Homeಮುಖಪುಟಭಾರತ ಕೇವಲ ಹಿಂದಿವಾಲಾಗಳ ದೇಶವೇ? ದ್ರಾವಿಡ ಚಳವಳಿ ನೆನಪಿದೆಯೇ?: ಟಿ.ಎ.ನಾರಾಯಣಗೌಡ

ಭಾರತ ಕೇವಲ ಹಿಂದಿವಾಲಾಗಳ ದೇಶವೇ? ದ್ರಾವಿಡ ಚಳವಳಿ ನೆನಪಿದೆಯೇ?: ಟಿ.ಎ.ನಾರಾಯಣಗೌಡ

ಕೇಂದ್ರ ಸರ್ಕಾರದ ನಡವಳಿಕೆ ನೋಡಿದರೆ ದಕ್ಷಿಣ ಭಾರತೀಯರನ್ನು ಅವರು ದೇಶದ ನಾಗರಿಕರೆಂದು ಪರಿಗಣಿಸಿಯೇ ಇಲ್ಲವೆಂದು ತೋರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

- Advertisement -
- Advertisement -

ಕರ್ನಾಟಕ ರಕ್ಷಣಾ ವೇದಿಕೆ ಕಚೇರಿ ಮುಂಭಾಗ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣದ ನಂತರ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ಮಾತನಾಡಿ, “ಭಾರತವೇನು ಕೇವಲ ಹಿಂದಿವಾಲಾಗಳ ದೇಶವೇ? ದ್ರಾವಿಡ ಚಳವಳಿ ನೆನಪಿದೆಯೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೇಂದ್ರ ಸರ್ಕಾರದ ನಡವಳಿಕೆ ನೋಡಿದರೆ ದಕ್ಷಿಣ ಭಾರತೀಯರನ್ನು ಅವರು ದೇಶದ ನಾಗರಿಕರೆಂದು ಪರಿಗಣಿಸಿಯೇ ಇಲ್ಲವೆಂದು ತೋರುತ್ತದೆ. ಭಾರತವೇನು ಕೇವಲ ಹಿಂದಿವಾಲಾಗಳ ದೇಶವೇ? ದ್ರಾವಿಡ ಚಳವಳಿ ನೆನಪಿದೆಯೇ? ಅಂಥ ಚಳವಳಿ ಮತ್ತೆ ಮರುಕಳಿಸಿದರೆ ಆಶ್ವರ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿಯವರಿಗೆ ಕರ್ನಾಟಕ ನೆನಪಿಲ್ಲವೇ? ಯಾಕೆ ಅವರು ಕರ್ನಾಟಕದ ನೆರೆ ಸಂತ್ರಸ್ಥ ಜಿಲ್ಲೆಗಳಿಗೆ ಭೇಟಿ ನೀಡುತ್ತಿಲ್ಲ. ಅವರ ದೃಷ್ಟಿಯಲ್ಲಿ ಉತ್ತರ ಭಾರತ ಮಾತ್ರ ಭಾರತವೇ? ದಕ್ಷಿಣ ಭಾರತವು ಭಾರತಕ್ಕೆ ಸೇರಿಲ್ಲವೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯಗಳ ಪಟ್ಟಿ: ರಾಜ್ಯೋತ್ಸವದಂದು ಸಿದ್ದರಾಮಯ್ಯ ಆಕ್ರೋಶ

“ಜಿಎಸ್ ಟಿ ಬಾಕಿ ಹಣ ಕೊಡಿ ಎಂದು ಕರ್ನಾಟಕ‌ ಬೇಡುವ ಸ್ಥಿತಿ ತಲುಪಿದೆ. ನಾವು ಯಾರ ಹಣವನ್ನು ಕೇಳುತ್ತಿದ್ದೇವೆ? ಅದು ನಮ್ಮದೇ ಹಣ. ನಾವೇ ಕೊಟ್ಟ ತೆರಿಗೆಯ ಒಂದು ಭಾಗವನ್ನಷ್ಟೇ ಕೇಳುತ್ತಿದ್ದೇವೆ. ಕೇಂದ್ರ ಸರ್ಕಾರ ನಮ್ಮ ಹಣವನ್ನು ನಮಗೆ ಕೊಡದೆ ನಮ್ಮನ್ನು ಸಾಲಗಾರರನ್ನಾಗಿ ಮಾಡುತ್ತಿದೆ. ಕರ್ನಾಟಕಕ್ಕೆ ನ್ಯಾಯಯುತವಾಗಿ ದಕ್ಕಬೇಕಿರುವ ಅನುದಾನಗಳನ್ನು ಕೇಳಲು, ಕರ್ನಾಟಕದ ಸಮಸ್ಯೆಗಳ ಬಗ್ಗೆ ಪ್ರಧಾನಿ ಜತೆ ಮಾತನಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಭಯ ಪಡುತ್ತಿದ್ದಾರೆ. ಒಬ್ಬ ಪ್ರಧಾನಿ ಜತೆ ಮಾತಾಡಲು ಒಬ್ಬ ಮುಖ್ಯಮಂತ್ರಿ ಭಯ ಪಡುವ ಸ್ಥಿತಿ ತಲುಪಿದರೆ ಏನರ್ಥ? ಇದನ್ನು ಒಕ್ಕೂಟವೆಂದು ಕರೆಯಲು ಸಾಧ್ಯವೇ? ಒಕ್ಕೂಟದ ಮೂಲತತ್ತ್ವಗಳು‌ ಉಳಿದುಕೊಂಡಿವೆಯೇ?” ಎಂದು ಟಿ.ಎ.ನಾರಾಯಣಗೌಡ ಕಿಡಿಕಾರಿದರು.

“ರಾಜ್ಯೋತ್ಸವವನ್ನು ಸಂಘಸಂಸ್ಥೆಗಳು ಸರಳವಾಗಿ ಆಚರಿಸಬೇಕು ಎಂದು ಸರ್ಕಾರ ಹೇಳುತ್ತದೆ. ಆದರೆ ಸರ್ಕಾರ ನಡೆಸುವ‌ ಪಕ್ಷ, ಉಪಚುನಾವಣೆಗಳಲ್ಲಿ ಹತ್ತಾರು ಸಾವಿರ ಜನರನ್ನು ಸೇರಿಸಿ, ಸಿನಿಮಾ ಕಲಾವಿದರನ್ನು‌ ಕರೆಯಿಸಿ ರ್‍ಯಾಲಿಗಳನ್ನು ನಡೆಸುತ್ತದೆ. ನೀವು ಹೇಳುವ ನಿಯಮಗಳು ನಿಮಗೆ ಅನ್ವಯಿಸುವುದಿಲ್ಲವೇ?” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್…

“ಕರೋನಾ ಮತ್ತು ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹದ ಹಿನ್ನೆಲೆಯಲ್ಲಿ ಈ ವರ್ಷ ಸರಳವಾಗಿ ರಾಜ್ಯೋತ್ಸವ ಆಚರಿಸಲು‌ ನಾವು ಮೊದಲೇ ತೀರ್ಮಾನಿಸಿದ್ದೆವು. ಆದರೆ ರಾಜಕೀಯ ಪಕ್ಷಗಳು ಚುನಾವಣೆ ಹೆಸರಲ್ಲಿ‌ ತಾವೇ ಮಾಡಿದ ನಿಯಮಗಳನ್ನು ತಾವೇ ಮುರಿಯುತ್ತಿವೆ. ರಾಜ್ಯೋತ್ಸವವೆಂದರೆ ಕೇವಲ ಸಂಭ್ರಮ, ಸಡಗರವಲ್ಲ. ಅಖಂಡ ಕರ್ನಾಟಕದ ಕನಸು ಕಂಡ ನಮ್ಮ ಹಿರಿಯರ ಶ್ರೇಯೋಭಿಲಾಷೆಯನ್ನು ಕಾಪಾಡುವ ಹೊಣೆಗಾರಿಕೆ ಮತ್ತು ಸವಾಲು. ನಾವು ನಮ್ಮ ಹಕ್ಕುಗಳಿಗೆ ಯಾರನ್ನು ಬೇಕಾದರೂ ಪ್ರಶ್ನಿಸುವ ಅವಕಾಶವನ್ನು ಸಂವಿಧಾನ ನಮಗೆ ನೀಡಿದೆ. ಕನ್ನಡಿಗರ ಹಕ್ಕೊತ್ತಾಯಗಳಿಗೆ ಕೇಂದ್ರ, ರಾಜ್ಯ ಸರ್ಕಾರಗಳನ್ನು ಪ್ರಶ್ನಿಸುತ್ತಿರೋಣ, ಹೋರಾಟ ನಡೆಸೋಣ” ಎಂದು ಟಿ.ಎ.ನಾರಾಯಣಗೌಡ ಕರೆನೀಡಿದರು.

ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡಲು ರಾಷ್ಟ್ರೀಯ ಪಕ್ಷಗಳು ವಿಫಲವಾಗಿವೆ ಎಂದ ಟಿ.ಎ.ನಾರಾಯಣಗೌಡ, “ನಾವು ಈಗ ಪ್ರಾದೇಶಿಕ ಚಿಂತನೆಗಳನ್ನು ಬಿತ್ತಬೇಕಿದೆ. ಕೇಂದ್ರ ಸರ್ಕಾರ ಏನೇ ಸಮಸ್ಯೆ ಬಂದರೂ‌ ಒಮ್ಮೆ ಚೀನಾ ಕಡೆ ಮತ್ತೊಮ್ಮೆ ಪಾಕಿಸ್ತಾನದ ಕಡೆ ತೋರಿಸಿ ನುಣುಚಿಕೊಳ್ಳುತ್ತದೆ. ಈ‌ ಆಟ ಹೆಚ್ಚು‌ ದಿನ‌ ನಡೆಯದು. ಕನ್ನಡಿಗರು ಜಾಗ್ರತರಾಗಿದ್ದಾರೆ” ಎಂದು ಹೇಳಿದರು.


ಇದನ್ನೂ ಓದಿ: ಬೆಂಗಳೂರಿನಲ್ಲಿ ಆಪ್‌ನಿಂದ ‘ಆಮ್ ಆದ್ಮಿ ಕ್ಲಿನಿಕ್’ ಉದ್ಘಾಟನೆ: ಪೂರ್ತಿ ಉಚಿತ ಚಿಕಿತ್ಸೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...