Homeಕರ್ನಾಟಕಉದ್ದೇಶಪೂರ್ವಕ ಜಾತಿನಿಂದನೆ ಮಾತ್ರ ಅಪರಾಧವಾ?; ಅಟ್ರಾಸಿಟಿ ಕಾನೂನು ನಿಷ್ಕ್ರಿಯೆ ಮಾಡಲಾಗುತ್ತಿದೆಯೇ?

ಉದ್ದೇಶಪೂರ್ವಕ ಜಾತಿನಿಂದನೆ ಮಾತ್ರ ಅಪರಾಧವಾ?; ಅಟ್ರಾಸಿಟಿ ಕಾನೂನು ನಿಷ್ಕ್ರಿಯೆ ಮಾಡಲಾಗುತ್ತಿದೆಯೇ?

- Advertisement -
- Advertisement -

“ಕೇವಲ ಜಾತಿ ಹಿಡಿದು ಬೈದಾಕ್ಷಣ ಅದನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿಯ ಅಪರಾಧ ಎಂದು ಪರಿಗಣಿಸಲು ಆಗದು. ಉದ್ದೇಶಪೂರ್ವಕ ಮತ್ತು ಅಪಮಾನ ಮಾಡುವುದಕ್ಕಾಗಿಯೇ ಜಾತಿ ನಿಂದನೆ ಮಾಡಿದರಷ್ಟೇ ಅಪರಾಧ” ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ‘ಉದ್ದೇಶಪೂರ್ವಕ’ ಎನ್ನುವ ಪದವನ್ನು ಬಳಸುವ ಮೂಲಕ ನ್ಯಾಯಾಧೀಶರು ಇಡೀ ಅಟ್ರಾಸಿಟಿ ಕಾಯ್ದೆಯನ್ನೇ ನಿಷ್ಟ್ರಿಯೆ ಮಾಡಲು ಹೊರಟಿದ್ದಾರಾ ಎನ್ನುವ ಅನುಮಾನಗಳು ಮೂಡುತ್ತಿವೆ. ದೇಶದಲ್ಲಿ ದಿನಬೆಳಗಾದರೆ ಒಂದಿಲ್ಲೊಂದು ದಲಿತರ ಮೇಲಿನ ದೌರ್ಜನ್ಯಗಳ ಬಗ್ಗೆ ಸುದ್ದಿಗಳನ್ನು ಕೇಳುತ್ತಿದ್ದೆವೆ. ಇದೀಗ ಇಂತಹ ಪದ ಪ್ರಯೋಗದಿಂದ ದೌರ್ಜನ್ಯ ತಡೆಯಲು ಹೇಗೆ ಸಾಧ್ಯ ಎನ್ನುವ ಪ್ರಶ್ನೆ ಮೂಡುತ್ತದೆ.

ದೇಶದಲ್ಲಿ ಸಂವಿಧಾನ ಜಾರಿಯಾಗಿ ಏಳು ದಶಕಗಳೇ ಕಳೆದಿವೆ. ಜಾತಿಯ ತಾರತಮ್ಯ ಇನ್ನೂ ಕಡಿಮೆಯಾಗಿಲ್ಲ. ದೇವರ ಕೋಲು ಮುಟ್ಟಿದ ಎನ್ನುವ ಕಾರಣಕ್ಕೆ ಅಪ್ರಾಪ್ತ ಬಾಲಕನೊರ್ವನಿಗೆ ಸಾರ್ವಜನಿಕವಾಗಿ ಥಳಿಸಿ 60 ಸಾವಿರ ದಂಡ ಕಟ್ಟದಿದ್ದರೆ ಗ್ರಾಮದಿಂದ ಬಹಿಷ್ಕಾರ ಹಾಕುತ್ತೇವೆ ಎನ್ನುವ ಘಟನೆ ಇತ್ತೀಚೆಗೆ ರಾಜ್ಯದಲ್ಲೇ ನಡೆಯಿತು. ಪರೀಕ್ಷೆ ಬರೆದು ತನ್ನ ಗ್ರಾಮಕ್ಕೆ ಹೋಗುವುದಕ್ಕೆ ಬಸ್ಸು ಸಿಗಲಿಲ್ಲ ಎನ್ನುವ ಕಾರಣಕ್ಕೆ ಅಲ್ಲಿಯೇ ಇದ್ದ ಒಂದು ದೇವಸ್ಥಾನದ ಒಳಗೆ ಒಬ್ಬ ದಲಿತ ಯುವಕ ಮಲಗಿಕೊಂಡಿದ್ದ ಎನ್ನುವ ಕಾರಣಕ್ಕೆ ಆತನನ್ನು ಬೆತ್ತಲೆ ಮಾಡಿ ಥಳಿಸಿ ಮೆರವಣಿಗೆ ಮಾಡಿದಂತಹ ಘಟನೆ ಚಾಮರಾಜನಗರದ ಬಳಿ ನಡೆಯಿತು. ಈ ರೀತಿಯ ಘಟನೆಗಳು ಬೆಳಕಿಗೆ ಬರುವುದು ಬೆರಳೆಣಿಕೆಯಷ್ಟು ಮಾತ್ರ, ಬೆಳಕಿಗೆ ಬಾರದೆಯೇ ಮುಚ್ಚಿಹೋಗುವುದು ಸಾವಿರಾರು ಸಂಖ್ಯೆಯಲ್ಲಿವೆ.

ಜಾತಿ ಹಿಡಿದು ಬೈಯ್ದರೆ ಸಾಲದು ಉದ್ದೇಶಪೂರ್ವಕ ಮತ್ತು ಅಪಮಾನ ಮಾಡುವುದಕ್ಕಾಗಿಯೇ ಜಾತಿ ನಿಂದನೆ ಮಾಡಿದರಷ್ಟೇ ಅದನ್ನು ಅಟ್ರಾಸಿಟಿ ಪ್ರಕರಣ ಎಂದು ಕರೆಯುವುದಾದರೆ ಜಾತಿಯ ಹೆಸರಿನಲ್ಲಿ ದೂರ ಇಡುವ, ದೇವಸ್ಥಾನಕ್ಕೆ ನಿಷೇಧ ಹೇರುವ ಅಸಹ್ಯ ಪದ್ದತಿಯ ಬಗ್ಗೆ ನ್ಯಾಯಾಧೀಶರ ಅಭಿಪ್ರಾಯ ಏನಾಗಿರುತ್ತದೆ?

ಇದನ್ನೂ ಓದಿ: ಕೋಲಾರದ ದಲಿತ ಯುವಕನ ಮೇಲಿನ ದೌರ್ಜನ್ಯ: ನಿರ್ದಾಕ್ಷಿಣ್ಯ ಕ್ರಮಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ

ಪ್ರಬಲನೊಬ್ಬ ದುರ್ಬಲನ ಮೇಲೆ ದೌರ್ಜನ್ಯ ನಡೆಸುತ್ತಿದ್ದಾನೆ ಎಂದಾಗ ಆತನ ಮನಸ್ಸಿನಲ್ಲಿ ತಾನು ಸವರ್ಣೀಯ, ಈತ ದಲಿತ ಎನ್ನುವ ಮನಸ್ಥಿತಿಯಲ್ಲಿಯೇ ದೌರ್ಜನ್ಯ ಮಾಡಿರುತ್ತಾನೆ. ಅಲ್ಲಿ ತಾನು ಸವರ್ಣೀಯ ನೀನು ದಲಿತ ಎಂದು ಹೇಳಬೇಕಿಲ್ಲ, ಅದು ಆತ ಅದೇ ಮನಸ್ಥಿಯಲ್ಲಿ ದೌರ್ಜನ್ಯ ನಡೆಸಿರುತ್ತಾನೆ. ಇದು ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿಯ ಅಪರಾಧ ಆಗುವುದಿಲ್ಲವೇ? ಇಲ್ಲಿ ಜಾತಿಯ ಹೆಸರಿಸಿ ದೌರ್ಜನ್ಯ ನಡೆಸಿದರೆ ಮಾತ್ರವೇ ಆ ಕಾಯ್ದೆಯಡಿಯ ಅಪರಾಧ ಆಗುತ್ತದೆಯೇ? ಎನ್ನುವ ಪ್ರಶ್ನೆಗಳು ಮೂಡುತ್ತಿವೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಲೇಖಕ ರುದ್ರು ಪುನೀತ್ .ಆರ್.ಸಿ ಅವರು, “ಉದ್ದೇಶಪೂರ್ವಕವಾಗಿ ಜಾತಿನಿಂದನೆ ಮಾಡಿದ್ದಾರೆ, ಅಸ್ಪೃಶ್ಯತೆ ಆಚರಣೆ ಮಾಡಿದ್ದಾರೆ ಎನ್ನುವುದನ್ನು ಮಾನ್ಯ ನ್ಯಾಯಾಲಯ ಯಾವ ಮಾನದಂಡದಮೇಲೆ ನಿರ್ಧಾರ ಮಾಡುತ್ತೆ ಅನ್ನೋದನ್ನ ತಿಳಿಸಬೇಕಿತ್ತು” ಎಂದರು.

“ಮೀಸಲಾತಿ ಅಂದ್ರೆ ಸಾಕು ಅದು ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮಾತ್ರ ದೊರೆಯುತ್ತಿದೆ, ಅವರಿಗೆ ಸರ್ಕಾರಿ ನೌಕರಿ ಆರಾಮಾಗಿ ಸಿಗುತ್ತದೆ ಎನ್ನುವ ಕೆಟ್ಟ ಅಭಿಪ್ರಾಯವೊಂದು ಸವರ್ಣೀಯರ ತಲೆಯಲ್ಲಿ ಕೂತಿದೆ. ಆದರೆ EWS ಮೂಲಕ ಸವರ್ಣೀಯರಿಗೆ ಮೀಸಲಾತಿ ನೀಡಲಾಯಿತು, PTCL ಕಾಯ್ದೆ ತಿದ್ದುಪಡಿ ಮಾಡಲಾಯಿತು, ಲೇಬರ್ ಕೋಡ್ ಕಾಯ್ದೆಗಳನ್ನು ತಿದ್ದುಪಡಿ ಮಾಡಲಾಯಿತು, SC/ST ಗಳಿಗೆ ಪೋಸ್ಟ್ ಮೆಟ್ರಿಕ್ ಸ್ಕಾಲರ್‌ಶಿಪ್ ಕಡಿತಗೊಳಿಸಲಾಯಿತು, SCP/TSP ಹಣವನ್ನು ದುರ್ಬಳಕೆ ಮಾಡಲು ಸೆಕ್ಷನ್ 7D ಜಾರಿಗೊಳಿಸಲಾಯಿತು, 51 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲಾಯಿತು (ಸರ್ಕಾರಿ ಶಾಲೆಯಲ್ಲಿ 90% SC/ST ವಿದ್ಯಾರ್ಥಿಗಳೆ ಇರುವುದು), 1 ರಿಂದ 8 ನೇ ತರಗತಿಯವರೆಗೆ SC/ST ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನಿಲ್ಲಿಸಲಾಯಿತು, SC/STಗಳಿಗೆ IIT, IIM, AIIMS,NIT,JNU, DUಗಳಲ್ಲಿ ಶುಲ್ಕವನ್ನು ಹತ್ತುಪಟ್ಟು ಹೆಚ್ಚಿಸಲಾಯಿತು, NEET ಜಾರಿಗೊಳಿಸಿ SC/ST ಮಕ್ಕಳು ಡಾಕ್ಟರ್ ಆಗದಂತೆ ತಡೆಯಲಾಯಿತು, ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ ಮೀಸಲಾತಿ ಇಲ್ಲದಂತೆ ಮಾಡಲಾಯಿತು, ಈಗ ಅಟ್ರಾಸಿಟಿ ಮೇಲೆ ಕಣ್ಣು ಬಿದ್ದಿದೆ. ಇವೆಲ್ಲವೂ ಪರಿಶಿಷ್ಟರನ್ನ ಸಂವಿಧಾನ ಬರುವ ಮುನ್ನ ಇದ್ದಂತಹ ವ್ಯವಸ್ಥೆಗೆ ಹಿಂದೂಡುವ ಕುತಂತ್ರವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದುರುದ್ದೇಶದಿಂದ ಅಟ್ರಾಸಿಟಿ ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತದೆ ಎಂದು ಹೇಳುವವರು ಇದ್ದಾರೆ. ಅದು ತುಂಬಾ ಬಾಲಿಷವಾದಂತಹ ಮಾತು, ಹಾಗೊಂದು ವೇಳೆ ದುರುಪಯೋಗವಾದರೂ ಅದರ ಸಂಖ್ಯೆ ಬಹಳ ಕಡಿಮೆ. prevention of atrocities act ಅಡಿಯಲ್ಲಿ 2020ರ ಅಂಕಿಅಂಶಗಳನ್ನು ತೆಗೆದುಕೊಂಡರೆ ಕರ್ನಾಟಕದಲ್ಲಿ SC (1263) ST (269) ಕೇಸುಗಳು ಒಟ್ಟು 1,532 ಕೇಸ್‌ಗಳು ದಾಖಲಾಗಿದ್ದವು. ಅವುಗಳಲ್ಲಿ ಶಿಕ್ಷೆ ಆಗಿರುವುದು ಕೇವಲ 18 (SC 17, ST 1) ಜನರಿಗೆ ಮಾತ್ರ. ಈಗ ‘ಉದ್ದೇಶಪೂರ್ವಕ ಜಾತಿನಿಂದನೆ’ ಎನ್ನುವ ಹೊಸ ನಿಯಮವೊಂದು ಜಾರಿಯಾದರೆ ಒಬ್ಬನೇ ಒಬ್ಬ ಅಪರಾಧಿಗೂ ಶಿಕ್ಷೆ ಆಗುವುದಿಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...