Homeನಿಜವೋ ಸುಳ್ಳೋಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು?

ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು?

- Advertisement -
- Advertisement -

ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾ ರೋಗವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದನ್ನು ಸರಳವಾಗಿ ತೋರಿಸಲು ಅಮೆರಿಕದ ಸಿಇಒ ಭಾರತದ ಈ ನಕ್ಷೆಯನ್ನು ರಚಿಸಿದ್ದಾರೆ. ಆ ಮೂಲಕ ಭಾರತಕ್ಕೆ ಧನ್ಯವಾದಗಳ್ನನು ಅರ್ಪಿಸಿದ್ದಾರೆ ಎಂಬ ಶೀರ್ಷಿಕೆಯೊಂದಿಗೆ ಭಾರತದ ನಕ್ಷೆಯೊಂದು ಇತ್ತೀಚಿನದು ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ಈ ನಕ್ಷೆಯಲ್ಲಿ ಪ್ರತಿ ರಾಜ್ಯವನ್ನು ಜನಸಂಖ್ಯೆಯ ಆಧಾರದ ಮೇಲೆ ಬೇರೆ ದೇಶಕ್ಕೆ ಹೋಲಿಸಲಾಗಿದೆ. ಭಾರತದಲ್ಲಿ ಹೆಚ್ಚಿನ ಜನಸಂಖ್ಯೆಯ ಕಾರಣದಿಂದಾಗಿ, ಅನೇಕ ದೇಶಗಳ COVID-19 ಬಿಕ್ಕಟ್ಟನ್ನು ಎದುರಿಸುವಲ್ಲಿ ಎಷ್ಟು ಪ್ರಯತ್ನ ಹಾಕುತ್ತಿವೆಯೋ ಅಷ್ಟನ್ನೂ ಭಾರತವೊಂದೇ ಹಾಕುತ್ತಿದೆ ಎಂದು ಹೇಳಲಾಗಿದೆ.

“ಇದು ಸಮಸ್ಯೆಯನ್ನು ಸಮರ್ಥವಾಗಿ ನಿರ್ವಹಿಸುವ ಬಗೆ ಎಂದು ಅಮೆರಿಕಾದ ಸಿಇಒ ಮೋದಿಜಿಯನ್ನು ಈ ವಿಶಿಷ್ಟ ರೀತಿಯಲ್ಲಿ ಶ್ಲಾಘಿಸಿದರು. ಮೋದಿಜಿಯ ಪ್ರಯತ್ನಗಳನ್ನು ಜಗತ್ತು ಗುರುತಿಸುತ್ತಿದೆ ಆದರೆ ಕೆಲವು ಆಂತರಿಕ ಗುಲಾಮರು ಮತ್ತು ದೇಶದ್ರೋಹಿಗಳು ಇನ್ನೂ ಟೀಕಿಸುತ್ತಿದ್ದಾರೆ” ಎಂದೆಲ್ಲಾ ಟೈಟಲ್‌ನಲ್ಲಿ ಈ ನಕ್ಷೆಯನ್ನು ಕಳೆದ ಮೂರ್‍ನಾಲ್ಕು ದಿನಗಳಿಂದ ಹರಡಲಾಗುತ್ತಿದೆ.

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಕೂಡ ಇದೇ ರೀತಿಯ ಶೀರ್ಷಿಕೆಯೊಂದಿಗೆ ಚಿತ್ರವನ್ನು ಹಂಚಿಕೊಂಡಿದ್ದಾರೆ. 13 ಸಾವಿರಕ್ಕೂ ಹೆಚ್ಚು ಜನ ಈ ಪೋಸ್ಟ್‌ ಅನ್ನು ಇಷ್ಟಪಟ್ಟಿದ್ದು 3 ಸಾವಿರ ಜನ ಹಂಚಿಕೊಂಡಿದ್ದಾರೆ.

 

ಫ್ಯಾಕ್ಟ್ ಚೆಕ್

ಈ ಚಿತ್ರ ಇತ್ತೀಚಿನದೆ ಮತ್ತು ಕೊರೊನಾ ವಿಷಯಕ್ಕೆ ಚಿತ್ರಿಸಲಾಗಿದೆಯೇ ಎಂದು ಕಂಡುಹಿಡಿಯಲು ಹಲವಾರು ಕೀವರ್ಡ್ ಮೂಲಕ ಹುಡುಕಾಟ ನಡೆಸಿದರೂ ಸಹ ಅಮೇರಿಕನ್ ಸಿಇಒ ಅಂತಹ ನಕ್ಷೆಯನ್ನು ಚಿತ್ರಿಸುವ ಬಗ್ಗೆ ಯಾವುದೇ ವಿಶ್ವಾಸಾರ್ಹ ಸುದ್ದಿ ವರದಿ ಲಭ್ಯವಾಗಿಲ್ಲ.

ನಂತರ ಗೂಗಲ್‌ನಲ್ಲಿ ನಕ್ಷೆಯ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಈ ನಕ್ಷೆಯ ಚಿತ್ರವು 2016 ರ ಹಿಂದಿನಿಂದಲೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿರುವುದನ್ನು ಕಾಣಬಹುದಾಗಿದೆ.

ಟ್ವಿಟರ್ ಬಳಕೆದಾರ ಅಮಿತ್ ರಂಜನ್ ಎಂಬುವವರು 2016ರ ಏಪ್ರಿಲ್‌ 13ರಂದೇ ಇದೇ ಚಿತ್ರವನ್ನು ಟ್ವೀಟ್‌ ಮಾಡಿದ್ದಾರೆ. “ಚಿಂತನೆಯನ್ನು ಪ್ರಚೋದಿಸುವ ನಕ್ಷೆ! ” ಭಾರತೀಯ ರಾಜ್ಯಗಳು ಹೊಂದಿರುವ ಜನಸಂಖ್ಯೆಯಷ್ಟೇ ಸಮಾನ ಜನಸಂಖ್ಯೆಯ ದೇಶಗಳನ್ನು ಮ್ಯಾಪ್ ಮಾಡಲಾಗಿದೆ” ಎಂದು ಬರೆದಿದ್ದಾರೆ. ಆದರೆ  ಆ ಪೋಸ್ಟ್‌ನಲ್ಲಿ “ಯಾವುದೇ ಎನ್ಆರ್‌ಐ ಅಥವಾ ಅಮೇರಿಕನ್ ಸಿಇಒ ಈ ನಕ್ಷೆಯನ್ನು ಚಿತ್ರಿ‍ಸಿರುವ ಬಗ್ಗೆ” ಯಾವುದೇ ಉಲ್ಲೇಖವಿಲ್ಲ.

ಅದೇ 2016ರಲ್ಲಿ ಇದೇ ನಕ್ಷೆಯನ್ನು ಈ ಹಿಂದೆ ನಾರ್ವೆಯಿಂದ ಭಾರತಕ್ಕೆ ರಾಜತಾಂತ್ರಿಕರಾಗಿದ್ದ ಎರಿಕ್ ಸೊಲ್ಹೈಮ್ ಕೂಡ ಹಂಚಿಕೊಂಡಿದ್ದಾರೆ. ಯಾರು ನಕ್ಷೆಯನ್ನು ರಚಿಸಿದರು ಎಂಬುದರ ಬಗ್ಗೆ ಸೋಲ್ಹೈಮ್ ಕೂಡ ಯಾವುದೇ ಉಲ್ಲೇಖವನ್ನು ನೀಡಿಲ್ಲ.

ವರ್ಷ ಕಳೆದಂತೆ ನಕ್ಷೆಯು ಹೆಚ್ಚು ವೈರಲ್ ಆಗುತ್ತಲೇ ಅದಕ್ಕೆ “ಅಮೇರಿಕನ್ ಸಿಇಒ” ಮತ್ತು “ಎನ್ಆರ್‌ಐ” ರಚಿಸಿದರು ಎಂಬ ಶೀರ್ಷಿಕೆ ಸೇರಿಕೊಂಡಿದೆ. 2018ರ ಮೇಲಿನ ಟ್ವೀಟ್‌ ಗಮನಿಸಿ.

ಏಪ್ರಿಲ್, 2020 ರಲ್ಲಿ, ನಕ್ಷೆಯು ಮತ್ತೊಮ್ಮೆ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿತು – ಮತ್ತು ಈ ಸಮಯದಲ್ಲಿ ನಡೆಯುತ್ತಿರುವ COVID-19 ಸಾಂಕ್ರಾಮಿಕದ ರೋಗದ ವಿರುದ್ಧದ ಹೋರಾಟ ಹೀಗೆ ನಡೆಯುತ್ತಿದೆ ಎಂದು ಸೇರಿಸುವ ಮೂಲಕ ಹೊಸದಾಗಿ ರಚನೆಯಾಯಿತು ಎಂಬ ಸುಳ್ಳು ಹರಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ನೆಲತಿಟ್ಟದಲ್ಲಿರುವ ನಾಡುಗಳಲ್ಲಿ ಕೊರೊನಾ ಸೋಂಕಿನ ಒರೆತ(test)ದ ಕುರಿತು ಬರೆದರೆ ಬಾರತದ ಬಣ್ಣ ಬಯಲಾಗಲಿದೆ. ???

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...