Homeಕರ್ನಾಟಕಉದ್ದೇಶಪೂರ್ವಕ ಜಾತಿನಿಂದನೆ ಮಾತ್ರ ಅಪರಾಧವಾ?; ಅಟ್ರಾಸಿಟಿ ಕಾನೂನು ನಿಷ್ಕ್ರಿಯೆ ಮಾಡಲಾಗುತ್ತಿದೆಯೇ?

ಉದ್ದೇಶಪೂರ್ವಕ ಜಾತಿನಿಂದನೆ ಮಾತ್ರ ಅಪರಾಧವಾ?; ಅಟ್ರಾಸಿಟಿ ಕಾನೂನು ನಿಷ್ಕ್ರಿಯೆ ಮಾಡಲಾಗುತ್ತಿದೆಯೇ?

- Advertisement -
- Advertisement -

“ಕೇವಲ ಜಾತಿ ಹಿಡಿದು ಬೈದಾಕ್ಷಣ ಅದನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿಯ ಅಪರಾಧ ಎಂದು ಪರಿಗಣಿಸಲು ಆಗದು. ಉದ್ದೇಶಪೂರ್ವಕ ಮತ್ತು ಅಪಮಾನ ಮಾಡುವುದಕ್ಕಾಗಿಯೇ ಜಾತಿ ನಿಂದನೆ ಮಾಡಿದರಷ್ಟೇ ಅಪರಾಧ” ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ‘ಉದ್ದೇಶಪೂರ್ವಕ’ ಎನ್ನುವ ಪದವನ್ನು ಬಳಸುವ ಮೂಲಕ ನ್ಯಾಯಾಧೀಶರು ಇಡೀ ಅಟ್ರಾಸಿಟಿ ಕಾಯ್ದೆಯನ್ನೇ ನಿಷ್ಟ್ರಿಯೆ ಮಾಡಲು ಹೊರಟಿದ್ದಾರಾ ಎನ್ನುವ ಅನುಮಾನಗಳು ಮೂಡುತ್ತಿವೆ. ದೇಶದಲ್ಲಿ ದಿನಬೆಳಗಾದರೆ ಒಂದಿಲ್ಲೊಂದು ದಲಿತರ ಮೇಲಿನ ದೌರ್ಜನ್ಯಗಳ ಬಗ್ಗೆ ಸುದ್ದಿಗಳನ್ನು ಕೇಳುತ್ತಿದ್ದೆವೆ. ಇದೀಗ ಇಂತಹ ಪದ ಪ್ರಯೋಗದಿಂದ ದೌರ್ಜನ್ಯ ತಡೆಯಲು ಹೇಗೆ ಸಾಧ್ಯ ಎನ್ನುವ ಪ್ರಶ್ನೆ ಮೂಡುತ್ತದೆ.

ದೇಶದಲ್ಲಿ ಸಂವಿಧಾನ ಜಾರಿಯಾಗಿ ಏಳು ದಶಕಗಳೇ ಕಳೆದಿವೆ. ಜಾತಿಯ ತಾರತಮ್ಯ ಇನ್ನೂ ಕಡಿಮೆಯಾಗಿಲ್ಲ. ದೇವರ ಕೋಲು ಮುಟ್ಟಿದ ಎನ್ನುವ ಕಾರಣಕ್ಕೆ ಅಪ್ರಾಪ್ತ ಬಾಲಕನೊರ್ವನಿಗೆ ಸಾರ್ವಜನಿಕವಾಗಿ ಥಳಿಸಿ 60 ಸಾವಿರ ದಂಡ ಕಟ್ಟದಿದ್ದರೆ ಗ್ರಾಮದಿಂದ ಬಹಿಷ್ಕಾರ ಹಾಕುತ್ತೇವೆ ಎನ್ನುವ ಘಟನೆ ಇತ್ತೀಚೆಗೆ ರಾಜ್ಯದಲ್ಲೇ ನಡೆಯಿತು. ಪರೀಕ್ಷೆ ಬರೆದು ತನ್ನ ಗ್ರಾಮಕ್ಕೆ ಹೋಗುವುದಕ್ಕೆ ಬಸ್ಸು ಸಿಗಲಿಲ್ಲ ಎನ್ನುವ ಕಾರಣಕ್ಕೆ ಅಲ್ಲಿಯೇ ಇದ್ದ ಒಂದು ದೇವಸ್ಥಾನದ ಒಳಗೆ ಒಬ್ಬ ದಲಿತ ಯುವಕ ಮಲಗಿಕೊಂಡಿದ್ದ ಎನ್ನುವ ಕಾರಣಕ್ಕೆ ಆತನನ್ನು ಬೆತ್ತಲೆ ಮಾಡಿ ಥಳಿಸಿ ಮೆರವಣಿಗೆ ಮಾಡಿದಂತಹ ಘಟನೆ ಚಾಮರಾಜನಗರದ ಬಳಿ ನಡೆಯಿತು. ಈ ರೀತಿಯ ಘಟನೆಗಳು ಬೆಳಕಿಗೆ ಬರುವುದು ಬೆರಳೆಣಿಕೆಯಷ್ಟು ಮಾತ್ರ, ಬೆಳಕಿಗೆ ಬಾರದೆಯೇ ಮುಚ್ಚಿಹೋಗುವುದು ಸಾವಿರಾರು ಸಂಖ್ಯೆಯಲ್ಲಿವೆ.

ಜಾತಿ ಹಿಡಿದು ಬೈಯ್ದರೆ ಸಾಲದು ಉದ್ದೇಶಪೂರ್ವಕ ಮತ್ತು ಅಪಮಾನ ಮಾಡುವುದಕ್ಕಾಗಿಯೇ ಜಾತಿ ನಿಂದನೆ ಮಾಡಿದರಷ್ಟೇ ಅದನ್ನು ಅಟ್ರಾಸಿಟಿ ಪ್ರಕರಣ ಎಂದು ಕರೆಯುವುದಾದರೆ ಜಾತಿಯ ಹೆಸರಿನಲ್ಲಿ ದೂರ ಇಡುವ, ದೇವಸ್ಥಾನಕ್ಕೆ ನಿಷೇಧ ಹೇರುವ ಅಸಹ್ಯ ಪದ್ದತಿಯ ಬಗ್ಗೆ ನ್ಯಾಯಾಧೀಶರ ಅಭಿಪ್ರಾಯ ಏನಾಗಿರುತ್ತದೆ?

ಇದನ್ನೂ ಓದಿ: ಕೋಲಾರದ ದಲಿತ ಯುವಕನ ಮೇಲಿನ ದೌರ್ಜನ್ಯ: ನಿರ್ದಾಕ್ಷಿಣ್ಯ ಕ್ರಮಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ

ಪ್ರಬಲನೊಬ್ಬ ದುರ್ಬಲನ ಮೇಲೆ ದೌರ್ಜನ್ಯ ನಡೆಸುತ್ತಿದ್ದಾನೆ ಎಂದಾಗ ಆತನ ಮನಸ್ಸಿನಲ್ಲಿ ತಾನು ಸವರ್ಣೀಯ, ಈತ ದಲಿತ ಎನ್ನುವ ಮನಸ್ಥಿತಿಯಲ್ಲಿಯೇ ದೌರ್ಜನ್ಯ ಮಾಡಿರುತ್ತಾನೆ. ಅಲ್ಲಿ ತಾನು ಸವರ್ಣೀಯ ನೀನು ದಲಿತ ಎಂದು ಹೇಳಬೇಕಿಲ್ಲ, ಅದು ಆತ ಅದೇ ಮನಸ್ಥಿಯಲ್ಲಿ ದೌರ್ಜನ್ಯ ನಡೆಸಿರುತ್ತಾನೆ. ಇದು ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿಯ ಅಪರಾಧ ಆಗುವುದಿಲ್ಲವೇ? ಇಲ್ಲಿ ಜಾತಿಯ ಹೆಸರಿಸಿ ದೌರ್ಜನ್ಯ ನಡೆಸಿದರೆ ಮಾತ್ರವೇ ಆ ಕಾಯ್ದೆಯಡಿಯ ಅಪರಾಧ ಆಗುತ್ತದೆಯೇ? ಎನ್ನುವ ಪ್ರಶ್ನೆಗಳು ಮೂಡುತ್ತಿವೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಲೇಖಕ ರುದ್ರು ಪುನೀತ್ .ಆರ್.ಸಿ ಅವರು, “ಉದ್ದೇಶಪೂರ್ವಕವಾಗಿ ಜಾತಿನಿಂದನೆ ಮಾಡಿದ್ದಾರೆ, ಅಸ್ಪೃಶ್ಯತೆ ಆಚರಣೆ ಮಾಡಿದ್ದಾರೆ ಎನ್ನುವುದನ್ನು ಮಾನ್ಯ ನ್ಯಾಯಾಲಯ ಯಾವ ಮಾನದಂಡದಮೇಲೆ ನಿರ್ಧಾರ ಮಾಡುತ್ತೆ ಅನ್ನೋದನ್ನ ತಿಳಿಸಬೇಕಿತ್ತು” ಎಂದರು.

“ಮೀಸಲಾತಿ ಅಂದ್ರೆ ಸಾಕು ಅದು ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮಾತ್ರ ದೊರೆಯುತ್ತಿದೆ, ಅವರಿಗೆ ಸರ್ಕಾರಿ ನೌಕರಿ ಆರಾಮಾಗಿ ಸಿಗುತ್ತದೆ ಎನ್ನುವ ಕೆಟ್ಟ ಅಭಿಪ್ರಾಯವೊಂದು ಸವರ್ಣೀಯರ ತಲೆಯಲ್ಲಿ ಕೂತಿದೆ. ಆದರೆ EWS ಮೂಲಕ ಸವರ್ಣೀಯರಿಗೆ ಮೀಸಲಾತಿ ನೀಡಲಾಯಿತು, PTCL ಕಾಯ್ದೆ ತಿದ್ದುಪಡಿ ಮಾಡಲಾಯಿತು, ಲೇಬರ್ ಕೋಡ್ ಕಾಯ್ದೆಗಳನ್ನು ತಿದ್ದುಪಡಿ ಮಾಡಲಾಯಿತು, SC/ST ಗಳಿಗೆ ಪೋಸ್ಟ್ ಮೆಟ್ರಿಕ್ ಸ್ಕಾಲರ್‌ಶಿಪ್ ಕಡಿತಗೊಳಿಸಲಾಯಿತು, SCP/TSP ಹಣವನ್ನು ದುರ್ಬಳಕೆ ಮಾಡಲು ಸೆಕ್ಷನ್ 7D ಜಾರಿಗೊಳಿಸಲಾಯಿತು, 51 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲಾಯಿತು (ಸರ್ಕಾರಿ ಶಾಲೆಯಲ್ಲಿ 90% SC/ST ವಿದ್ಯಾರ್ಥಿಗಳೆ ಇರುವುದು), 1 ರಿಂದ 8 ನೇ ತರಗತಿಯವರೆಗೆ SC/ST ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನಿಲ್ಲಿಸಲಾಯಿತು, SC/STಗಳಿಗೆ IIT, IIM, AIIMS,NIT,JNU, DUಗಳಲ್ಲಿ ಶುಲ್ಕವನ್ನು ಹತ್ತುಪಟ್ಟು ಹೆಚ್ಚಿಸಲಾಯಿತು, NEET ಜಾರಿಗೊಳಿಸಿ SC/ST ಮಕ್ಕಳು ಡಾಕ್ಟರ್ ಆಗದಂತೆ ತಡೆಯಲಾಯಿತು, ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ ಮೀಸಲಾತಿ ಇಲ್ಲದಂತೆ ಮಾಡಲಾಯಿತು, ಈಗ ಅಟ್ರಾಸಿಟಿ ಮೇಲೆ ಕಣ್ಣು ಬಿದ್ದಿದೆ. ಇವೆಲ್ಲವೂ ಪರಿಶಿಷ್ಟರನ್ನ ಸಂವಿಧಾನ ಬರುವ ಮುನ್ನ ಇದ್ದಂತಹ ವ್ಯವಸ್ಥೆಗೆ ಹಿಂದೂಡುವ ಕುತಂತ್ರವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದುರುದ್ದೇಶದಿಂದ ಅಟ್ರಾಸಿಟಿ ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತದೆ ಎಂದು ಹೇಳುವವರು ಇದ್ದಾರೆ. ಅದು ತುಂಬಾ ಬಾಲಿಷವಾದಂತಹ ಮಾತು, ಹಾಗೊಂದು ವೇಳೆ ದುರುಪಯೋಗವಾದರೂ ಅದರ ಸಂಖ್ಯೆ ಬಹಳ ಕಡಿಮೆ. prevention of atrocities act ಅಡಿಯಲ್ಲಿ 2020ರ ಅಂಕಿಅಂಶಗಳನ್ನು ತೆಗೆದುಕೊಂಡರೆ ಕರ್ನಾಟಕದಲ್ಲಿ SC (1263) ST (269) ಕೇಸುಗಳು ಒಟ್ಟು 1,532 ಕೇಸ್‌ಗಳು ದಾಖಲಾಗಿದ್ದವು. ಅವುಗಳಲ್ಲಿ ಶಿಕ್ಷೆ ಆಗಿರುವುದು ಕೇವಲ 18 (SC 17, ST 1) ಜನರಿಗೆ ಮಾತ್ರ. ಈಗ ‘ಉದ್ದೇಶಪೂರ್ವಕ ಜಾತಿನಿಂದನೆ’ ಎನ್ನುವ ಹೊಸ ನಿಯಮವೊಂದು ಜಾರಿಯಾದರೆ ಒಬ್ಬನೇ ಒಬ್ಬ ಅಪರಾಧಿಗೂ ಶಿಕ್ಷೆ ಆಗುವುದಿಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...