Homeಕರ್ನಾಟಕಉದ್ದೇಶಪೂರ್ವಕ ಜಾತಿನಿಂದನೆ ಮಾತ್ರ ಅಪರಾಧವಾ?; ಅಟ್ರಾಸಿಟಿ ಕಾನೂನು ನಿಷ್ಕ್ರಿಯೆ ಮಾಡಲಾಗುತ್ತಿದೆಯೇ?

ಉದ್ದೇಶಪೂರ್ವಕ ಜಾತಿನಿಂದನೆ ಮಾತ್ರ ಅಪರಾಧವಾ?; ಅಟ್ರಾಸಿಟಿ ಕಾನೂನು ನಿಷ್ಕ್ರಿಯೆ ಮಾಡಲಾಗುತ್ತಿದೆಯೇ?

- Advertisement -
- Advertisement -

“ಕೇವಲ ಜಾತಿ ಹಿಡಿದು ಬೈದಾಕ್ಷಣ ಅದನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿಯ ಅಪರಾಧ ಎಂದು ಪರಿಗಣಿಸಲು ಆಗದು. ಉದ್ದೇಶಪೂರ್ವಕ ಮತ್ತು ಅಪಮಾನ ಮಾಡುವುದಕ್ಕಾಗಿಯೇ ಜಾತಿ ನಿಂದನೆ ಮಾಡಿದರಷ್ಟೇ ಅಪರಾಧ” ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ‘ಉದ್ದೇಶಪೂರ್ವಕ’ ಎನ್ನುವ ಪದವನ್ನು ಬಳಸುವ ಮೂಲಕ ನ್ಯಾಯಾಧೀಶರು ಇಡೀ ಅಟ್ರಾಸಿಟಿ ಕಾಯ್ದೆಯನ್ನೇ ನಿಷ್ಟ್ರಿಯೆ ಮಾಡಲು ಹೊರಟಿದ್ದಾರಾ ಎನ್ನುವ ಅನುಮಾನಗಳು ಮೂಡುತ್ತಿವೆ. ದೇಶದಲ್ಲಿ ದಿನಬೆಳಗಾದರೆ ಒಂದಿಲ್ಲೊಂದು ದಲಿತರ ಮೇಲಿನ ದೌರ್ಜನ್ಯಗಳ ಬಗ್ಗೆ ಸುದ್ದಿಗಳನ್ನು ಕೇಳುತ್ತಿದ್ದೆವೆ. ಇದೀಗ ಇಂತಹ ಪದ ಪ್ರಯೋಗದಿಂದ ದೌರ್ಜನ್ಯ ತಡೆಯಲು ಹೇಗೆ ಸಾಧ್ಯ ಎನ್ನುವ ಪ್ರಶ್ನೆ ಮೂಡುತ್ತದೆ.

ದೇಶದಲ್ಲಿ ಸಂವಿಧಾನ ಜಾರಿಯಾಗಿ ಏಳು ದಶಕಗಳೇ ಕಳೆದಿವೆ. ಜಾತಿಯ ತಾರತಮ್ಯ ಇನ್ನೂ ಕಡಿಮೆಯಾಗಿಲ್ಲ. ದೇವರ ಕೋಲು ಮುಟ್ಟಿದ ಎನ್ನುವ ಕಾರಣಕ್ಕೆ ಅಪ್ರಾಪ್ತ ಬಾಲಕನೊರ್ವನಿಗೆ ಸಾರ್ವಜನಿಕವಾಗಿ ಥಳಿಸಿ 60 ಸಾವಿರ ದಂಡ ಕಟ್ಟದಿದ್ದರೆ ಗ್ರಾಮದಿಂದ ಬಹಿಷ್ಕಾರ ಹಾಕುತ್ತೇವೆ ಎನ್ನುವ ಘಟನೆ ಇತ್ತೀಚೆಗೆ ರಾಜ್ಯದಲ್ಲೇ ನಡೆಯಿತು. ಪರೀಕ್ಷೆ ಬರೆದು ತನ್ನ ಗ್ರಾಮಕ್ಕೆ ಹೋಗುವುದಕ್ಕೆ ಬಸ್ಸು ಸಿಗಲಿಲ್ಲ ಎನ್ನುವ ಕಾರಣಕ್ಕೆ ಅಲ್ಲಿಯೇ ಇದ್ದ ಒಂದು ದೇವಸ್ಥಾನದ ಒಳಗೆ ಒಬ್ಬ ದಲಿತ ಯುವಕ ಮಲಗಿಕೊಂಡಿದ್ದ ಎನ್ನುವ ಕಾರಣಕ್ಕೆ ಆತನನ್ನು ಬೆತ್ತಲೆ ಮಾಡಿ ಥಳಿಸಿ ಮೆರವಣಿಗೆ ಮಾಡಿದಂತಹ ಘಟನೆ ಚಾಮರಾಜನಗರದ ಬಳಿ ನಡೆಯಿತು. ಈ ರೀತಿಯ ಘಟನೆಗಳು ಬೆಳಕಿಗೆ ಬರುವುದು ಬೆರಳೆಣಿಕೆಯಷ್ಟು ಮಾತ್ರ, ಬೆಳಕಿಗೆ ಬಾರದೆಯೇ ಮುಚ್ಚಿಹೋಗುವುದು ಸಾವಿರಾರು ಸಂಖ್ಯೆಯಲ್ಲಿವೆ.

ಜಾತಿ ಹಿಡಿದು ಬೈಯ್ದರೆ ಸಾಲದು ಉದ್ದೇಶಪೂರ್ವಕ ಮತ್ತು ಅಪಮಾನ ಮಾಡುವುದಕ್ಕಾಗಿಯೇ ಜಾತಿ ನಿಂದನೆ ಮಾಡಿದರಷ್ಟೇ ಅದನ್ನು ಅಟ್ರಾಸಿಟಿ ಪ್ರಕರಣ ಎಂದು ಕರೆಯುವುದಾದರೆ ಜಾತಿಯ ಹೆಸರಿನಲ್ಲಿ ದೂರ ಇಡುವ, ದೇವಸ್ಥಾನಕ್ಕೆ ನಿಷೇಧ ಹೇರುವ ಅಸಹ್ಯ ಪದ್ದತಿಯ ಬಗ್ಗೆ ನ್ಯಾಯಾಧೀಶರ ಅಭಿಪ್ರಾಯ ಏನಾಗಿರುತ್ತದೆ?

ಇದನ್ನೂ ಓದಿ: ಕೋಲಾರದ ದಲಿತ ಯುವಕನ ಮೇಲಿನ ದೌರ್ಜನ್ಯ: ನಿರ್ದಾಕ್ಷಿಣ್ಯ ಕ್ರಮಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ

ಪ್ರಬಲನೊಬ್ಬ ದುರ್ಬಲನ ಮೇಲೆ ದೌರ್ಜನ್ಯ ನಡೆಸುತ್ತಿದ್ದಾನೆ ಎಂದಾಗ ಆತನ ಮನಸ್ಸಿನಲ್ಲಿ ತಾನು ಸವರ್ಣೀಯ, ಈತ ದಲಿತ ಎನ್ನುವ ಮನಸ್ಥಿತಿಯಲ್ಲಿಯೇ ದೌರ್ಜನ್ಯ ಮಾಡಿರುತ್ತಾನೆ. ಅಲ್ಲಿ ತಾನು ಸವರ್ಣೀಯ ನೀನು ದಲಿತ ಎಂದು ಹೇಳಬೇಕಿಲ್ಲ, ಅದು ಆತ ಅದೇ ಮನಸ್ಥಿಯಲ್ಲಿ ದೌರ್ಜನ್ಯ ನಡೆಸಿರುತ್ತಾನೆ. ಇದು ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿಯ ಅಪರಾಧ ಆಗುವುದಿಲ್ಲವೇ? ಇಲ್ಲಿ ಜಾತಿಯ ಹೆಸರಿಸಿ ದೌರ್ಜನ್ಯ ನಡೆಸಿದರೆ ಮಾತ್ರವೇ ಆ ಕಾಯ್ದೆಯಡಿಯ ಅಪರಾಧ ಆಗುತ್ತದೆಯೇ? ಎನ್ನುವ ಪ್ರಶ್ನೆಗಳು ಮೂಡುತ್ತಿವೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಲೇಖಕ ರುದ್ರು ಪುನೀತ್ .ಆರ್.ಸಿ ಅವರು, “ಉದ್ದೇಶಪೂರ್ವಕವಾಗಿ ಜಾತಿನಿಂದನೆ ಮಾಡಿದ್ದಾರೆ, ಅಸ್ಪೃಶ್ಯತೆ ಆಚರಣೆ ಮಾಡಿದ್ದಾರೆ ಎನ್ನುವುದನ್ನು ಮಾನ್ಯ ನ್ಯಾಯಾಲಯ ಯಾವ ಮಾನದಂಡದಮೇಲೆ ನಿರ್ಧಾರ ಮಾಡುತ್ತೆ ಅನ್ನೋದನ್ನ ತಿಳಿಸಬೇಕಿತ್ತು” ಎಂದರು.

“ಮೀಸಲಾತಿ ಅಂದ್ರೆ ಸಾಕು ಅದು ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮಾತ್ರ ದೊರೆಯುತ್ತಿದೆ, ಅವರಿಗೆ ಸರ್ಕಾರಿ ನೌಕರಿ ಆರಾಮಾಗಿ ಸಿಗುತ್ತದೆ ಎನ್ನುವ ಕೆಟ್ಟ ಅಭಿಪ್ರಾಯವೊಂದು ಸವರ್ಣೀಯರ ತಲೆಯಲ್ಲಿ ಕೂತಿದೆ. ಆದರೆ EWS ಮೂಲಕ ಸವರ್ಣೀಯರಿಗೆ ಮೀಸಲಾತಿ ನೀಡಲಾಯಿತು, PTCL ಕಾಯ್ದೆ ತಿದ್ದುಪಡಿ ಮಾಡಲಾಯಿತು, ಲೇಬರ್ ಕೋಡ್ ಕಾಯ್ದೆಗಳನ್ನು ತಿದ್ದುಪಡಿ ಮಾಡಲಾಯಿತು, SC/ST ಗಳಿಗೆ ಪೋಸ್ಟ್ ಮೆಟ್ರಿಕ್ ಸ್ಕಾಲರ್‌ಶಿಪ್ ಕಡಿತಗೊಳಿಸಲಾಯಿತು, SCP/TSP ಹಣವನ್ನು ದುರ್ಬಳಕೆ ಮಾಡಲು ಸೆಕ್ಷನ್ 7D ಜಾರಿಗೊಳಿಸಲಾಯಿತು, 51 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲಾಯಿತು (ಸರ್ಕಾರಿ ಶಾಲೆಯಲ್ಲಿ 90% SC/ST ವಿದ್ಯಾರ್ಥಿಗಳೆ ಇರುವುದು), 1 ರಿಂದ 8 ನೇ ತರಗತಿಯವರೆಗೆ SC/ST ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನಿಲ್ಲಿಸಲಾಯಿತು, SC/STಗಳಿಗೆ IIT, IIM, AIIMS,NIT,JNU, DUಗಳಲ್ಲಿ ಶುಲ್ಕವನ್ನು ಹತ್ತುಪಟ್ಟು ಹೆಚ್ಚಿಸಲಾಯಿತು, NEET ಜಾರಿಗೊಳಿಸಿ SC/ST ಮಕ್ಕಳು ಡಾಕ್ಟರ್ ಆಗದಂತೆ ತಡೆಯಲಾಯಿತು, ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ ಮೀಸಲಾತಿ ಇಲ್ಲದಂತೆ ಮಾಡಲಾಯಿತು, ಈಗ ಅಟ್ರಾಸಿಟಿ ಮೇಲೆ ಕಣ್ಣು ಬಿದ್ದಿದೆ. ಇವೆಲ್ಲವೂ ಪರಿಶಿಷ್ಟರನ್ನ ಸಂವಿಧಾನ ಬರುವ ಮುನ್ನ ಇದ್ದಂತಹ ವ್ಯವಸ್ಥೆಗೆ ಹಿಂದೂಡುವ ಕುತಂತ್ರವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದುರುದ್ದೇಶದಿಂದ ಅಟ್ರಾಸಿಟಿ ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತದೆ ಎಂದು ಹೇಳುವವರು ಇದ್ದಾರೆ. ಅದು ತುಂಬಾ ಬಾಲಿಷವಾದಂತಹ ಮಾತು, ಹಾಗೊಂದು ವೇಳೆ ದುರುಪಯೋಗವಾದರೂ ಅದರ ಸಂಖ್ಯೆ ಬಹಳ ಕಡಿಮೆ. prevention of atrocities act ಅಡಿಯಲ್ಲಿ 2020ರ ಅಂಕಿಅಂಶಗಳನ್ನು ತೆಗೆದುಕೊಂಡರೆ ಕರ್ನಾಟಕದಲ್ಲಿ SC (1263) ST (269) ಕೇಸುಗಳು ಒಟ್ಟು 1,532 ಕೇಸ್‌ಗಳು ದಾಖಲಾಗಿದ್ದವು. ಅವುಗಳಲ್ಲಿ ಶಿಕ್ಷೆ ಆಗಿರುವುದು ಕೇವಲ 18 (SC 17, ST 1) ಜನರಿಗೆ ಮಾತ್ರ. ಈಗ ‘ಉದ್ದೇಶಪೂರ್ವಕ ಜಾತಿನಿಂದನೆ’ ಎನ್ನುವ ಹೊಸ ನಿಯಮವೊಂದು ಜಾರಿಯಾದರೆ ಒಬ್ಬನೇ ಒಬ್ಬ ಅಪರಾಧಿಗೂ ಶಿಕ್ಷೆ ಆಗುವುದಿಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....