Homeಮುಖಪುಟಡ್ರಗ್ಸ್‌ ಹಬ್‌ ಆಗುತ್ತಿದೆಯೇ ಗುಜರಾತ್‌?; ಮತ್ತೆ 600 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

ಡ್ರಗ್ಸ್‌ ಹಬ್‌ ಆಗುತ್ತಿದೆಯೇ ಗುಜರಾತ್‌?; ಮತ್ತೆ 600 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

- Advertisement -
- Advertisement -

ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು (ಎಟಿಎಸ್) ರಾಜ್ಯದ ಮೊರ್ಬಿ ಜಿಲ್ಲೆಯಲ್ಲಿ 600 ಕೋಟಿ ರೂ. ಮೌಲ್ಯದ 120 ಕೆ.ಜಿ. ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ತಾರ್ ಹುಸೇನ್ ಅಲಿಯಾಸ್ ಜಬ್ಬಾರ್ ಜೊಡಿಯಾ, ಶಂಸುದ್ದೀನ್ ಹುಸೇನ್ ಸೈಯ್ಯದ್ ಮತ್ತು ಗುಲಾಮ್ ಹುಸೇನ್ ಉಮರ್ ಭಾಗದ್ ಆರೋಪಿಗಳಾಗಿದ್ದು, ಪಾಕಿಸ್ತಾನ್‌ ಮೂಲದಿಂದ ಡ್ರಗ್‌ ಬಂದಿದೆ ಎನ್ನಲಾಗಿದೆ. ಸ್ಥಳೀಯ ಪೊಲೀಸರೊಂದಿಗೆ ಎಟಿಎಸ್ ಕಾರ್ಯಾಚರಣೆ ನಡೆಸಿದೆ.

“ಪಾಕಿಸ್ತಾನದ ದೋಣಿಯಿಂದ ಬಂದ ಡ್ರಗ್‌ಅನ್ನು ಮುಖ್ತಾರ್ ಹುಸೇನ್ ಮತ್ತು ಗುಲಾಮ್ ಭಾಗದ್ ಅವರು ಸ್ವೀಕರಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ” ಎಂದು ಎಟಿಎಸ್ ಅಧಿಕಾರಿಗಳು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

“2019ರಲ್ಲಿ 227 ಕೆ.ಜಿ. ಹೆರಾಯಿನ್ ವಶಪಡಿಸಿಕೊಂಡ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪಾಕಿಸ್ತಾನದ ನಿವಾಸಿ ಜಾಹಿದ್ ಬಶೀರ್ ಬಲೋಚ್ ಅವರು ಈ ಮಾದಕ ದ್ರವ್ಯವನ್ನು ರವಾನಿಸಿದ್ದಾರೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ತಾರ್ ಹುಸೇನ್ ಅಲಿಯಾಸ್ ಜಬ್ಬಾರ್ ಜೊಡಿಯ ಅವರು ಜಾಹಿದ್ ಬಶೀರ್ ಬಲೋಚ್ ಅವರೊಂದಿಗೆ ಸಂಪರ್ಕದಲ್ಲಿದ್ದು ಡ್ರಗ್ಸ್ ಇರಿಸಿಕೊಂಡಿದ್ದಾರೆ ಎಂದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಎಟಿಎಸ್ ಅಧಿಕಾರಿಗಳು ಪ್ರತಿಪಾದಿಸಿದ್ದಾರೆ.

ವಶಕ್ಕೆ ಪಡೆದಿರುವ ಹೆರಾಯಿನ್‌ಅನ್ನು ಆರಂಭದಲ್ಲಿ ಗುಜರಾತ್‌ನ ದೇವಭೂಮಿ ದ್ವಾರಕಾ ಜಿಲ್ಲೆಯ ಸಲಾಯಾ ಬಳಿಯ ಕರಾವಳಿ ಪ್ರದೇಶದಲ್ಲಿ ಮುಚ್ಚಿಡಲಾಗಿತ್ತು. ಮೊರ್ಬಿಯ ಜಿಂಜುಡಾ ಗ್ರಾಮಕ್ಕೆ ಸ್ಥಳಾಂತರಿಸುವ ಮೊದಲು ಅದನ್ನು ಭಾನುವಾರ ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಆಶಿಶ್ ಭಾಟಿಯಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ನಿರ್ಮಾಣ ಹಂತದಲ್ಲಿರುವ ಮನೆಯ ಮೇಲೆ ಭಾನುವಾರ ಗುಪ್ತಚರ ಮಾಹಿತಿಯ ಮೇರೆಗೆ ಗುಜರಾತ್ ಎಟಿಎಸ್ ದಾಳಿ ನಡೆಸಿತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ₹ 600 ಕೋಟಿ ಬೆಲೆ ಬಾಳುವ 120 ಕೆ.ಜಿ. ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ” ಎಂದು ಡಿಜಿಪಿ ತಿಳಿಸಿದ್ದಾರೆ. ಇದನ್ನು ಆಫ್ರಿಕನ್ ದೇಶಕ್ಕೆ ಸಾಗಿಸಲು ಉದ್ದೇಶಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿರಿ: ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಗುಜರಾತ್‌ನಲ್ಲಿ ಹೆಚ್ಚುತ್ತಿವೆ ಹೆರಾಯಿನ್‌ ಪ್ರಕರಣ

ಇತ್ತೀಚಿನ ದಿನಗಳಲ್ಲಿ ಗುಜರಾತ್‌ ರಾಜ್ಯ ಡ್ರಗ್‌ ಹಬ್ ಆಗುತ್ತಿದೆ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ. ಅದಾನಿಯವರಿಗೆ ಸೇರಿದ ಮುಂದ್ರಾ ಬಂದರಿನಲ್ಲಿ ಸುಮಾರು 20,000 ಕೋಟಿ ರೂ. ಮೌಲ್ಯದ ಹೆರಾಯಿನ್‌ ಪತ್ತೆಯಾಗಿತ್ತು. ದುರಾದೃಷ್ಟವಶಾತ್‌ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಅಷ್ಟಾಗಿ ಚರ್ಚೆಯಾಗಲಿಲ್ಲ.

ಕಳೆದ ಸೆಪ್ಟೆಂಬರ್ 15 ರಂದು ಗುಜರಾತ್‌ನ ಮುಂದ್ರಾ ಬಂದರಿನಲ್ಲಿ ಅಫ್ಘಾನಿಸ್ತಾನದಿಂದ ಬಂದಿದ್ದ ಎರಡು ಕಂಟೇನರ್‌ಗಳನ್ನು ವಶಪಡಿಸಿಕೊಂಡಿದ್ದು, ಸುಮಾರು ಮೂರು ಟನ್‌ಗಳ 20 ಸಾವಿರ ಕೋಟಿ ರೂ. ಮೌಲ್ಯದ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಂದರಿನ ಅಧಿಕಾರಿಗಳು ಹೇಳಿದ್ದರು.

ಅಷ್ಟೇ ಅಲ್ಲದೆ ಇತ್ತೀಚೆಗೆ ಗುಜರಾತ್‌ನ ದೇವಭೂಮಿ ದ್ವಾರಕಾ ಜಿಲ್ಲೆಯಲ್ಲಿ ಮೂವರು ವ್ಯಕ್ತಿಗಳಿಂದ 313.25 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಮತ್ತು ಮೆಥಾಂಫೆಟಮೈನ್ (methamphetamine) ಮಾದಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ವಶಪಡಿಸಿಕೊಂಡ ಮಾದಕ ದ್ರವ್ಯಗಳು ಪಾಕಿಸ್ತಾನದಿಂದ ಬಂದಿದ್ದು, ಸಮುದ್ರ ಮಾರ್ಗದ ಮೂಲಕ ಗುಜರಾತ್‌ಗೆ ಕಳ್ಳಸಾಗಣೆ ಮಾಡಲಾಗಿತ್ತು ಎಂದು ಪ್ರಾಥಮಿಕ ತನಿಖೆ ಹೇಳಿತ್ತು. ಬುಧವಾರ (ನ.10) ನಡೆದ ದಾಳಿಯ ವೇಳೆ ಇಬ್ಬರಿಂದ ವಶಪಡಿಸಿಕೊಂಡ 47 ಪ್ಯಾಕೆಟ್‌ಗಳಲ್ಲಿ 225 ಕೋಟಿ ರೂಪಾಯಿ ಮೌಲ್ಯದ 45 ಕೆಜಿ ಹೆರಾಯಿನ್ ಇತ್ತು ಎಂದು ವಿಧಿವಿಜ್ಞಾನ ವರದಿಯು ದೃಢಪಡಿಸಿದೆ ಎಂದು ಅಧಿಕಾರಿಗಳು ಹೇಳಿದ್ದರು.

ಇದಕ್ಕೂ ಮುನ್ನ, ಮಂಗಳವಾರ (ನ.9) ಪೊಲೀಸರು ಖಚಿತ ಮಾಹಿತಿ ಮೇರೆಗೆ ಖಂಬಾಲಿಯಾ ಪಟ್ಟಣದ ಅತಿಥಿ ಗೃಹದಿಂದ ಮಹಾರಾಷ್ಟ್ರದ ಥಾಣೆ ನಿವಾಸಿ ಸಜ್ಜದ್ ಘೋಸಿ ಎಂಬಾತನನ್ನು ಬಂಧಿಸಿದ್ದರು. ಆತನಿಂದ ಒಟ್ಟು 88.25 ಕೋಟಿ ಮೌಲ್ಯದ 11.483 ಕೆಜಿ ಹೆರಾಯಿನ್ ಮತ್ತು 6.168 ಕೆಜಿ ಮೆಥಾಂಫೆಟಮೈನ್ ಒಳಗೊಂಡ 19 ಪ್ಯಾಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು.


ಇದನ್ನೂ ಓದಿರಿ: ಅದಾನಿ ಮಾಲಿಕತ್ವದ ಬಂದರಿನಲ್ಲಿ 20 ಸಾವಿರ ಕೋಟಿ ರೂ.ಗಳ ಹೆರಾಯಿನ್ ವಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...