Homeಮುಖಪುಟಡ್ರಗ್ಸ್‌ ಹಬ್‌ ಆಗುತ್ತಿದೆಯೇ ಗುಜರಾತ್‌?; ಮತ್ತೆ 600 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

ಡ್ರಗ್ಸ್‌ ಹಬ್‌ ಆಗುತ್ತಿದೆಯೇ ಗುಜರಾತ್‌?; ಮತ್ತೆ 600 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

- Advertisement -
- Advertisement -

ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು (ಎಟಿಎಸ್) ರಾಜ್ಯದ ಮೊರ್ಬಿ ಜಿಲ್ಲೆಯಲ್ಲಿ 600 ಕೋಟಿ ರೂ. ಮೌಲ್ಯದ 120 ಕೆ.ಜಿ. ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ತಾರ್ ಹುಸೇನ್ ಅಲಿಯಾಸ್ ಜಬ್ಬಾರ್ ಜೊಡಿಯಾ, ಶಂಸುದ್ದೀನ್ ಹುಸೇನ್ ಸೈಯ್ಯದ್ ಮತ್ತು ಗುಲಾಮ್ ಹುಸೇನ್ ಉಮರ್ ಭಾಗದ್ ಆರೋಪಿಗಳಾಗಿದ್ದು, ಪಾಕಿಸ್ತಾನ್‌ ಮೂಲದಿಂದ ಡ್ರಗ್‌ ಬಂದಿದೆ ಎನ್ನಲಾಗಿದೆ. ಸ್ಥಳೀಯ ಪೊಲೀಸರೊಂದಿಗೆ ಎಟಿಎಸ್ ಕಾರ್ಯಾಚರಣೆ ನಡೆಸಿದೆ.

“ಪಾಕಿಸ್ತಾನದ ದೋಣಿಯಿಂದ ಬಂದ ಡ್ರಗ್‌ಅನ್ನು ಮುಖ್ತಾರ್ ಹುಸೇನ್ ಮತ್ತು ಗುಲಾಮ್ ಭಾಗದ್ ಅವರು ಸ್ವೀಕರಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ” ಎಂದು ಎಟಿಎಸ್ ಅಧಿಕಾರಿಗಳು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

“2019ರಲ್ಲಿ 227 ಕೆ.ಜಿ. ಹೆರಾಯಿನ್ ವಶಪಡಿಸಿಕೊಂಡ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪಾಕಿಸ್ತಾನದ ನಿವಾಸಿ ಜಾಹಿದ್ ಬಶೀರ್ ಬಲೋಚ್ ಅವರು ಈ ಮಾದಕ ದ್ರವ್ಯವನ್ನು ರವಾನಿಸಿದ್ದಾರೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ತಾರ್ ಹುಸೇನ್ ಅಲಿಯಾಸ್ ಜಬ್ಬಾರ್ ಜೊಡಿಯ ಅವರು ಜಾಹಿದ್ ಬಶೀರ್ ಬಲೋಚ್ ಅವರೊಂದಿಗೆ ಸಂಪರ್ಕದಲ್ಲಿದ್ದು ಡ್ರಗ್ಸ್ ಇರಿಸಿಕೊಂಡಿದ್ದಾರೆ ಎಂದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಎಟಿಎಸ್ ಅಧಿಕಾರಿಗಳು ಪ್ರತಿಪಾದಿಸಿದ್ದಾರೆ.

ವಶಕ್ಕೆ ಪಡೆದಿರುವ ಹೆರಾಯಿನ್‌ಅನ್ನು ಆರಂಭದಲ್ಲಿ ಗುಜರಾತ್‌ನ ದೇವಭೂಮಿ ದ್ವಾರಕಾ ಜಿಲ್ಲೆಯ ಸಲಾಯಾ ಬಳಿಯ ಕರಾವಳಿ ಪ್ರದೇಶದಲ್ಲಿ ಮುಚ್ಚಿಡಲಾಗಿತ್ತು. ಮೊರ್ಬಿಯ ಜಿಂಜುಡಾ ಗ್ರಾಮಕ್ಕೆ ಸ್ಥಳಾಂತರಿಸುವ ಮೊದಲು ಅದನ್ನು ಭಾನುವಾರ ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಆಶಿಶ್ ಭಾಟಿಯಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ನಿರ್ಮಾಣ ಹಂತದಲ್ಲಿರುವ ಮನೆಯ ಮೇಲೆ ಭಾನುವಾರ ಗುಪ್ತಚರ ಮಾಹಿತಿಯ ಮೇರೆಗೆ ಗುಜರಾತ್ ಎಟಿಎಸ್ ದಾಳಿ ನಡೆಸಿತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ₹ 600 ಕೋಟಿ ಬೆಲೆ ಬಾಳುವ 120 ಕೆ.ಜಿ. ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ” ಎಂದು ಡಿಜಿಪಿ ತಿಳಿಸಿದ್ದಾರೆ. ಇದನ್ನು ಆಫ್ರಿಕನ್ ದೇಶಕ್ಕೆ ಸಾಗಿಸಲು ಉದ್ದೇಶಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿರಿ: ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಗುಜರಾತ್‌ನಲ್ಲಿ ಹೆಚ್ಚುತ್ತಿವೆ ಹೆರಾಯಿನ್‌ ಪ್ರಕರಣ

ಇತ್ತೀಚಿನ ದಿನಗಳಲ್ಲಿ ಗುಜರಾತ್‌ ರಾಜ್ಯ ಡ್ರಗ್‌ ಹಬ್ ಆಗುತ್ತಿದೆ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ. ಅದಾನಿಯವರಿಗೆ ಸೇರಿದ ಮುಂದ್ರಾ ಬಂದರಿನಲ್ಲಿ ಸುಮಾರು 20,000 ಕೋಟಿ ರೂ. ಮೌಲ್ಯದ ಹೆರಾಯಿನ್‌ ಪತ್ತೆಯಾಗಿತ್ತು. ದುರಾದೃಷ್ಟವಶಾತ್‌ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಅಷ್ಟಾಗಿ ಚರ್ಚೆಯಾಗಲಿಲ್ಲ.

ಕಳೆದ ಸೆಪ್ಟೆಂಬರ್ 15 ರಂದು ಗುಜರಾತ್‌ನ ಮುಂದ್ರಾ ಬಂದರಿನಲ್ಲಿ ಅಫ್ಘಾನಿಸ್ತಾನದಿಂದ ಬಂದಿದ್ದ ಎರಡು ಕಂಟೇನರ್‌ಗಳನ್ನು ವಶಪಡಿಸಿಕೊಂಡಿದ್ದು, ಸುಮಾರು ಮೂರು ಟನ್‌ಗಳ 20 ಸಾವಿರ ಕೋಟಿ ರೂ. ಮೌಲ್ಯದ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಂದರಿನ ಅಧಿಕಾರಿಗಳು ಹೇಳಿದ್ದರು.

ಅಷ್ಟೇ ಅಲ್ಲದೆ ಇತ್ತೀಚೆಗೆ ಗುಜರಾತ್‌ನ ದೇವಭೂಮಿ ದ್ವಾರಕಾ ಜಿಲ್ಲೆಯಲ್ಲಿ ಮೂವರು ವ್ಯಕ್ತಿಗಳಿಂದ 313.25 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಮತ್ತು ಮೆಥಾಂಫೆಟಮೈನ್ (methamphetamine) ಮಾದಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ವಶಪಡಿಸಿಕೊಂಡ ಮಾದಕ ದ್ರವ್ಯಗಳು ಪಾಕಿಸ್ತಾನದಿಂದ ಬಂದಿದ್ದು, ಸಮುದ್ರ ಮಾರ್ಗದ ಮೂಲಕ ಗುಜರಾತ್‌ಗೆ ಕಳ್ಳಸಾಗಣೆ ಮಾಡಲಾಗಿತ್ತು ಎಂದು ಪ್ರಾಥಮಿಕ ತನಿಖೆ ಹೇಳಿತ್ತು. ಬುಧವಾರ (ನ.10) ನಡೆದ ದಾಳಿಯ ವೇಳೆ ಇಬ್ಬರಿಂದ ವಶಪಡಿಸಿಕೊಂಡ 47 ಪ್ಯಾಕೆಟ್‌ಗಳಲ್ಲಿ 225 ಕೋಟಿ ರೂಪಾಯಿ ಮೌಲ್ಯದ 45 ಕೆಜಿ ಹೆರಾಯಿನ್ ಇತ್ತು ಎಂದು ವಿಧಿವಿಜ್ಞಾನ ವರದಿಯು ದೃಢಪಡಿಸಿದೆ ಎಂದು ಅಧಿಕಾರಿಗಳು ಹೇಳಿದ್ದರು.

ಇದಕ್ಕೂ ಮುನ್ನ, ಮಂಗಳವಾರ (ನ.9) ಪೊಲೀಸರು ಖಚಿತ ಮಾಹಿತಿ ಮೇರೆಗೆ ಖಂಬಾಲಿಯಾ ಪಟ್ಟಣದ ಅತಿಥಿ ಗೃಹದಿಂದ ಮಹಾರಾಷ್ಟ್ರದ ಥಾಣೆ ನಿವಾಸಿ ಸಜ್ಜದ್ ಘೋಸಿ ಎಂಬಾತನನ್ನು ಬಂಧಿಸಿದ್ದರು. ಆತನಿಂದ ಒಟ್ಟು 88.25 ಕೋಟಿ ಮೌಲ್ಯದ 11.483 ಕೆಜಿ ಹೆರಾಯಿನ್ ಮತ್ತು 6.168 ಕೆಜಿ ಮೆಥಾಂಫೆಟಮೈನ್ ಒಳಗೊಂಡ 19 ಪ್ಯಾಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು.


ಇದನ್ನೂ ಓದಿರಿ: ಅದಾನಿ ಮಾಲಿಕತ್ವದ ಬಂದರಿನಲ್ಲಿ 20 ಸಾವಿರ ಕೋಟಿ ರೂ.ಗಳ ಹೆರಾಯಿನ್ ವಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...