Homeನಿಜವೋ ಸುಳ್ಳೋಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು?

ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು?

- Advertisement -
- Advertisement -

ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾ ರೋಗವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದನ್ನು ಸರಳವಾಗಿ ತೋರಿಸಲು ಅಮೆರಿಕದ ಸಿಇಒ ಭಾರತದ ಈ ನಕ್ಷೆಯನ್ನು ರಚಿಸಿದ್ದಾರೆ. ಆ ಮೂಲಕ ಭಾರತಕ್ಕೆ ಧನ್ಯವಾದಗಳ್ನನು ಅರ್ಪಿಸಿದ್ದಾರೆ ಎಂಬ ಶೀರ್ಷಿಕೆಯೊಂದಿಗೆ ಭಾರತದ ನಕ್ಷೆಯೊಂದು ಇತ್ತೀಚಿನದು ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ಈ ನಕ್ಷೆಯಲ್ಲಿ ಪ್ರತಿ ರಾಜ್ಯವನ್ನು ಜನಸಂಖ್ಯೆಯ ಆಧಾರದ ಮೇಲೆ ಬೇರೆ ದೇಶಕ್ಕೆ ಹೋಲಿಸಲಾಗಿದೆ. ಭಾರತದಲ್ಲಿ ಹೆಚ್ಚಿನ ಜನಸಂಖ್ಯೆಯ ಕಾರಣದಿಂದಾಗಿ, ಅನೇಕ ದೇಶಗಳ COVID-19 ಬಿಕ್ಕಟ್ಟನ್ನು ಎದುರಿಸುವಲ್ಲಿ ಎಷ್ಟು ಪ್ರಯತ್ನ ಹಾಕುತ್ತಿವೆಯೋ ಅಷ್ಟನ್ನೂ ಭಾರತವೊಂದೇ ಹಾಕುತ್ತಿದೆ ಎಂದು ಹೇಳಲಾಗಿದೆ.

“ಇದು ಸಮಸ್ಯೆಯನ್ನು ಸಮರ್ಥವಾಗಿ ನಿರ್ವಹಿಸುವ ಬಗೆ ಎಂದು ಅಮೆರಿಕಾದ ಸಿಇಒ ಮೋದಿಜಿಯನ್ನು ಈ ವಿಶಿಷ್ಟ ರೀತಿಯಲ್ಲಿ ಶ್ಲಾಘಿಸಿದರು. ಮೋದಿಜಿಯ ಪ್ರಯತ್ನಗಳನ್ನು ಜಗತ್ತು ಗುರುತಿಸುತ್ತಿದೆ ಆದರೆ ಕೆಲವು ಆಂತರಿಕ ಗುಲಾಮರು ಮತ್ತು ದೇಶದ್ರೋಹಿಗಳು ಇನ್ನೂ ಟೀಕಿಸುತ್ತಿದ್ದಾರೆ” ಎಂದೆಲ್ಲಾ ಟೈಟಲ್‌ನಲ್ಲಿ ಈ ನಕ್ಷೆಯನ್ನು ಕಳೆದ ಮೂರ್‍ನಾಲ್ಕು ದಿನಗಳಿಂದ ಹರಡಲಾಗುತ್ತಿದೆ.

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಕೂಡ ಇದೇ ರೀತಿಯ ಶೀರ್ಷಿಕೆಯೊಂದಿಗೆ ಚಿತ್ರವನ್ನು ಹಂಚಿಕೊಂಡಿದ್ದಾರೆ. 13 ಸಾವಿರಕ್ಕೂ ಹೆಚ್ಚು ಜನ ಈ ಪೋಸ್ಟ್‌ ಅನ್ನು ಇಷ್ಟಪಟ್ಟಿದ್ದು 3 ಸಾವಿರ ಜನ ಹಂಚಿಕೊಂಡಿದ್ದಾರೆ.

 

ಫ್ಯಾಕ್ಟ್ ಚೆಕ್

ಈ ಚಿತ್ರ ಇತ್ತೀಚಿನದೆ ಮತ್ತು ಕೊರೊನಾ ವಿಷಯಕ್ಕೆ ಚಿತ್ರಿಸಲಾಗಿದೆಯೇ ಎಂದು ಕಂಡುಹಿಡಿಯಲು ಹಲವಾರು ಕೀವರ್ಡ್ ಮೂಲಕ ಹುಡುಕಾಟ ನಡೆಸಿದರೂ ಸಹ ಅಮೇರಿಕನ್ ಸಿಇಒ ಅಂತಹ ನಕ್ಷೆಯನ್ನು ಚಿತ್ರಿಸುವ ಬಗ್ಗೆ ಯಾವುದೇ ವಿಶ್ವಾಸಾರ್ಹ ಸುದ್ದಿ ವರದಿ ಲಭ್ಯವಾಗಿಲ್ಲ.

ನಂತರ ಗೂಗಲ್‌ನಲ್ಲಿ ನಕ್ಷೆಯ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಈ ನಕ್ಷೆಯ ಚಿತ್ರವು 2016 ರ ಹಿಂದಿನಿಂದಲೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿರುವುದನ್ನು ಕಾಣಬಹುದಾಗಿದೆ.

ಟ್ವಿಟರ್ ಬಳಕೆದಾರ ಅಮಿತ್ ರಂಜನ್ ಎಂಬುವವರು 2016ರ ಏಪ್ರಿಲ್‌ 13ರಂದೇ ಇದೇ ಚಿತ್ರವನ್ನು ಟ್ವೀಟ್‌ ಮಾಡಿದ್ದಾರೆ. “ಚಿಂತನೆಯನ್ನು ಪ್ರಚೋದಿಸುವ ನಕ್ಷೆ! ” ಭಾರತೀಯ ರಾಜ್ಯಗಳು ಹೊಂದಿರುವ ಜನಸಂಖ್ಯೆಯಷ್ಟೇ ಸಮಾನ ಜನಸಂಖ್ಯೆಯ ದೇಶಗಳನ್ನು ಮ್ಯಾಪ್ ಮಾಡಲಾಗಿದೆ” ಎಂದು ಬರೆದಿದ್ದಾರೆ. ಆದರೆ  ಆ ಪೋಸ್ಟ್‌ನಲ್ಲಿ “ಯಾವುದೇ ಎನ್ಆರ್‌ಐ ಅಥವಾ ಅಮೇರಿಕನ್ ಸಿಇಒ ಈ ನಕ್ಷೆಯನ್ನು ಚಿತ್ರಿ‍ಸಿರುವ ಬಗ್ಗೆ” ಯಾವುದೇ ಉಲ್ಲೇಖವಿಲ್ಲ.

ಅದೇ 2016ರಲ್ಲಿ ಇದೇ ನಕ್ಷೆಯನ್ನು ಈ ಹಿಂದೆ ನಾರ್ವೆಯಿಂದ ಭಾರತಕ್ಕೆ ರಾಜತಾಂತ್ರಿಕರಾಗಿದ್ದ ಎರಿಕ್ ಸೊಲ್ಹೈಮ್ ಕೂಡ ಹಂಚಿಕೊಂಡಿದ್ದಾರೆ. ಯಾರು ನಕ್ಷೆಯನ್ನು ರಚಿಸಿದರು ಎಂಬುದರ ಬಗ್ಗೆ ಸೋಲ್ಹೈಮ್ ಕೂಡ ಯಾವುದೇ ಉಲ್ಲೇಖವನ್ನು ನೀಡಿಲ್ಲ.

ವರ್ಷ ಕಳೆದಂತೆ ನಕ್ಷೆಯು ಹೆಚ್ಚು ವೈರಲ್ ಆಗುತ್ತಲೇ ಅದಕ್ಕೆ “ಅಮೇರಿಕನ್ ಸಿಇಒ” ಮತ್ತು “ಎನ್ಆರ್‌ಐ” ರಚಿಸಿದರು ಎಂಬ ಶೀರ್ಷಿಕೆ ಸೇರಿಕೊಂಡಿದೆ. 2018ರ ಮೇಲಿನ ಟ್ವೀಟ್‌ ಗಮನಿಸಿ.

ಏಪ್ರಿಲ್, 2020 ರಲ್ಲಿ, ನಕ್ಷೆಯು ಮತ್ತೊಮ್ಮೆ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿತು – ಮತ್ತು ಈ ಸಮಯದಲ್ಲಿ ನಡೆಯುತ್ತಿರುವ COVID-19 ಸಾಂಕ್ರಾಮಿಕದ ರೋಗದ ವಿರುದ್ಧದ ಹೋರಾಟ ಹೀಗೆ ನಡೆಯುತ್ತಿದೆ ಎಂದು ಸೇರಿಸುವ ಮೂಲಕ ಹೊಸದಾಗಿ ರಚನೆಯಾಯಿತು ಎಂಬ ಸುಳ್ಳು ಹರಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ನೆಲತಿಟ್ಟದಲ್ಲಿರುವ ನಾಡುಗಳಲ್ಲಿ ಕೊರೊನಾ ಸೋಂಕಿನ ಒರೆತ(test)ದ ಕುರಿತು ಬರೆದರೆ ಬಾರತದ ಬಣ್ಣ ಬಯಲಾಗಲಿದೆ. ???

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...