Homeನಿಜವೋ ಸುಳ್ಳೋಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು?

ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು?

- Advertisement -
- Advertisement -

ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾ ರೋಗವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದನ್ನು ಸರಳವಾಗಿ ತೋರಿಸಲು ಅಮೆರಿಕದ ಸಿಇಒ ಭಾರತದ ಈ ನಕ್ಷೆಯನ್ನು ರಚಿಸಿದ್ದಾರೆ. ಆ ಮೂಲಕ ಭಾರತಕ್ಕೆ ಧನ್ಯವಾದಗಳ್ನನು ಅರ್ಪಿಸಿದ್ದಾರೆ ಎಂಬ ಶೀರ್ಷಿಕೆಯೊಂದಿಗೆ ಭಾರತದ ನಕ್ಷೆಯೊಂದು ಇತ್ತೀಚಿನದು ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ಈ ನಕ್ಷೆಯಲ್ಲಿ ಪ್ರತಿ ರಾಜ್ಯವನ್ನು ಜನಸಂಖ್ಯೆಯ ಆಧಾರದ ಮೇಲೆ ಬೇರೆ ದೇಶಕ್ಕೆ ಹೋಲಿಸಲಾಗಿದೆ. ಭಾರತದಲ್ಲಿ ಹೆಚ್ಚಿನ ಜನಸಂಖ್ಯೆಯ ಕಾರಣದಿಂದಾಗಿ, ಅನೇಕ ದೇಶಗಳ COVID-19 ಬಿಕ್ಕಟ್ಟನ್ನು ಎದುರಿಸುವಲ್ಲಿ ಎಷ್ಟು ಪ್ರಯತ್ನ ಹಾಕುತ್ತಿವೆಯೋ ಅಷ್ಟನ್ನೂ ಭಾರತವೊಂದೇ ಹಾಕುತ್ತಿದೆ ಎಂದು ಹೇಳಲಾಗಿದೆ.

“ಇದು ಸಮಸ್ಯೆಯನ್ನು ಸಮರ್ಥವಾಗಿ ನಿರ್ವಹಿಸುವ ಬಗೆ ಎಂದು ಅಮೆರಿಕಾದ ಸಿಇಒ ಮೋದಿಜಿಯನ್ನು ಈ ವಿಶಿಷ್ಟ ರೀತಿಯಲ್ಲಿ ಶ್ಲಾಘಿಸಿದರು. ಮೋದಿಜಿಯ ಪ್ರಯತ್ನಗಳನ್ನು ಜಗತ್ತು ಗುರುತಿಸುತ್ತಿದೆ ಆದರೆ ಕೆಲವು ಆಂತರಿಕ ಗುಲಾಮರು ಮತ್ತು ದೇಶದ್ರೋಹಿಗಳು ಇನ್ನೂ ಟೀಕಿಸುತ್ತಿದ್ದಾರೆ” ಎಂದೆಲ್ಲಾ ಟೈಟಲ್‌ನಲ್ಲಿ ಈ ನಕ್ಷೆಯನ್ನು ಕಳೆದ ಮೂರ್‍ನಾಲ್ಕು ದಿನಗಳಿಂದ ಹರಡಲಾಗುತ್ತಿದೆ.

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಕೂಡ ಇದೇ ರೀತಿಯ ಶೀರ್ಷಿಕೆಯೊಂದಿಗೆ ಚಿತ್ರವನ್ನು ಹಂಚಿಕೊಂಡಿದ್ದಾರೆ. 13 ಸಾವಿರಕ್ಕೂ ಹೆಚ್ಚು ಜನ ಈ ಪೋಸ್ಟ್‌ ಅನ್ನು ಇಷ್ಟಪಟ್ಟಿದ್ದು 3 ಸಾವಿರ ಜನ ಹಂಚಿಕೊಂಡಿದ್ದಾರೆ.

 

ಫ್ಯಾಕ್ಟ್ ಚೆಕ್

ಈ ಚಿತ್ರ ಇತ್ತೀಚಿನದೆ ಮತ್ತು ಕೊರೊನಾ ವಿಷಯಕ್ಕೆ ಚಿತ್ರಿಸಲಾಗಿದೆಯೇ ಎಂದು ಕಂಡುಹಿಡಿಯಲು ಹಲವಾರು ಕೀವರ್ಡ್ ಮೂಲಕ ಹುಡುಕಾಟ ನಡೆಸಿದರೂ ಸಹ ಅಮೇರಿಕನ್ ಸಿಇಒ ಅಂತಹ ನಕ್ಷೆಯನ್ನು ಚಿತ್ರಿಸುವ ಬಗ್ಗೆ ಯಾವುದೇ ವಿಶ್ವಾಸಾರ್ಹ ಸುದ್ದಿ ವರದಿ ಲಭ್ಯವಾಗಿಲ್ಲ.

ನಂತರ ಗೂಗಲ್‌ನಲ್ಲಿ ನಕ್ಷೆಯ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಈ ನಕ್ಷೆಯ ಚಿತ್ರವು 2016 ರ ಹಿಂದಿನಿಂದಲೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿರುವುದನ್ನು ಕಾಣಬಹುದಾಗಿದೆ.

ಟ್ವಿಟರ್ ಬಳಕೆದಾರ ಅಮಿತ್ ರಂಜನ್ ಎಂಬುವವರು 2016ರ ಏಪ್ರಿಲ್‌ 13ರಂದೇ ಇದೇ ಚಿತ್ರವನ್ನು ಟ್ವೀಟ್‌ ಮಾಡಿದ್ದಾರೆ. “ಚಿಂತನೆಯನ್ನು ಪ್ರಚೋದಿಸುವ ನಕ್ಷೆ! ” ಭಾರತೀಯ ರಾಜ್ಯಗಳು ಹೊಂದಿರುವ ಜನಸಂಖ್ಯೆಯಷ್ಟೇ ಸಮಾನ ಜನಸಂಖ್ಯೆಯ ದೇಶಗಳನ್ನು ಮ್ಯಾಪ್ ಮಾಡಲಾಗಿದೆ” ಎಂದು ಬರೆದಿದ್ದಾರೆ. ಆದರೆ  ಆ ಪೋಸ್ಟ್‌ನಲ್ಲಿ “ಯಾವುದೇ ಎನ್ಆರ್‌ಐ ಅಥವಾ ಅಮೇರಿಕನ್ ಸಿಇಒ ಈ ನಕ್ಷೆಯನ್ನು ಚಿತ್ರಿ‍ಸಿರುವ ಬಗ್ಗೆ” ಯಾವುದೇ ಉಲ್ಲೇಖವಿಲ್ಲ.

ಅದೇ 2016ರಲ್ಲಿ ಇದೇ ನಕ್ಷೆಯನ್ನು ಈ ಹಿಂದೆ ನಾರ್ವೆಯಿಂದ ಭಾರತಕ್ಕೆ ರಾಜತಾಂತ್ರಿಕರಾಗಿದ್ದ ಎರಿಕ್ ಸೊಲ್ಹೈಮ್ ಕೂಡ ಹಂಚಿಕೊಂಡಿದ್ದಾರೆ. ಯಾರು ನಕ್ಷೆಯನ್ನು ರಚಿಸಿದರು ಎಂಬುದರ ಬಗ್ಗೆ ಸೋಲ್ಹೈಮ್ ಕೂಡ ಯಾವುದೇ ಉಲ್ಲೇಖವನ್ನು ನೀಡಿಲ್ಲ.

ವರ್ಷ ಕಳೆದಂತೆ ನಕ್ಷೆಯು ಹೆಚ್ಚು ವೈರಲ್ ಆಗುತ್ತಲೇ ಅದಕ್ಕೆ “ಅಮೇರಿಕನ್ ಸಿಇಒ” ಮತ್ತು “ಎನ್ಆರ್‌ಐ” ರಚಿಸಿದರು ಎಂಬ ಶೀರ್ಷಿಕೆ ಸೇರಿಕೊಂಡಿದೆ. 2018ರ ಮೇಲಿನ ಟ್ವೀಟ್‌ ಗಮನಿಸಿ.

ಏಪ್ರಿಲ್, 2020 ರಲ್ಲಿ, ನಕ್ಷೆಯು ಮತ್ತೊಮ್ಮೆ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿತು – ಮತ್ತು ಈ ಸಮಯದಲ್ಲಿ ನಡೆಯುತ್ತಿರುವ COVID-19 ಸಾಂಕ್ರಾಮಿಕದ ರೋಗದ ವಿರುದ್ಧದ ಹೋರಾಟ ಹೀಗೆ ನಡೆಯುತ್ತಿದೆ ಎಂದು ಸೇರಿಸುವ ಮೂಲಕ ಹೊಸದಾಗಿ ರಚನೆಯಾಯಿತು ಎಂಬ ಸುಳ್ಳು ಹರಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ನೆಲತಿಟ್ಟದಲ್ಲಿರುವ ನಾಡುಗಳಲ್ಲಿ ಕೊರೊನಾ ಸೋಂಕಿನ ಒರೆತ(test)ದ ಕುರಿತು ಬರೆದರೆ ಬಾರತದ ಬಣ್ಣ ಬಯಲಾಗಲಿದೆ. ???

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...