Homeನಿಜವೋ ಸುಳ್ಳೋಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು?

ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು?

- Advertisement -
- Advertisement -

ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾ ರೋಗವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದನ್ನು ಸರಳವಾಗಿ ತೋರಿಸಲು ಅಮೆರಿಕದ ಸಿಇಒ ಭಾರತದ ಈ ನಕ್ಷೆಯನ್ನು ರಚಿಸಿದ್ದಾರೆ. ಆ ಮೂಲಕ ಭಾರತಕ್ಕೆ ಧನ್ಯವಾದಗಳ್ನನು ಅರ್ಪಿಸಿದ್ದಾರೆ ಎಂಬ ಶೀರ್ಷಿಕೆಯೊಂದಿಗೆ ಭಾರತದ ನಕ್ಷೆಯೊಂದು ಇತ್ತೀಚಿನದು ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ಈ ನಕ್ಷೆಯಲ್ಲಿ ಪ್ರತಿ ರಾಜ್ಯವನ್ನು ಜನಸಂಖ್ಯೆಯ ಆಧಾರದ ಮೇಲೆ ಬೇರೆ ದೇಶಕ್ಕೆ ಹೋಲಿಸಲಾಗಿದೆ. ಭಾರತದಲ್ಲಿ ಹೆಚ್ಚಿನ ಜನಸಂಖ್ಯೆಯ ಕಾರಣದಿಂದಾಗಿ, ಅನೇಕ ದೇಶಗಳ COVID-19 ಬಿಕ್ಕಟ್ಟನ್ನು ಎದುರಿಸುವಲ್ಲಿ ಎಷ್ಟು ಪ್ರಯತ್ನ ಹಾಕುತ್ತಿವೆಯೋ ಅಷ್ಟನ್ನೂ ಭಾರತವೊಂದೇ ಹಾಕುತ್ತಿದೆ ಎಂದು ಹೇಳಲಾಗಿದೆ.

“ಇದು ಸಮಸ್ಯೆಯನ್ನು ಸಮರ್ಥವಾಗಿ ನಿರ್ವಹಿಸುವ ಬಗೆ ಎಂದು ಅಮೆರಿಕಾದ ಸಿಇಒ ಮೋದಿಜಿಯನ್ನು ಈ ವಿಶಿಷ್ಟ ರೀತಿಯಲ್ಲಿ ಶ್ಲಾಘಿಸಿದರು. ಮೋದಿಜಿಯ ಪ್ರಯತ್ನಗಳನ್ನು ಜಗತ್ತು ಗುರುತಿಸುತ್ತಿದೆ ಆದರೆ ಕೆಲವು ಆಂತರಿಕ ಗುಲಾಮರು ಮತ್ತು ದೇಶದ್ರೋಹಿಗಳು ಇನ್ನೂ ಟೀಕಿಸುತ್ತಿದ್ದಾರೆ” ಎಂದೆಲ್ಲಾ ಟೈಟಲ್‌ನಲ್ಲಿ ಈ ನಕ್ಷೆಯನ್ನು ಕಳೆದ ಮೂರ್‍ನಾಲ್ಕು ದಿನಗಳಿಂದ ಹರಡಲಾಗುತ್ತಿದೆ.

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಕೂಡ ಇದೇ ರೀತಿಯ ಶೀರ್ಷಿಕೆಯೊಂದಿಗೆ ಚಿತ್ರವನ್ನು ಹಂಚಿಕೊಂಡಿದ್ದಾರೆ. 13 ಸಾವಿರಕ್ಕೂ ಹೆಚ್ಚು ಜನ ಈ ಪೋಸ್ಟ್‌ ಅನ್ನು ಇಷ್ಟಪಟ್ಟಿದ್ದು 3 ಸಾವಿರ ಜನ ಹಂಚಿಕೊಂಡಿದ್ದಾರೆ.

 

ಫ್ಯಾಕ್ಟ್ ಚೆಕ್

ಈ ಚಿತ್ರ ಇತ್ತೀಚಿನದೆ ಮತ್ತು ಕೊರೊನಾ ವಿಷಯಕ್ಕೆ ಚಿತ್ರಿಸಲಾಗಿದೆಯೇ ಎಂದು ಕಂಡುಹಿಡಿಯಲು ಹಲವಾರು ಕೀವರ್ಡ್ ಮೂಲಕ ಹುಡುಕಾಟ ನಡೆಸಿದರೂ ಸಹ ಅಮೇರಿಕನ್ ಸಿಇಒ ಅಂತಹ ನಕ್ಷೆಯನ್ನು ಚಿತ್ರಿಸುವ ಬಗ್ಗೆ ಯಾವುದೇ ವಿಶ್ವಾಸಾರ್ಹ ಸುದ್ದಿ ವರದಿ ಲಭ್ಯವಾಗಿಲ್ಲ.

ನಂತರ ಗೂಗಲ್‌ನಲ್ಲಿ ನಕ್ಷೆಯ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಈ ನಕ್ಷೆಯ ಚಿತ್ರವು 2016 ರ ಹಿಂದಿನಿಂದಲೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿರುವುದನ್ನು ಕಾಣಬಹುದಾಗಿದೆ.

ಟ್ವಿಟರ್ ಬಳಕೆದಾರ ಅಮಿತ್ ರಂಜನ್ ಎಂಬುವವರು 2016ರ ಏಪ್ರಿಲ್‌ 13ರಂದೇ ಇದೇ ಚಿತ್ರವನ್ನು ಟ್ವೀಟ್‌ ಮಾಡಿದ್ದಾರೆ. “ಚಿಂತನೆಯನ್ನು ಪ್ರಚೋದಿಸುವ ನಕ್ಷೆ! ” ಭಾರತೀಯ ರಾಜ್ಯಗಳು ಹೊಂದಿರುವ ಜನಸಂಖ್ಯೆಯಷ್ಟೇ ಸಮಾನ ಜನಸಂಖ್ಯೆಯ ದೇಶಗಳನ್ನು ಮ್ಯಾಪ್ ಮಾಡಲಾಗಿದೆ” ಎಂದು ಬರೆದಿದ್ದಾರೆ. ಆದರೆ  ಆ ಪೋಸ್ಟ್‌ನಲ್ಲಿ “ಯಾವುದೇ ಎನ್ಆರ್‌ಐ ಅಥವಾ ಅಮೇರಿಕನ್ ಸಿಇಒ ಈ ನಕ್ಷೆಯನ್ನು ಚಿತ್ರಿ‍ಸಿರುವ ಬಗ್ಗೆ” ಯಾವುದೇ ಉಲ್ಲೇಖವಿಲ್ಲ.

ಅದೇ 2016ರಲ್ಲಿ ಇದೇ ನಕ್ಷೆಯನ್ನು ಈ ಹಿಂದೆ ನಾರ್ವೆಯಿಂದ ಭಾರತಕ್ಕೆ ರಾಜತಾಂತ್ರಿಕರಾಗಿದ್ದ ಎರಿಕ್ ಸೊಲ್ಹೈಮ್ ಕೂಡ ಹಂಚಿಕೊಂಡಿದ್ದಾರೆ. ಯಾರು ನಕ್ಷೆಯನ್ನು ರಚಿಸಿದರು ಎಂಬುದರ ಬಗ್ಗೆ ಸೋಲ್ಹೈಮ್ ಕೂಡ ಯಾವುದೇ ಉಲ್ಲೇಖವನ್ನು ನೀಡಿಲ್ಲ.

ವರ್ಷ ಕಳೆದಂತೆ ನಕ್ಷೆಯು ಹೆಚ್ಚು ವೈರಲ್ ಆಗುತ್ತಲೇ ಅದಕ್ಕೆ “ಅಮೇರಿಕನ್ ಸಿಇಒ” ಮತ್ತು “ಎನ್ಆರ್‌ಐ” ರಚಿಸಿದರು ಎಂಬ ಶೀರ್ಷಿಕೆ ಸೇರಿಕೊಂಡಿದೆ. 2018ರ ಮೇಲಿನ ಟ್ವೀಟ್‌ ಗಮನಿಸಿ.

ಏಪ್ರಿಲ್, 2020 ರಲ್ಲಿ, ನಕ್ಷೆಯು ಮತ್ತೊಮ್ಮೆ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿತು – ಮತ್ತು ಈ ಸಮಯದಲ್ಲಿ ನಡೆಯುತ್ತಿರುವ COVID-19 ಸಾಂಕ್ರಾಮಿಕದ ರೋಗದ ವಿರುದ್ಧದ ಹೋರಾಟ ಹೀಗೆ ನಡೆಯುತ್ತಿದೆ ಎಂದು ಸೇರಿಸುವ ಮೂಲಕ ಹೊಸದಾಗಿ ರಚನೆಯಾಯಿತು ಎಂಬ ಸುಳ್ಳು ಹರಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ನೆಲತಿಟ್ಟದಲ್ಲಿರುವ ನಾಡುಗಳಲ್ಲಿ ಕೊರೊನಾ ಸೋಂಕಿನ ಒರೆತ(test)ದ ಕುರಿತು ಬರೆದರೆ ಬಾರತದ ಬಣ್ಣ ಬಯಲಾಗಲಿದೆ. ???

LEAVE A REPLY

Please enter your comment!
Please enter your name here

- Advertisment -

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...