Homeಕರ್ನಾಟಕಉದ್ದೇಶಪೂರ್ವಕ ಜಾತಿನಿಂದನೆ ಮಾತ್ರ ಅಪರಾಧವಾ?; ಅಟ್ರಾಸಿಟಿ ಕಾನೂನು ನಿಷ್ಕ್ರಿಯೆ ಮಾಡಲಾಗುತ್ತಿದೆಯೇ?

ಉದ್ದೇಶಪೂರ್ವಕ ಜಾತಿನಿಂದನೆ ಮಾತ್ರ ಅಪರಾಧವಾ?; ಅಟ್ರಾಸಿಟಿ ಕಾನೂನು ನಿಷ್ಕ್ರಿಯೆ ಮಾಡಲಾಗುತ್ತಿದೆಯೇ?

- Advertisement -
- Advertisement -

“ಕೇವಲ ಜಾತಿ ಹಿಡಿದು ಬೈದಾಕ್ಷಣ ಅದನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿಯ ಅಪರಾಧ ಎಂದು ಪರಿಗಣಿಸಲು ಆಗದು. ಉದ್ದೇಶಪೂರ್ವಕ ಮತ್ತು ಅಪಮಾನ ಮಾಡುವುದಕ್ಕಾಗಿಯೇ ಜಾತಿ ನಿಂದನೆ ಮಾಡಿದರಷ್ಟೇ ಅಪರಾಧ” ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ‘ಉದ್ದೇಶಪೂರ್ವಕ’ ಎನ್ನುವ ಪದವನ್ನು ಬಳಸುವ ಮೂಲಕ ನ್ಯಾಯಾಧೀಶರು ಇಡೀ ಅಟ್ರಾಸಿಟಿ ಕಾಯ್ದೆಯನ್ನೇ ನಿಷ್ಟ್ರಿಯೆ ಮಾಡಲು ಹೊರಟಿದ್ದಾರಾ ಎನ್ನುವ ಅನುಮಾನಗಳು ಮೂಡುತ್ತಿವೆ. ದೇಶದಲ್ಲಿ ದಿನಬೆಳಗಾದರೆ ಒಂದಿಲ್ಲೊಂದು ದಲಿತರ ಮೇಲಿನ ದೌರ್ಜನ್ಯಗಳ ಬಗ್ಗೆ ಸುದ್ದಿಗಳನ್ನು ಕೇಳುತ್ತಿದ್ದೆವೆ. ಇದೀಗ ಇಂತಹ ಪದ ಪ್ರಯೋಗದಿಂದ ದೌರ್ಜನ್ಯ ತಡೆಯಲು ಹೇಗೆ ಸಾಧ್ಯ ಎನ್ನುವ ಪ್ರಶ್ನೆ ಮೂಡುತ್ತದೆ.

ದೇಶದಲ್ಲಿ ಸಂವಿಧಾನ ಜಾರಿಯಾಗಿ ಏಳು ದಶಕಗಳೇ ಕಳೆದಿವೆ. ಜಾತಿಯ ತಾರತಮ್ಯ ಇನ್ನೂ ಕಡಿಮೆಯಾಗಿಲ್ಲ. ದೇವರ ಕೋಲು ಮುಟ್ಟಿದ ಎನ್ನುವ ಕಾರಣಕ್ಕೆ ಅಪ್ರಾಪ್ತ ಬಾಲಕನೊರ್ವನಿಗೆ ಸಾರ್ವಜನಿಕವಾಗಿ ಥಳಿಸಿ 60 ಸಾವಿರ ದಂಡ ಕಟ್ಟದಿದ್ದರೆ ಗ್ರಾಮದಿಂದ ಬಹಿಷ್ಕಾರ ಹಾಕುತ್ತೇವೆ ಎನ್ನುವ ಘಟನೆ ಇತ್ತೀಚೆಗೆ ರಾಜ್ಯದಲ್ಲೇ ನಡೆಯಿತು. ಪರೀಕ್ಷೆ ಬರೆದು ತನ್ನ ಗ್ರಾಮಕ್ಕೆ ಹೋಗುವುದಕ್ಕೆ ಬಸ್ಸು ಸಿಗಲಿಲ್ಲ ಎನ್ನುವ ಕಾರಣಕ್ಕೆ ಅಲ್ಲಿಯೇ ಇದ್ದ ಒಂದು ದೇವಸ್ಥಾನದ ಒಳಗೆ ಒಬ್ಬ ದಲಿತ ಯುವಕ ಮಲಗಿಕೊಂಡಿದ್ದ ಎನ್ನುವ ಕಾರಣಕ್ಕೆ ಆತನನ್ನು ಬೆತ್ತಲೆ ಮಾಡಿ ಥಳಿಸಿ ಮೆರವಣಿಗೆ ಮಾಡಿದಂತಹ ಘಟನೆ ಚಾಮರಾಜನಗರದ ಬಳಿ ನಡೆಯಿತು. ಈ ರೀತಿಯ ಘಟನೆಗಳು ಬೆಳಕಿಗೆ ಬರುವುದು ಬೆರಳೆಣಿಕೆಯಷ್ಟು ಮಾತ್ರ, ಬೆಳಕಿಗೆ ಬಾರದೆಯೇ ಮುಚ್ಚಿಹೋಗುವುದು ಸಾವಿರಾರು ಸಂಖ್ಯೆಯಲ್ಲಿವೆ.

ಜಾತಿ ಹಿಡಿದು ಬೈಯ್ದರೆ ಸಾಲದು ಉದ್ದೇಶಪೂರ್ವಕ ಮತ್ತು ಅಪಮಾನ ಮಾಡುವುದಕ್ಕಾಗಿಯೇ ಜಾತಿ ನಿಂದನೆ ಮಾಡಿದರಷ್ಟೇ ಅದನ್ನು ಅಟ್ರಾಸಿಟಿ ಪ್ರಕರಣ ಎಂದು ಕರೆಯುವುದಾದರೆ ಜಾತಿಯ ಹೆಸರಿನಲ್ಲಿ ದೂರ ಇಡುವ, ದೇವಸ್ಥಾನಕ್ಕೆ ನಿಷೇಧ ಹೇರುವ ಅಸಹ್ಯ ಪದ್ದತಿಯ ಬಗ್ಗೆ ನ್ಯಾಯಾಧೀಶರ ಅಭಿಪ್ರಾಯ ಏನಾಗಿರುತ್ತದೆ?

ಇದನ್ನೂ ಓದಿ: ಕೋಲಾರದ ದಲಿತ ಯುವಕನ ಮೇಲಿನ ದೌರ್ಜನ್ಯ: ನಿರ್ದಾಕ್ಷಿಣ್ಯ ಕ್ರಮಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ

ಪ್ರಬಲನೊಬ್ಬ ದುರ್ಬಲನ ಮೇಲೆ ದೌರ್ಜನ್ಯ ನಡೆಸುತ್ತಿದ್ದಾನೆ ಎಂದಾಗ ಆತನ ಮನಸ್ಸಿನಲ್ಲಿ ತಾನು ಸವರ್ಣೀಯ, ಈತ ದಲಿತ ಎನ್ನುವ ಮನಸ್ಥಿತಿಯಲ್ಲಿಯೇ ದೌರ್ಜನ್ಯ ಮಾಡಿರುತ್ತಾನೆ. ಅಲ್ಲಿ ತಾನು ಸವರ್ಣೀಯ ನೀನು ದಲಿತ ಎಂದು ಹೇಳಬೇಕಿಲ್ಲ, ಅದು ಆತ ಅದೇ ಮನಸ್ಥಿಯಲ್ಲಿ ದೌರ್ಜನ್ಯ ನಡೆಸಿರುತ್ತಾನೆ. ಇದು ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿಯ ಅಪರಾಧ ಆಗುವುದಿಲ್ಲವೇ? ಇಲ್ಲಿ ಜಾತಿಯ ಹೆಸರಿಸಿ ದೌರ್ಜನ್ಯ ನಡೆಸಿದರೆ ಮಾತ್ರವೇ ಆ ಕಾಯ್ದೆಯಡಿಯ ಅಪರಾಧ ಆಗುತ್ತದೆಯೇ? ಎನ್ನುವ ಪ್ರಶ್ನೆಗಳು ಮೂಡುತ್ತಿವೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಲೇಖಕ ರುದ್ರು ಪುನೀತ್ .ಆರ್.ಸಿ ಅವರು, “ಉದ್ದೇಶಪೂರ್ವಕವಾಗಿ ಜಾತಿನಿಂದನೆ ಮಾಡಿದ್ದಾರೆ, ಅಸ್ಪೃಶ್ಯತೆ ಆಚರಣೆ ಮಾಡಿದ್ದಾರೆ ಎನ್ನುವುದನ್ನು ಮಾನ್ಯ ನ್ಯಾಯಾಲಯ ಯಾವ ಮಾನದಂಡದಮೇಲೆ ನಿರ್ಧಾರ ಮಾಡುತ್ತೆ ಅನ್ನೋದನ್ನ ತಿಳಿಸಬೇಕಿತ್ತು” ಎಂದರು.

“ಮೀಸಲಾತಿ ಅಂದ್ರೆ ಸಾಕು ಅದು ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮಾತ್ರ ದೊರೆಯುತ್ತಿದೆ, ಅವರಿಗೆ ಸರ್ಕಾರಿ ನೌಕರಿ ಆರಾಮಾಗಿ ಸಿಗುತ್ತದೆ ಎನ್ನುವ ಕೆಟ್ಟ ಅಭಿಪ್ರಾಯವೊಂದು ಸವರ್ಣೀಯರ ತಲೆಯಲ್ಲಿ ಕೂತಿದೆ. ಆದರೆ EWS ಮೂಲಕ ಸವರ್ಣೀಯರಿಗೆ ಮೀಸಲಾತಿ ನೀಡಲಾಯಿತು, PTCL ಕಾಯ್ದೆ ತಿದ್ದುಪಡಿ ಮಾಡಲಾಯಿತು, ಲೇಬರ್ ಕೋಡ್ ಕಾಯ್ದೆಗಳನ್ನು ತಿದ್ದುಪಡಿ ಮಾಡಲಾಯಿತು, SC/ST ಗಳಿಗೆ ಪೋಸ್ಟ್ ಮೆಟ್ರಿಕ್ ಸ್ಕಾಲರ್‌ಶಿಪ್ ಕಡಿತಗೊಳಿಸಲಾಯಿತು, SCP/TSP ಹಣವನ್ನು ದುರ್ಬಳಕೆ ಮಾಡಲು ಸೆಕ್ಷನ್ 7D ಜಾರಿಗೊಳಿಸಲಾಯಿತು, 51 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲಾಯಿತು (ಸರ್ಕಾರಿ ಶಾಲೆಯಲ್ಲಿ 90% SC/ST ವಿದ್ಯಾರ್ಥಿಗಳೆ ಇರುವುದು), 1 ರಿಂದ 8 ನೇ ತರಗತಿಯವರೆಗೆ SC/ST ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನಿಲ್ಲಿಸಲಾಯಿತು, SC/STಗಳಿಗೆ IIT, IIM, AIIMS,NIT,JNU, DUಗಳಲ್ಲಿ ಶುಲ್ಕವನ್ನು ಹತ್ತುಪಟ್ಟು ಹೆಚ್ಚಿಸಲಾಯಿತು, NEET ಜಾರಿಗೊಳಿಸಿ SC/ST ಮಕ್ಕಳು ಡಾಕ್ಟರ್ ಆಗದಂತೆ ತಡೆಯಲಾಯಿತು, ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ ಮೀಸಲಾತಿ ಇಲ್ಲದಂತೆ ಮಾಡಲಾಯಿತು, ಈಗ ಅಟ್ರಾಸಿಟಿ ಮೇಲೆ ಕಣ್ಣು ಬಿದ್ದಿದೆ. ಇವೆಲ್ಲವೂ ಪರಿಶಿಷ್ಟರನ್ನ ಸಂವಿಧಾನ ಬರುವ ಮುನ್ನ ಇದ್ದಂತಹ ವ್ಯವಸ್ಥೆಗೆ ಹಿಂದೂಡುವ ಕುತಂತ್ರವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದುರುದ್ದೇಶದಿಂದ ಅಟ್ರಾಸಿಟಿ ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತದೆ ಎಂದು ಹೇಳುವವರು ಇದ್ದಾರೆ. ಅದು ತುಂಬಾ ಬಾಲಿಷವಾದಂತಹ ಮಾತು, ಹಾಗೊಂದು ವೇಳೆ ದುರುಪಯೋಗವಾದರೂ ಅದರ ಸಂಖ್ಯೆ ಬಹಳ ಕಡಿಮೆ. prevention of atrocities act ಅಡಿಯಲ್ಲಿ 2020ರ ಅಂಕಿಅಂಶಗಳನ್ನು ತೆಗೆದುಕೊಂಡರೆ ಕರ್ನಾಟಕದಲ್ಲಿ SC (1263) ST (269) ಕೇಸುಗಳು ಒಟ್ಟು 1,532 ಕೇಸ್‌ಗಳು ದಾಖಲಾಗಿದ್ದವು. ಅವುಗಳಲ್ಲಿ ಶಿಕ್ಷೆ ಆಗಿರುವುದು ಕೇವಲ 18 (SC 17, ST 1) ಜನರಿಗೆ ಮಾತ್ರ. ಈಗ ‘ಉದ್ದೇಶಪೂರ್ವಕ ಜಾತಿನಿಂದನೆ’ ಎನ್ನುವ ಹೊಸ ನಿಯಮವೊಂದು ಜಾರಿಯಾದರೆ ಒಬ್ಬನೇ ಒಬ್ಬ ಅಪರಾಧಿಗೂ ಶಿಕ್ಷೆ ಆಗುವುದಿಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...