Homeಮುಖಪುಟಡ್ರಗ್ಸ್‌ ಹಬ್‌ ಆಗುತ್ತಿದೆಯೇ ಗುಜರಾತ್‌?; ಮತ್ತೆ 600 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

ಡ್ರಗ್ಸ್‌ ಹಬ್‌ ಆಗುತ್ತಿದೆಯೇ ಗುಜರಾತ್‌?; ಮತ್ತೆ 600 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

- Advertisement -
- Advertisement -

ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು (ಎಟಿಎಸ್) ರಾಜ್ಯದ ಮೊರ್ಬಿ ಜಿಲ್ಲೆಯಲ್ಲಿ 600 ಕೋಟಿ ರೂ. ಮೌಲ್ಯದ 120 ಕೆ.ಜಿ. ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ತಾರ್ ಹುಸೇನ್ ಅಲಿಯಾಸ್ ಜಬ್ಬಾರ್ ಜೊಡಿಯಾ, ಶಂಸುದ್ದೀನ್ ಹುಸೇನ್ ಸೈಯ್ಯದ್ ಮತ್ತು ಗುಲಾಮ್ ಹುಸೇನ್ ಉಮರ್ ಭಾಗದ್ ಆರೋಪಿಗಳಾಗಿದ್ದು, ಪಾಕಿಸ್ತಾನ್‌ ಮೂಲದಿಂದ ಡ್ರಗ್‌ ಬಂದಿದೆ ಎನ್ನಲಾಗಿದೆ. ಸ್ಥಳೀಯ ಪೊಲೀಸರೊಂದಿಗೆ ಎಟಿಎಸ್ ಕಾರ್ಯಾಚರಣೆ ನಡೆಸಿದೆ.

“ಪಾಕಿಸ್ತಾನದ ದೋಣಿಯಿಂದ ಬಂದ ಡ್ರಗ್‌ಅನ್ನು ಮುಖ್ತಾರ್ ಹುಸೇನ್ ಮತ್ತು ಗುಲಾಮ್ ಭಾಗದ್ ಅವರು ಸ್ವೀಕರಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ” ಎಂದು ಎಟಿಎಸ್ ಅಧಿಕಾರಿಗಳು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

“2019ರಲ್ಲಿ 227 ಕೆ.ಜಿ. ಹೆರಾಯಿನ್ ವಶಪಡಿಸಿಕೊಂಡ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪಾಕಿಸ್ತಾನದ ನಿವಾಸಿ ಜಾಹಿದ್ ಬಶೀರ್ ಬಲೋಚ್ ಅವರು ಈ ಮಾದಕ ದ್ರವ್ಯವನ್ನು ರವಾನಿಸಿದ್ದಾರೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ತಾರ್ ಹುಸೇನ್ ಅಲಿಯಾಸ್ ಜಬ್ಬಾರ್ ಜೊಡಿಯ ಅವರು ಜಾಹಿದ್ ಬಶೀರ್ ಬಲೋಚ್ ಅವರೊಂದಿಗೆ ಸಂಪರ್ಕದಲ್ಲಿದ್ದು ಡ್ರಗ್ಸ್ ಇರಿಸಿಕೊಂಡಿದ್ದಾರೆ ಎಂದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಎಟಿಎಸ್ ಅಧಿಕಾರಿಗಳು ಪ್ರತಿಪಾದಿಸಿದ್ದಾರೆ.

ವಶಕ್ಕೆ ಪಡೆದಿರುವ ಹೆರಾಯಿನ್‌ಅನ್ನು ಆರಂಭದಲ್ಲಿ ಗುಜರಾತ್‌ನ ದೇವಭೂಮಿ ದ್ವಾರಕಾ ಜಿಲ್ಲೆಯ ಸಲಾಯಾ ಬಳಿಯ ಕರಾವಳಿ ಪ್ರದೇಶದಲ್ಲಿ ಮುಚ್ಚಿಡಲಾಗಿತ್ತು. ಮೊರ್ಬಿಯ ಜಿಂಜುಡಾ ಗ್ರಾಮಕ್ಕೆ ಸ್ಥಳಾಂತರಿಸುವ ಮೊದಲು ಅದನ್ನು ಭಾನುವಾರ ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಆಶಿಶ್ ಭಾಟಿಯಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ನಿರ್ಮಾಣ ಹಂತದಲ್ಲಿರುವ ಮನೆಯ ಮೇಲೆ ಭಾನುವಾರ ಗುಪ್ತಚರ ಮಾಹಿತಿಯ ಮೇರೆಗೆ ಗುಜರಾತ್ ಎಟಿಎಸ್ ದಾಳಿ ನಡೆಸಿತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ₹ 600 ಕೋಟಿ ಬೆಲೆ ಬಾಳುವ 120 ಕೆ.ಜಿ. ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ” ಎಂದು ಡಿಜಿಪಿ ತಿಳಿಸಿದ್ದಾರೆ. ಇದನ್ನು ಆಫ್ರಿಕನ್ ದೇಶಕ್ಕೆ ಸಾಗಿಸಲು ಉದ್ದೇಶಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿರಿ: ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಗುಜರಾತ್‌ನಲ್ಲಿ ಹೆಚ್ಚುತ್ತಿವೆ ಹೆರಾಯಿನ್‌ ಪ್ರಕರಣ

ಇತ್ತೀಚಿನ ದಿನಗಳಲ್ಲಿ ಗುಜರಾತ್‌ ರಾಜ್ಯ ಡ್ರಗ್‌ ಹಬ್ ಆಗುತ್ತಿದೆ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ. ಅದಾನಿಯವರಿಗೆ ಸೇರಿದ ಮುಂದ್ರಾ ಬಂದರಿನಲ್ಲಿ ಸುಮಾರು 20,000 ಕೋಟಿ ರೂ. ಮೌಲ್ಯದ ಹೆರಾಯಿನ್‌ ಪತ್ತೆಯಾಗಿತ್ತು. ದುರಾದೃಷ್ಟವಶಾತ್‌ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಅಷ್ಟಾಗಿ ಚರ್ಚೆಯಾಗಲಿಲ್ಲ.

ಕಳೆದ ಸೆಪ್ಟೆಂಬರ್ 15 ರಂದು ಗುಜರಾತ್‌ನ ಮುಂದ್ರಾ ಬಂದರಿನಲ್ಲಿ ಅಫ್ಘಾನಿಸ್ತಾನದಿಂದ ಬಂದಿದ್ದ ಎರಡು ಕಂಟೇನರ್‌ಗಳನ್ನು ವಶಪಡಿಸಿಕೊಂಡಿದ್ದು, ಸುಮಾರು ಮೂರು ಟನ್‌ಗಳ 20 ಸಾವಿರ ಕೋಟಿ ರೂ. ಮೌಲ್ಯದ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಂದರಿನ ಅಧಿಕಾರಿಗಳು ಹೇಳಿದ್ದರು.

ಅಷ್ಟೇ ಅಲ್ಲದೆ ಇತ್ತೀಚೆಗೆ ಗುಜರಾತ್‌ನ ದೇವಭೂಮಿ ದ್ವಾರಕಾ ಜಿಲ್ಲೆಯಲ್ಲಿ ಮೂವರು ವ್ಯಕ್ತಿಗಳಿಂದ 313.25 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಮತ್ತು ಮೆಥಾಂಫೆಟಮೈನ್ (methamphetamine) ಮಾದಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ವಶಪಡಿಸಿಕೊಂಡ ಮಾದಕ ದ್ರವ್ಯಗಳು ಪಾಕಿಸ್ತಾನದಿಂದ ಬಂದಿದ್ದು, ಸಮುದ್ರ ಮಾರ್ಗದ ಮೂಲಕ ಗುಜರಾತ್‌ಗೆ ಕಳ್ಳಸಾಗಣೆ ಮಾಡಲಾಗಿತ್ತು ಎಂದು ಪ್ರಾಥಮಿಕ ತನಿಖೆ ಹೇಳಿತ್ತು. ಬುಧವಾರ (ನ.10) ನಡೆದ ದಾಳಿಯ ವೇಳೆ ಇಬ್ಬರಿಂದ ವಶಪಡಿಸಿಕೊಂಡ 47 ಪ್ಯಾಕೆಟ್‌ಗಳಲ್ಲಿ 225 ಕೋಟಿ ರೂಪಾಯಿ ಮೌಲ್ಯದ 45 ಕೆಜಿ ಹೆರಾಯಿನ್ ಇತ್ತು ಎಂದು ವಿಧಿವಿಜ್ಞಾನ ವರದಿಯು ದೃಢಪಡಿಸಿದೆ ಎಂದು ಅಧಿಕಾರಿಗಳು ಹೇಳಿದ್ದರು.

ಇದಕ್ಕೂ ಮುನ್ನ, ಮಂಗಳವಾರ (ನ.9) ಪೊಲೀಸರು ಖಚಿತ ಮಾಹಿತಿ ಮೇರೆಗೆ ಖಂಬಾಲಿಯಾ ಪಟ್ಟಣದ ಅತಿಥಿ ಗೃಹದಿಂದ ಮಹಾರಾಷ್ಟ್ರದ ಥಾಣೆ ನಿವಾಸಿ ಸಜ್ಜದ್ ಘೋಸಿ ಎಂಬಾತನನ್ನು ಬಂಧಿಸಿದ್ದರು. ಆತನಿಂದ ಒಟ್ಟು 88.25 ಕೋಟಿ ಮೌಲ್ಯದ 11.483 ಕೆಜಿ ಹೆರಾಯಿನ್ ಮತ್ತು 6.168 ಕೆಜಿ ಮೆಥಾಂಫೆಟಮೈನ್ ಒಳಗೊಂಡ 19 ಪ್ಯಾಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು.


ಇದನ್ನೂ ಓದಿರಿ: ಅದಾನಿ ಮಾಲಿಕತ್ವದ ಬಂದರಿನಲ್ಲಿ 20 ಸಾವಿರ ಕೋಟಿ ರೂ.ಗಳ ಹೆರಾಯಿನ್ ವಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...