Homeಮುಖಪುಟಗೌರಿ ಲಂಕೇಶ್ ಮುಸ್ಲಿಂ ಪಕ್ಷಪಾತಿಯಾಗಿದ್ದರೇ? - ಇಸ್ಮತ್ ಪಜೀರ್

ಗೌರಿ ಲಂಕೇಶ್ ಮುಸ್ಲಿಂ ಪಕ್ಷಪಾತಿಯಾಗಿದ್ದರೇ? – ಇಸ್ಮತ್ ಪಜೀರ್

ಗೌರಿಯ ಮತ್ತು ಅವರ ಚಳವಳಿಯ ಸಂಗಾತಿಗಳಾದ ನಮ್ಮೆಲ್ಲರ ವಾದ ಬಾಬಾ ಬುಡಾನ್‍ಗಿರಿ ಈ ನೆಲದ ಸೌಹಾರ್ದ ಪರಂಪರೆಯ ಬಹುದೊಡ್ಡ ಕೇಂದ್ರಗಳಲ್ಲೊಂದು ಎಂದಾಗಿತ್ತು. ಅಂದಿನಿಂದ ಇಂದಿನವರೆಗೂ ನಮ್ಮ ಘೋಷಣೆ “ಬಾಬಾ ದತ್ತ ಬೇರೆಯಲ್ಲ, ಹಿಂದೂ-ಮುಸ್ಲಿಂ ಶತ್ರುಗಳಲ್ಲ” ಎಂಬುವುದಾಗಿದೆ.

- Advertisement -
- Advertisement -

ನಮಗೆಲ್ಲಾ ಗೊತ್ತಿರುವ ಹಾಗೆ ಅಕ್ಕ ಗೌರಿ ಲಂಕೇಶ್ ಮೇಲೆ ಮುಸ್ಲಿಂ ಪಕ್ಷಪಾತಿಯೆಂಬ ಬಹುದೊಡ್ಡ ಆರೋಪವಿತ್ತು. ಇದು ನ್ಯಾಯ ಪಕ್ಷಪಾತಿಯಾದ ಪ್ರತಿಯೋರ್ವ ಸೆಕ್ಯುಲರ್ ವ್ಯಕ್ತಿಯ ಮೇಲೆ ಬಂದ ಮತ್ತು ಬರುವ ಬಹಳ ಸಹಜವಾದ ಆರೋಪ. ಇಂತಹ ಆರೋಪ ಮಹಾತ್ಮ ಗಾಂಧೀಜಿಯವರ ಮೇಲೆಯೂ ಇದೆ. ಅಷ್ಟಕ್ಕೂ ಗೌರಿ ಮುಸ್ಲಿಂ ಪಕ್ಷಪಾತಿಯಾಗಿದ್ದರೇ? ಎಂಬುವುದಕ್ಕೆ ಉತ್ತರ ಕಂಡುಹುಡುಕುವ ಅಗತ್ಯ ಖಂಡಿತವಾಗಿಯೂ ಇಲ್ಲ. ಗೌರಿಯ ಹುತಾತ್ಮತೆಯ ಬಗ್ಗೆ ಒಂದೇ ವಾಕ್ಯದಲ್ಲಿ ಹೇಳಬಹುದಾದ ಮಾತು “ಈ ನೆಲದ ಸಂವಿಧಾನದ ಉಳಿವಿಗಾಗಿ ಹೋರಾಡಿ ಮಡಿದ ಅನೇಕ ಹೋರಾಟಗಾರರಲ್ಲಿ ಗೌರಿ ಕೂಡಾ ಒಬ್ಬರು”. ದೇಶದ ಪ್ರಥಮ ಪ್ರಧಾನಿ ಜವಾಹರ್‍ಲಾಲ್ ನೆಹರೂ ಕೋಮುವಾದದ ಬಗ್ಗೆ ಬಹಳ ಸ್ಪಷ್ಟವಾದ ನಿಲುವೊಂದನ್ನು ತಳೆದಿದ್ದರು. “ಅಲ್ಪಸಂಖ್ಯಾತರ ಕೋಮುವಾದ ಸ್ವತಃ ಅವರಿಗೇ ಮಾರಕವಾದರೆ ಬಹುಸಂಖ್ಯಾತರ ಕೋಮುವಾದ ರಾಷ್ಟ್ರಕ್ಕೆ ಮಾರಕ” ಎಂದಿದ್ದರು.

ನಮ್ಮಲ್ಲಿ ಹೇಗೆ ಹಿಂದೂ ಕೋಮುವಾದದ ವಿರುದ್ಧ ಮಾತನಾಡುವ ಹಿಂದೂಗಳ ಮೇಲೆ ಹಲ್ಲೆ ದೌರ್ಜನ್ಯಗಳು ಮತ್ತವರ ಕೊಲೆ ನಡೆಯುತ್ತವೆಯೋ ಅಂತೆಯೇ ಪಾಕಿಸ್ತಾನದಲ್ಲಿ ಅಲ್ಲಿನ ಮುಸ್ಲಿಮ್ ಕೋಮುವಾದದ ವಿರುದ್ಧ ಮಾತನಾಡುವ ಮುಸ್ಲಿಂ ಚಿಂತಕರ ಹೋರಾಟಗಾರರ ಮೇಲೆಯೂ ಹಲ್ಲೆ, ದೌರ್ಜನ್ಯ, ಕೊಲೆಗಳೂ ನಡೆಯುತ್ತವೆ. ಉದಾ: ಅಸ್ಮಾ ಜಹಾಂಗೀರ್, ಇಸ್ಮಾಯಿಲ್ ಗುಲೆಲೋವ್. ಗೌರಿ ತನ್ನ ಕಂಡಹಾಗೆ ಎಂಬ ಸಂಪಾದಕೀಯ ಅಂಕಣದಲ್ಲಿ ಅನೇಕಾರು ಬಾರಿ ಪಾಕಿಸ್ತಾನಿ ಮೂಲಭೂತವಾದಿಗಳ ವಿರುದ್ಧ ಮತ್ತು ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಪರ ಧ್ವನಿಯೆತ್ತುವ ಮುಸ್ಲಿಂ ಚಿಂತಕರ ಹೋರಾಟಗಾರರ ಪರವಾಗಿ ಬರೆದಿದ್ದಾರೆ. ದುರಂತವೇನೆಂದರೆ ಗೌರಿಯ ಇಂತಹ ಜೀವಪರ, ದುರ್ಬಲರ ಪರ ನಿಲುವುಗಳು ಗೌರಿಯನ್ನು ನಖಶಿಖಾಂತ ವಿರೋಧಿಸುತ್ತಿದ್ದ, ಅವರು ಹುತಾತ್ಮರಾದ ಬಳಿಕವೂ ಅವರ ಮೇಲೆ ನೀಚಾತಿನೀಚವಾಗಿ ಬರೆಯುವ, ಮಾತನಾಡುವ ಹಿಂದೂತ್ವವಾದಿ ಶಕ್ತಿಗಳಿಗೆ ಇದು ಎಂದೂ ಅರ್ಥವಾಗುವುದಿಲ್ಲ.

ಅವರ ಮೇಲೆ ಹಿಂದೂತ್ವವಾದಿ ಶಕ್ತಿಗಳು ಮೊಟ್ಟ ಮೊದಲು ಮುಗಿಬಿದ್ದು ದ್ವೇಷ ಸಾಧಿಸತೊಡಗಿದ್ದು ಬಾಬಾ ಬುಡಾನ್‍ಗಿರಿ ಹೋರಾಟದ ಪ್ರಾರಂಭಕಾಲದಲ್ಲಿ. ಗೌರಿ ಎಲ್ಲೂ ಕೂಡಾ ಬಾಬಾ ಬುಡಾನ್‍ಗಿರಿಯನ್ನು ಮುಸ್ಲಿಮರ ಸ್ವತ್ತು ಎಂದು ವಾದಿಸಿಲ್ಲ. ಗೌರಿಯ ಮತ್ತು ಅವರ ಚಳವಳಿಯ ಸಂಗಾತಿಗಳಾದ ನಮ್ಮೆಲ್ಲರ ವಾದ ಬಾಬಾ ಬುಡಾನ್‍ಗಿರಿ ಈ ನೆಲದ ಸೌಹಾರ್ದ ಪರಂಪರೆಯ ಬಹುದೊಡ್ಡ ಕೇಂದ್ರಗಳಲ್ಲೊಂದು ಎಂದಾಗಿತ್ತು. ಅಂದಿನಿಂದ ಇಂದಿನವರೆಗೂ ನಮ್ಮ ಘೋಷಣೆ “ಬಾಬಾ ದತ್ತ ಬೇರೆಯಲ್ಲ, ಹಿಂದೂ-ಮುಸ್ಲಿಂ ಶತ್ರುಗಳಲ್ಲ” ಎಂಬುವುದಾಗಿದೆ. ಯಾವಾಗ ಹಿಂದೂತ್ವವಾದಿಗಳು ಅದನ್ನು ಕೇವಲ ಹಿಂದೂಗಳ ಶ್ರದ್ಧಾ ಕೇಂದ್ರವೆಂದು ವಾದಿಸ ಹೊರಟರೋ ಅದನ್ನು ಎದುರಿಸಿ ಗೌರಿ ಹೇಳುತ್ತಾ ಬಂದಿದ್ದಿಷ್ಟೆ. ಬಾಬಾ ಬುಡಾನ್‍ಗಿರಿ ಕೇವಲ ಹಿಂದೂಗಳ ಸ್ವತ್ತಲ್ಲ. ಅದು ಈ ನಾಡಿನ ಎಲ್ಲಾ ಸೌಹಾರ್ದಪ್ರಿಯರ ಸ್ವತ್ತು.

ಸುಮಾರು ಎಂಟು -ಒಂಬತ್ತು ವರ್ಷಗಳ ಹಿಂದಿನ ಮಾತು. ಒಮ್ಮೆ ಗೌರಿ ಯಾವನೋ ಒಬ್ಬ ಸ್ವಾಮಿಯ ಅಕ್ರಮಗಳನ್ನು ಬಯಲಿಗೆಳೆದು ಬರೆದಾಗ ಯುವಕನೊಬ್ಬ ಗೌರಿಗೆ ಪತ್ರವೊಂದನ್ನು ಬರೆದು “ನೀನು ಕೇವಲ ಹಿಂದೂ ಸ್ವಾಮಿಗಳ ವಿರುದ್ಧ ಮಾತ್ರ ಬರೆಯುತ್ತಿಯಲ್ವಾ? ನಿನಗೆ ಧಮ್ ಇದ್ದರೆ ಓರ್ವ ಮುಸ್ಲಿಂ ಮೌಲವಿಯ ವಿರುದ್ಧ ಬರೆ” ಎಂದು ಸವಾಲು ಹಾಕಿದ್ದ. ಇದನ್ನು ಮುಂದಿನ ಸಂಚಿಕೆಯಲ್ಲಿ ಉಲ್ಲೇಖಿಸಿದ ಗೌರಿ ದೇಶ ಕಂಡ ಅಪ್ರತಿಮ ಸ್ವಾತಂತ್ರ್ಯ ಹೋರಾಟಗರರಲ್ಲೊಬ್ಬರಾದ ಮೌಲಾನಾ ಅಬುಲ್ ಕಲಾಂ ಆಝಾದ್ ಬಗ್ಗೆ ಬರೆದರು. ಮೌಲಾನಾ ಕೂಡಾ ಓರ್ವ ಇಸ್ಲಾಮೀ ಮೌಲವಿಯಾಗಿದ್ದರು.

ಸೆಕ್ಯುಲರ್ ಆಗಿ ಚಿಂತಿಸುವ ಸ್ವಾಮೀಜಿಗಳ ಬಗ್ಗೆ ಬರೆದರೆ ಇವರು ಅಂತಹ ಸ್ವಾಮಿಗಳನ್ನು ಸಾಬರಿಗೆ ಹುಟ್ಟಿದ ಸ್ವಾಮಿಗಳು ಎಂದರೆ ಏನು ಮಾಡಕ್ಕಾಗುತ್ತೆ? ತಮ್ಮ ಪಾಡಿಗೆ ಧಾರ್ಮಿಕ ಕೆಲಸಗಳನ್ನು ಮಾಡುತ್ತಾ, ಯಾವ ರಾಜಕೀಯ ಮೂಲಭೂತವಾದಿ ಸಂಘಟನೆಗಳ ಜೊತೆ ಕೈ ಜೋಡಿಸದಿದ್ದ ಸ್ವಾಮಿಗಳ ವಿರುದ್ಧ ಯಾವತ್ತೂ ಗೌರಿ ಬರೆದಿಲ್ಲ. ಪ್ರಗತಿಪರರೊಂದಿಗೆ ಗುರುತಿಸಿಕೊಳ್ಳದೆಯೂ ತಮ್ಮ ಮಠಗಳೊಳಗೆ ಪೂಜೆ ಪುರಸ್ಕಾರಗಳಲ್ಲದೇ ಅನ್ನ ದಾಸೋಹ, ಅಕ್ಷರ ದಾಸೋಹ ಮುಂತಾದ ಸಾಮಾಜಿಕ ಕೆಲಸಗಳನ್ನು ಮಾಡುತ್ತಾ ಬಂದ ಮಠ ಮತ್ತು ಸ್ವಾಮಿಗಳನ್ನು ಸಾಂದರ್ಭಿಕವಾಗಿ ಅವರು ಪ್ರಶಂಸಿಸಿ ಬರೆದದ್ದೂ ಇದೆ.

ಮಠಗಳ ವಿಚಾರಕ್ಕೆ ಬಂದಾಗಲೂ ಯಾವುದಾದರೂ ದುರ್ಬಲ ಸಮುದಾಯದ ಮಠದ ಮೇಲೆ ಆರ್ಥಿಕವಾಗಿ ಮತ್ತು ಸಾಮುದಾಯಿಕವಾಗಿ ಬಲಿಷ್ಠವಾಗಿರುವ ಮಠ, ಸ್ವಾಮಿಗಳು ದರ್ಪ, ದಬ್ಬಾಳಿಕೆ ಮಾಡಿದಾಗ, ಅವರ ಸ್ವತ್ತು ಕಬಳಿಸಲು ಯತ್ನಿಸಿದಾಗ, ಅವರ ಮೇಲೆ ಯಜಮಾನಿಕೆ ಪ್ರದರ್ಶಿಸಿದಾಗ ಗೌರಿ ಬಲಿಷ್ಠರ ವಿರುದ್ಧ ಮತ್ತು ಬಲಹೀನರ ಪರ ಬರೆದ ಧಾರಾಳ ಉದಾಹರಣೆಗಳಿವೆ. ಗೋಕರ್ಣ ದೇವಸ್ಥಾನವನ್ನು ಹೊಸನಗರ ರಾಮಚಂದ್ರಾಪುರ ಮಠ ತನ್ನ ಅಧೀನಕ್ಕೆ ತರಲು ರಾಜಕೀಯ ಬಲದ ಮೂಲಕ ಯತ್ನಿಸಿದಾಗ ಗೋಕರ್ಣ ದೇವಳದ ಪರ ನಿರಂತರ ವರದಿ, ಲೇಖನಗಳನ್ನು ಪ್ರಕಟಿಸಿದ್ದಿದೆ. ಗೋಕರ್ಣ ದೇವಸ್ಥಾನವೇನೂ ಪ್ರಗತಿಪರ ಮಠವಲ್ಲ. ಅದು ಅಪ್ಪಟ ಆಸ್ತಿಕ ಹಿಂದೂಗಳದ್ದು. ಅದೆಷ್ಟೋ ಸ್ವಾಮಿಗಳ ಜನಪರ ಕಾರ್ಯಕ್ರಮಗಳಿಗೆ ಪತ್ರಿಕೆಯ ಮೂಲಕ ಬೆಂಬಲ ನೀಡಿದ ಗೌರಿ  ಅದೇ ಸ್ವಾಮಿಗಳ ರಾಜಕೀಯ ಹಿತಾಸಕ್ತಿಗಳನ್ನು ನಿರ್ದಾಕ್ಷಿಣ್ಯವಾಗಿ ಖಂಡಿಸಿದ್ದೂ ಇದೆ.

ಗೋ ಹತ್ಯಾ ನಿಷೇಧ ಕಾನೂನಿನ ಬಗ್ಗೆ ಬರೆದಾಗ, ಹೋರಾಡಿದಾಗ ಹಲವರು ಗೌರಿ ಮುಸ್ಲಿಮರ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆಂದು ಆರೊಪಿಸುತ್ತಿದ್ದರು. ಗೌರಿಗೆ ಗೋವು ಯಾವತ್ತೂ ರಾಜಕೀಯ ಮತ್ತು ಧಾರ್ಮಿಕ ಸಂಗತಿಯಾಗಿರಲೇ ಇಲ್ಲ. ಗೌರಿ ಆಗ ಮಾಡಿದ ಹೋರಾಟ ಜನರ ಆಹಾರದ ಹಕ್ಕಿನ ಬಗ್ಗೆ ಮತ್ತು ಸಂವಿಧಾನದತ್ತ ಹಕ್ಕಿನ ಬಗ್ಗೆ.

ಅಮೃತ ಮಹಲ್ ಎಂಬ ದೇಸೀ ತಳಿಯ ಹಸುವಿನ ರಕ್ಷಣೆಯ ನೆಪದಲ್ಲಿ ಆಗಿನ ರಾಜ್ಯದ ಬಿ.ಜೆ.ಪಿ. ಸರಕಾರ ಹೊಸನಗರ ಮಠಕ್ಕೆ ಗೋಮಾಳಗಳನ್ನು ವಹಿಸಿಕೊಟ್ಟಾಗ, ಅದಕ್ಕಾಗಿ ನಿಧಿ ನೀಡಿದಾಗ ಗೌರಿ ಅದನ್ನು ವಿರೋಧಿಸಿ ಬರೆದರು. ಅದನ್ನು ನಿರ್ದಿಷ್ಟವಾಗಿ ಒಂದು ಬಲಿಷ್ಠ ಸಮುದಾಯದ ಮಠಕ್ಕೆ ವಹಿಸಿಕೊಡುವುದರ ಬಗ್ಗೆ ಅವರಿಗೆ ವಿರೋಧವಿತ್ತು. ಅದಕ್ಕೆ ಬಹಳ ಸ್ಪಷ್ಟ ಕಾರಣವಿತ್ತು. ಗೋವಿನ ಹೆಸರಲ್ಲಿ ದುಡ್ಡು ಬಾಚುವ ಹುನ್ನಾರದ ಬಗ್ಗೆ ಗೌರಿಗೆ ಸ್ಪಷ್ಟ ವಿರೋಧವಿತ್ತು. ಸ್ವತಃ ಗೌರಿ ತನ್ನ ತೋಟದಲ್ಲಿ ದನ ಸಾಕುತ್ತಿದ್ದರು ಎಂಬ ವಿಚಾರ ಅನೇಕರಿಗೆ ತಿಳಿದಿರಲಿಕ್ಕಿಲ್ಲ.

ಗೌರಿ ವಿರುದ್ಧ ಮುಸ್ಲಿಂ ಪಕ್ಷಪಾತದ ಆರೋಪ ಹೊರಿಸುವವರು ಇನ್ನೊಂದು ವಿಚಾರವನ್ನು ಗಮನಿಸಬೇಕು. ಗೌರಿ ಯಾವತ್ತೂ ವಿವೇಚನಾರಹಿತರಾಗಿ, ಸಾರಾಸಗಟಾಗಿ ಮುಸ್ಲಿಮರನ್ನು ಬೆಂಬಲಿಸಿಲ್ಲ. ಮುಸ್ಲಿಮರ ತಪ್ಪುಗಳನ್ನು ಖಡಾಖಂಡಿತವಾಗಿ ವಿರೋಧಿಸಿದ ಧಾರಾಳ ಉದಾಹರಣೆಗಳಿವೆ. ಸ್ವತಃ ನಾನು ದಾರುಲ್ ಉಲೂಂ ದೇವ್‍ಬಂದ್‍ನ ಕೆಲವು ಅನಪೇಕ್ಷಿತ ಮತ್ತು ಜನವಿರೋಧೀ ಫತ್ವಾಗಳನ್ನು ಖಂಡಿಸಿ ಬರೆದ ಲೇಖನಗಳನ್ನು ಗೌರಿ ಒಳ್ಳೆಯ ಪ್ರಾಶಸ್ತ್ಯ ನೀಡಿ ಪ್ರಕಟಿಸಿದ್ದಾರೆ. ದೆಹಲಿಯ ಜಾಮಿಯಾ ಮಸೀದಿಯ ಶಾಹಿ ಇಮಾಮ್ ಬುಖಾರಿಯ ಎಡಬಿಡಂಗಿತನದ ರಾಜಕೀಯ ಹೇಳಿಕೆಗಳನ್ನು, ಕೃತ್ಯಗಳನ್ನು ನಿರ್ದಾಕ್ಷಿಣ್ಯವಾಗಿ ಖಂಡಿಸಿ ಗೌರಿ ಬರೆದಿದ್ದಾರೆ. ಶಾಹಿ ಇಮಾಂ ಬುಖಾರಿ ಜಾಮಿಯಾ ಮಸೀದಿಯನ್ನು ಮತ್ತದರ ಸ್ವತ್ತನ್ನು ಪಿತ್ರಾರ್ಜಿತ ಸ್ವತ್ತಿನಂತೆ ಬಳಸುತ್ತಿದ್ದುದರ ವಿರುದ್ಧ ನಾನು ಬರೆದ ಲೇಖನಗಳನ್ನು ಗೌರಿ ಪ್ರಕಟಿಸಿದ್ದಾರೆ. ಮುಸ್ಲಿಂ ಪುರೋಹಿತಶಾಹಿತ್ವದ ಮಹಿಳಾ ವಿರೋಧೀ ನಿಲುವಿನ ವಿರುದ್ಧ ಗೌರಿ ತನ್ನ ‘ಕಂಡಹಾಗೆ’ ಸಂಪಾದಕೀಯ ಅಂಕಣದಲ್ಲಿ ಅನೇಕ ಬಾರಿ ಬರೆದದ್ದಿದೆ. ಗೌರಿ  ಮುಸ್ಲಿಂ ಮಹಿಳೆಯರ ಬುರ್ಖಾ ಧರಿಸುವ ಹಕ್ಕಿನ ಪರ ಬರೆದಿದ್ದರು. ಆದರೆ ಗೌರಿ  ಅಲ್ಲೆಲ್ಲೂ ಪುರುಷ ಪ್ರಧಾನ ನೀತಿಯನ್ನು ಬೆಂಬಲಿಸಿಲ್ಲ. ಅವರು “ಬುರ್ಖಾ ಆಯ್ಕೆ ಮತ್ತು ಸ್ವಾತಂತ್ರ್ಯದ ಪ್ರಶ್ನೆ” ಎಂಬ ನಿಲುವು ತಾಳಿದ್ದರು. ಅದೇ ಸಂದರ್ಭ ಗೌರಿ ಸಾರಾ ಅಬೂಬಕರ್ ಅವರ ಬುರ್ಖಾ ವಿರೋಧೀ ಬರಹಗಳನ್ನೂ ಪ್ರಕಟಿಸಿದ್ದರು.

2014 ರ ಡಿಸೆಂಬರ್ ತಿಂಗಳಲ್ಲಿ ಯಾದಗಿರಿ ಜಿಲ್ಲೆಯ ತಿಂಥಣಿಯಲ್ಲಿ ನಡೆದ ಕೋಮು ಸೌಹಾರ್ದ ವೇದಿಕೆಯ ಸಮಾವೇಶದಲ್ಲಿ ನನ್ನ ಜೊತೆ ನನ್ನ ಪತ್ನಿಯೂ ಭಾಗವಹಿಸಿದ್ದಳು. ಬುರ್ಖಾಧಾರಿಯಾಗಿದ್ದ ನನ್ನ ಪತ್ನಿಯ ಜೊತೆ ಬುರ್ಖಾ ಕಳಚುವಂತೆ ವಾದಿಸಿದ್ದರು. ಆಗ ಆಕೆ “ಇದು ನನ್ನ ಮೇಲೆ ಯಾರೂ ಹೇರಿದ್ದಲ್ಲ. ಇದು ನನ್ನ ಆಯ್ಕೆ ಮತ್ತು ನನ್ನ ಸ್ವಾತಂತ್ರ್ಯ” ಎಂದು ಗೌರಿಯ ಬಳಿ ವಾದಿಸಿದ್ದಳು.

ಗೌರಿಯನ್ನು ಮುಸ್ಲಿಂ ಪಕ್ಷಪಾತಿ ಎನ್ನುವವರು ಗೌರಿಯ ಬರಹಗಳನ್ನು ಪೂರ್ವಾಗ್ರಹ ರಹಿತವಾಗಿ ಓದಬೇಕು. ಅವರ ಕಂಡ ಹಾಗೆ ಸಂಪಾದಕೀಯ ಬರಹಗಳ ಮೂರು ಸಂಪುಟಗಳಿವೆ. ಅವುಗಳನ್ನು ಓದಿದಾಗ ಗೌರಕ್ಕ ಏನು ಎಂದು ತಿಳಿಯುತ್ತದೆ.


ಇದನ್ನೂ ಓದಿ: ಸತ್ಯವ ನುಡಿಯುವ ದಿಟ್ಟತೆಗೆ ಪ್ರತೀಕವಾದ ಗೌರಿ ಲಂಕೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...