ಇಲ್ಲದಿರುವಾಗ, ಸಮಾಜದ ಎಲ್ಲ ವರ್ಗಗಳನ್ನೂ ಜೊತೆಗೆ ಸೇರಿಸಿಕೊಂಡು ಮುನ್ನಡೆಯಬೇಕೆಂಬ ತತ್ವವನ್ನು ಧಿಕ್ಕರಿಸಿರುವಾಗ, ನಾಗರಿಕರ ಸ್ವಾತಂತ್ರ್ಯಗಳನ್ನು ಹಿಗ್ಗಿಸುವ ಬದಲು ಕುಗ್ಗಿಸುತ್ತಿರುವಾಗ – ಈಗ ಇದೀಗ ಸಂವಿಧಾನವನ್ನು ಬರೆಯಬೇಕಾಗಿ ಬಂದಿದ್ದರೆ.. ಊಹೆಗೂ ನಿಲುಕದ ಅನಾಹುತವಿದು.

ನಾಗರಿಕರಲ್ಲಿ ಸಾಂವಿಧಾನಿಕ ಮೌಲ್ಯಗಳನ್ನು ಪಸರಿಸಲು ನವೆಂಬರ್ 26ರ ದಿನವನ್ನು ಸಂವಿಧಾನ ದಿವಸವೆಂದು ಆಚರಿಸುವುದಾಗಿ ಪ್ರಧಾನಿಯವರು 2015ರಲ್ಲಿ ಘೋಷಿಸಿದ್ದರು. ಸಂವಿಧಾನ ನಿರ್ಮಾಪಕರಿಗೆ ಕೃತಜ್ಞತೆ ಸಲ್ಲಿಸುವ ದಿನವಿದು. ಅವರ ಕನಸಿನ ಭಾರತವನ್ನು ಕಟ್ಟುವ ಕುರಿತ ನಮ್ಮ ಪ್ರತಿಬದ್ಧತೆಯನ್ನು ಪುನರುಚ್ಚರಿಸುವ ತೇದಿಯೂ ಹೌದು ಎಂದು ಸಾರಿದರು. 197 ಕೋಟಿ ರುಪಾಯಿ ವೆಚ್ಚದಲ್ಲಿ ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರವೂ ತಲೆಯೆತ್ತಿದೆ. ಒಳ್ಳೆಯ ನಡೆಗಳೇ ಹೌದು.

ದಲಿತರ ಮತಗಳನ್ನು ಸೆಳೆಯುವ ಪ್ರತಿಮೆ-ಪ್ರತೀಕ-ಸ್ಮಾರಕ ರೂಪಕಗಳಾಗಿ ಮಾತ್ರವೇ ಪಕ್ಷ ಪರಿವಾರಗಳು ಅಂಬೇಡ್ಕರ್ ಮತ್ತು ಸಂವಿಧಾನವನ್ನು ನೋಡುತ್ತಿವೆ. ನಿಜದ ಬಾಬಾಸಾಹೇಬರ, ಅವರ ಪ್ರಖರ ವಿಚಾರಗಳ, ಅವರು ಕೊಡಮಾಡಿದ ಸಂವಿಧಾನದ ಮೌಲ್ಯಗಳ ನಿತ್ಯ ನಿರಂತರ ಹತ್ಯೆ ನಡೆಯುತ್ತಿದೆ. ಸಂವಿಧಾನ ದಿನಾಚರಣೆಯನ್ನು ಜಾರಿಗೆ ತಂದರೆ ಸಾಲದು, ಅದು ಎತ್ತಿ ಹಿಡಿದಿರುವ ಮೌಲ್ಯಗಳನ್ನು ಗೌರವಿಸಬೇಕು.

1949ರಲ್ಲಿ ಮದ್ರಾಸ್‌ನಲ್ಲಿ ಮಾಡಿದ ಭಾಷಣವೊಂದರಲ್ಲಿ ಅಂದಿನ ಗೃಹಮಂತ್ರಿ ಮತ್ತು ಉಪಪ್ರಧಾನಮಂತ್ರಿ ಸರ್ದಾರ್ ಪಟೇಲ್ ಅವರು ತೀವ್ರ ಎಡಪಂಥೀಯ ಶಕ್ತಿಗಳು ಮತ್ತು ಆರೆಸ್ಸೆಸ್ ಅಪಾಯಗಳ ಕುರಿತು ಮಾತಾಡಿದ್ದರು.

“ಹೈದರಾಬಾದ್ ಸರ್ಕಾರ ತನ್ನದೇ ಸ್ವಾರ್ಥಕ್ಕೆ ಬೆಳೆಯಲು ಬಿಟ್ಟ ಕಮ್ಯುನಿಸ್ಟರು, ತಮ್ಮ ಸೋದರರೇ ಆದ 200ಕ್ಕೂ ಹೆಚ್ಚು ಕಾಂಗ್ರೆಸ್ಸಿಗರನ್ನು ಕೊಂದಿದ್ದಾರೆ. ಈ ಭಯೋತ್ಪಾದಕರನ್ನು ಹೈದರಾಬಾದ್ ಪ್ರಾಂತ್ಯದಿಂದ ಹೊರದಬ್ಬಿದ ನಂತರ ಬೇರೆ ಗಡಿಗಳನ್ನು ಪ್ರವೇಶಿಸಿ ಅಂತಹುದೇ ಕೃತ್ಯಗಳಲ್ಲಿ ತೊಡಗುತ್ತಾರೆ.. ಇವರನ್ನು ಕಾಂಗ್ರೆಸ್ಸಿಗೆ ಸೇರಿಸಿಕೊಳ್ಳಲು ನಾವು ತಯಾರಿದ್ದೇವೆ. ಆದರೆ ಅವರು ಭಯೋತ್ಪಾದನೆಯಲ್ಲೇ ತೊಡಗುವುದಾದರೆ ಹಿಡಿದು ಜೈಲಿಗೆ ತಳ್ಳಲು, ಭೂಗತರಾಗಿ ತಲೆ ಮರೆಸಿಕೊಳ್ಳುವಂತೆ ನಿಗ್ರಹಿಸಲು ನಾವು ಹಿಂಜರಿಯುವುದಿಲ್ಲ” ಎಂದು ಪಟೇಲ್ ಅವರು ಎಚ್ಚರಿಕೆ ನೀಡಿದ್ದರು.

“ನಿಮ್ಮ ಹಂಚಿಕೆಗಳನ್ನು ಕೈಬಿಡಿ, ಕೋಮುವಾದಿ ಘರ್ಷಣೆಗಳನ್ನು ದೂರವಿಡಿ, ಭಾರತದ ಸಂವಿಧಾನವನ್ನು ಗೌರವಿಸಿರಿ, ರಾಷ್ಟ್ರಧ್ವಜಕ್ಕೆ ನಿಷ್ಠೆ ತೋರಿರಿ. ನಿಮ್ಮ ಮಾತುಗಳ ನಂಬಬಹುದೆಂದು ನಮಗೆ ಮನವರಿಕೆ ಮಾಡಿಕೊಡಿರಿ, ಹೇಳುವುದೇ ಒಂದು, ಮಾಡುವುದು ಮತ್ತೊಂದು ಎಂಬ ಧೋರಣೆ ನಡೆಯುವುದಿಲ್ಲ” ಎಂಬುದು ಅವರು ಆರೆಸ್ಸೆಸ್‌ಗೆ ತಾಕೀತು ಮಾಡಿದ್ದರು.

ಪಟೇಲರು ತಿದ್ದಬಯಸಿದ ಈ ಧೋರಣೆಗಳು ಅಂತರಾಳದಿಂದ ಬದಲಾಗಿರುವ ಸೂಚನೆಗಳಿಲ್ಲ. ಬದಲಾಗಿ ಇನ್ನಷ್ಟು ಆಕ್ರಮಣಕಾರಿಯಾಗಿ ಪ್ರಕಟಗೊಳ್ಳತೊಡಗಿವೆ.

“ಹೊಸ ಸಂವಿಧಾನದ ಅತಿ ಕೇಡಿನ ಅಂಶವೆಂದರೆ ಅದರಲ್ಲಿ ಭಾರತೀಯ ಎಂಬುದು ಏನೇನೂ ಇಲ್ಲ….. ಪ್ರಾಚೀನ ಭಾರತದ ವಿಶಿಷ್ಟ ಸಾಂವಿಧಾನಿಕ ಬೆಳವಣಿಗೆಗಳ ಕುರಿತ ಪ್ರಸ್ತಾಪವೇ ಇಲ್ಲ. ಪ್ರಾಚೀನ ಗ್ರೀಸ್ ದೇಶದ ಕಾನೂನು ಬರೆದು ದಂತಕತೆಯೇ ಆಗಿಹೋದ ಲೈಕರ್ಗಸ್ ಮತ್ತು ಅಥೆನ್ಸಿನ ಸೋಲನ್ ಅವರಿಗಿಂತ ಬಹಳ ಮೊದಲೇ ಭಾರತದಲ್ಲಿ ಮನುಸ್ಮೃತಿಯ ರಚನೆಯಾಗಿತ್ತು. ಮನು ರಚಿಸಿದ ಕಾನೂನುಗಳು ಇಂದಿಗೂ ಜಗತ್ತಿನ ಮೆಚ್ಚುಗೆಗೆ ಪಾತ್ರವಾಗಿದ್ದು, ಭಾರತದಲ್ಲಿ ಹಿಂದೂಗಳು ಅವುಗಳನ್ನು ಸ್ವಯಂಪ್ರೇರಣೆ ಮತ್ತು ವಿಧೇಯತೆಯಿಂದ ಪಾಲಿಸುತ್ತಾರೆ. ಆದರೆ ನಮ್ಮ ಸಂವಿಧಾನ ಪಂಡಿತರ ಪಾಲಿಗೆ ಈ ಕಾನೂನುಗಳು ಲೆಕ್ಕಕ್ಕೇ ಇಲ್ಲ ಎಂದು 1949ರ ನವೆಂಬರ್ 30ರ ಆರೆಸ್ಸೆಸ್ ಮುಖವಾಣಿ ’ದಿ ಆರ್ಗನೈಸರ್’ನ ಸಂಚಿಕೆಯಲ್ಲಿ ಸಂಪಾದಕೀಯ ಬರೆಯಲಾಗಿತ್ತು.

ಇಂದಿಗೂ ಪರಿವಾರದಲ್ಲಿ ಪ್ರತಿಧ್ವನಿಸುವ ಸಂಪಾದಕೀಯವಿದು. ಕಾಲಕಾಲಕ್ಕೆ ಕೇಂದ್ರ ಮಂತ್ರಿಗಳು, ಪರಿವಾರದ ತಲೆಯಾಳುಗಳು- ಕಾಲಾಳುಗಳು ಸಂವಿಧಾನವನ್ನು ಬದಲಾಯಿಸುತ್ತೇವೆ ಎಂಬುದಾಗಿ ಹಾಕುವ ಗುಟುರುಗಳ ಮೂಲಸೆಲೆಯಿದು.

ನಾಗರಿಕರಿಗೆ ಸಂವಿಧಾನದತ್ತವಾಗಿ ದೊರಕಿರುವ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿ ಸರ್ಕಾರ ಹಲವಾರು ನೀತಿ ನಿರ್ಧಾರಗಳು ಕಾಯಿದೆ ಕಾನೂನುಗಳನ್ನು ಹೊರಡಿಸಿದೆ. ಇವುಗಳನ್ನು ಪ್ರಶ್ನಿಸಿರುವ ಅರ್ಜಿಗಳು ಅಹವಾಲುಗಳು ಹೈಕೋರ್ಟುಗಳು ಮತ್ತು ಸುಪ್ರೀಮ್ ಕೋರ್ಟಿನಲ್ಲಿ ಕೊಳೆಯುತ್ತಿವೆ. ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೆಯ ಮತ್ತು 35ಎ ಕಲಮುಗಳನ್ನು 2019ರಲ್ಲಿ ರದ್ದು ಮಾಡಿ ಜಮ್ಮು-ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಘೋಷಿಸಲಾಯಿತು. ಜಮ್ಮು-ಕಾಶ್ಮೀರಿಗಳ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಸಲ್ಲಿಸಲಾಗಿರುವ ಸುಮಾರು 25 ಅರ್ಜಿಗಳು ದೀರ್ಘ ಕಾಲದಿಂದ ವಿಚಾರಣೆಗೆ ಕಾದಿವೆ.

ಧರ್ಮದ ಆಧಾರದ ಮೇಲೆ ಪೌರತ್ವ ನೀಡುವ ಮತ್ತು ನಿರಾಕರಿಸುವ ಪೌರತ್ವ ತಿದ್ದುಪಡಿ ಕಾಯಿದೆ, ರಾಷ್ಟ್ರೀಯ ಪೌರತ್ವ ರಿಜಿಸ್ಟರನ್ನು ಪ್ರಶ್ನಿಸಿರುವ 143 ರಿಟ್ ಅರ್ಜಿಗಳು, ರಾಜಕೀಯ ಪಕ್ಷಗಳು ಚುನಾವಣೆಗಳಿಗೆ ಅಜ್ಞಾತ ದೇಣಿಗೆದಾರರಿಂದ ಹಣ ಪಡೆಯುವ ಚುನಾವಣಾ ಬಾಂಡ್‌ಗಳ ವ್ಯವಸ್ಥೆ, ತನ್ನ ನೀತಿ ಸಿದ್ಧಾಂತಗಳನ್ನು ಒಪ್ಪದಿರುವ ಭಿನ್ನಮತವನ್ನು ಜೈಲಿಗೆ ತಳ್ಳುವ ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯಿದೆ (ಯುಎಪಿಎ) ಮತ್ತು ರಾಜದ್ರೋಹದ ಕಾಯಿದೆ, ಅಂತರ್ಜಾಲ ಮಾಧ್ಯಮವನ್ನು ನಿಯಂತ್ರಿಸಲು ಮಿತಿಯಿಲ್ಲದ ಅಧಿಕಾರವನ್ನು ಸರ್ಕಾರಕ್ಕೆ ನೀಡುವ ಮಾಹಿತಿ ತಂತ್ರಜ್ಞಾನ ತಿದ್ದುಪಡಿ ಕಾಯಿದೆ ಮುಂತಾದ ಸಮಾನತೆ, ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕಾಯಿದೆಗಳನ್ನು

ಈ ಬೆಳವಣಿಗೆ ಸಂವಿಧಾನದ ಅಡಿಪಾಯವನ್ನು ಕದಲಿಸಿದೆಯೇ ವಿನಾ ಗಟ್ಟಿ ಮಾಡಿಲ್ಲ.

“ಸಾಮಾಜಿಕ ಜನತಂತ್ರದ ಆಧಾರದ ವಿನಾ ರಾಜಕೀಯ ಜನತಂತ್ರ ಉಳಿದು ಬಾಳಲಾರದು. ಸಾಮಾಜಿಕ ಜನತಂತ್ರವೆಂದರೇನು? ಸ್ವಾತಂತ್ರ್ಯ ಸಮಾನತೆ ಹಾಗೂ ಸೋದರತೆಯ ತತ್ವಗಳು ಜೀವನಮೌಲ್ಯಗಳೇ ಆಗುವ ಬದುಕಿನ ವಿಧಾನವೇ ಸಾಮಾಜಿಕ ಜನತಂತ್ರ” ಎಂಬ ಬಾಬಾಸಾಹೇಬರ ನೀತಿ ಕಳೆದೇಹೋಗಿದೆ.


ಇದನ್ನೂ ಓದಿ: ಒಂದು ಪ್ರಕರಣಕ್ಕೆ ತಡೆ ಬೆನ್ನಲ್ಲೇ ಹಂಸಲೇಖರ ಹೊಸ ಸಂಯೋಜನೆ ‘ಸಂವಿಧಾನ ಗೀತೆ’ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...