Homeನಿಜವೋ ಸುಳ್ಳೋಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು?

ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು?

- Advertisement -
- Advertisement -

ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾ ರೋಗವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದನ್ನು ಸರಳವಾಗಿ ತೋರಿಸಲು ಅಮೆರಿಕದ ಸಿಇಒ ಭಾರತದ ಈ ನಕ್ಷೆಯನ್ನು ರಚಿಸಿದ್ದಾರೆ. ಆ ಮೂಲಕ ಭಾರತಕ್ಕೆ ಧನ್ಯವಾದಗಳ್ನನು ಅರ್ಪಿಸಿದ್ದಾರೆ ಎಂಬ ಶೀರ್ಷಿಕೆಯೊಂದಿಗೆ ಭಾರತದ ನಕ್ಷೆಯೊಂದು ಇತ್ತೀಚಿನದು ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ಈ ನಕ್ಷೆಯಲ್ಲಿ ಪ್ರತಿ ರಾಜ್ಯವನ್ನು ಜನಸಂಖ್ಯೆಯ ಆಧಾರದ ಮೇಲೆ ಬೇರೆ ದೇಶಕ್ಕೆ ಹೋಲಿಸಲಾಗಿದೆ. ಭಾರತದಲ್ಲಿ ಹೆಚ್ಚಿನ ಜನಸಂಖ್ಯೆಯ ಕಾರಣದಿಂದಾಗಿ, ಅನೇಕ ದೇಶಗಳ COVID-19 ಬಿಕ್ಕಟ್ಟನ್ನು ಎದುರಿಸುವಲ್ಲಿ ಎಷ್ಟು ಪ್ರಯತ್ನ ಹಾಕುತ್ತಿವೆಯೋ ಅಷ್ಟನ್ನೂ ಭಾರತವೊಂದೇ ಹಾಕುತ್ತಿದೆ ಎಂದು ಹೇಳಲಾಗಿದೆ.

“ಇದು ಸಮಸ್ಯೆಯನ್ನು ಸಮರ್ಥವಾಗಿ ನಿರ್ವಹಿಸುವ ಬಗೆ ಎಂದು ಅಮೆರಿಕಾದ ಸಿಇಒ ಮೋದಿಜಿಯನ್ನು ಈ ವಿಶಿಷ್ಟ ರೀತಿಯಲ್ಲಿ ಶ್ಲಾಘಿಸಿದರು. ಮೋದಿಜಿಯ ಪ್ರಯತ್ನಗಳನ್ನು ಜಗತ್ತು ಗುರುತಿಸುತ್ತಿದೆ ಆದರೆ ಕೆಲವು ಆಂತರಿಕ ಗುಲಾಮರು ಮತ್ತು ದೇಶದ್ರೋಹಿಗಳು ಇನ್ನೂ ಟೀಕಿಸುತ್ತಿದ್ದಾರೆ” ಎಂದೆಲ್ಲಾ ಟೈಟಲ್‌ನಲ್ಲಿ ಈ ನಕ್ಷೆಯನ್ನು ಕಳೆದ ಮೂರ್‍ನಾಲ್ಕು ದಿನಗಳಿಂದ ಹರಡಲಾಗುತ್ತಿದೆ.

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಕೂಡ ಇದೇ ರೀತಿಯ ಶೀರ್ಷಿಕೆಯೊಂದಿಗೆ ಚಿತ್ರವನ್ನು ಹಂಚಿಕೊಂಡಿದ್ದಾರೆ. 13 ಸಾವಿರಕ್ಕೂ ಹೆಚ್ಚು ಜನ ಈ ಪೋಸ್ಟ್‌ ಅನ್ನು ಇಷ್ಟಪಟ್ಟಿದ್ದು 3 ಸಾವಿರ ಜನ ಹಂಚಿಕೊಂಡಿದ್ದಾರೆ.

 

ಫ್ಯಾಕ್ಟ್ ಚೆಕ್

ಈ ಚಿತ್ರ ಇತ್ತೀಚಿನದೆ ಮತ್ತು ಕೊರೊನಾ ವಿಷಯಕ್ಕೆ ಚಿತ್ರಿಸಲಾಗಿದೆಯೇ ಎಂದು ಕಂಡುಹಿಡಿಯಲು ಹಲವಾರು ಕೀವರ್ಡ್ ಮೂಲಕ ಹುಡುಕಾಟ ನಡೆಸಿದರೂ ಸಹ ಅಮೇರಿಕನ್ ಸಿಇಒ ಅಂತಹ ನಕ್ಷೆಯನ್ನು ಚಿತ್ರಿಸುವ ಬಗ್ಗೆ ಯಾವುದೇ ವಿಶ್ವಾಸಾರ್ಹ ಸುದ್ದಿ ವರದಿ ಲಭ್ಯವಾಗಿಲ್ಲ.

ನಂತರ ಗೂಗಲ್‌ನಲ್ಲಿ ನಕ್ಷೆಯ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಈ ನಕ್ಷೆಯ ಚಿತ್ರವು 2016 ರ ಹಿಂದಿನಿಂದಲೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿರುವುದನ್ನು ಕಾಣಬಹುದಾಗಿದೆ.

ಟ್ವಿಟರ್ ಬಳಕೆದಾರ ಅಮಿತ್ ರಂಜನ್ ಎಂಬುವವರು 2016ರ ಏಪ್ರಿಲ್‌ 13ರಂದೇ ಇದೇ ಚಿತ್ರವನ್ನು ಟ್ವೀಟ್‌ ಮಾಡಿದ್ದಾರೆ. “ಚಿಂತನೆಯನ್ನು ಪ್ರಚೋದಿಸುವ ನಕ್ಷೆ! ” ಭಾರತೀಯ ರಾಜ್ಯಗಳು ಹೊಂದಿರುವ ಜನಸಂಖ್ಯೆಯಷ್ಟೇ ಸಮಾನ ಜನಸಂಖ್ಯೆಯ ದೇಶಗಳನ್ನು ಮ್ಯಾಪ್ ಮಾಡಲಾಗಿದೆ” ಎಂದು ಬರೆದಿದ್ದಾರೆ. ಆದರೆ  ಆ ಪೋಸ್ಟ್‌ನಲ್ಲಿ “ಯಾವುದೇ ಎನ್ಆರ್‌ಐ ಅಥವಾ ಅಮೇರಿಕನ್ ಸಿಇಒ ಈ ನಕ್ಷೆಯನ್ನು ಚಿತ್ರಿ‍ಸಿರುವ ಬಗ್ಗೆ” ಯಾವುದೇ ಉಲ್ಲೇಖವಿಲ್ಲ.

ಅದೇ 2016ರಲ್ಲಿ ಇದೇ ನಕ್ಷೆಯನ್ನು ಈ ಹಿಂದೆ ನಾರ್ವೆಯಿಂದ ಭಾರತಕ್ಕೆ ರಾಜತಾಂತ್ರಿಕರಾಗಿದ್ದ ಎರಿಕ್ ಸೊಲ್ಹೈಮ್ ಕೂಡ ಹಂಚಿಕೊಂಡಿದ್ದಾರೆ. ಯಾರು ನಕ್ಷೆಯನ್ನು ರಚಿಸಿದರು ಎಂಬುದರ ಬಗ್ಗೆ ಸೋಲ್ಹೈಮ್ ಕೂಡ ಯಾವುದೇ ಉಲ್ಲೇಖವನ್ನು ನೀಡಿಲ್ಲ.

ವರ್ಷ ಕಳೆದಂತೆ ನಕ್ಷೆಯು ಹೆಚ್ಚು ವೈರಲ್ ಆಗುತ್ತಲೇ ಅದಕ್ಕೆ “ಅಮೇರಿಕನ್ ಸಿಇಒ” ಮತ್ತು “ಎನ್ಆರ್‌ಐ” ರಚಿಸಿದರು ಎಂಬ ಶೀರ್ಷಿಕೆ ಸೇರಿಕೊಂಡಿದೆ. 2018ರ ಮೇಲಿನ ಟ್ವೀಟ್‌ ಗಮನಿಸಿ.

ಏಪ್ರಿಲ್, 2020 ರಲ್ಲಿ, ನಕ್ಷೆಯು ಮತ್ತೊಮ್ಮೆ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿತು – ಮತ್ತು ಈ ಸಮಯದಲ್ಲಿ ನಡೆಯುತ್ತಿರುವ COVID-19 ಸಾಂಕ್ರಾಮಿಕದ ರೋಗದ ವಿರುದ್ಧದ ಹೋರಾಟ ಹೀಗೆ ನಡೆಯುತ್ತಿದೆ ಎಂದು ಸೇರಿಸುವ ಮೂಲಕ ಹೊಸದಾಗಿ ರಚನೆಯಾಯಿತು ಎಂಬ ಸುಳ್ಳು ಹರಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ನೆಲತಿಟ್ಟದಲ್ಲಿರುವ ನಾಡುಗಳಲ್ಲಿ ಕೊರೊನಾ ಸೋಂಕಿನ ಒರೆತ(test)ದ ಕುರಿತು ಬರೆದರೆ ಬಾರತದ ಬಣ್ಣ ಬಯಲಾಗಲಿದೆ. ???

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...