Homeಮುಖಪುಟಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆಯೆ?: ಸಿದ್ದರಾಮಯ್ಯ

ಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆಯೆ?: ಸಿದ್ದರಾಮಯ್ಯ

ಹೃದಯವಿರುವ ಮನುಷ್ಯನಿಗೆ ಭೀಕರ ಪಶ್ಚಾತ್ತಾಪ, ಪಾಪಪ್ರಜ್ಞೆಗಳು ಕಾಡಬೇಕಾಗಿತ್ತು ಎಂದು ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಎರಡನೇ ಅಲೆ ಮುಗಿಯುವ ಮೊದಲೇ ಡೆಲ್ಟಾ ಪ್ಲಸ್ ಎಂಬ ಕೊರೋನಾದ ರೂಪಾಂತರಿ ವೈರಸ್ಸು ದೇಶದಲ್ಲಿ ವೇಗವಾಗಿ ಹರಡುವ ಭೀತಿ ಸೃಷ್ಟಿಯಾಗಿದ್ದು, ಇದನ್ನು ನಿಭಾಯಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಗುರವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

“ದೇಶದ 80% ರಷ್ಟು ಜನರಿಗೆ ಲಸಿಕೆ ನೀಡುವವರೆಗೆ ಅಂತರರಾಷ್ಟ್ರೀಯ ವಿಮಾನಗಳನ್ನು ನಿರ್ಬಂಧಿಸುವುದು ಸೂಕ್ತ. ದೇಶದ ಯಾವ ಯಾವ ಸ್ಥಳಗಳಲ್ಲಿ ಕೊರೊನಾ ವೈರಸ್ಸಿನ ಡೆಲ್ಟಾ ಪ್ಲಸ್ ಪ್ರಬೇಧ ಪತ್ತೆಯಾಗಿದೆಯೊ ಆ ಸ್ಥಳಗಳ ಕುರಿತು ತೀವ್ರ ನಿಗಾ ವಹಿಸಿ ಇತರರಿಗೆ ಹರಡದಂತೆ ನೋಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ಹೊಸ ಹೊಸ ತಳಿಗಳಾಗಿ ಅತ್ಯಂತ ವೇಗವಾಗಿ ರೂಪಾಂತರ ಹೊಂದುತ್ತಿದೆ. ಪರಿಸ್ಥಿತಿ ಹೀಗಿರುವಾಗ ಸರ್ಕಾರಗಳು ವ್ಯಾಪಕವಾಗಿ ಮತ್ತು ಉಚಿತವಾಗಿ ಸಾರ್ವಜನಿಕ ಆಂದೋಲನಗಳ ಮೂಲಕ ಲಸಿಕೆಗಳನ್ನು ನೀಡಬೇಕು. ಈಗ ರಾಜ್ಯಗಳ ಬಳಿ 2.5 ಕೋಟಿ ಡೋಸ್ ಲಸಿಕೆಗಳಿವೆ ಎಂದು ಹೇಳುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳ ಬಳಿ ಎಷ್ಟಿವೆ ಎಂದು ಹೇಳುತ್ತಿಲ್ಲ. ಲಸಿಕೆ ಉತ್ಪಾದಕ ಕಂಪೆನಿಗಳು ಪ್ರತಿ ದಿನ ಸರ್ಕಾರಕ್ಕೆ ಮತ್ತು ಖಾಸಗಿಯವರಿಗೆ ನೀಡಿದ ಲಸಿಕೆಗಳ ಕುರಿತು ಪ್ರಕಟಣೆಗಳನ್ನು ಹೊರಡಿಸಬೇಕು” ಎಂದು ಆಗ್ರಹಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯಲ್ಲಿ ಪರ್ಯಾಯ ನಾಯಕರಿಲ್ಲ, ನಾಯಕತ್ವ ದಿವಾಳಿಯಾಗಿದೆ: ಸಿದ್ದರಾಮಯ್ಯ

“ಮೂರನೆ ಅಲೆಯ ಕುರಿತು ತಜ್ಞರು ಮಾಡಿರುವ ಶಿಫಾರಸ್ಸುಗಳಂತೆ, ಖಾಸಗಿ ಆಸ್ಪತ್ರೆಗಳು ಕಂಪೆನಿಗಳಿಂದ ಲಸಿಕೆಗಳನ್ನು ಸ್ವೀಕರಿಸಿ ಗರಿಷ್ಠ 10 ದಿನಗಳ ಕಾಲ ಮಾತ್ರ ದಾಸ್ತಾನಿರಿಸಿಕೊಳ್ಳಬೇಕೆಂಬ ಕುರಿತು ಆದೇಶ ಹೊರಡಿಸುವಂತೆ ತಿಳಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತುರ್ತಾಗಿ ಮಾಡಬೇಕಾದ ಕೆಲಸ ಇದು” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

‘ದೇಶದ ಸಮಸ್ತ ಜನರಿಗೆ ಮುಂದಿನ ಮೂರು – ನಾಲ್ಕು ತಿಂಗಳಲ್ಲಿ ಲಸಿಕೆ ಹಾಕುವಷ್ಟು ಪ್ರಮಾಣದಲ್ಲಿ ಉತ್ಪಾದಿಸಲು ಲಸಿಕೆಗಳ ಮೇಲಿನ ಪೇಟೆಂಟುಗಳನ್ನು ಮೊದಲು ಕಿತ್ತು ಹಾಕಬೇಕು. ಸರ್ಕಾರ ಕಾರ್ಪೊರೇಟ್ ಕಂಪೆನಿಗಳ ಓಲೈಕೆ ಮನಸ್ಥಿತಿಯಿಂದ ಹೊರಬಂದು, ಅವುಗಳ ಮೇಲೆ ಪ್ರಬಲ ಹಿಡಿತ ಸಾಧಿಸಬೇಕು. ಕೊರೊನಾ ಲಸಿಕೆಗಳನ್ನು ‘ಜೆನೆರಿಕ್ ಡ್ರಗ್’ಗಳ ವ್ಯಾಪ್ತಿಗೆ ತಂದು ಸರ್ಕಾರಗಳೆ ಉತ್ಪಾದನೆ ಮತ್ತು ವಿತರಣೆಗಳನ್ನು ನಿಯಂತ್ರಿಸಬೇಕು. ಹೀಗಾದರೆ ಗರಿಷ್ಠ 50 ರೂಪಾಯಿಗಳಿಗೆ ಲಸಿಕೆ ದೊರೆಯುತ್ತದೆ” ಎಂದು ಹೇಳಿದ್ದಾರೆ.

“ಮೋದಿಯವರು ಜೂನ್ 30 ರಂದು ‘ಕೋವಿನ್ ಗ್ಲೋಬಲ್ ಕಾನ್‍ಕ್ಲೇವ್’ ನಡೆಸಲು ಉದ್ದೇಶಿಸಿದ್ದಾರೆಂಬ ಮಾಹಿತಿ ಇದೆ. ಈ ಸಮಾವೇಶದಲ್ಲಿ ಭಾರತವು ಕೊರೋನವನ್ನು ಎದುರಿಸಿದ ರೀತಿಗಳನ್ನು ತಿಳಿಸುವುದಾಗಿ ಹೇಳಿದ್ದಾರೆ. ಇದಂತೂ ಅತ್ಯಂತ ನಾಚಿಕೆಗೇಡಿನ ಮತ್ತು ಅಸೂಕ್ಷ್ಮವಾದ ವಿಷಯ. ಕಳೆದ ಮಾರ್ಚ್ ತಿಂಗಳಿಂದ ದೇಶದಲ್ಲಿ ಏನೇನಾಯಿತು ಎಂದು ಜನರು ಮರೆತು ಬಿಟ್ಟಿದ್ದಾರೆಯೆ? ಹೃದಯವಿರುವ ಮನುಷ್ಯನಿಗೆ ಭೀಕರ ಪಶ್ಚಾತ್ತಾಪ, ಪಾಪಪ್ರಜ್ಞೆಗಳು ಕಾಡಬೇಕಾಗಿತ್ತು. ಅದರ ಬದಲಾಗಿ ಕೊರೋನಾದ ವಿರುದ್ಧ ವಿಜಯ ಸಾಧಿಸಿ ಬಿಟ್ಟಿದ್ದೇವೆ ಎಂಬಂತೆ ವಿಶ್ವದ ಜನರಿಗೆ ತಿಳಿಸಲು ಹೊರಟಿರುವುದನ್ನು ಏನೆನ್ನಬೇಕು? ಇದನ್ನು ನೋಡಿದರೆ ನಮ್ಮ ಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆ ಎನ್ನಿಸುತ್ತದೆಯೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೋದಿ, ಅದಾನಿಯೆದರು ತೆಲೆಯೆತ್ತಲು ಬಿಎಸ್‌ವೈಗೆ ಧೈರ್ಯವಿಲ್ಲ: ವಿದ್ಯುತ್ ದರ ಏರಿಕೆಗೆ ಸಿದ್ದರಾಮಯ್ಯ ಖಂಡನೆ

“ಮೋದಿಯವರು ತಮ್ಮ ಸಾಧನೆಗಳ ಜಾಗತಿಕ ಸಮಾವೇಶ ನಡೆಸುವ ಬದಲು ವಿಶ್ವದ ನಾಯಕರುಗಳನ್ನು ಒತ್ತಾಯಿಸಿ ಕೊರೊನಾ ಲಸಿಕೆಯ ಮೇಲಿನ ಪೇಟೆಂಟುಗಳನ್ನು ತೆಗೆದು ಹಾಕಬೇಕೆಂದು ಒತ್ತಾಯಿಸಬೇಕು.
ವಿಶ್ವದ ಜನ ಸಮುದಾಯಗಳ ಆರೋಗ್ಯವು ತುರ್ತುಪರಿಸ್ಥಿತಿಯಲ್ಲಿರುವಾಗ, ಕೊರೊನಾದ ನಿರ್ವಹಣೆಯನ್ನು ಆಯಾ ದೇಶಗಳಿಗೆ ಬಿಡುವುದು ಹಾಗೂ ಔಷಧ ಕಂಪೆನಿಗಳ ಲೂಟಿಗೆ ಅವಕಾಶ ಮಾಡಿಕೊಡುವುದು ಅತ್ಯಂತ ಅಪಾಯಕಾರಿಯಾದ ಸಂಗತಿ ಎಂದು ತಿಳಿಸಬೇಕು” ಎಂದು ಹೇಳಿದ್ದಾರೆ.

ಜಾಗತಿಕ ಸಮಸ್ಯೆಗೆ ಜಾಗತಿಕ ಪರಿಹಾರಗಳೆ ಬೇಕಾಗುತ್ತವೆಯೆ ಹೊರತು ಸ್ಥಳೀಯವಾಗಿ ಪರಿಹಾರ ಕಂಡುಕೊಳ್ಳಲಾಗದು. ಆದ್ದರಿಂದ ವಿಶ್ವ ಸಂಸ್ಥೆ ಮತ್ತು ವಿಶ್ವ ಆರೋಗ್ಯ ಸಂಸ್ಥೆಗಳು ಕ್ರಿಯಾಶೀಲಗೊಂಡು ಸದ್ಯದ ತುರ್ತುಪರಿಸ್ಥಿತಿಯನ್ನು ನಿಭಾಯಿಸುವ ಸಾಮೂಹಿಕ ಪ್ರಯತ್ನಗಳಾಗಬೇಕೆಂದು ಒತ್ತಾಯಿಸಬೇಕು. ಯಾಕೆಂದರೆ ವಿಶ್ವದ ಯಾವುದೋ ಭಾಗದಲ್ಲಿ ರೂಪಾಂತರಗೊಂಡ ವೈರಸ್ಸು ಬೆಂಕಿಯಂತೆ ಜಗತ್ತನ್ನು ಆವರಿಸಿ ಬಿಡಬಹುದು. ಹಾಗಾಗಿ ವಿವೇಕವುಳ್ಳ, ವೈಜ್ಞಾನಿಕ ಮನೋಭಾವವುಳ್ಳ ಮನುಷ್ಯರು ಒತ್ತಾಯಿಸಬೇಕಾದ ಕ್ರಮಗಳಿವು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇವುಗಳ ಜೊತೆಗೆ ಜಗತ್ತಿನ ಅನೇಕ ದೇಶಗಳು ತೆಗೆದುಕೊಂಡಿರುವ ಆರ್ಥಿಕ ಪುನಶ್ಚೇತನದ ಪ್ಯಾಕೇಜುಗಳನ್ನು ಘೋಷಿಸಬೇಕೆಂದು ಒತ್ತಾಯಿಸಿರುವ ಸಿದ್ದರಾಮಯ್ಯ ಅವರು, “ಈ ಸಲಹೆಗಳನ್ನು ಪ್ರಧಾನಿ ಮೋದಿಯವರಿಗೆ ತಿಳಿಸಿ ಅತ್ಯಂತ ತುರ್ತಾಗಿ ಮನುಷ್ಯ ಪರವಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸುವ ಜವಾಬ್ಧಾರಿ ರಾಜ್ಯದಿಂದ ಆಯ್ಕೆಯಾದ ಸಂಸದರು ಮತ್ತು ಕೇಂದ್ರದ ಸಚಿವರುಗಳ ಮೇಲೆ ಇದೆ. ರಾಜ್ಯದ ಮುಖ್ಯಮಂತ್ರಿಗಳೂ ಕೂಡ ಈ ಕುರಿತು ಪ್ರಧಾನಿಗಳನ್ನು ಒತ್ತಾಯಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

“ಪ್ರತಿಯೊಬ್ಬರಿಗೂ ಲಸಿಕೆ, ಹೊಟ್ಟೆಗೆ ಅನ್ನ, ಒಂದಿಷ್ಟು ಆರ್ಥಿಕ ನೆರವು, ಉಚಿತ ಚಿಕಿತ್ಸೆ ನೀಡದಿದ್ದರೆ ಭಾರತ ವಿಶ್ವ ಗುರುವಾಗುವುದಿರಲಿ ಪಾಕಿಸ್ತಾನ, ಬಾಂಗ್ಲಾ, ಶ್ರೀಲಂಕ ಮತ್ತಿತರ ನೆರೆಯ ದೇಶಗಳ ಎದುರು ತಲೆ ಎತ್ತಿ ನಿಲ್ಲುವಂತೆ ಮಾಡಲಾಗದು ಎಂಬ ತಿಳಿವಳಿಕೆಯನ್ನು ಪ್ರಧಾನಿ ಮೋದಿಯವರಿಗೆ ತಿಳಿಸಬೇಕು” ಎಂದು ರಾಜ್ಯದಿಂದ ಆಯ್ಕೆಯಾದ ಸಂಸದರುಗಳನ್ನು ಮತ್ತು ರಾಜ್ಯದ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗೆ ಬರೆದಿರುವ ಪತ್ರ

ಇದನ್ನೂ ಓದಿ: ಕನ್ನಡ ಭಾಷಾ ವಿಷಯ 2 ಸೆಮಿಸ್ಟರ್‌ಗೆ ಸೀಮಿತ-ಕನ್ನಡಕ್ಕೆ ಮಾಡಿದ ದ್ರೋಹ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...