Homeಮುಖಪುಟಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆಯೆ?: ಸಿದ್ದರಾಮಯ್ಯ

ಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆಯೆ?: ಸಿದ್ದರಾಮಯ್ಯ

ಹೃದಯವಿರುವ ಮನುಷ್ಯನಿಗೆ ಭೀಕರ ಪಶ್ಚಾತ್ತಾಪ, ಪಾಪಪ್ರಜ್ಞೆಗಳು ಕಾಡಬೇಕಾಗಿತ್ತು ಎಂದು ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಎರಡನೇ ಅಲೆ ಮುಗಿಯುವ ಮೊದಲೇ ಡೆಲ್ಟಾ ಪ್ಲಸ್ ಎಂಬ ಕೊರೋನಾದ ರೂಪಾಂತರಿ ವೈರಸ್ಸು ದೇಶದಲ್ಲಿ ವೇಗವಾಗಿ ಹರಡುವ ಭೀತಿ ಸೃಷ್ಟಿಯಾಗಿದ್ದು, ಇದನ್ನು ನಿಭಾಯಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಗುರವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

“ದೇಶದ 80% ರಷ್ಟು ಜನರಿಗೆ ಲಸಿಕೆ ನೀಡುವವರೆಗೆ ಅಂತರರಾಷ್ಟ್ರೀಯ ವಿಮಾನಗಳನ್ನು ನಿರ್ಬಂಧಿಸುವುದು ಸೂಕ್ತ. ದೇಶದ ಯಾವ ಯಾವ ಸ್ಥಳಗಳಲ್ಲಿ ಕೊರೊನಾ ವೈರಸ್ಸಿನ ಡೆಲ್ಟಾ ಪ್ಲಸ್ ಪ್ರಬೇಧ ಪತ್ತೆಯಾಗಿದೆಯೊ ಆ ಸ್ಥಳಗಳ ಕುರಿತು ತೀವ್ರ ನಿಗಾ ವಹಿಸಿ ಇತರರಿಗೆ ಹರಡದಂತೆ ನೋಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ಹೊಸ ಹೊಸ ತಳಿಗಳಾಗಿ ಅತ್ಯಂತ ವೇಗವಾಗಿ ರೂಪಾಂತರ ಹೊಂದುತ್ತಿದೆ. ಪರಿಸ್ಥಿತಿ ಹೀಗಿರುವಾಗ ಸರ್ಕಾರಗಳು ವ್ಯಾಪಕವಾಗಿ ಮತ್ತು ಉಚಿತವಾಗಿ ಸಾರ್ವಜನಿಕ ಆಂದೋಲನಗಳ ಮೂಲಕ ಲಸಿಕೆಗಳನ್ನು ನೀಡಬೇಕು. ಈಗ ರಾಜ್ಯಗಳ ಬಳಿ 2.5 ಕೋಟಿ ಡೋಸ್ ಲಸಿಕೆಗಳಿವೆ ಎಂದು ಹೇಳುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳ ಬಳಿ ಎಷ್ಟಿವೆ ಎಂದು ಹೇಳುತ್ತಿಲ್ಲ. ಲಸಿಕೆ ಉತ್ಪಾದಕ ಕಂಪೆನಿಗಳು ಪ್ರತಿ ದಿನ ಸರ್ಕಾರಕ್ಕೆ ಮತ್ತು ಖಾಸಗಿಯವರಿಗೆ ನೀಡಿದ ಲಸಿಕೆಗಳ ಕುರಿತು ಪ್ರಕಟಣೆಗಳನ್ನು ಹೊರಡಿಸಬೇಕು” ಎಂದು ಆಗ್ರಹಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯಲ್ಲಿ ಪರ್ಯಾಯ ನಾಯಕರಿಲ್ಲ, ನಾಯಕತ್ವ ದಿವಾಳಿಯಾಗಿದೆ: ಸಿದ್ದರಾಮಯ್ಯ

“ಮೂರನೆ ಅಲೆಯ ಕುರಿತು ತಜ್ಞರು ಮಾಡಿರುವ ಶಿಫಾರಸ್ಸುಗಳಂತೆ, ಖಾಸಗಿ ಆಸ್ಪತ್ರೆಗಳು ಕಂಪೆನಿಗಳಿಂದ ಲಸಿಕೆಗಳನ್ನು ಸ್ವೀಕರಿಸಿ ಗರಿಷ್ಠ 10 ದಿನಗಳ ಕಾಲ ಮಾತ್ರ ದಾಸ್ತಾನಿರಿಸಿಕೊಳ್ಳಬೇಕೆಂಬ ಕುರಿತು ಆದೇಶ ಹೊರಡಿಸುವಂತೆ ತಿಳಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತುರ್ತಾಗಿ ಮಾಡಬೇಕಾದ ಕೆಲಸ ಇದು” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

‘ದೇಶದ ಸಮಸ್ತ ಜನರಿಗೆ ಮುಂದಿನ ಮೂರು – ನಾಲ್ಕು ತಿಂಗಳಲ್ಲಿ ಲಸಿಕೆ ಹಾಕುವಷ್ಟು ಪ್ರಮಾಣದಲ್ಲಿ ಉತ್ಪಾದಿಸಲು ಲಸಿಕೆಗಳ ಮೇಲಿನ ಪೇಟೆಂಟುಗಳನ್ನು ಮೊದಲು ಕಿತ್ತು ಹಾಕಬೇಕು. ಸರ್ಕಾರ ಕಾರ್ಪೊರೇಟ್ ಕಂಪೆನಿಗಳ ಓಲೈಕೆ ಮನಸ್ಥಿತಿಯಿಂದ ಹೊರಬಂದು, ಅವುಗಳ ಮೇಲೆ ಪ್ರಬಲ ಹಿಡಿತ ಸಾಧಿಸಬೇಕು. ಕೊರೊನಾ ಲಸಿಕೆಗಳನ್ನು ‘ಜೆನೆರಿಕ್ ಡ್ರಗ್’ಗಳ ವ್ಯಾಪ್ತಿಗೆ ತಂದು ಸರ್ಕಾರಗಳೆ ಉತ್ಪಾದನೆ ಮತ್ತು ವಿತರಣೆಗಳನ್ನು ನಿಯಂತ್ರಿಸಬೇಕು. ಹೀಗಾದರೆ ಗರಿಷ್ಠ 50 ರೂಪಾಯಿಗಳಿಗೆ ಲಸಿಕೆ ದೊರೆಯುತ್ತದೆ” ಎಂದು ಹೇಳಿದ್ದಾರೆ.

“ಮೋದಿಯವರು ಜೂನ್ 30 ರಂದು ‘ಕೋವಿನ್ ಗ್ಲೋಬಲ್ ಕಾನ್‍ಕ್ಲೇವ್’ ನಡೆಸಲು ಉದ್ದೇಶಿಸಿದ್ದಾರೆಂಬ ಮಾಹಿತಿ ಇದೆ. ಈ ಸಮಾವೇಶದಲ್ಲಿ ಭಾರತವು ಕೊರೋನವನ್ನು ಎದುರಿಸಿದ ರೀತಿಗಳನ್ನು ತಿಳಿಸುವುದಾಗಿ ಹೇಳಿದ್ದಾರೆ. ಇದಂತೂ ಅತ್ಯಂತ ನಾಚಿಕೆಗೇಡಿನ ಮತ್ತು ಅಸೂಕ್ಷ್ಮವಾದ ವಿಷಯ. ಕಳೆದ ಮಾರ್ಚ್ ತಿಂಗಳಿಂದ ದೇಶದಲ್ಲಿ ಏನೇನಾಯಿತು ಎಂದು ಜನರು ಮರೆತು ಬಿಟ್ಟಿದ್ದಾರೆಯೆ? ಹೃದಯವಿರುವ ಮನುಷ್ಯನಿಗೆ ಭೀಕರ ಪಶ್ಚಾತ್ತಾಪ, ಪಾಪಪ್ರಜ್ಞೆಗಳು ಕಾಡಬೇಕಾಗಿತ್ತು. ಅದರ ಬದಲಾಗಿ ಕೊರೋನಾದ ವಿರುದ್ಧ ವಿಜಯ ಸಾಧಿಸಿ ಬಿಟ್ಟಿದ್ದೇವೆ ಎಂಬಂತೆ ವಿಶ್ವದ ಜನರಿಗೆ ತಿಳಿಸಲು ಹೊರಟಿರುವುದನ್ನು ಏನೆನ್ನಬೇಕು? ಇದನ್ನು ನೋಡಿದರೆ ನಮ್ಮ ಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆ ಎನ್ನಿಸುತ್ತದೆಯೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೋದಿ, ಅದಾನಿಯೆದರು ತೆಲೆಯೆತ್ತಲು ಬಿಎಸ್‌ವೈಗೆ ಧೈರ್ಯವಿಲ್ಲ: ವಿದ್ಯುತ್ ದರ ಏರಿಕೆಗೆ ಸಿದ್ದರಾಮಯ್ಯ ಖಂಡನೆ

“ಮೋದಿಯವರು ತಮ್ಮ ಸಾಧನೆಗಳ ಜಾಗತಿಕ ಸಮಾವೇಶ ನಡೆಸುವ ಬದಲು ವಿಶ್ವದ ನಾಯಕರುಗಳನ್ನು ಒತ್ತಾಯಿಸಿ ಕೊರೊನಾ ಲಸಿಕೆಯ ಮೇಲಿನ ಪೇಟೆಂಟುಗಳನ್ನು ತೆಗೆದು ಹಾಕಬೇಕೆಂದು ಒತ್ತಾಯಿಸಬೇಕು.
ವಿಶ್ವದ ಜನ ಸಮುದಾಯಗಳ ಆರೋಗ್ಯವು ತುರ್ತುಪರಿಸ್ಥಿತಿಯಲ್ಲಿರುವಾಗ, ಕೊರೊನಾದ ನಿರ್ವಹಣೆಯನ್ನು ಆಯಾ ದೇಶಗಳಿಗೆ ಬಿಡುವುದು ಹಾಗೂ ಔಷಧ ಕಂಪೆನಿಗಳ ಲೂಟಿಗೆ ಅವಕಾಶ ಮಾಡಿಕೊಡುವುದು ಅತ್ಯಂತ ಅಪಾಯಕಾರಿಯಾದ ಸಂಗತಿ ಎಂದು ತಿಳಿಸಬೇಕು” ಎಂದು ಹೇಳಿದ್ದಾರೆ.

ಜಾಗತಿಕ ಸಮಸ್ಯೆಗೆ ಜಾಗತಿಕ ಪರಿಹಾರಗಳೆ ಬೇಕಾಗುತ್ತವೆಯೆ ಹೊರತು ಸ್ಥಳೀಯವಾಗಿ ಪರಿಹಾರ ಕಂಡುಕೊಳ್ಳಲಾಗದು. ಆದ್ದರಿಂದ ವಿಶ್ವ ಸಂಸ್ಥೆ ಮತ್ತು ವಿಶ್ವ ಆರೋಗ್ಯ ಸಂಸ್ಥೆಗಳು ಕ್ರಿಯಾಶೀಲಗೊಂಡು ಸದ್ಯದ ತುರ್ತುಪರಿಸ್ಥಿತಿಯನ್ನು ನಿಭಾಯಿಸುವ ಸಾಮೂಹಿಕ ಪ್ರಯತ್ನಗಳಾಗಬೇಕೆಂದು ಒತ್ತಾಯಿಸಬೇಕು. ಯಾಕೆಂದರೆ ವಿಶ್ವದ ಯಾವುದೋ ಭಾಗದಲ್ಲಿ ರೂಪಾಂತರಗೊಂಡ ವೈರಸ್ಸು ಬೆಂಕಿಯಂತೆ ಜಗತ್ತನ್ನು ಆವರಿಸಿ ಬಿಡಬಹುದು. ಹಾಗಾಗಿ ವಿವೇಕವುಳ್ಳ, ವೈಜ್ಞಾನಿಕ ಮನೋಭಾವವುಳ್ಳ ಮನುಷ್ಯರು ಒತ್ತಾಯಿಸಬೇಕಾದ ಕ್ರಮಗಳಿವು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇವುಗಳ ಜೊತೆಗೆ ಜಗತ್ತಿನ ಅನೇಕ ದೇಶಗಳು ತೆಗೆದುಕೊಂಡಿರುವ ಆರ್ಥಿಕ ಪುನಶ್ಚೇತನದ ಪ್ಯಾಕೇಜುಗಳನ್ನು ಘೋಷಿಸಬೇಕೆಂದು ಒತ್ತಾಯಿಸಿರುವ ಸಿದ್ದರಾಮಯ್ಯ ಅವರು, “ಈ ಸಲಹೆಗಳನ್ನು ಪ್ರಧಾನಿ ಮೋದಿಯವರಿಗೆ ತಿಳಿಸಿ ಅತ್ಯಂತ ತುರ್ತಾಗಿ ಮನುಷ್ಯ ಪರವಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸುವ ಜವಾಬ್ಧಾರಿ ರಾಜ್ಯದಿಂದ ಆಯ್ಕೆಯಾದ ಸಂಸದರು ಮತ್ತು ಕೇಂದ್ರದ ಸಚಿವರುಗಳ ಮೇಲೆ ಇದೆ. ರಾಜ್ಯದ ಮುಖ್ಯಮಂತ್ರಿಗಳೂ ಕೂಡ ಈ ಕುರಿತು ಪ್ರಧಾನಿಗಳನ್ನು ಒತ್ತಾಯಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

“ಪ್ರತಿಯೊಬ್ಬರಿಗೂ ಲಸಿಕೆ, ಹೊಟ್ಟೆಗೆ ಅನ್ನ, ಒಂದಿಷ್ಟು ಆರ್ಥಿಕ ನೆರವು, ಉಚಿತ ಚಿಕಿತ್ಸೆ ನೀಡದಿದ್ದರೆ ಭಾರತ ವಿಶ್ವ ಗುರುವಾಗುವುದಿರಲಿ ಪಾಕಿಸ್ತಾನ, ಬಾಂಗ್ಲಾ, ಶ್ರೀಲಂಕ ಮತ್ತಿತರ ನೆರೆಯ ದೇಶಗಳ ಎದುರು ತಲೆ ಎತ್ತಿ ನಿಲ್ಲುವಂತೆ ಮಾಡಲಾಗದು ಎಂಬ ತಿಳಿವಳಿಕೆಯನ್ನು ಪ್ರಧಾನಿ ಮೋದಿಯವರಿಗೆ ತಿಳಿಸಬೇಕು” ಎಂದು ರಾಜ್ಯದಿಂದ ಆಯ್ಕೆಯಾದ ಸಂಸದರುಗಳನ್ನು ಮತ್ತು ರಾಜ್ಯದ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗೆ ಬರೆದಿರುವ ಪತ್ರ

ಇದನ್ನೂ ಓದಿ: ಕನ್ನಡ ಭಾಷಾ ವಿಷಯ 2 ಸೆಮಿಸ್ಟರ್‌ಗೆ ಸೀಮಿತ-ಕನ್ನಡಕ್ಕೆ ಮಾಡಿದ ದ್ರೋಹ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...