Homeಕರ್ನಾಟಕಉದ್ದೇಶಪೂರ್ವಕ ಜಾತಿನಿಂದನೆ ಮಾತ್ರ ಅಪರಾಧವಾ?; ಅಟ್ರಾಸಿಟಿ ಕಾನೂನು ನಿಷ್ಕ್ರಿಯೆ ಮಾಡಲಾಗುತ್ತಿದೆಯೇ?

ಉದ್ದೇಶಪೂರ್ವಕ ಜಾತಿನಿಂದನೆ ಮಾತ್ರ ಅಪರಾಧವಾ?; ಅಟ್ರಾಸಿಟಿ ಕಾನೂನು ನಿಷ್ಕ್ರಿಯೆ ಮಾಡಲಾಗುತ್ತಿದೆಯೇ?

- Advertisement -
- Advertisement -

“ಕೇವಲ ಜಾತಿ ಹಿಡಿದು ಬೈದಾಕ್ಷಣ ಅದನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿಯ ಅಪರಾಧ ಎಂದು ಪರಿಗಣಿಸಲು ಆಗದು. ಉದ್ದೇಶಪೂರ್ವಕ ಮತ್ತು ಅಪಮಾನ ಮಾಡುವುದಕ್ಕಾಗಿಯೇ ಜಾತಿ ನಿಂದನೆ ಮಾಡಿದರಷ್ಟೇ ಅಪರಾಧ” ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ‘ಉದ್ದೇಶಪೂರ್ವಕ’ ಎನ್ನುವ ಪದವನ್ನು ಬಳಸುವ ಮೂಲಕ ನ್ಯಾಯಾಧೀಶರು ಇಡೀ ಅಟ್ರಾಸಿಟಿ ಕಾಯ್ದೆಯನ್ನೇ ನಿಷ್ಟ್ರಿಯೆ ಮಾಡಲು ಹೊರಟಿದ್ದಾರಾ ಎನ್ನುವ ಅನುಮಾನಗಳು ಮೂಡುತ್ತಿವೆ. ದೇಶದಲ್ಲಿ ದಿನಬೆಳಗಾದರೆ ಒಂದಿಲ್ಲೊಂದು ದಲಿತರ ಮೇಲಿನ ದೌರ್ಜನ್ಯಗಳ ಬಗ್ಗೆ ಸುದ್ದಿಗಳನ್ನು ಕೇಳುತ್ತಿದ್ದೆವೆ. ಇದೀಗ ಇಂತಹ ಪದ ಪ್ರಯೋಗದಿಂದ ದೌರ್ಜನ್ಯ ತಡೆಯಲು ಹೇಗೆ ಸಾಧ್ಯ ಎನ್ನುವ ಪ್ರಶ್ನೆ ಮೂಡುತ್ತದೆ.

ದೇಶದಲ್ಲಿ ಸಂವಿಧಾನ ಜಾರಿಯಾಗಿ ಏಳು ದಶಕಗಳೇ ಕಳೆದಿವೆ. ಜಾತಿಯ ತಾರತಮ್ಯ ಇನ್ನೂ ಕಡಿಮೆಯಾಗಿಲ್ಲ. ದೇವರ ಕೋಲು ಮುಟ್ಟಿದ ಎನ್ನುವ ಕಾರಣಕ್ಕೆ ಅಪ್ರಾಪ್ತ ಬಾಲಕನೊರ್ವನಿಗೆ ಸಾರ್ವಜನಿಕವಾಗಿ ಥಳಿಸಿ 60 ಸಾವಿರ ದಂಡ ಕಟ್ಟದಿದ್ದರೆ ಗ್ರಾಮದಿಂದ ಬಹಿಷ್ಕಾರ ಹಾಕುತ್ತೇವೆ ಎನ್ನುವ ಘಟನೆ ಇತ್ತೀಚೆಗೆ ರಾಜ್ಯದಲ್ಲೇ ನಡೆಯಿತು. ಪರೀಕ್ಷೆ ಬರೆದು ತನ್ನ ಗ್ರಾಮಕ್ಕೆ ಹೋಗುವುದಕ್ಕೆ ಬಸ್ಸು ಸಿಗಲಿಲ್ಲ ಎನ್ನುವ ಕಾರಣಕ್ಕೆ ಅಲ್ಲಿಯೇ ಇದ್ದ ಒಂದು ದೇವಸ್ಥಾನದ ಒಳಗೆ ಒಬ್ಬ ದಲಿತ ಯುವಕ ಮಲಗಿಕೊಂಡಿದ್ದ ಎನ್ನುವ ಕಾರಣಕ್ಕೆ ಆತನನ್ನು ಬೆತ್ತಲೆ ಮಾಡಿ ಥಳಿಸಿ ಮೆರವಣಿಗೆ ಮಾಡಿದಂತಹ ಘಟನೆ ಚಾಮರಾಜನಗರದ ಬಳಿ ನಡೆಯಿತು. ಈ ರೀತಿಯ ಘಟನೆಗಳು ಬೆಳಕಿಗೆ ಬರುವುದು ಬೆರಳೆಣಿಕೆಯಷ್ಟು ಮಾತ್ರ, ಬೆಳಕಿಗೆ ಬಾರದೆಯೇ ಮುಚ್ಚಿಹೋಗುವುದು ಸಾವಿರಾರು ಸಂಖ್ಯೆಯಲ್ಲಿವೆ.

ಜಾತಿ ಹಿಡಿದು ಬೈಯ್ದರೆ ಸಾಲದು ಉದ್ದೇಶಪೂರ್ವಕ ಮತ್ತು ಅಪಮಾನ ಮಾಡುವುದಕ್ಕಾಗಿಯೇ ಜಾತಿ ನಿಂದನೆ ಮಾಡಿದರಷ್ಟೇ ಅದನ್ನು ಅಟ್ರಾಸಿಟಿ ಪ್ರಕರಣ ಎಂದು ಕರೆಯುವುದಾದರೆ ಜಾತಿಯ ಹೆಸರಿನಲ್ಲಿ ದೂರ ಇಡುವ, ದೇವಸ್ಥಾನಕ್ಕೆ ನಿಷೇಧ ಹೇರುವ ಅಸಹ್ಯ ಪದ್ದತಿಯ ಬಗ್ಗೆ ನ್ಯಾಯಾಧೀಶರ ಅಭಿಪ್ರಾಯ ಏನಾಗಿರುತ್ತದೆ?

ಇದನ್ನೂ ಓದಿ: ಕೋಲಾರದ ದಲಿತ ಯುವಕನ ಮೇಲಿನ ದೌರ್ಜನ್ಯ: ನಿರ್ದಾಕ್ಷಿಣ್ಯ ಕ್ರಮಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ

ಪ್ರಬಲನೊಬ್ಬ ದುರ್ಬಲನ ಮೇಲೆ ದೌರ್ಜನ್ಯ ನಡೆಸುತ್ತಿದ್ದಾನೆ ಎಂದಾಗ ಆತನ ಮನಸ್ಸಿನಲ್ಲಿ ತಾನು ಸವರ್ಣೀಯ, ಈತ ದಲಿತ ಎನ್ನುವ ಮನಸ್ಥಿತಿಯಲ್ಲಿಯೇ ದೌರ್ಜನ್ಯ ಮಾಡಿರುತ್ತಾನೆ. ಅಲ್ಲಿ ತಾನು ಸವರ್ಣೀಯ ನೀನು ದಲಿತ ಎಂದು ಹೇಳಬೇಕಿಲ್ಲ, ಅದು ಆತ ಅದೇ ಮನಸ್ಥಿಯಲ್ಲಿ ದೌರ್ಜನ್ಯ ನಡೆಸಿರುತ್ತಾನೆ. ಇದು ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿಯ ಅಪರಾಧ ಆಗುವುದಿಲ್ಲವೇ? ಇಲ್ಲಿ ಜಾತಿಯ ಹೆಸರಿಸಿ ದೌರ್ಜನ್ಯ ನಡೆಸಿದರೆ ಮಾತ್ರವೇ ಆ ಕಾಯ್ದೆಯಡಿಯ ಅಪರಾಧ ಆಗುತ್ತದೆಯೇ? ಎನ್ನುವ ಪ್ರಶ್ನೆಗಳು ಮೂಡುತ್ತಿವೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಲೇಖಕ ರುದ್ರು ಪುನೀತ್ .ಆರ್.ಸಿ ಅವರು, “ಉದ್ದೇಶಪೂರ್ವಕವಾಗಿ ಜಾತಿನಿಂದನೆ ಮಾಡಿದ್ದಾರೆ, ಅಸ್ಪೃಶ್ಯತೆ ಆಚರಣೆ ಮಾಡಿದ್ದಾರೆ ಎನ್ನುವುದನ್ನು ಮಾನ್ಯ ನ್ಯಾಯಾಲಯ ಯಾವ ಮಾನದಂಡದಮೇಲೆ ನಿರ್ಧಾರ ಮಾಡುತ್ತೆ ಅನ್ನೋದನ್ನ ತಿಳಿಸಬೇಕಿತ್ತು” ಎಂದರು.

“ಮೀಸಲಾತಿ ಅಂದ್ರೆ ಸಾಕು ಅದು ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮಾತ್ರ ದೊರೆಯುತ್ತಿದೆ, ಅವರಿಗೆ ಸರ್ಕಾರಿ ನೌಕರಿ ಆರಾಮಾಗಿ ಸಿಗುತ್ತದೆ ಎನ್ನುವ ಕೆಟ್ಟ ಅಭಿಪ್ರಾಯವೊಂದು ಸವರ್ಣೀಯರ ತಲೆಯಲ್ಲಿ ಕೂತಿದೆ. ಆದರೆ EWS ಮೂಲಕ ಸವರ್ಣೀಯರಿಗೆ ಮೀಸಲಾತಿ ನೀಡಲಾಯಿತು, PTCL ಕಾಯ್ದೆ ತಿದ್ದುಪಡಿ ಮಾಡಲಾಯಿತು, ಲೇಬರ್ ಕೋಡ್ ಕಾಯ್ದೆಗಳನ್ನು ತಿದ್ದುಪಡಿ ಮಾಡಲಾಯಿತು, SC/ST ಗಳಿಗೆ ಪೋಸ್ಟ್ ಮೆಟ್ರಿಕ್ ಸ್ಕಾಲರ್‌ಶಿಪ್ ಕಡಿತಗೊಳಿಸಲಾಯಿತು, SCP/TSP ಹಣವನ್ನು ದುರ್ಬಳಕೆ ಮಾಡಲು ಸೆಕ್ಷನ್ 7D ಜಾರಿಗೊಳಿಸಲಾಯಿತು, 51 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲಾಯಿತು (ಸರ್ಕಾರಿ ಶಾಲೆಯಲ್ಲಿ 90% SC/ST ವಿದ್ಯಾರ್ಥಿಗಳೆ ಇರುವುದು), 1 ರಿಂದ 8 ನೇ ತರಗತಿಯವರೆಗೆ SC/ST ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನಿಲ್ಲಿಸಲಾಯಿತು, SC/STಗಳಿಗೆ IIT, IIM, AIIMS,NIT,JNU, DUಗಳಲ್ಲಿ ಶುಲ್ಕವನ್ನು ಹತ್ತುಪಟ್ಟು ಹೆಚ್ಚಿಸಲಾಯಿತು, NEET ಜಾರಿಗೊಳಿಸಿ SC/ST ಮಕ್ಕಳು ಡಾಕ್ಟರ್ ಆಗದಂತೆ ತಡೆಯಲಾಯಿತು, ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ ಮೀಸಲಾತಿ ಇಲ್ಲದಂತೆ ಮಾಡಲಾಯಿತು, ಈಗ ಅಟ್ರಾಸಿಟಿ ಮೇಲೆ ಕಣ್ಣು ಬಿದ್ದಿದೆ. ಇವೆಲ್ಲವೂ ಪರಿಶಿಷ್ಟರನ್ನ ಸಂವಿಧಾನ ಬರುವ ಮುನ್ನ ಇದ್ದಂತಹ ವ್ಯವಸ್ಥೆಗೆ ಹಿಂದೂಡುವ ಕುತಂತ್ರವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದುರುದ್ದೇಶದಿಂದ ಅಟ್ರಾಸಿಟಿ ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತದೆ ಎಂದು ಹೇಳುವವರು ಇದ್ದಾರೆ. ಅದು ತುಂಬಾ ಬಾಲಿಷವಾದಂತಹ ಮಾತು, ಹಾಗೊಂದು ವೇಳೆ ದುರುಪಯೋಗವಾದರೂ ಅದರ ಸಂಖ್ಯೆ ಬಹಳ ಕಡಿಮೆ. prevention of atrocities act ಅಡಿಯಲ್ಲಿ 2020ರ ಅಂಕಿಅಂಶಗಳನ್ನು ತೆಗೆದುಕೊಂಡರೆ ಕರ್ನಾಟಕದಲ್ಲಿ SC (1263) ST (269) ಕೇಸುಗಳು ಒಟ್ಟು 1,532 ಕೇಸ್‌ಗಳು ದಾಖಲಾಗಿದ್ದವು. ಅವುಗಳಲ್ಲಿ ಶಿಕ್ಷೆ ಆಗಿರುವುದು ಕೇವಲ 18 (SC 17, ST 1) ಜನರಿಗೆ ಮಾತ್ರ. ಈಗ ‘ಉದ್ದೇಶಪೂರ್ವಕ ಜಾತಿನಿಂದನೆ’ ಎನ್ನುವ ಹೊಸ ನಿಯಮವೊಂದು ಜಾರಿಯಾದರೆ ಒಬ್ಬನೇ ಒಬ್ಬ ಅಪರಾಧಿಗೂ ಶಿಕ್ಷೆ ಆಗುವುದಿಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...