Homeಮುಖಪುಟಭಾರತ ಕೇವಲ ಹಿಂದಿವಾಲಾಗಳ ದೇಶವೇ? ದ್ರಾವಿಡ ಚಳವಳಿ ನೆನಪಿದೆಯೇ?: ಟಿ.ಎ.ನಾರಾಯಣಗೌಡ

ಭಾರತ ಕೇವಲ ಹಿಂದಿವಾಲಾಗಳ ದೇಶವೇ? ದ್ರಾವಿಡ ಚಳವಳಿ ನೆನಪಿದೆಯೇ?: ಟಿ.ಎ.ನಾರಾಯಣಗೌಡ

ಕೇಂದ್ರ ಸರ್ಕಾರದ ನಡವಳಿಕೆ ನೋಡಿದರೆ ದಕ್ಷಿಣ ಭಾರತೀಯರನ್ನು ಅವರು ದೇಶದ ನಾಗರಿಕರೆಂದು ಪರಿಗಣಿಸಿಯೇ ಇಲ್ಲವೆಂದು ತೋರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

- Advertisement -
- Advertisement -

ಕರ್ನಾಟಕ ರಕ್ಷಣಾ ವೇದಿಕೆ ಕಚೇರಿ ಮುಂಭಾಗ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣದ ನಂತರ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ಮಾತನಾಡಿ, “ಭಾರತವೇನು ಕೇವಲ ಹಿಂದಿವಾಲಾಗಳ ದೇಶವೇ? ದ್ರಾವಿಡ ಚಳವಳಿ ನೆನಪಿದೆಯೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೇಂದ್ರ ಸರ್ಕಾರದ ನಡವಳಿಕೆ ನೋಡಿದರೆ ದಕ್ಷಿಣ ಭಾರತೀಯರನ್ನು ಅವರು ದೇಶದ ನಾಗರಿಕರೆಂದು ಪರಿಗಣಿಸಿಯೇ ಇಲ್ಲವೆಂದು ತೋರುತ್ತದೆ. ಭಾರತವೇನು ಕೇವಲ ಹಿಂದಿವಾಲಾಗಳ ದೇಶವೇ? ದ್ರಾವಿಡ ಚಳವಳಿ ನೆನಪಿದೆಯೇ? ಅಂಥ ಚಳವಳಿ ಮತ್ತೆ ಮರುಕಳಿಸಿದರೆ ಆಶ್ವರ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿಯವರಿಗೆ ಕರ್ನಾಟಕ ನೆನಪಿಲ್ಲವೇ? ಯಾಕೆ ಅವರು ಕರ್ನಾಟಕದ ನೆರೆ ಸಂತ್ರಸ್ಥ ಜಿಲ್ಲೆಗಳಿಗೆ ಭೇಟಿ ನೀಡುತ್ತಿಲ್ಲ. ಅವರ ದೃಷ್ಟಿಯಲ್ಲಿ ಉತ್ತರ ಭಾರತ ಮಾತ್ರ ಭಾರತವೇ? ದಕ್ಷಿಣ ಭಾರತವು ಭಾರತಕ್ಕೆ ಸೇರಿಲ್ಲವೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯಗಳ ಪಟ್ಟಿ: ರಾಜ್ಯೋತ್ಸವದಂದು ಸಿದ್ದರಾಮಯ್ಯ ಆಕ್ರೋಶ

“ಜಿಎಸ್ ಟಿ ಬಾಕಿ ಹಣ ಕೊಡಿ ಎಂದು ಕರ್ನಾಟಕ‌ ಬೇಡುವ ಸ್ಥಿತಿ ತಲುಪಿದೆ. ನಾವು ಯಾರ ಹಣವನ್ನು ಕೇಳುತ್ತಿದ್ದೇವೆ? ಅದು ನಮ್ಮದೇ ಹಣ. ನಾವೇ ಕೊಟ್ಟ ತೆರಿಗೆಯ ಒಂದು ಭಾಗವನ್ನಷ್ಟೇ ಕೇಳುತ್ತಿದ್ದೇವೆ. ಕೇಂದ್ರ ಸರ್ಕಾರ ನಮ್ಮ ಹಣವನ್ನು ನಮಗೆ ಕೊಡದೆ ನಮ್ಮನ್ನು ಸಾಲಗಾರರನ್ನಾಗಿ ಮಾಡುತ್ತಿದೆ. ಕರ್ನಾಟಕಕ್ಕೆ ನ್ಯಾಯಯುತವಾಗಿ ದಕ್ಕಬೇಕಿರುವ ಅನುದಾನಗಳನ್ನು ಕೇಳಲು, ಕರ್ನಾಟಕದ ಸಮಸ್ಯೆಗಳ ಬಗ್ಗೆ ಪ್ರಧಾನಿ ಜತೆ ಮಾತನಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಭಯ ಪಡುತ್ತಿದ್ದಾರೆ. ಒಬ್ಬ ಪ್ರಧಾನಿ ಜತೆ ಮಾತಾಡಲು ಒಬ್ಬ ಮುಖ್ಯಮಂತ್ರಿ ಭಯ ಪಡುವ ಸ್ಥಿತಿ ತಲುಪಿದರೆ ಏನರ್ಥ? ಇದನ್ನು ಒಕ್ಕೂಟವೆಂದು ಕರೆಯಲು ಸಾಧ್ಯವೇ? ಒಕ್ಕೂಟದ ಮೂಲತತ್ತ್ವಗಳು‌ ಉಳಿದುಕೊಂಡಿವೆಯೇ?” ಎಂದು ಟಿ.ಎ.ನಾರಾಯಣಗೌಡ ಕಿಡಿಕಾರಿದರು.

“ರಾಜ್ಯೋತ್ಸವವನ್ನು ಸಂಘಸಂಸ್ಥೆಗಳು ಸರಳವಾಗಿ ಆಚರಿಸಬೇಕು ಎಂದು ಸರ್ಕಾರ ಹೇಳುತ್ತದೆ. ಆದರೆ ಸರ್ಕಾರ ನಡೆಸುವ‌ ಪಕ್ಷ, ಉಪಚುನಾವಣೆಗಳಲ್ಲಿ ಹತ್ತಾರು ಸಾವಿರ ಜನರನ್ನು ಸೇರಿಸಿ, ಸಿನಿಮಾ ಕಲಾವಿದರನ್ನು‌ ಕರೆಯಿಸಿ ರ್‍ಯಾಲಿಗಳನ್ನು ನಡೆಸುತ್ತದೆ. ನೀವು ಹೇಳುವ ನಿಯಮಗಳು ನಿಮಗೆ ಅನ್ವಯಿಸುವುದಿಲ್ಲವೇ?” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್…

“ಕರೋನಾ ಮತ್ತು ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹದ ಹಿನ್ನೆಲೆಯಲ್ಲಿ ಈ ವರ್ಷ ಸರಳವಾಗಿ ರಾಜ್ಯೋತ್ಸವ ಆಚರಿಸಲು‌ ನಾವು ಮೊದಲೇ ತೀರ್ಮಾನಿಸಿದ್ದೆವು. ಆದರೆ ರಾಜಕೀಯ ಪಕ್ಷಗಳು ಚುನಾವಣೆ ಹೆಸರಲ್ಲಿ‌ ತಾವೇ ಮಾಡಿದ ನಿಯಮಗಳನ್ನು ತಾವೇ ಮುರಿಯುತ್ತಿವೆ. ರಾಜ್ಯೋತ್ಸವವೆಂದರೆ ಕೇವಲ ಸಂಭ್ರಮ, ಸಡಗರವಲ್ಲ. ಅಖಂಡ ಕರ್ನಾಟಕದ ಕನಸು ಕಂಡ ನಮ್ಮ ಹಿರಿಯರ ಶ್ರೇಯೋಭಿಲಾಷೆಯನ್ನು ಕಾಪಾಡುವ ಹೊಣೆಗಾರಿಕೆ ಮತ್ತು ಸವಾಲು. ನಾವು ನಮ್ಮ ಹಕ್ಕುಗಳಿಗೆ ಯಾರನ್ನು ಬೇಕಾದರೂ ಪ್ರಶ್ನಿಸುವ ಅವಕಾಶವನ್ನು ಸಂವಿಧಾನ ನಮಗೆ ನೀಡಿದೆ. ಕನ್ನಡಿಗರ ಹಕ್ಕೊತ್ತಾಯಗಳಿಗೆ ಕೇಂದ್ರ, ರಾಜ್ಯ ಸರ್ಕಾರಗಳನ್ನು ಪ್ರಶ್ನಿಸುತ್ತಿರೋಣ, ಹೋರಾಟ ನಡೆಸೋಣ” ಎಂದು ಟಿ.ಎ.ನಾರಾಯಣಗೌಡ ಕರೆನೀಡಿದರು.

ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡಲು ರಾಷ್ಟ್ರೀಯ ಪಕ್ಷಗಳು ವಿಫಲವಾಗಿವೆ ಎಂದ ಟಿ.ಎ.ನಾರಾಯಣಗೌಡ, “ನಾವು ಈಗ ಪ್ರಾದೇಶಿಕ ಚಿಂತನೆಗಳನ್ನು ಬಿತ್ತಬೇಕಿದೆ. ಕೇಂದ್ರ ಸರ್ಕಾರ ಏನೇ ಸಮಸ್ಯೆ ಬಂದರೂ‌ ಒಮ್ಮೆ ಚೀನಾ ಕಡೆ ಮತ್ತೊಮ್ಮೆ ಪಾಕಿಸ್ತಾನದ ಕಡೆ ತೋರಿಸಿ ನುಣುಚಿಕೊಳ್ಳುತ್ತದೆ. ಈ‌ ಆಟ ಹೆಚ್ಚು‌ ದಿನ‌ ನಡೆಯದು. ಕನ್ನಡಿಗರು ಜಾಗ್ರತರಾಗಿದ್ದಾರೆ” ಎಂದು ಹೇಳಿದರು.


ಇದನ್ನೂ ಓದಿ: ಬೆಂಗಳೂರಿನಲ್ಲಿ ಆಪ್‌ನಿಂದ ‘ಆಮ್ ಆದ್ಮಿ ಕ್ಲಿನಿಕ್’ ಉದ್ಘಾಟನೆ: ಪೂರ್ತಿ ಉಚಿತ ಚಿಕಿತ್ಸೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...