Homeಕರ್ನಾಟಕಈಗ ದೇಶ ಬಿಟ್ಟು ಓಡುವುದು ಅದಾನಿ ಸರದಿಯೇ?: ದಿನೇಶ್‌ ಗೂಂಡೂರಾವ್

ಈಗ ದೇಶ ಬಿಟ್ಟು ಓಡುವುದು ಅದಾನಿ ಸರದಿಯೇ?: ದಿನೇಶ್‌ ಗೂಂಡೂರಾವ್

- Advertisement -
- Advertisement -

ಅದಾನಿ ಹಗರಣ ಹೊರಬಿದ್ದ ಬೆನ್ನಲ್ಲೇ ಕಾಂಗ್ರೆಸ್‌ ಪ್ರಶ್ನೆಗಳ ಅಭಿಯಾನ ಆರಂಭಿಸಿದ್ದು, “ಈಗ ದೇಶ ಬಿಟ್ಟು ಓಡುವುದು ಅದಾನಿ ಸರಿದಿಯೇ?” ಎಂದು ಕಾಂಗ್ರೆಸ್ ನಾಯಕ ದಿನೇಶ್ ಗೂಂಡೂರಾವ್ ಪ್ರಶ್ನಿಸಿದ್ದಾರೆ.

ಟ್ವಿಟರ್‌ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, “ಭಾಗ್ ಮಿಲ್ಕಾ ಭಾಗ್ ಎಂಬಂತೆ‌ ಮೋದಿ ಆಡಳಿತದಲ್ಲಿ ಮೆಹುಲ್ ಚೋಕ್ಸಿ, ನೀರವ್ ಮೋದಿ, ಲಲಿತ್ ಮೋದಿ, ಮಲ್ಯ ಸೇರಿದಂತೆ ಸಾರ್ವಜನಿಕರ ಹಣ ಕೊಳ್ಳೆ ಹೊಡೆದವರು ಓಡಿ ಹೋಗಿದ್ದಾರೆ. ಈಗ ದೇಶ ಬಿಟ್ಟು ಓಡುವುದು ಅದಾನಿ ಸರದಿಯೇ?” ಎಂದು ಕೇಳಿದ್ದಾರೆ.

“ಅದಾನಿ ಸಮೂಹದಲ್ಲಿ ಹೂಡಿಕೆ ಮಾಡಿದ್ದ LICಯ 23 ಸಾವಿರ ಕೋಟಿ ರೂ., SBI ಕೊಟ್ಟ ಸಾವಿರಾರು ಕೋಟಿ ರೂ. ಸಾಲಕ್ಕೆ ಪಂಗನಾಮ ಗ್ಯಾರಂಟಿಯೇ?” ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

“ಅದಾನಿ ಸಮೂಹದ ಮೆಗಾ ಹಗರಣದ ಬಗ್ಗೆ ಪ್ರಧಾನಿ ಮೋದಿಯವರು ಮೌನವಾಗಿರುವುದೇಕೆ? ಅದಾನಿ ವಂಚನೆಯ ಬಗ್ಗೆ ಮಾತಾಡಲು‌ ಮೋದಿಯವರಿಗೆ ಸ್ನೇಹ ಅಡ್ಡಿಯಾಗುತ್ತಿದೆಯೇ?” ಎಂದು ಕುಟುಕಿದ್ದಾರೆ.

“ಸ್ನೇಹಕ್ಕಾಗಿ ದೇಶದ ಲಕ್ಷಾಂತರ ಜನರ ಹೂಡಿಕೆ ಹಣವನ್ನು ಅಪಾಯದಲ್ಲಿಡುತ್ತಿದ್ದಾರೆಯೇ ಮೋದಿ? ಪ್ರಧಾನಿ ಮೋದಿಯವರಿಗೆ ದೇಶದ ಜನರ ಹಿತ ಮುಖ್ಯವೋ ಅಥವಾ ಗೌತಮ್ ಅದಾನಿ ಗೆಳೆತನ ಮುಖ್ಯವೋ?” ಎಂದು ಹರಿಹಾಯ್ದಿದ್ದಾರೆ.

“ಆರ್ಥಿಕ ಅಪರಾಧಗಳ ಬಗ್ಗೆ ತಮ್ಮದು ಝೀರೋ ಟಾಲರೆನ್ಸ್ ನಿಲುವು ಎಂದು ಮೋದಿಯವರು ಹೇಳುತ್ತಾರೆ. ಆದರೆ ಅದಾನಿ ಎಸಗಿದ ಆರ್ಥಿಕ ಅಪರಾಧದ ಬಗ್ಗೆ ಮೋದಿಯವರ ವ್ಯಾಖ್ಯಾನವೇನು? ED, CBI ಮತ್ತು IT ಸಂಸ್ಥೆಗಳು ಕೇವಲ ರಾಜಕೀಯ ವಿರೋಧಿಗಳ ವಿರುದ್ಧ ತನಿಖೆ ಮಾಡುವ ಸಂಸ್ಥೆಗಳೆ? ಮೋದಿಯವರ ಅತ್ಯಾಪ್ತರಿಗೆ ಈ ತನಿಖಾ ಸಂಸ್ಥೆಗಳಿಂದ ವಿನಾಯಿತಿ ಇದೆಯೇ?” ಎಂದಿದ್ದಾರೆ.

“ಸಾರ್ವಜನಿಕರ ಜೀವನ ಭದ್ರತೆಗಾಗಿ ಕಾಂಗ್ರೆಸ್‌ 1956ರಲ್ಲಿ LIC ಸ್ಥಾಪಿಸಿತ್ತು. 2021ರವರೆಗೆ LICಯಲ್ಲಿದ್ದ ಜನರ ಹಣ ಸುಭದ್ರವಾಗಿತ್ತು. ಆದರೆ 2021ರಲ್ಲಿ ಈ ಸರ್ಕಾರ LIC ಹಣವನ್ನು ಷೇರುಪೇಟೆಯಲ್ಲಿ ಹೂಡಿಕೆ ಮಾಡುವ ನಿರ್ಧಾರ ಮಾಡಿತ್ತು. LIC‌ ಹಣವನ್ನು ಷೇರುಪೇಟೆಯಲ್ಲಿ ಹೂಡಿಕೆ ಮಾಡುವ ನಿರ್ಧಾರ ಮಾಡಿದ್ದು ಯಾರ ಅನುಕೂಲಕ್ಕಾಗಿ ಮೋದಿಯವರೆ?” ಎಂದು ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Adani company is running and functioning as it was. No problem for his company business. His company shares has gone down it will not give problems to company. Why we are giving preference to other contries organisation views.
    Our contry people,leaders should not support this research reports. LIC invested its .1% and SBI has given loan for the business and compan net worth. When company is running as usual then what more we want

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...