Homeಮುಖಪುಟಭಾರತ ಆಧ್ಯಾತ್ಮಿಕ ಗಣರಾಜ್ಯವೇ?

ಭಾರತ ಆಧ್ಯಾತ್ಮಿಕ ಗಣರಾಜ್ಯವೇ?

- Advertisement -
- Advertisement -

ಆರೆಸ್ಸೆಸ್ಸಿನ ವಕೀಲರ ಸಂಘಟನೆಯಾದ ಅಖಿಲ ಭಾರತೀಯ ಅಧಿವಕ್ತಾ ಪರಿಷತ್ತಿನ ಸದಸ್ಯರಿಗಾಗಿ ಏರ್ಪಡಿಸಲಾಗಿದ್ದ ಒಂದು ಉಪನ್ಯಾಸದಲ್ಲಿ, “1976ರಲ್ಲಿ ಭಾರತದ ಸಂವಿಧಾನದ ಪೀಠಿಕೆಯೊಳಗೆ ’ಸಮಾಜವಾದಿ’ (ಸೋಶಿಯಲಿಸ್ಟ್) ಮತ್ತು ’ಸೆಕ್ಯುಲರ್’ (ಧರ್ಮ ನಿರಪೇಕ್ಷ/ಜಾತ್ಯತೀತ ಮುಂತಾದಾಗಿ ವ್ಯಾಖ್ಯಾನಿಸಲಾಗಿದೆ. ಮುಂದೆ ಇದನ್ನು ಸೆಕ್ಯುಲರ್ ಎಂದೇ ಉಳಿಸಿಕೊಳ್ಳಲಾಗಿದೆ) ಎಂಬ ಶಬ್ದಗಳನ್ನು ಸೇರಿಸಿದುದು ಸಂವಿಧಾನದ ’ಆಧ್ಯಾತ್ಮಿಕ ವರ್ಚಸ್ಸಿನ ವಿಸ್ತಾರ’ವನ್ನು ಸಂಕುಚಿತಗೊಳಿಸಿದೆ” ಎಂದು ಜಮ್ಮು-ಕಾಶ್ಮೀರ-ಲಢಾಖ್ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾದ ಪಂಕಜ್ ಮಿತ್ತಲ್ ಅವರು ಹೇಳಿದರು. ದೇಶವನ್ನು ’ಭಾರತ ಆಧ್ಯಾತ್ಮಿಕ ಗಣರಾಜ್ಯ’ ಎಂದು ಕರೆಯಬೇಕು ಎಂದೂ ಅವರು ಹೇಳಿದರು.

ಸಂವಿಧಾನದೊಳಗೆ 1976ರಲ್ಲಿ ಈ ಪರಿಕಲ್ಪನೆಗಳನ್ನು ಸೇರಿಸಿದ್ದನ್ನು ನ್ಯಾ. ಮಿತ್ತಲ್ ಅವರಿಗಿಂತ ಮೊದಲೂ ಸಹ ವಿಮರ್ಶೆ ಮಾಡಿದವರಿದ್ದಾರೆ: ಈ ಪರಿಕಲ್ಪನೆಗಳನ್ನು ಸಂವಿಧಾನ ಕರ್ತರು ತಿರಸ್ಕರಿಸಿದ್ದರು, ಅವನ್ನು ಇಂದಿರಾ ಗಾಂಧಿಯವರು ’ಆಮದು’ ಮಾಡಿಕೊಂಡಿದ್ದಾರೆ – ಎನ್ನುವುದು ಅದಕ್ಕೆ ಕೊಡಲಾಗಿರುವ ಕಾರಣ. ಸೆಕ್ಯುಲರ್ ಎಂಬ ಶಬ್ದವು ಭಾರತದ ಸಂವಿಧಾನಕ್ಕೆ ಹೊರಗಿನದು ಎಂಬ ವಿಮರ್ಶೆ ತಪ್ಪು ಎಂದು ಸಂವಿಧಾನ ರಚನಾ ಸಭೆಯಲ್ಲಿನ ಚರ್ಚೆಗಳ ವಿಶ್ಲೇಷಣೆಯ ಮೂಲಕವೂ, ಸುಪ್ರೀಂ ಕೋರ್ಟು ನೀಡಿದ ಒಂದು ತೀರ್ಪಿನ ಮೂಲಕವೂ ಈಗಾಗಲೇ ಸಾಬೀತು ಮಾಡಲಾಗಿದೆ.

ಸಂವಿಧಾನ ರಚನಾ ಸಭೆಯು ಸೆಕ್ಯುಲರ್ ಎಂಬ ಶಬ್ದವನ್ನು ಪೀಠಿಕೆಯಲ್ಲಿ ಸೇರಿಸಲು ಒಪ್ಪದೆ ಇದ್ದಾಗ್ಯೂ, ಸೆಕ್ಯುಲರಿಸಂನ ಮೂಲಭೂತ ತಳಹದಿಯಾದ, ತಾವು ನಂಬಿರುವ ಧರ್ಮವನ್ನು ಆಚರಿಸಲು ಎಲ್ಲ ವ್ಯಕ್ತಿಗಳಿಗೂ ಸ್ವಾತಂತ್ರ್ಯವಿದೆ ಹಾಗೂ ಪ್ರಭುತ್ವವು ಧರ್ಮದ ಆಧಾರದಲ್ಲಿ ಯಾವುದೇ ವ್ಯಕ್ತಿಯ ವಿಷಯದಲ್ಲಿ ತಾರತಮ್ಯ ಮಾಡುವುದಿಲ್ಲ ಎಂಬ ವಿಚಾರದಲ್ಲಿ ಸಂವಿಧಾನ ರಚನಾ ಸಭೆಯಲ್ಲಿ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ ಎಂಬುದು ಅಲ್ಲಿ ಮಾತನಾಡಿದ ಅನೇಕ ಭಾಷಣಕಾರರ ಮಾತುಗಳಲ್ಲಿ ಸ್ಪಷ್ಟವಾಗಿತ್ತು. ಕೆ.ಎಂ.ಮುನ್ಷಿಯವರು ಸಭೆಯಲ್ಲಿ ಮಾತನಾಡುತ್ತಾ, ’… ನಮ್ಮ ಪ್ರಭುತ್ವಕ್ಕೆ ತನ್ನದೇ ಆದ ಒಂದು ಪ್ರಭುತ್ವ ಧರ್ಮ ಎಂಬುದು ಬಹುಶಃ ಇರಲು ಸಾಧ್ಯವಿಲ್ಲ’ ಎಂದು ವ್ಯಕ್ತಪಡಿಸಿದ ಅಭಿಪ್ರಾಯಕ್ಕೆ ವಿಶಾಲ ಸಹಮತಿ ವ್ಯಕ್ತವಾಗಿತ್ತು.

ಎಸ್.ಆರ್.ಬೊಮ್ಮಾಯಿ ವರ್ಸಸ್ ಭಾರತ ಒಕ್ಕೂಟ ಎಂಬ ಪ್ರಕರಣದಲ್ಲಿ ಸುಪ್ರೀಂ ಕೋರ್ಟು, ಸೆಕ್ಯುಲರಿಸಂ ಭಾರತೀಯ ಸಂವಿಧಾನದ ಮೂಲ ಸಂರಚನೆಯೊಳಗಿನ ಒಂದು ಅವಿಭಾಜ್ಯ ಭಾಗವಾಗಿದೆ ಎಂಬ ನಿಲುವಿಗೆ ತಲುಪಿತು ಹಾಗೂ 42ನೇ ಸಂವಿಧಾನ ತಿದ್ದುಪಡಿಯು ಭಾರತದ ಸಂವಿಧಾನದಲ್ಲಿ ಅಂತರ್ಗತವಾಗಿದ್ದ ಅಂಶವನ್ನು ಪ್ರಕಟವಾಗಿ ವ್ಯಕ್ತಪಡಿಸಿದೆ ಎಂದು ಸ್ಪಷ್ಟವಾಗಿ ತೀರ್ಮಾನ ಹೇಳಿತು. ಸಂವಿಧಾನದ ಪೀಠಿಕೆಯೇ ’ಚಿಂತನೆ, ಅಭಿವ್ಯಕ್ತಿ, ವಿಶ್ವಾಸ, (ಧಾರ್ಮಿಕ) ನಂಬಿಕೆ ಹಾಗೂ ಆರಾಧನೆಗಳ ಸ್ವಾತಂತ್ರ್ಯ’ಗಳ ಕುರಿತು ಹೇಳಿರುವುದರಿಂದಲೂ, ಧರ್ಮದ ಆಧಾರದಲ್ಲಿನ ತಾರತಮ್ಯವನ್ನು ಸಂವಿಧಾನದ 15ನೇ ವಿಧಿಯು ನಿಷೇಧಿಸಿರುವುದರಿಂದಲೂ, ಸೆಕ್ಯುಲರಿಸಂ ಎಂಬುದು ನಮ್ಮ ಸಂವಿಧಾನಕ್ಕೆ ಹೊರಗಿನದು ಎನ್ನುವುದಕ್ಕೆ ಯಾವುದೇ ಆಧಾರ ಇಲ್ಲ. ವಾಸ್ತವದಲ್ಲಿ, ’ಧರ್ಮದ ಆಧಾರದಲ್ಲಿನ ತಾರತಮ್ಯದ ಬಗ್ಗೆ ಸಂವಿಧಾನವು ಅಸಹ್ಯವನ್ನೇ ವ್ಯಕ್ತಪಡಿಸಿದೆ.’

ಪಂಕಜ್ ಮಿತ್ತಲ್

ಪೀಠಿಕೆಯೊಳಗೆ ’ಸಮಾಜವಾದ’ ಶಬ್ದವನ್ನು ಸೇರಿಸುವುದನ್ನು ಕುರಿತ ತಿದ್ದುಪಡಿಯೊಂದನ್ನು ಸಂವಿಧಾನ ರಚನಾ ಸಭೆಯು ಸ್ಪಷ್ಟವಾಗಿ ತಿರಸ್ಕರಿಸಿತಾದರೂ, ಪೀಠಿಕೆಯಲ್ಲಿ ಹೇಳಲಾಗಿರುವ ’ನ್ಯಾಯ – ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ’ ಎಂಬ ಉಲ್ಲೇಖದಲ್ಲಿ ಸಮಾಜವಾದದ ಕೆಲವು ಅಂಶಗಳು ಅದಾಗಲೇ ಒಳಗೊಂಡಿದ್ದವು. ದೇಶದ ಅರ್ಥ ವ್ಯವಸ್ಥೆಯು ಸಂಪತ್ತಿನ ಕೇಂದ್ರೀಕರಣಕ್ಕೆ ದಾರಿ ಮಾಡದ ರೀತಿಯಲ್ಲಿ ಪ್ರಭುತ್ವ ನೀತಿ ಇರಬೇಕು ಎಂದು ’ರಾಜ್ಯ ನಿರ್ದೇಶಕ ತತ್ವಗಳ’ ಆರ್ಟಿಕಲ್ 38(b) ಸ್ಪಷ್ಟಪಡಿಸಿರುವುದರಲ್ಲಿ ಸಮಾಜವಾದಿ ಕಳಕಳಿಯೇ ವ್ಯಕ್ತವಾಗಿರುವುದು. ಕೇಶವಾನಂದ ಭಾರತಿ ವರ್ಸಸ್ ಕೇರಳ ರಾಜ್ಯ ಎಂಬ ಪ್ರಕರಣದಲ್ಲಿ ಸುಪ್ರೀಂ ಕೋರ್ಟು, ’ಜನಕಲ್ಯಾಣ ಸಮಾಜ ಮತ್ತು ಸಮಾನತೆಯ ಸಮಾಜ’ವನ್ನು ನಿರ್ಮಿಸುವುದು ’ಭಾರತ ಸಂವಿಧಾನದ ಮೂಲ ರಚನೆ’ಯ ಭಾಗವಾಗಿದೆ ಎಂದು ಸೂಚಿಸಿದೆ. ಇದೂ ಸಹ ಸಮಾಜವಾದಿ ತತ್ವದ ಉಲ್ಲೇಖವೇ ಆಗಿದೆ.

ಹೀಗೆ, ಸೆಕ್ಯುಲರಿಸಂ ಮತ್ತು ಸಮಾಜವಾದಗಳನ್ನು ಕುರಿತಂತೆ ಸುಭದ್ರವಾದ ಒಂದು ನ್ಯಾಯಿಕ ಮತ್ತು ಸಾಂವಿಧಾನಿಕ ಚರ್ಚೆ ನಡೆದುಬಂದಿದೆ. ಸಂವಿಧಾನ ರಚನಾ ಸಭೆಯ ಚರ್ಚೆಗಳು ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳನ್ನಾಧರಿಸಿ, 1976ರಲ್ಲಿ ಈ ಶಬ್ದಗಳನ್ನು ಸೇರ್ಪಡೆ ಮಾಡಿರುವ ವಿಚಾರದ ಪರವಾಗಿಯಾಗಲಿ ಅಥವಾ ವಿರುದ್ಧವಾಗಿಯಾಗಲಿ ವಾದ ಮಾಡುವುದು ಸಾಧ್ಯವಿದೆ. ಇಲ್ಲಿ ಮುಖ್ಯವಾಗಿ ಗಮನಿಸಬೇಕಿರುವುದು – ಈ ಶಬ್ದಗಳನ್ನು ಸೇರ್ಪಡೆ ಮಾಡುವುದಾಗಲಿ ತೆಗೆದು ಹಾಕುವುದಾಗಲಿ ’ಭಾರತ ಸಂವಿಧಾನದ ಮೂಲ ರಚನೆ’ಯನ್ನು ನಾಶಪಡಿಸುವುದಿಲ್ಲ ಎನ್ನುವುದು.

ಮೇಲೆ ಹೇಳಿದ ಉಪನ್ಯಾಸದಲ್ಲಿ ಸದರಿ ಮುಖ್ಯ ನ್ಯಾಯಾಧೀಶರು ತಮ್ಮ ವ್ಯಾಖ್ಯಾನವನ್ನು ಮುಂದಿಡುವ ತವಕದಲ್ಲಿ, ’ಮೇಲ್ಪಂಕ್ತಿ’ಯ ಮೌಲ್ಯವಿರುವ ನ್ಯಾಯಿಕ ಚರ್ಚೆಗಳನ್ನೂ, ಸಂವಿಧಾನ ರಚನಾ ಸಭೆಯ ಚರ್ಚೆಗಳಲ್ಲಿ ಪರಿಕಲ್ಪನೆಗಳ ಜಾಡು ಹಿಡಿಯುವುದನ್ನೂ ಕಡೆಗಣಿಸಿದ್ದಾರೆ.

ಭಾರತದ ’ಆಧ್ಯಾತ್ಮಿಕ ಚಿತ್ರಣ’ದ ’ವಿಸ್ತಾರ’ವನ್ನು ’ಸೆಕ್ಯುಲರ್’ ಎಂಬ ಪದವು ಕಿರಿದಾಗಿಸುತ್ತದೆ ಎಂಬ ಹೇಳಿಕೆಯನ್ನು ಸಾಮಾನ್ಯರು ಹೇಳಿದ್ದರೆ ಅರ್ಥಮಾಡಿಕೊಳ್ಳಬಹುದು. ಆದರೆ ತನ್ನ ಪ್ರತಿಜ್ಞೆಯಲ್ಲಿ ’ಸಂವಿಧಾನದ ಮೇಲೆ ನಿಜವಾದ ನಂಬಿಕೆ ಮತ್ತು ನಿಷ್ಠೆ ಇರಿಸುತ್ತೇನೆ’ ಎಂದಿರುವ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯೊಬ್ಬರಿಂದ ಈ ಹೇಳಿಕೆ ಬಂದಾಗ ಅತಿಯಾದ ಗೊಂದಲ ಹುಟ್ಟುತ್ತದೆ.

ಈ ದೇಶವು ’ಭಾರತದ ಆಧ್ಯಾತ್ಮಿಕ ಗಣರಾಜ್ಯ’ವೆಂದು ಕರೆಯಲ್ಪಡಬೇಕೆಂದು ಪ್ರತಿಪಾದಿಸುವ ಮೂಲಕ, ಸಂವಿಧಾನ ರಚನಾ ಸಭೆಯು ’ಧರ್ಮ’ ಅಥವಾ ಆಧ್ಯಾತ್ಮವನ್ನು ಆಧಾರವಾಗಿ ಪರಿಗಣಿಸುವುದನ್ನು ಖಚಿತವಾಗಿ ತಿರಸ್ಕರಿಸಿತು ಮತ್ತು ಅದರ ಬದಲಿಗೆ ’ಭಾರತದ ಪ್ರಜೆಗಳಾದ ನಾವು’ಗಳ ಮೇಲೆ ನಂಬಿಕೆಯಿರಿಸಿತು ಎಂಬುದನ್ನು ಅವರು ಅರ್ಥಮಾಡಿಕೊಳ್ಳುವಲ್ಲಿ ಸೋತಿರಬೇಕು. ಮುಖ್ಯ ನ್ಯಾಯಮೂರ್ತಿಗಳು ಪ್ರಸ್ತಾಪಿಸಿದ ಬದಲಾವಣೆಗಳು ’ಸಂವಿಧಾನ ಎಲ್ಲರಿಗಾಗಿ’-ಆಸ್ತಿಕರು ಮತ್ತು ನಾಸ್ತಿಕರು ಎಲ್ಲರಿಗೂ- ಎಂಬ ತಿಳಿವಳಿಕೆಗೇ ಸವಾಲೆಸೆಯುತ್ತದೆ.

ಮುಖ್ಯ ನ್ಯಾಯಮೂರ್ತಿಗಳು ನೀಡಿದ ಈ ಹೇಳಿಕೆಯ ಕೆಲವು ದಿನಗಳಲ್ಲೇ ಬಾಬ್ರಿ ಮಸೀದಿ ಧ್ವಂಸ ಮಾಡಿದ 28ನೇ ವರ್ಷದ ದಿನ ಬಂದಿದ್ದು ಭಾರತದ ಸಮಾಜವನ್ನು ಇಂದು ಹಿಡಿದಿರುವ ಅತಿ ದೊಡ್ಡ ಸವಾಲಾದ ಸಂವಿಧಾನ ವಿರೋಧಿ ಮನಸ್ಥಿತಿಯ ದ್ಯೋತಕವಾಗಿದೆ. ಸಂವಿಧಾನವನ್ನು ರಕ್ಷಿಸುವ ಪ್ರಮಾಣ ವಚನ ಸ್ವೀಕರಿಸುವ ನ್ಯಾಯಮೂರ್ತಿಗಳೂ ಈ ಅಲೆಯಿಂದ ಬಚಾವಾಗಿಲ್ಲವೆನ್ನುವುದು ಆತಂಕಕಾರಿಯಾದ ಸಂಗತಿಯಾಗಿದೆ.

ಸೆಕ್ಯುಲರ್ ಪದದ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳಿಗಿರುವ ತೊಂದರೆ ಮತ್ತು ’ಭಾರತವು ಅಧ್ಯಾತ್ಮಿಕ ಗಣರಾಜ್ಯ’ವೆಂಬ ಅವರ ವಕಾಲತ್ತು, ಭಾರತೀಯ ಸಂವಿಧಾನಕ್ಕೆ ಒಮ್ಮೆ ಕರಸೇವೆ ಮಾಡಬೇಕು ಎಂದು ಪರೋಕ್ಷವಾಗಿ ಹೇಳಿದಂತೆ ತೋರುತ್ತಿದೆ.

ಅರವಿಂದ್ ನಾರಾಯಣ್

ಅರವಿಂದ್ ನಾರಾಯಣ್
ಅರವಿಂದ್ ನಾರಾಯಣ್ ಸಂವಿಧಾನ ತಜ್ಞರು, ಆಲ್ಟರ್‌ನೇಟಿವ್ ಲಾ ಫೋರಂನ ಸ್ಥಾಪಕ ಸದಸ್ಯರು. ಮಾನವ ಹಕ್ಕುಗಳಿಗೆ ಸಂಬಂಧಿಸಿದಂತೆ ಕಾನೂನು ಹೋರಾಟಗಳ ಹಿಂದಿರುವ ವ್ಯಕ್ತಿ. ಲೈಂಗಿಕ ಅಲ್ಪಸಂಖ್ಯಾತರು ಹಾಗೂ ಕೋಮು ಸಂಘರ್ಷಗಳ ವಿಷಯಗಳಿಗೆ ಸಂಬಂಧಿಸಿದಂತೆ ಕಾನೂನು ನೆರವು ಒದಗಿಸುತ್ತಾ ಬಂದಿದ್ದಾರೆ.


ಇದನ್ನೂ ಓದಿ: ಸಂವಿಧಾನ ಬದಲಿಸಬೇಕು ಎನ್ನುವವರಿಗೆ ಪಂಚಾಯತ್ ವ್ಯವಸ್ಥೆ ಬಗ್ಗೆ ನಂಬಿಕೆ ಇದೆಯಾ? – ಹರಿಪ್ರಸಾದ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...