Homeನಿಜವೋ ಸುಳ್ಳೋಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು?

ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು?

- Advertisement -
- Advertisement -

ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾ ರೋಗವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದನ್ನು ಸರಳವಾಗಿ ತೋರಿಸಲು ಅಮೆರಿಕದ ಸಿಇಒ ಭಾರತದ ಈ ನಕ್ಷೆಯನ್ನು ರಚಿಸಿದ್ದಾರೆ. ಆ ಮೂಲಕ ಭಾರತಕ್ಕೆ ಧನ್ಯವಾದಗಳ್ನನು ಅರ್ಪಿಸಿದ್ದಾರೆ ಎಂಬ ಶೀರ್ಷಿಕೆಯೊಂದಿಗೆ ಭಾರತದ ನಕ್ಷೆಯೊಂದು ಇತ್ತೀಚಿನದು ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ಈ ನಕ್ಷೆಯಲ್ಲಿ ಪ್ರತಿ ರಾಜ್ಯವನ್ನು ಜನಸಂಖ್ಯೆಯ ಆಧಾರದ ಮೇಲೆ ಬೇರೆ ದೇಶಕ್ಕೆ ಹೋಲಿಸಲಾಗಿದೆ. ಭಾರತದಲ್ಲಿ ಹೆಚ್ಚಿನ ಜನಸಂಖ್ಯೆಯ ಕಾರಣದಿಂದಾಗಿ, ಅನೇಕ ದೇಶಗಳ COVID-19 ಬಿಕ್ಕಟ್ಟನ್ನು ಎದುರಿಸುವಲ್ಲಿ ಎಷ್ಟು ಪ್ರಯತ್ನ ಹಾಕುತ್ತಿವೆಯೋ ಅಷ್ಟನ್ನೂ ಭಾರತವೊಂದೇ ಹಾಕುತ್ತಿದೆ ಎಂದು ಹೇಳಲಾಗಿದೆ.

“ಇದು ಸಮಸ್ಯೆಯನ್ನು ಸಮರ್ಥವಾಗಿ ನಿರ್ವಹಿಸುವ ಬಗೆ ಎಂದು ಅಮೆರಿಕಾದ ಸಿಇಒ ಮೋದಿಜಿಯನ್ನು ಈ ವಿಶಿಷ್ಟ ರೀತಿಯಲ್ಲಿ ಶ್ಲಾಘಿಸಿದರು. ಮೋದಿಜಿಯ ಪ್ರಯತ್ನಗಳನ್ನು ಜಗತ್ತು ಗುರುತಿಸುತ್ತಿದೆ ಆದರೆ ಕೆಲವು ಆಂತರಿಕ ಗುಲಾಮರು ಮತ್ತು ದೇಶದ್ರೋಹಿಗಳು ಇನ್ನೂ ಟೀಕಿಸುತ್ತಿದ್ದಾರೆ” ಎಂದೆಲ್ಲಾ ಟೈಟಲ್‌ನಲ್ಲಿ ಈ ನಕ್ಷೆಯನ್ನು ಕಳೆದ ಮೂರ್‍ನಾಲ್ಕು ದಿನಗಳಿಂದ ಹರಡಲಾಗುತ್ತಿದೆ.

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಕೂಡ ಇದೇ ರೀತಿಯ ಶೀರ್ಷಿಕೆಯೊಂದಿಗೆ ಚಿತ್ರವನ್ನು ಹಂಚಿಕೊಂಡಿದ್ದಾರೆ. 13 ಸಾವಿರಕ್ಕೂ ಹೆಚ್ಚು ಜನ ಈ ಪೋಸ್ಟ್‌ ಅನ್ನು ಇಷ್ಟಪಟ್ಟಿದ್ದು 3 ಸಾವಿರ ಜನ ಹಂಚಿಕೊಂಡಿದ್ದಾರೆ.

 

ಫ್ಯಾಕ್ಟ್ ಚೆಕ್

ಈ ಚಿತ್ರ ಇತ್ತೀಚಿನದೆ ಮತ್ತು ಕೊರೊನಾ ವಿಷಯಕ್ಕೆ ಚಿತ್ರಿಸಲಾಗಿದೆಯೇ ಎಂದು ಕಂಡುಹಿಡಿಯಲು ಹಲವಾರು ಕೀವರ್ಡ್ ಮೂಲಕ ಹುಡುಕಾಟ ನಡೆಸಿದರೂ ಸಹ ಅಮೇರಿಕನ್ ಸಿಇಒ ಅಂತಹ ನಕ್ಷೆಯನ್ನು ಚಿತ್ರಿಸುವ ಬಗ್ಗೆ ಯಾವುದೇ ವಿಶ್ವಾಸಾರ್ಹ ಸುದ್ದಿ ವರದಿ ಲಭ್ಯವಾಗಿಲ್ಲ.

ನಂತರ ಗೂಗಲ್‌ನಲ್ಲಿ ನಕ್ಷೆಯ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಈ ನಕ್ಷೆಯ ಚಿತ್ರವು 2016 ರ ಹಿಂದಿನಿಂದಲೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿರುವುದನ್ನು ಕಾಣಬಹುದಾಗಿದೆ.

ಟ್ವಿಟರ್ ಬಳಕೆದಾರ ಅಮಿತ್ ರಂಜನ್ ಎಂಬುವವರು 2016ರ ಏಪ್ರಿಲ್‌ 13ರಂದೇ ಇದೇ ಚಿತ್ರವನ್ನು ಟ್ವೀಟ್‌ ಮಾಡಿದ್ದಾರೆ. “ಚಿಂತನೆಯನ್ನು ಪ್ರಚೋದಿಸುವ ನಕ್ಷೆ! ” ಭಾರತೀಯ ರಾಜ್ಯಗಳು ಹೊಂದಿರುವ ಜನಸಂಖ್ಯೆಯಷ್ಟೇ ಸಮಾನ ಜನಸಂಖ್ಯೆಯ ದೇಶಗಳನ್ನು ಮ್ಯಾಪ್ ಮಾಡಲಾಗಿದೆ” ಎಂದು ಬರೆದಿದ್ದಾರೆ. ಆದರೆ  ಆ ಪೋಸ್ಟ್‌ನಲ್ಲಿ “ಯಾವುದೇ ಎನ್ಆರ್‌ಐ ಅಥವಾ ಅಮೇರಿಕನ್ ಸಿಇಒ ಈ ನಕ್ಷೆಯನ್ನು ಚಿತ್ರಿ‍ಸಿರುವ ಬಗ್ಗೆ” ಯಾವುದೇ ಉಲ್ಲೇಖವಿಲ್ಲ.

ಅದೇ 2016ರಲ್ಲಿ ಇದೇ ನಕ್ಷೆಯನ್ನು ಈ ಹಿಂದೆ ನಾರ್ವೆಯಿಂದ ಭಾರತಕ್ಕೆ ರಾಜತಾಂತ್ರಿಕರಾಗಿದ್ದ ಎರಿಕ್ ಸೊಲ್ಹೈಮ್ ಕೂಡ ಹಂಚಿಕೊಂಡಿದ್ದಾರೆ. ಯಾರು ನಕ್ಷೆಯನ್ನು ರಚಿಸಿದರು ಎಂಬುದರ ಬಗ್ಗೆ ಸೋಲ್ಹೈಮ್ ಕೂಡ ಯಾವುದೇ ಉಲ್ಲೇಖವನ್ನು ನೀಡಿಲ್ಲ.

ವರ್ಷ ಕಳೆದಂತೆ ನಕ್ಷೆಯು ಹೆಚ್ಚು ವೈರಲ್ ಆಗುತ್ತಲೇ ಅದಕ್ಕೆ “ಅಮೇರಿಕನ್ ಸಿಇಒ” ಮತ್ತು “ಎನ್ಆರ್‌ಐ” ರಚಿಸಿದರು ಎಂಬ ಶೀರ್ಷಿಕೆ ಸೇರಿಕೊಂಡಿದೆ. 2018ರ ಮೇಲಿನ ಟ್ವೀಟ್‌ ಗಮನಿಸಿ.

ಏಪ್ರಿಲ್, 2020 ರಲ್ಲಿ, ನಕ್ಷೆಯು ಮತ್ತೊಮ್ಮೆ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿತು – ಮತ್ತು ಈ ಸಮಯದಲ್ಲಿ ನಡೆಯುತ್ತಿರುವ COVID-19 ಸಾಂಕ್ರಾಮಿಕದ ರೋಗದ ವಿರುದ್ಧದ ಹೋರಾಟ ಹೀಗೆ ನಡೆಯುತ್ತಿದೆ ಎಂದು ಸೇರಿಸುವ ಮೂಲಕ ಹೊಸದಾಗಿ ರಚನೆಯಾಯಿತು ಎಂಬ ಸುಳ್ಳು ಹರಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ನೆಲತಿಟ್ಟದಲ್ಲಿರುವ ನಾಡುಗಳಲ್ಲಿ ಕೊರೊನಾ ಸೋಂಕಿನ ಒರೆತ(test)ದ ಕುರಿತು ಬರೆದರೆ ಬಾರತದ ಬಣ್ಣ ಬಯಲಾಗಲಿದೆ. ???

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...