Homeಮುಖಪುಟಗೌರಿ ಲಂಕೇಶ್ ಮುಸ್ಲಿಂ ಪಕ್ಷಪಾತಿಯಾಗಿದ್ದರೇ? - ಇಸ್ಮತ್ ಪಜೀರ್

ಗೌರಿ ಲಂಕೇಶ್ ಮುಸ್ಲಿಂ ಪಕ್ಷಪಾತಿಯಾಗಿದ್ದರೇ? – ಇಸ್ಮತ್ ಪಜೀರ್

ಗೌರಿಯ ಮತ್ತು ಅವರ ಚಳವಳಿಯ ಸಂಗಾತಿಗಳಾದ ನಮ್ಮೆಲ್ಲರ ವಾದ ಬಾಬಾ ಬುಡಾನ್‍ಗಿರಿ ಈ ನೆಲದ ಸೌಹಾರ್ದ ಪರಂಪರೆಯ ಬಹುದೊಡ್ಡ ಕೇಂದ್ರಗಳಲ್ಲೊಂದು ಎಂದಾಗಿತ್ತು. ಅಂದಿನಿಂದ ಇಂದಿನವರೆಗೂ ನಮ್ಮ ಘೋಷಣೆ “ಬಾಬಾ ದತ್ತ ಬೇರೆಯಲ್ಲ, ಹಿಂದೂ-ಮುಸ್ಲಿಂ ಶತ್ರುಗಳಲ್ಲ” ಎಂಬುವುದಾಗಿದೆ.

- Advertisement -
- Advertisement -

ನಮಗೆಲ್ಲಾ ಗೊತ್ತಿರುವ ಹಾಗೆ ಅಕ್ಕ ಗೌರಿ ಲಂಕೇಶ್ ಮೇಲೆ ಮುಸ್ಲಿಂ ಪಕ್ಷಪಾತಿಯೆಂಬ ಬಹುದೊಡ್ಡ ಆರೋಪವಿತ್ತು. ಇದು ನ್ಯಾಯ ಪಕ್ಷಪಾತಿಯಾದ ಪ್ರತಿಯೋರ್ವ ಸೆಕ್ಯುಲರ್ ವ್ಯಕ್ತಿಯ ಮೇಲೆ ಬಂದ ಮತ್ತು ಬರುವ ಬಹಳ ಸಹಜವಾದ ಆರೋಪ. ಇಂತಹ ಆರೋಪ ಮಹಾತ್ಮ ಗಾಂಧೀಜಿಯವರ ಮೇಲೆಯೂ ಇದೆ. ಅಷ್ಟಕ್ಕೂ ಗೌರಿ ಮುಸ್ಲಿಂ ಪಕ್ಷಪಾತಿಯಾಗಿದ್ದರೇ? ಎಂಬುವುದಕ್ಕೆ ಉತ್ತರ ಕಂಡುಹುಡುಕುವ ಅಗತ್ಯ ಖಂಡಿತವಾಗಿಯೂ ಇಲ್ಲ. ಗೌರಿಯ ಹುತಾತ್ಮತೆಯ ಬಗ್ಗೆ ಒಂದೇ ವಾಕ್ಯದಲ್ಲಿ ಹೇಳಬಹುದಾದ ಮಾತು “ಈ ನೆಲದ ಸಂವಿಧಾನದ ಉಳಿವಿಗಾಗಿ ಹೋರಾಡಿ ಮಡಿದ ಅನೇಕ ಹೋರಾಟಗಾರರಲ್ಲಿ ಗೌರಿ ಕೂಡಾ ಒಬ್ಬರು”. ದೇಶದ ಪ್ರಥಮ ಪ್ರಧಾನಿ ಜವಾಹರ್‍ಲಾಲ್ ನೆಹರೂ ಕೋಮುವಾದದ ಬಗ್ಗೆ ಬಹಳ ಸ್ಪಷ್ಟವಾದ ನಿಲುವೊಂದನ್ನು ತಳೆದಿದ್ದರು. “ಅಲ್ಪಸಂಖ್ಯಾತರ ಕೋಮುವಾದ ಸ್ವತಃ ಅವರಿಗೇ ಮಾರಕವಾದರೆ ಬಹುಸಂಖ್ಯಾತರ ಕೋಮುವಾದ ರಾಷ್ಟ್ರಕ್ಕೆ ಮಾರಕ” ಎಂದಿದ್ದರು.

ನಮ್ಮಲ್ಲಿ ಹೇಗೆ ಹಿಂದೂ ಕೋಮುವಾದದ ವಿರುದ್ಧ ಮಾತನಾಡುವ ಹಿಂದೂಗಳ ಮೇಲೆ ಹಲ್ಲೆ ದೌರ್ಜನ್ಯಗಳು ಮತ್ತವರ ಕೊಲೆ ನಡೆಯುತ್ತವೆಯೋ ಅಂತೆಯೇ ಪಾಕಿಸ್ತಾನದಲ್ಲಿ ಅಲ್ಲಿನ ಮುಸ್ಲಿಮ್ ಕೋಮುವಾದದ ವಿರುದ್ಧ ಮಾತನಾಡುವ ಮುಸ್ಲಿಂ ಚಿಂತಕರ ಹೋರಾಟಗಾರರ ಮೇಲೆಯೂ ಹಲ್ಲೆ, ದೌರ್ಜನ್ಯ, ಕೊಲೆಗಳೂ ನಡೆಯುತ್ತವೆ. ಉದಾ: ಅಸ್ಮಾ ಜಹಾಂಗೀರ್, ಇಸ್ಮಾಯಿಲ್ ಗುಲೆಲೋವ್. ಗೌರಿ ತನ್ನ ಕಂಡಹಾಗೆ ಎಂಬ ಸಂಪಾದಕೀಯ ಅಂಕಣದಲ್ಲಿ ಅನೇಕಾರು ಬಾರಿ ಪಾಕಿಸ್ತಾನಿ ಮೂಲಭೂತವಾದಿಗಳ ವಿರುದ್ಧ ಮತ್ತು ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಪರ ಧ್ವನಿಯೆತ್ತುವ ಮುಸ್ಲಿಂ ಚಿಂತಕರ ಹೋರಾಟಗಾರರ ಪರವಾಗಿ ಬರೆದಿದ್ದಾರೆ. ದುರಂತವೇನೆಂದರೆ ಗೌರಿಯ ಇಂತಹ ಜೀವಪರ, ದುರ್ಬಲರ ಪರ ನಿಲುವುಗಳು ಗೌರಿಯನ್ನು ನಖಶಿಖಾಂತ ವಿರೋಧಿಸುತ್ತಿದ್ದ, ಅವರು ಹುತಾತ್ಮರಾದ ಬಳಿಕವೂ ಅವರ ಮೇಲೆ ನೀಚಾತಿನೀಚವಾಗಿ ಬರೆಯುವ, ಮಾತನಾಡುವ ಹಿಂದೂತ್ವವಾದಿ ಶಕ್ತಿಗಳಿಗೆ ಇದು ಎಂದೂ ಅರ್ಥವಾಗುವುದಿಲ್ಲ.

ಅವರ ಮೇಲೆ ಹಿಂದೂತ್ವವಾದಿ ಶಕ್ತಿಗಳು ಮೊಟ್ಟ ಮೊದಲು ಮುಗಿಬಿದ್ದು ದ್ವೇಷ ಸಾಧಿಸತೊಡಗಿದ್ದು ಬಾಬಾ ಬುಡಾನ್‍ಗಿರಿ ಹೋರಾಟದ ಪ್ರಾರಂಭಕಾಲದಲ್ಲಿ. ಗೌರಿ ಎಲ್ಲೂ ಕೂಡಾ ಬಾಬಾ ಬುಡಾನ್‍ಗಿರಿಯನ್ನು ಮುಸ್ಲಿಮರ ಸ್ವತ್ತು ಎಂದು ವಾದಿಸಿಲ್ಲ. ಗೌರಿಯ ಮತ್ತು ಅವರ ಚಳವಳಿಯ ಸಂಗಾತಿಗಳಾದ ನಮ್ಮೆಲ್ಲರ ವಾದ ಬಾಬಾ ಬುಡಾನ್‍ಗಿರಿ ಈ ನೆಲದ ಸೌಹಾರ್ದ ಪರಂಪರೆಯ ಬಹುದೊಡ್ಡ ಕೇಂದ್ರಗಳಲ್ಲೊಂದು ಎಂದಾಗಿತ್ತು. ಅಂದಿನಿಂದ ಇಂದಿನವರೆಗೂ ನಮ್ಮ ಘೋಷಣೆ “ಬಾಬಾ ದತ್ತ ಬೇರೆಯಲ್ಲ, ಹಿಂದೂ-ಮುಸ್ಲಿಂ ಶತ್ರುಗಳಲ್ಲ” ಎಂಬುವುದಾಗಿದೆ. ಯಾವಾಗ ಹಿಂದೂತ್ವವಾದಿಗಳು ಅದನ್ನು ಕೇವಲ ಹಿಂದೂಗಳ ಶ್ರದ್ಧಾ ಕೇಂದ್ರವೆಂದು ವಾದಿಸ ಹೊರಟರೋ ಅದನ್ನು ಎದುರಿಸಿ ಗೌರಿ ಹೇಳುತ್ತಾ ಬಂದಿದ್ದಿಷ್ಟೆ. ಬಾಬಾ ಬುಡಾನ್‍ಗಿರಿ ಕೇವಲ ಹಿಂದೂಗಳ ಸ್ವತ್ತಲ್ಲ. ಅದು ಈ ನಾಡಿನ ಎಲ್ಲಾ ಸೌಹಾರ್ದಪ್ರಿಯರ ಸ್ವತ್ತು.

ಸುಮಾರು ಎಂಟು -ಒಂಬತ್ತು ವರ್ಷಗಳ ಹಿಂದಿನ ಮಾತು. ಒಮ್ಮೆ ಗೌರಿ ಯಾವನೋ ಒಬ್ಬ ಸ್ವಾಮಿಯ ಅಕ್ರಮಗಳನ್ನು ಬಯಲಿಗೆಳೆದು ಬರೆದಾಗ ಯುವಕನೊಬ್ಬ ಗೌರಿಗೆ ಪತ್ರವೊಂದನ್ನು ಬರೆದು “ನೀನು ಕೇವಲ ಹಿಂದೂ ಸ್ವಾಮಿಗಳ ವಿರುದ್ಧ ಮಾತ್ರ ಬರೆಯುತ್ತಿಯಲ್ವಾ? ನಿನಗೆ ಧಮ್ ಇದ್ದರೆ ಓರ್ವ ಮುಸ್ಲಿಂ ಮೌಲವಿಯ ವಿರುದ್ಧ ಬರೆ” ಎಂದು ಸವಾಲು ಹಾಕಿದ್ದ. ಇದನ್ನು ಮುಂದಿನ ಸಂಚಿಕೆಯಲ್ಲಿ ಉಲ್ಲೇಖಿಸಿದ ಗೌರಿ ದೇಶ ಕಂಡ ಅಪ್ರತಿಮ ಸ್ವಾತಂತ್ರ್ಯ ಹೋರಾಟಗರರಲ್ಲೊಬ್ಬರಾದ ಮೌಲಾನಾ ಅಬುಲ್ ಕಲಾಂ ಆಝಾದ್ ಬಗ್ಗೆ ಬರೆದರು. ಮೌಲಾನಾ ಕೂಡಾ ಓರ್ವ ಇಸ್ಲಾಮೀ ಮೌಲವಿಯಾಗಿದ್ದರು.

ಸೆಕ್ಯುಲರ್ ಆಗಿ ಚಿಂತಿಸುವ ಸ್ವಾಮೀಜಿಗಳ ಬಗ್ಗೆ ಬರೆದರೆ ಇವರು ಅಂತಹ ಸ್ವಾಮಿಗಳನ್ನು ಸಾಬರಿಗೆ ಹುಟ್ಟಿದ ಸ್ವಾಮಿಗಳು ಎಂದರೆ ಏನು ಮಾಡಕ್ಕಾಗುತ್ತೆ? ತಮ್ಮ ಪಾಡಿಗೆ ಧಾರ್ಮಿಕ ಕೆಲಸಗಳನ್ನು ಮಾಡುತ್ತಾ, ಯಾವ ರಾಜಕೀಯ ಮೂಲಭೂತವಾದಿ ಸಂಘಟನೆಗಳ ಜೊತೆ ಕೈ ಜೋಡಿಸದಿದ್ದ ಸ್ವಾಮಿಗಳ ವಿರುದ್ಧ ಯಾವತ್ತೂ ಗೌರಿ ಬರೆದಿಲ್ಲ. ಪ್ರಗತಿಪರರೊಂದಿಗೆ ಗುರುತಿಸಿಕೊಳ್ಳದೆಯೂ ತಮ್ಮ ಮಠಗಳೊಳಗೆ ಪೂಜೆ ಪುರಸ್ಕಾರಗಳಲ್ಲದೇ ಅನ್ನ ದಾಸೋಹ, ಅಕ್ಷರ ದಾಸೋಹ ಮುಂತಾದ ಸಾಮಾಜಿಕ ಕೆಲಸಗಳನ್ನು ಮಾಡುತ್ತಾ ಬಂದ ಮಠ ಮತ್ತು ಸ್ವಾಮಿಗಳನ್ನು ಸಾಂದರ್ಭಿಕವಾಗಿ ಅವರು ಪ್ರಶಂಸಿಸಿ ಬರೆದದ್ದೂ ಇದೆ.

ಮಠಗಳ ವಿಚಾರಕ್ಕೆ ಬಂದಾಗಲೂ ಯಾವುದಾದರೂ ದುರ್ಬಲ ಸಮುದಾಯದ ಮಠದ ಮೇಲೆ ಆರ್ಥಿಕವಾಗಿ ಮತ್ತು ಸಾಮುದಾಯಿಕವಾಗಿ ಬಲಿಷ್ಠವಾಗಿರುವ ಮಠ, ಸ್ವಾಮಿಗಳು ದರ್ಪ, ದಬ್ಬಾಳಿಕೆ ಮಾಡಿದಾಗ, ಅವರ ಸ್ವತ್ತು ಕಬಳಿಸಲು ಯತ್ನಿಸಿದಾಗ, ಅವರ ಮೇಲೆ ಯಜಮಾನಿಕೆ ಪ್ರದರ್ಶಿಸಿದಾಗ ಗೌರಿ ಬಲಿಷ್ಠರ ವಿರುದ್ಧ ಮತ್ತು ಬಲಹೀನರ ಪರ ಬರೆದ ಧಾರಾಳ ಉದಾಹರಣೆಗಳಿವೆ. ಗೋಕರ್ಣ ದೇವಸ್ಥಾನವನ್ನು ಹೊಸನಗರ ರಾಮಚಂದ್ರಾಪುರ ಮಠ ತನ್ನ ಅಧೀನಕ್ಕೆ ತರಲು ರಾಜಕೀಯ ಬಲದ ಮೂಲಕ ಯತ್ನಿಸಿದಾಗ ಗೋಕರ್ಣ ದೇವಳದ ಪರ ನಿರಂತರ ವರದಿ, ಲೇಖನಗಳನ್ನು ಪ್ರಕಟಿಸಿದ್ದಿದೆ. ಗೋಕರ್ಣ ದೇವಸ್ಥಾನವೇನೂ ಪ್ರಗತಿಪರ ಮಠವಲ್ಲ. ಅದು ಅಪ್ಪಟ ಆಸ್ತಿಕ ಹಿಂದೂಗಳದ್ದು. ಅದೆಷ್ಟೋ ಸ್ವಾಮಿಗಳ ಜನಪರ ಕಾರ್ಯಕ್ರಮಗಳಿಗೆ ಪತ್ರಿಕೆಯ ಮೂಲಕ ಬೆಂಬಲ ನೀಡಿದ ಗೌರಿ  ಅದೇ ಸ್ವಾಮಿಗಳ ರಾಜಕೀಯ ಹಿತಾಸಕ್ತಿಗಳನ್ನು ನಿರ್ದಾಕ್ಷಿಣ್ಯವಾಗಿ ಖಂಡಿಸಿದ್ದೂ ಇದೆ.

ಗೋ ಹತ್ಯಾ ನಿಷೇಧ ಕಾನೂನಿನ ಬಗ್ಗೆ ಬರೆದಾಗ, ಹೋರಾಡಿದಾಗ ಹಲವರು ಗೌರಿ ಮುಸ್ಲಿಮರ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆಂದು ಆರೊಪಿಸುತ್ತಿದ್ದರು. ಗೌರಿಗೆ ಗೋವು ಯಾವತ್ತೂ ರಾಜಕೀಯ ಮತ್ತು ಧಾರ್ಮಿಕ ಸಂಗತಿಯಾಗಿರಲೇ ಇಲ್ಲ. ಗೌರಿ ಆಗ ಮಾಡಿದ ಹೋರಾಟ ಜನರ ಆಹಾರದ ಹಕ್ಕಿನ ಬಗ್ಗೆ ಮತ್ತು ಸಂವಿಧಾನದತ್ತ ಹಕ್ಕಿನ ಬಗ್ಗೆ.

ಅಮೃತ ಮಹಲ್ ಎಂಬ ದೇಸೀ ತಳಿಯ ಹಸುವಿನ ರಕ್ಷಣೆಯ ನೆಪದಲ್ಲಿ ಆಗಿನ ರಾಜ್ಯದ ಬಿ.ಜೆ.ಪಿ. ಸರಕಾರ ಹೊಸನಗರ ಮಠಕ್ಕೆ ಗೋಮಾಳಗಳನ್ನು ವಹಿಸಿಕೊಟ್ಟಾಗ, ಅದಕ್ಕಾಗಿ ನಿಧಿ ನೀಡಿದಾಗ ಗೌರಿ ಅದನ್ನು ವಿರೋಧಿಸಿ ಬರೆದರು. ಅದನ್ನು ನಿರ್ದಿಷ್ಟವಾಗಿ ಒಂದು ಬಲಿಷ್ಠ ಸಮುದಾಯದ ಮಠಕ್ಕೆ ವಹಿಸಿಕೊಡುವುದರ ಬಗ್ಗೆ ಅವರಿಗೆ ವಿರೋಧವಿತ್ತು. ಅದಕ್ಕೆ ಬಹಳ ಸ್ಪಷ್ಟ ಕಾರಣವಿತ್ತು. ಗೋವಿನ ಹೆಸರಲ್ಲಿ ದುಡ್ಡು ಬಾಚುವ ಹುನ್ನಾರದ ಬಗ್ಗೆ ಗೌರಿಗೆ ಸ್ಪಷ್ಟ ವಿರೋಧವಿತ್ತು. ಸ್ವತಃ ಗೌರಿ ತನ್ನ ತೋಟದಲ್ಲಿ ದನ ಸಾಕುತ್ತಿದ್ದರು ಎಂಬ ವಿಚಾರ ಅನೇಕರಿಗೆ ತಿಳಿದಿರಲಿಕ್ಕಿಲ್ಲ.

ಗೌರಿ ವಿರುದ್ಧ ಮುಸ್ಲಿಂ ಪಕ್ಷಪಾತದ ಆರೋಪ ಹೊರಿಸುವವರು ಇನ್ನೊಂದು ವಿಚಾರವನ್ನು ಗಮನಿಸಬೇಕು. ಗೌರಿ ಯಾವತ್ತೂ ವಿವೇಚನಾರಹಿತರಾಗಿ, ಸಾರಾಸಗಟಾಗಿ ಮುಸ್ಲಿಮರನ್ನು ಬೆಂಬಲಿಸಿಲ್ಲ. ಮುಸ್ಲಿಮರ ತಪ್ಪುಗಳನ್ನು ಖಡಾಖಂಡಿತವಾಗಿ ವಿರೋಧಿಸಿದ ಧಾರಾಳ ಉದಾಹರಣೆಗಳಿವೆ. ಸ್ವತಃ ನಾನು ದಾರುಲ್ ಉಲೂಂ ದೇವ್‍ಬಂದ್‍ನ ಕೆಲವು ಅನಪೇಕ್ಷಿತ ಮತ್ತು ಜನವಿರೋಧೀ ಫತ್ವಾಗಳನ್ನು ಖಂಡಿಸಿ ಬರೆದ ಲೇಖನಗಳನ್ನು ಗೌರಿ ಒಳ್ಳೆಯ ಪ್ರಾಶಸ್ತ್ಯ ನೀಡಿ ಪ್ರಕಟಿಸಿದ್ದಾರೆ. ದೆಹಲಿಯ ಜಾಮಿಯಾ ಮಸೀದಿಯ ಶಾಹಿ ಇಮಾಮ್ ಬುಖಾರಿಯ ಎಡಬಿಡಂಗಿತನದ ರಾಜಕೀಯ ಹೇಳಿಕೆಗಳನ್ನು, ಕೃತ್ಯಗಳನ್ನು ನಿರ್ದಾಕ್ಷಿಣ್ಯವಾಗಿ ಖಂಡಿಸಿ ಗೌರಿ ಬರೆದಿದ್ದಾರೆ. ಶಾಹಿ ಇಮಾಂ ಬುಖಾರಿ ಜಾಮಿಯಾ ಮಸೀದಿಯನ್ನು ಮತ್ತದರ ಸ್ವತ್ತನ್ನು ಪಿತ್ರಾರ್ಜಿತ ಸ್ವತ್ತಿನಂತೆ ಬಳಸುತ್ತಿದ್ದುದರ ವಿರುದ್ಧ ನಾನು ಬರೆದ ಲೇಖನಗಳನ್ನು ಗೌರಿ ಪ್ರಕಟಿಸಿದ್ದಾರೆ. ಮುಸ್ಲಿಂ ಪುರೋಹಿತಶಾಹಿತ್ವದ ಮಹಿಳಾ ವಿರೋಧೀ ನಿಲುವಿನ ವಿರುದ್ಧ ಗೌರಿ ತನ್ನ ‘ಕಂಡಹಾಗೆ’ ಸಂಪಾದಕೀಯ ಅಂಕಣದಲ್ಲಿ ಅನೇಕ ಬಾರಿ ಬರೆದದ್ದಿದೆ. ಗೌರಿ  ಮುಸ್ಲಿಂ ಮಹಿಳೆಯರ ಬುರ್ಖಾ ಧರಿಸುವ ಹಕ್ಕಿನ ಪರ ಬರೆದಿದ್ದರು. ಆದರೆ ಗೌರಿ  ಅಲ್ಲೆಲ್ಲೂ ಪುರುಷ ಪ್ರಧಾನ ನೀತಿಯನ್ನು ಬೆಂಬಲಿಸಿಲ್ಲ. ಅವರು “ಬುರ್ಖಾ ಆಯ್ಕೆ ಮತ್ತು ಸ್ವಾತಂತ್ರ್ಯದ ಪ್ರಶ್ನೆ” ಎಂಬ ನಿಲುವು ತಾಳಿದ್ದರು. ಅದೇ ಸಂದರ್ಭ ಗೌರಿ ಸಾರಾ ಅಬೂಬಕರ್ ಅವರ ಬುರ್ಖಾ ವಿರೋಧೀ ಬರಹಗಳನ್ನೂ ಪ್ರಕಟಿಸಿದ್ದರು.

2014 ರ ಡಿಸೆಂಬರ್ ತಿಂಗಳಲ್ಲಿ ಯಾದಗಿರಿ ಜಿಲ್ಲೆಯ ತಿಂಥಣಿಯಲ್ಲಿ ನಡೆದ ಕೋಮು ಸೌಹಾರ್ದ ವೇದಿಕೆಯ ಸಮಾವೇಶದಲ್ಲಿ ನನ್ನ ಜೊತೆ ನನ್ನ ಪತ್ನಿಯೂ ಭಾಗವಹಿಸಿದ್ದಳು. ಬುರ್ಖಾಧಾರಿಯಾಗಿದ್ದ ನನ್ನ ಪತ್ನಿಯ ಜೊತೆ ಬುರ್ಖಾ ಕಳಚುವಂತೆ ವಾದಿಸಿದ್ದರು. ಆಗ ಆಕೆ “ಇದು ನನ್ನ ಮೇಲೆ ಯಾರೂ ಹೇರಿದ್ದಲ್ಲ. ಇದು ನನ್ನ ಆಯ್ಕೆ ಮತ್ತು ನನ್ನ ಸ್ವಾತಂತ್ರ್ಯ” ಎಂದು ಗೌರಿಯ ಬಳಿ ವಾದಿಸಿದ್ದಳು.

ಗೌರಿಯನ್ನು ಮುಸ್ಲಿಂ ಪಕ್ಷಪಾತಿ ಎನ್ನುವವರು ಗೌರಿಯ ಬರಹಗಳನ್ನು ಪೂರ್ವಾಗ್ರಹ ರಹಿತವಾಗಿ ಓದಬೇಕು. ಅವರ ಕಂಡ ಹಾಗೆ ಸಂಪಾದಕೀಯ ಬರಹಗಳ ಮೂರು ಸಂಪುಟಗಳಿವೆ. ಅವುಗಳನ್ನು ಓದಿದಾಗ ಗೌರಕ್ಕ ಏನು ಎಂದು ತಿಳಿಯುತ್ತದೆ.


ಇದನ್ನೂ ಓದಿ: ಸತ್ಯವ ನುಡಿಯುವ ದಿಟ್ಟತೆಗೆ ಪ್ರತೀಕವಾದ ಗೌರಿ ಲಂಕೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...