Homeಮುಖಪುಟಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆಯೆ?: ಸಿದ್ದರಾಮಯ್ಯ

ಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆಯೆ?: ಸಿದ್ದರಾಮಯ್ಯ

ಹೃದಯವಿರುವ ಮನುಷ್ಯನಿಗೆ ಭೀಕರ ಪಶ್ಚಾತ್ತಾಪ, ಪಾಪಪ್ರಜ್ಞೆಗಳು ಕಾಡಬೇಕಾಗಿತ್ತು ಎಂದು ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಎರಡನೇ ಅಲೆ ಮುಗಿಯುವ ಮೊದಲೇ ಡೆಲ್ಟಾ ಪ್ಲಸ್ ಎಂಬ ಕೊರೋನಾದ ರೂಪಾಂತರಿ ವೈರಸ್ಸು ದೇಶದಲ್ಲಿ ವೇಗವಾಗಿ ಹರಡುವ ಭೀತಿ ಸೃಷ್ಟಿಯಾಗಿದ್ದು, ಇದನ್ನು ನಿಭಾಯಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಗುರವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

“ದೇಶದ 80% ರಷ್ಟು ಜನರಿಗೆ ಲಸಿಕೆ ನೀಡುವವರೆಗೆ ಅಂತರರಾಷ್ಟ್ರೀಯ ವಿಮಾನಗಳನ್ನು ನಿರ್ಬಂಧಿಸುವುದು ಸೂಕ್ತ. ದೇಶದ ಯಾವ ಯಾವ ಸ್ಥಳಗಳಲ್ಲಿ ಕೊರೊನಾ ವೈರಸ್ಸಿನ ಡೆಲ್ಟಾ ಪ್ಲಸ್ ಪ್ರಬೇಧ ಪತ್ತೆಯಾಗಿದೆಯೊ ಆ ಸ್ಥಳಗಳ ಕುರಿತು ತೀವ್ರ ನಿಗಾ ವಹಿಸಿ ಇತರರಿಗೆ ಹರಡದಂತೆ ನೋಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ಹೊಸ ಹೊಸ ತಳಿಗಳಾಗಿ ಅತ್ಯಂತ ವೇಗವಾಗಿ ರೂಪಾಂತರ ಹೊಂದುತ್ತಿದೆ. ಪರಿಸ್ಥಿತಿ ಹೀಗಿರುವಾಗ ಸರ್ಕಾರಗಳು ವ್ಯಾಪಕವಾಗಿ ಮತ್ತು ಉಚಿತವಾಗಿ ಸಾರ್ವಜನಿಕ ಆಂದೋಲನಗಳ ಮೂಲಕ ಲಸಿಕೆಗಳನ್ನು ನೀಡಬೇಕು. ಈಗ ರಾಜ್ಯಗಳ ಬಳಿ 2.5 ಕೋಟಿ ಡೋಸ್ ಲಸಿಕೆಗಳಿವೆ ಎಂದು ಹೇಳುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳ ಬಳಿ ಎಷ್ಟಿವೆ ಎಂದು ಹೇಳುತ್ತಿಲ್ಲ. ಲಸಿಕೆ ಉತ್ಪಾದಕ ಕಂಪೆನಿಗಳು ಪ್ರತಿ ದಿನ ಸರ್ಕಾರಕ್ಕೆ ಮತ್ತು ಖಾಸಗಿಯವರಿಗೆ ನೀಡಿದ ಲಸಿಕೆಗಳ ಕುರಿತು ಪ್ರಕಟಣೆಗಳನ್ನು ಹೊರಡಿಸಬೇಕು” ಎಂದು ಆಗ್ರಹಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯಲ್ಲಿ ಪರ್ಯಾಯ ನಾಯಕರಿಲ್ಲ, ನಾಯಕತ್ವ ದಿವಾಳಿಯಾಗಿದೆ: ಸಿದ್ದರಾಮಯ್ಯ

“ಮೂರನೆ ಅಲೆಯ ಕುರಿತು ತಜ್ಞರು ಮಾಡಿರುವ ಶಿಫಾರಸ್ಸುಗಳಂತೆ, ಖಾಸಗಿ ಆಸ್ಪತ್ರೆಗಳು ಕಂಪೆನಿಗಳಿಂದ ಲಸಿಕೆಗಳನ್ನು ಸ್ವೀಕರಿಸಿ ಗರಿಷ್ಠ 10 ದಿನಗಳ ಕಾಲ ಮಾತ್ರ ದಾಸ್ತಾನಿರಿಸಿಕೊಳ್ಳಬೇಕೆಂಬ ಕುರಿತು ಆದೇಶ ಹೊರಡಿಸುವಂತೆ ತಿಳಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತುರ್ತಾಗಿ ಮಾಡಬೇಕಾದ ಕೆಲಸ ಇದು” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

‘ದೇಶದ ಸಮಸ್ತ ಜನರಿಗೆ ಮುಂದಿನ ಮೂರು – ನಾಲ್ಕು ತಿಂಗಳಲ್ಲಿ ಲಸಿಕೆ ಹಾಕುವಷ್ಟು ಪ್ರಮಾಣದಲ್ಲಿ ಉತ್ಪಾದಿಸಲು ಲಸಿಕೆಗಳ ಮೇಲಿನ ಪೇಟೆಂಟುಗಳನ್ನು ಮೊದಲು ಕಿತ್ತು ಹಾಕಬೇಕು. ಸರ್ಕಾರ ಕಾರ್ಪೊರೇಟ್ ಕಂಪೆನಿಗಳ ಓಲೈಕೆ ಮನಸ್ಥಿತಿಯಿಂದ ಹೊರಬಂದು, ಅವುಗಳ ಮೇಲೆ ಪ್ರಬಲ ಹಿಡಿತ ಸಾಧಿಸಬೇಕು. ಕೊರೊನಾ ಲಸಿಕೆಗಳನ್ನು ‘ಜೆನೆರಿಕ್ ಡ್ರಗ್’ಗಳ ವ್ಯಾಪ್ತಿಗೆ ತಂದು ಸರ್ಕಾರಗಳೆ ಉತ್ಪಾದನೆ ಮತ್ತು ವಿತರಣೆಗಳನ್ನು ನಿಯಂತ್ರಿಸಬೇಕು. ಹೀಗಾದರೆ ಗರಿಷ್ಠ 50 ರೂಪಾಯಿಗಳಿಗೆ ಲಸಿಕೆ ದೊರೆಯುತ್ತದೆ” ಎಂದು ಹೇಳಿದ್ದಾರೆ.

“ಮೋದಿಯವರು ಜೂನ್ 30 ರಂದು ‘ಕೋವಿನ್ ಗ್ಲೋಬಲ್ ಕಾನ್‍ಕ್ಲೇವ್’ ನಡೆಸಲು ಉದ್ದೇಶಿಸಿದ್ದಾರೆಂಬ ಮಾಹಿತಿ ಇದೆ. ಈ ಸಮಾವೇಶದಲ್ಲಿ ಭಾರತವು ಕೊರೋನವನ್ನು ಎದುರಿಸಿದ ರೀತಿಗಳನ್ನು ತಿಳಿಸುವುದಾಗಿ ಹೇಳಿದ್ದಾರೆ. ಇದಂತೂ ಅತ್ಯಂತ ನಾಚಿಕೆಗೇಡಿನ ಮತ್ತು ಅಸೂಕ್ಷ್ಮವಾದ ವಿಷಯ. ಕಳೆದ ಮಾರ್ಚ್ ತಿಂಗಳಿಂದ ದೇಶದಲ್ಲಿ ಏನೇನಾಯಿತು ಎಂದು ಜನರು ಮರೆತು ಬಿಟ್ಟಿದ್ದಾರೆಯೆ? ಹೃದಯವಿರುವ ಮನುಷ್ಯನಿಗೆ ಭೀಕರ ಪಶ್ಚಾತ್ತಾಪ, ಪಾಪಪ್ರಜ್ಞೆಗಳು ಕಾಡಬೇಕಾಗಿತ್ತು. ಅದರ ಬದಲಾಗಿ ಕೊರೋನಾದ ವಿರುದ್ಧ ವಿಜಯ ಸಾಧಿಸಿ ಬಿಟ್ಟಿದ್ದೇವೆ ಎಂಬಂತೆ ವಿಶ್ವದ ಜನರಿಗೆ ತಿಳಿಸಲು ಹೊರಟಿರುವುದನ್ನು ಏನೆನ್ನಬೇಕು? ಇದನ್ನು ನೋಡಿದರೆ ನಮ್ಮ ಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆ ಎನ್ನಿಸುತ್ತದೆಯೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೋದಿ, ಅದಾನಿಯೆದರು ತೆಲೆಯೆತ್ತಲು ಬಿಎಸ್‌ವೈಗೆ ಧೈರ್ಯವಿಲ್ಲ: ವಿದ್ಯುತ್ ದರ ಏರಿಕೆಗೆ ಸಿದ್ದರಾಮಯ್ಯ ಖಂಡನೆ

“ಮೋದಿಯವರು ತಮ್ಮ ಸಾಧನೆಗಳ ಜಾಗತಿಕ ಸಮಾವೇಶ ನಡೆಸುವ ಬದಲು ವಿಶ್ವದ ನಾಯಕರುಗಳನ್ನು ಒತ್ತಾಯಿಸಿ ಕೊರೊನಾ ಲಸಿಕೆಯ ಮೇಲಿನ ಪೇಟೆಂಟುಗಳನ್ನು ತೆಗೆದು ಹಾಕಬೇಕೆಂದು ಒತ್ತಾಯಿಸಬೇಕು.
ವಿಶ್ವದ ಜನ ಸಮುದಾಯಗಳ ಆರೋಗ್ಯವು ತುರ್ತುಪರಿಸ್ಥಿತಿಯಲ್ಲಿರುವಾಗ, ಕೊರೊನಾದ ನಿರ್ವಹಣೆಯನ್ನು ಆಯಾ ದೇಶಗಳಿಗೆ ಬಿಡುವುದು ಹಾಗೂ ಔಷಧ ಕಂಪೆನಿಗಳ ಲೂಟಿಗೆ ಅವಕಾಶ ಮಾಡಿಕೊಡುವುದು ಅತ್ಯಂತ ಅಪಾಯಕಾರಿಯಾದ ಸಂಗತಿ ಎಂದು ತಿಳಿಸಬೇಕು” ಎಂದು ಹೇಳಿದ್ದಾರೆ.

ಜಾಗತಿಕ ಸಮಸ್ಯೆಗೆ ಜಾಗತಿಕ ಪರಿಹಾರಗಳೆ ಬೇಕಾಗುತ್ತವೆಯೆ ಹೊರತು ಸ್ಥಳೀಯವಾಗಿ ಪರಿಹಾರ ಕಂಡುಕೊಳ್ಳಲಾಗದು. ಆದ್ದರಿಂದ ವಿಶ್ವ ಸಂಸ್ಥೆ ಮತ್ತು ವಿಶ್ವ ಆರೋಗ್ಯ ಸಂಸ್ಥೆಗಳು ಕ್ರಿಯಾಶೀಲಗೊಂಡು ಸದ್ಯದ ತುರ್ತುಪರಿಸ್ಥಿತಿಯನ್ನು ನಿಭಾಯಿಸುವ ಸಾಮೂಹಿಕ ಪ್ರಯತ್ನಗಳಾಗಬೇಕೆಂದು ಒತ್ತಾಯಿಸಬೇಕು. ಯಾಕೆಂದರೆ ವಿಶ್ವದ ಯಾವುದೋ ಭಾಗದಲ್ಲಿ ರೂಪಾಂತರಗೊಂಡ ವೈರಸ್ಸು ಬೆಂಕಿಯಂತೆ ಜಗತ್ತನ್ನು ಆವರಿಸಿ ಬಿಡಬಹುದು. ಹಾಗಾಗಿ ವಿವೇಕವುಳ್ಳ, ವೈಜ್ಞಾನಿಕ ಮನೋಭಾವವುಳ್ಳ ಮನುಷ್ಯರು ಒತ್ತಾಯಿಸಬೇಕಾದ ಕ್ರಮಗಳಿವು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇವುಗಳ ಜೊತೆಗೆ ಜಗತ್ತಿನ ಅನೇಕ ದೇಶಗಳು ತೆಗೆದುಕೊಂಡಿರುವ ಆರ್ಥಿಕ ಪುನಶ್ಚೇತನದ ಪ್ಯಾಕೇಜುಗಳನ್ನು ಘೋಷಿಸಬೇಕೆಂದು ಒತ್ತಾಯಿಸಿರುವ ಸಿದ್ದರಾಮಯ್ಯ ಅವರು, “ಈ ಸಲಹೆಗಳನ್ನು ಪ್ರಧಾನಿ ಮೋದಿಯವರಿಗೆ ತಿಳಿಸಿ ಅತ್ಯಂತ ತುರ್ತಾಗಿ ಮನುಷ್ಯ ಪರವಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸುವ ಜವಾಬ್ಧಾರಿ ರಾಜ್ಯದಿಂದ ಆಯ್ಕೆಯಾದ ಸಂಸದರು ಮತ್ತು ಕೇಂದ್ರದ ಸಚಿವರುಗಳ ಮೇಲೆ ಇದೆ. ರಾಜ್ಯದ ಮುಖ್ಯಮಂತ್ರಿಗಳೂ ಕೂಡ ಈ ಕುರಿತು ಪ್ರಧಾನಿಗಳನ್ನು ಒತ್ತಾಯಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

“ಪ್ರತಿಯೊಬ್ಬರಿಗೂ ಲಸಿಕೆ, ಹೊಟ್ಟೆಗೆ ಅನ್ನ, ಒಂದಿಷ್ಟು ಆರ್ಥಿಕ ನೆರವು, ಉಚಿತ ಚಿಕಿತ್ಸೆ ನೀಡದಿದ್ದರೆ ಭಾರತ ವಿಶ್ವ ಗುರುವಾಗುವುದಿರಲಿ ಪಾಕಿಸ್ತಾನ, ಬಾಂಗ್ಲಾ, ಶ್ರೀಲಂಕ ಮತ್ತಿತರ ನೆರೆಯ ದೇಶಗಳ ಎದುರು ತಲೆ ಎತ್ತಿ ನಿಲ್ಲುವಂತೆ ಮಾಡಲಾಗದು ಎಂಬ ತಿಳಿವಳಿಕೆಯನ್ನು ಪ್ರಧಾನಿ ಮೋದಿಯವರಿಗೆ ತಿಳಿಸಬೇಕು” ಎಂದು ರಾಜ್ಯದಿಂದ ಆಯ್ಕೆಯಾದ ಸಂಸದರುಗಳನ್ನು ಮತ್ತು ರಾಜ್ಯದ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗೆ ಬರೆದಿರುವ ಪತ್ರ

ಇದನ್ನೂ ಓದಿ: ಕನ್ನಡ ಭಾಷಾ ವಿಷಯ 2 ಸೆಮಿಸ್ಟರ್‌ಗೆ ಸೀಮಿತ-ಕನ್ನಡಕ್ಕೆ ಮಾಡಿದ ದ್ರೋಹ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...