Homeಕರ್ನಾಟಕಉದ್ದೇಶಪೂರ್ವಕ ಜಾತಿನಿಂದನೆ ಮಾತ್ರ ಅಪರಾಧವಾ?; ಅಟ್ರಾಸಿಟಿ ಕಾನೂನು ನಿಷ್ಕ್ರಿಯೆ ಮಾಡಲಾಗುತ್ತಿದೆಯೇ?

ಉದ್ದೇಶಪೂರ್ವಕ ಜಾತಿನಿಂದನೆ ಮಾತ್ರ ಅಪರಾಧವಾ?; ಅಟ್ರಾಸಿಟಿ ಕಾನೂನು ನಿಷ್ಕ್ರಿಯೆ ಮಾಡಲಾಗುತ್ತಿದೆಯೇ?

- Advertisement -
- Advertisement -

“ಕೇವಲ ಜಾತಿ ಹಿಡಿದು ಬೈದಾಕ್ಷಣ ಅದನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿಯ ಅಪರಾಧ ಎಂದು ಪರಿಗಣಿಸಲು ಆಗದು. ಉದ್ದೇಶಪೂರ್ವಕ ಮತ್ತು ಅಪಮಾನ ಮಾಡುವುದಕ್ಕಾಗಿಯೇ ಜಾತಿ ನಿಂದನೆ ಮಾಡಿದರಷ್ಟೇ ಅಪರಾಧ” ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ‘ಉದ್ದೇಶಪೂರ್ವಕ’ ಎನ್ನುವ ಪದವನ್ನು ಬಳಸುವ ಮೂಲಕ ನ್ಯಾಯಾಧೀಶರು ಇಡೀ ಅಟ್ರಾಸಿಟಿ ಕಾಯ್ದೆಯನ್ನೇ ನಿಷ್ಟ್ರಿಯೆ ಮಾಡಲು ಹೊರಟಿದ್ದಾರಾ ಎನ್ನುವ ಅನುಮಾನಗಳು ಮೂಡುತ್ತಿವೆ. ದೇಶದಲ್ಲಿ ದಿನಬೆಳಗಾದರೆ ಒಂದಿಲ್ಲೊಂದು ದಲಿತರ ಮೇಲಿನ ದೌರ್ಜನ್ಯಗಳ ಬಗ್ಗೆ ಸುದ್ದಿಗಳನ್ನು ಕೇಳುತ್ತಿದ್ದೆವೆ. ಇದೀಗ ಇಂತಹ ಪದ ಪ್ರಯೋಗದಿಂದ ದೌರ್ಜನ್ಯ ತಡೆಯಲು ಹೇಗೆ ಸಾಧ್ಯ ಎನ್ನುವ ಪ್ರಶ್ನೆ ಮೂಡುತ್ತದೆ.

ದೇಶದಲ್ಲಿ ಸಂವಿಧಾನ ಜಾರಿಯಾಗಿ ಏಳು ದಶಕಗಳೇ ಕಳೆದಿವೆ. ಜಾತಿಯ ತಾರತಮ್ಯ ಇನ್ನೂ ಕಡಿಮೆಯಾಗಿಲ್ಲ. ದೇವರ ಕೋಲು ಮುಟ್ಟಿದ ಎನ್ನುವ ಕಾರಣಕ್ಕೆ ಅಪ್ರಾಪ್ತ ಬಾಲಕನೊರ್ವನಿಗೆ ಸಾರ್ವಜನಿಕವಾಗಿ ಥಳಿಸಿ 60 ಸಾವಿರ ದಂಡ ಕಟ್ಟದಿದ್ದರೆ ಗ್ರಾಮದಿಂದ ಬಹಿಷ್ಕಾರ ಹಾಕುತ್ತೇವೆ ಎನ್ನುವ ಘಟನೆ ಇತ್ತೀಚೆಗೆ ರಾಜ್ಯದಲ್ಲೇ ನಡೆಯಿತು. ಪರೀಕ್ಷೆ ಬರೆದು ತನ್ನ ಗ್ರಾಮಕ್ಕೆ ಹೋಗುವುದಕ್ಕೆ ಬಸ್ಸು ಸಿಗಲಿಲ್ಲ ಎನ್ನುವ ಕಾರಣಕ್ಕೆ ಅಲ್ಲಿಯೇ ಇದ್ದ ಒಂದು ದೇವಸ್ಥಾನದ ಒಳಗೆ ಒಬ್ಬ ದಲಿತ ಯುವಕ ಮಲಗಿಕೊಂಡಿದ್ದ ಎನ್ನುವ ಕಾರಣಕ್ಕೆ ಆತನನ್ನು ಬೆತ್ತಲೆ ಮಾಡಿ ಥಳಿಸಿ ಮೆರವಣಿಗೆ ಮಾಡಿದಂತಹ ಘಟನೆ ಚಾಮರಾಜನಗರದ ಬಳಿ ನಡೆಯಿತು. ಈ ರೀತಿಯ ಘಟನೆಗಳು ಬೆಳಕಿಗೆ ಬರುವುದು ಬೆರಳೆಣಿಕೆಯಷ್ಟು ಮಾತ್ರ, ಬೆಳಕಿಗೆ ಬಾರದೆಯೇ ಮುಚ್ಚಿಹೋಗುವುದು ಸಾವಿರಾರು ಸಂಖ್ಯೆಯಲ್ಲಿವೆ.

ಜಾತಿ ಹಿಡಿದು ಬೈಯ್ದರೆ ಸಾಲದು ಉದ್ದೇಶಪೂರ್ವಕ ಮತ್ತು ಅಪಮಾನ ಮಾಡುವುದಕ್ಕಾಗಿಯೇ ಜಾತಿ ನಿಂದನೆ ಮಾಡಿದರಷ್ಟೇ ಅದನ್ನು ಅಟ್ರಾಸಿಟಿ ಪ್ರಕರಣ ಎಂದು ಕರೆಯುವುದಾದರೆ ಜಾತಿಯ ಹೆಸರಿನಲ್ಲಿ ದೂರ ಇಡುವ, ದೇವಸ್ಥಾನಕ್ಕೆ ನಿಷೇಧ ಹೇರುವ ಅಸಹ್ಯ ಪದ್ದತಿಯ ಬಗ್ಗೆ ನ್ಯಾಯಾಧೀಶರ ಅಭಿಪ್ರಾಯ ಏನಾಗಿರುತ್ತದೆ?

ಇದನ್ನೂ ಓದಿ: ಕೋಲಾರದ ದಲಿತ ಯುವಕನ ಮೇಲಿನ ದೌರ್ಜನ್ಯ: ನಿರ್ದಾಕ್ಷಿಣ್ಯ ಕ್ರಮಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ

ಪ್ರಬಲನೊಬ್ಬ ದುರ್ಬಲನ ಮೇಲೆ ದೌರ್ಜನ್ಯ ನಡೆಸುತ್ತಿದ್ದಾನೆ ಎಂದಾಗ ಆತನ ಮನಸ್ಸಿನಲ್ಲಿ ತಾನು ಸವರ್ಣೀಯ, ಈತ ದಲಿತ ಎನ್ನುವ ಮನಸ್ಥಿತಿಯಲ್ಲಿಯೇ ದೌರ್ಜನ್ಯ ಮಾಡಿರುತ್ತಾನೆ. ಅಲ್ಲಿ ತಾನು ಸವರ್ಣೀಯ ನೀನು ದಲಿತ ಎಂದು ಹೇಳಬೇಕಿಲ್ಲ, ಅದು ಆತ ಅದೇ ಮನಸ್ಥಿಯಲ್ಲಿ ದೌರ್ಜನ್ಯ ನಡೆಸಿರುತ್ತಾನೆ. ಇದು ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿಯ ಅಪರಾಧ ಆಗುವುದಿಲ್ಲವೇ? ಇಲ್ಲಿ ಜಾತಿಯ ಹೆಸರಿಸಿ ದೌರ್ಜನ್ಯ ನಡೆಸಿದರೆ ಮಾತ್ರವೇ ಆ ಕಾಯ್ದೆಯಡಿಯ ಅಪರಾಧ ಆಗುತ್ತದೆಯೇ? ಎನ್ನುವ ಪ್ರಶ್ನೆಗಳು ಮೂಡುತ್ತಿವೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಲೇಖಕ ರುದ್ರು ಪುನೀತ್ .ಆರ್.ಸಿ ಅವರು, “ಉದ್ದೇಶಪೂರ್ವಕವಾಗಿ ಜಾತಿನಿಂದನೆ ಮಾಡಿದ್ದಾರೆ, ಅಸ್ಪೃಶ್ಯತೆ ಆಚರಣೆ ಮಾಡಿದ್ದಾರೆ ಎನ್ನುವುದನ್ನು ಮಾನ್ಯ ನ್ಯಾಯಾಲಯ ಯಾವ ಮಾನದಂಡದಮೇಲೆ ನಿರ್ಧಾರ ಮಾಡುತ್ತೆ ಅನ್ನೋದನ್ನ ತಿಳಿಸಬೇಕಿತ್ತು” ಎಂದರು.

“ಮೀಸಲಾತಿ ಅಂದ್ರೆ ಸಾಕು ಅದು ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮಾತ್ರ ದೊರೆಯುತ್ತಿದೆ, ಅವರಿಗೆ ಸರ್ಕಾರಿ ನೌಕರಿ ಆರಾಮಾಗಿ ಸಿಗುತ್ತದೆ ಎನ್ನುವ ಕೆಟ್ಟ ಅಭಿಪ್ರಾಯವೊಂದು ಸವರ್ಣೀಯರ ತಲೆಯಲ್ಲಿ ಕೂತಿದೆ. ಆದರೆ EWS ಮೂಲಕ ಸವರ್ಣೀಯರಿಗೆ ಮೀಸಲಾತಿ ನೀಡಲಾಯಿತು, PTCL ಕಾಯ್ದೆ ತಿದ್ದುಪಡಿ ಮಾಡಲಾಯಿತು, ಲೇಬರ್ ಕೋಡ್ ಕಾಯ್ದೆಗಳನ್ನು ತಿದ್ದುಪಡಿ ಮಾಡಲಾಯಿತು, SC/ST ಗಳಿಗೆ ಪೋಸ್ಟ್ ಮೆಟ್ರಿಕ್ ಸ್ಕಾಲರ್‌ಶಿಪ್ ಕಡಿತಗೊಳಿಸಲಾಯಿತು, SCP/TSP ಹಣವನ್ನು ದುರ್ಬಳಕೆ ಮಾಡಲು ಸೆಕ್ಷನ್ 7D ಜಾರಿಗೊಳಿಸಲಾಯಿತು, 51 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲಾಯಿತು (ಸರ್ಕಾರಿ ಶಾಲೆಯಲ್ಲಿ 90% SC/ST ವಿದ್ಯಾರ್ಥಿಗಳೆ ಇರುವುದು), 1 ರಿಂದ 8 ನೇ ತರಗತಿಯವರೆಗೆ SC/ST ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನಿಲ್ಲಿಸಲಾಯಿತು, SC/STಗಳಿಗೆ IIT, IIM, AIIMS,NIT,JNU, DUಗಳಲ್ಲಿ ಶುಲ್ಕವನ್ನು ಹತ್ತುಪಟ್ಟು ಹೆಚ್ಚಿಸಲಾಯಿತು, NEET ಜಾರಿಗೊಳಿಸಿ SC/ST ಮಕ್ಕಳು ಡಾಕ್ಟರ್ ಆಗದಂತೆ ತಡೆಯಲಾಯಿತು, ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ ಮೀಸಲಾತಿ ಇಲ್ಲದಂತೆ ಮಾಡಲಾಯಿತು, ಈಗ ಅಟ್ರಾಸಿಟಿ ಮೇಲೆ ಕಣ್ಣು ಬಿದ್ದಿದೆ. ಇವೆಲ್ಲವೂ ಪರಿಶಿಷ್ಟರನ್ನ ಸಂವಿಧಾನ ಬರುವ ಮುನ್ನ ಇದ್ದಂತಹ ವ್ಯವಸ್ಥೆಗೆ ಹಿಂದೂಡುವ ಕುತಂತ್ರವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದುರುದ್ದೇಶದಿಂದ ಅಟ್ರಾಸಿಟಿ ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತದೆ ಎಂದು ಹೇಳುವವರು ಇದ್ದಾರೆ. ಅದು ತುಂಬಾ ಬಾಲಿಷವಾದಂತಹ ಮಾತು, ಹಾಗೊಂದು ವೇಳೆ ದುರುಪಯೋಗವಾದರೂ ಅದರ ಸಂಖ್ಯೆ ಬಹಳ ಕಡಿಮೆ. prevention of atrocities act ಅಡಿಯಲ್ಲಿ 2020ರ ಅಂಕಿಅಂಶಗಳನ್ನು ತೆಗೆದುಕೊಂಡರೆ ಕರ್ನಾಟಕದಲ್ಲಿ SC (1263) ST (269) ಕೇಸುಗಳು ಒಟ್ಟು 1,532 ಕೇಸ್‌ಗಳು ದಾಖಲಾಗಿದ್ದವು. ಅವುಗಳಲ್ಲಿ ಶಿಕ್ಷೆ ಆಗಿರುವುದು ಕೇವಲ 18 (SC 17, ST 1) ಜನರಿಗೆ ಮಾತ್ರ. ಈಗ ‘ಉದ್ದೇಶಪೂರ್ವಕ ಜಾತಿನಿಂದನೆ’ ಎನ್ನುವ ಹೊಸ ನಿಯಮವೊಂದು ಜಾರಿಯಾದರೆ ಒಬ್ಬನೇ ಒಬ್ಬ ಅಪರಾಧಿಗೂ ಶಿಕ್ಷೆ ಆಗುವುದಿಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...