Homeಮುಖಪುಟಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆಯೆ?: ಸಿದ್ದರಾಮಯ್ಯ

ಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆಯೆ?: ಸಿದ್ದರಾಮಯ್ಯ

ಹೃದಯವಿರುವ ಮನುಷ್ಯನಿಗೆ ಭೀಕರ ಪಶ್ಚಾತ್ತಾಪ, ಪಾಪಪ್ರಜ್ಞೆಗಳು ಕಾಡಬೇಕಾಗಿತ್ತು ಎಂದು ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಎರಡನೇ ಅಲೆ ಮುಗಿಯುವ ಮೊದಲೇ ಡೆಲ್ಟಾ ಪ್ಲಸ್ ಎಂಬ ಕೊರೋನಾದ ರೂಪಾಂತರಿ ವೈರಸ್ಸು ದೇಶದಲ್ಲಿ ವೇಗವಾಗಿ ಹರಡುವ ಭೀತಿ ಸೃಷ್ಟಿಯಾಗಿದ್ದು, ಇದನ್ನು ನಿಭಾಯಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಗುರವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

“ದೇಶದ 80% ರಷ್ಟು ಜನರಿಗೆ ಲಸಿಕೆ ನೀಡುವವರೆಗೆ ಅಂತರರಾಷ್ಟ್ರೀಯ ವಿಮಾನಗಳನ್ನು ನಿರ್ಬಂಧಿಸುವುದು ಸೂಕ್ತ. ದೇಶದ ಯಾವ ಯಾವ ಸ್ಥಳಗಳಲ್ಲಿ ಕೊರೊನಾ ವೈರಸ್ಸಿನ ಡೆಲ್ಟಾ ಪ್ಲಸ್ ಪ್ರಬೇಧ ಪತ್ತೆಯಾಗಿದೆಯೊ ಆ ಸ್ಥಳಗಳ ಕುರಿತು ತೀವ್ರ ನಿಗಾ ವಹಿಸಿ ಇತರರಿಗೆ ಹರಡದಂತೆ ನೋಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ಹೊಸ ಹೊಸ ತಳಿಗಳಾಗಿ ಅತ್ಯಂತ ವೇಗವಾಗಿ ರೂಪಾಂತರ ಹೊಂದುತ್ತಿದೆ. ಪರಿಸ್ಥಿತಿ ಹೀಗಿರುವಾಗ ಸರ್ಕಾರಗಳು ವ್ಯಾಪಕವಾಗಿ ಮತ್ತು ಉಚಿತವಾಗಿ ಸಾರ್ವಜನಿಕ ಆಂದೋಲನಗಳ ಮೂಲಕ ಲಸಿಕೆಗಳನ್ನು ನೀಡಬೇಕು. ಈಗ ರಾಜ್ಯಗಳ ಬಳಿ 2.5 ಕೋಟಿ ಡೋಸ್ ಲಸಿಕೆಗಳಿವೆ ಎಂದು ಹೇಳುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳ ಬಳಿ ಎಷ್ಟಿವೆ ಎಂದು ಹೇಳುತ್ತಿಲ್ಲ. ಲಸಿಕೆ ಉತ್ಪಾದಕ ಕಂಪೆನಿಗಳು ಪ್ರತಿ ದಿನ ಸರ್ಕಾರಕ್ಕೆ ಮತ್ತು ಖಾಸಗಿಯವರಿಗೆ ನೀಡಿದ ಲಸಿಕೆಗಳ ಕುರಿತು ಪ್ರಕಟಣೆಗಳನ್ನು ಹೊರಡಿಸಬೇಕು” ಎಂದು ಆಗ್ರಹಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯಲ್ಲಿ ಪರ್ಯಾಯ ನಾಯಕರಿಲ್ಲ, ನಾಯಕತ್ವ ದಿವಾಳಿಯಾಗಿದೆ: ಸಿದ್ದರಾಮಯ್ಯ

“ಮೂರನೆ ಅಲೆಯ ಕುರಿತು ತಜ್ಞರು ಮಾಡಿರುವ ಶಿಫಾರಸ್ಸುಗಳಂತೆ, ಖಾಸಗಿ ಆಸ್ಪತ್ರೆಗಳು ಕಂಪೆನಿಗಳಿಂದ ಲಸಿಕೆಗಳನ್ನು ಸ್ವೀಕರಿಸಿ ಗರಿಷ್ಠ 10 ದಿನಗಳ ಕಾಲ ಮಾತ್ರ ದಾಸ್ತಾನಿರಿಸಿಕೊಳ್ಳಬೇಕೆಂಬ ಕುರಿತು ಆದೇಶ ಹೊರಡಿಸುವಂತೆ ತಿಳಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತುರ್ತಾಗಿ ಮಾಡಬೇಕಾದ ಕೆಲಸ ಇದು” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

‘ದೇಶದ ಸಮಸ್ತ ಜನರಿಗೆ ಮುಂದಿನ ಮೂರು – ನಾಲ್ಕು ತಿಂಗಳಲ್ಲಿ ಲಸಿಕೆ ಹಾಕುವಷ್ಟು ಪ್ರಮಾಣದಲ್ಲಿ ಉತ್ಪಾದಿಸಲು ಲಸಿಕೆಗಳ ಮೇಲಿನ ಪೇಟೆಂಟುಗಳನ್ನು ಮೊದಲು ಕಿತ್ತು ಹಾಕಬೇಕು. ಸರ್ಕಾರ ಕಾರ್ಪೊರೇಟ್ ಕಂಪೆನಿಗಳ ಓಲೈಕೆ ಮನಸ್ಥಿತಿಯಿಂದ ಹೊರಬಂದು, ಅವುಗಳ ಮೇಲೆ ಪ್ರಬಲ ಹಿಡಿತ ಸಾಧಿಸಬೇಕು. ಕೊರೊನಾ ಲಸಿಕೆಗಳನ್ನು ‘ಜೆನೆರಿಕ್ ಡ್ರಗ್’ಗಳ ವ್ಯಾಪ್ತಿಗೆ ತಂದು ಸರ್ಕಾರಗಳೆ ಉತ್ಪಾದನೆ ಮತ್ತು ವಿತರಣೆಗಳನ್ನು ನಿಯಂತ್ರಿಸಬೇಕು. ಹೀಗಾದರೆ ಗರಿಷ್ಠ 50 ರೂಪಾಯಿಗಳಿಗೆ ಲಸಿಕೆ ದೊರೆಯುತ್ತದೆ” ಎಂದು ಹೇಳಿದ್ದಾರೆ.

“ಮೋದಿಯವರು ಜೂನ್ 30 ರಂದು ‘ಕೋವಿನ್ ಗ್ಲೋಬಲ್ ಕಾನ್‍ಕ್ಲೇವ್’ ನಡೆಸಲು ಉದ್ದೇಶಿಸಿದ್ದಾರೆಂಬ ಮಾಹಿತಿ ಇದೆ. ಈ ಸಮಾವೇಶದಲ್ಲಿ ಭಾರತವು ಕೊರೋನವನ್ನು ಎದುರಿಸಿದ ರೀತಿಗಳನ್ನು ತಿಳಿಸುವುದಾಗಿ ಹೇಳಿದ್ದಾರೆ. ಇದಂತೂ ಅತ್ಯಂತ ನಾಚಿಕೆಗೇಡಿನ ಮತ್ತು ಅಸೂಕ್ಷ್ಮವಾದ ವಿಷಯ. ಕಳೆದ ಮಾರ್ಚ್ ತಿಂಗಳಿಂದ ದೇಶದಲ್ಲಿ ಏನೇನಾಯಿತು ಎಂದು ಜನರು ಮರೆತು ಬಿಟ್ಟಿದ್ದಾರೆಯೆ? ಹೃದಯವಿರುವ ಮನುಷ್ಯನಿಗೆ ಭೀಕರ ಪಶ್ಚಾತ್ತಾಪ, ಪಾಪಪ್ರಜ್ಞೆಗಳು ಕಾಡಬೇಕಾಗಿತ್ತು. ಅದರ ಬದಲಾಗಿ ಕೊರೋನಾದ ವಿರುದ್ಧ ವಿಜಯ ಸಾಧಿಸಿ ಬಿಟ್ಟಿದ್ದೇವೆ ಎಂಬಂತೆ ವಿಶ್ವದ ಜನರಿಗೆ ತಿಳಿಸಲು ಹೊರಟಿರುವುದನ್ನು ಏನೆನ್ನಬೇಕು? ಇದನ್ನು ನೋಡಿದರೆ ನಮ್ಮ ಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆ ಎನ್ನಿಸುತ್ತದೆಯೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೋದಿ, ಅದಾನಿಯೆದರು ತೆಲೆಯೆತ್ತಲು ಬಿಎಸ್‌ವೈಗೆ ಧೈರ್ಯವಿಲ್ಲ: ವಿದ್ಯುತ್ ದರ ಏರಿಕೆಗೆ ಸಿದ್ದರಾಮಯ್ಯ ಖಂಡನೆ

“ಮೋದಿಯವರು ತಮ್ಮ ಸಾಧನೆಗಳ ಜಾಗತಿಕ ಸಮಾವೇಶ ನಡೆಸುವ ಬದಲು ವಿಶ್ವದ ನಾಯಕರುಗಳನ್ನು ಒತ್ತಾಯಿಸಿ ಕೊರೊನಾ ಲಸಿಕೆಯ ಮೇಲಿನ ಪೇಟೆಂಟುಗಳನ್ನು ತೆಗೆದು ಹಾಕಬೇಕೆಂದು ಒತ್ತಾಯಿಸಬೇಕು.
ವಿಶ್ವದ ಜನ ಸಮುದಾಯಗಳ ಆರೋಗ್ಯವು ತುರ್ತುಪರಿಸ್ಥಿತಿಯಲ್ಲಿರುವಾಗ, ಕೊರೊನಾದ ನಿರ್ವಹಣೆಯನ್ನು ಆಯಾ ದೇಶಗಳಿಗೆ ಬಿಡುವುದು ಹಾಗೂ ಔಷಧ ಕಂಪೆನಿಗಳ ಲೂಟಿಗೆ ಅವಕಾಶ ಮಾಡಿಕೊಡುವುದು ಅತ್ಯಂತ ಅಪಾಯಕಾರಿಯಾದ ಸಂಗತಿ ಎಂದು ತಿಳಿಸಬೇಕು” ಎಂದು ಹೇಳಿದ್ದಾರೆ.

ಜಾಗತಿಕ ಸಮಸ್ಯೆಗೆ ಜಾಗತಿಕ ಪರಿಹಾರಗಳೆ ಬೇಕಾಗುತ್ತವೆಯೆ ಹೊರತು ಸ್ಥಳೀಯವಾಗಿ ಪರಿಹಾರ ಕಂಡುಕೊಳ್ಳಲಾಗದು. ಆದ್ದರಿಂದ ವಿಶ್ವ ಸಂಸ್ಥೆ ಮತ್ತು ವಿಶ್ವ ಆರೋಗ್ಯ ಸಂಸ್ಥೆಗಳು ಕ್ರಿಯಾಶೀಲಗೊಂಡು ಸದ್ಯದ ತುರ್ತುಪರಿಸ್ಥಿತಿಯನ್ನು ನಿಭಾಯಿಸುವ ಸಾಮೂಹಿಕ ಪ್ರಯತ್ನಗಳಾಗಬೇಕೆಂದು ಒತ್ತಾಯಿಸಬೇಕು. ಯಾಕೆಂದರೆ ವಿಶ್ವದ ಯಾವುದೋ ಭಾಗದಲ್ಲಿ ರೂಪಾಂತರಗೊಂಡ ವೈರಸ್ಸು ಬೆಂಕಿಯಂತೆ ಜಗತ್ತನ್ನು ಆವರಿಸಿ ಬಿಡಬಹುದು. ಹಾಗಾಗಿ ವಿವೇಕವುಳ್ಳ, ವೈಜ್ಞಾನಿಕ ಮನೋಭಾವವುಳ್ಳ ಮನುಷ್ಯರು ಒತ್ತಾಯಿಸಬೇಕಾದ ಕ್ರಮಗಳಿವು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇವುಗಳ ಜೊತೆಗೆ ಜಗತ್ತಿನ ಅನೇಕ ದೇಶಗಳು ತೆಗೆದುಕೊಂಡಿರುವ ಆರ್ಥಿಕ ಪುನಶ್ಚೇತನದ ಪ್ಯಾಕೇಜುಗಳನ್ನು ಘೋಷಿಸಬೇಕೆಂದು ಒತ್ತಾಯಿಸಿರುವ ಸಿದ್ದರಾಮಯ್ಯ ಅವರು, “ಈ ಸಲಹೆಗಳನ್ನು ಪ್ರಧಾನಿ ಮೋದಿಯವರಿಗೆ ತಿಳಿಸಿ ಅತ್ಯಂತ ತುರ್ತಾಗಿ ಮನುಷ್ಯ ಪರವಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸುವ ಜವಾಬ್ಧಾರಿ ರಾಜ್ಯದಿಂದ ಆಯ್ಕೆಯಾದ ಸಂಸದರು ಮತ್ತು ಕೇಂದ್ರದ ಸಚಿವರುಗಳ ಮೇಲೆ ಇದೆ. ರಾಜ್ಯದ ಮುಖ್ಯಮಂತ್ರಿಗಳೂ ಕೂಡ ಈ ಕುರಿತು ಪ್ರಧಾನಿಗಳನ್ನು ಒತ್ತಾಯಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

“ಪ್ರತಿಯೊಬ್ಬರಿಗೂ ಲಸಿಕೆ, ಹೊಟ್ಟೆಗೆ ಅನ್ನ, ಒಂದಿಷ್ಟು ಆರ್ಥಿಕ ನೆರವು, ಉಚಿತ ಚಿಕಿತ್ಸೆ ನೀಡದಿದ್ದರೆ ಭಾರತ ವಿಶ್ವ ಗುರುವಾಗುವುದಿರಲಿ ಪಾಕಿಸ್ತಾನ, ಬಾಂಗ್ಲಾ, ಶ್ರೀಲಂಕ ಮತ್ತಿತರ ನೆರೆಯ ದೇಶಗಳ ಎದುರು ತಲೆ ಎತ್ತಿ ನಿಲ್ಲುವಂತೆ ಮಾಡಲಾಗದು ಎಂಬ ತಿಳಿವಳಿಕೆಯನ್ನು ಪ್ರಧಾನಿ ಮೋದಿಯವರಿಗೆ ತಿಳಿಸಬೇಕು” ಎಂದು ರಾಜ್ಯದಿಂದ ಆಯ್ಕೆಯಾದ ಸಂಸದರುಗಳನ್ನು ಮತ್ತು ರಾಜ್ಯದ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗೆ ಬರೆದಿರುವ ಪತ್ರ

ಇದನ್ನೂ ಓದಿ: ಕನ್ನಡ ಭಾಷಾ ವಿಷಯ 2 ಸೆಮಿಸ್ಟರ್‌ಗೆ ಸೀಮಿತ-ಕನ್ನಡಕ್ಕೆ ಮಾಡಿದ ದ್ರೋಹ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...