Homeಕರ್ನಾಟಕಈಗ ದೇಶ ಬಿಟ್ಟು ಓಡುವುದು ಅದಾನಿ ಸರದಿಯೇ?: ದಿನೇಶ್‌ ಗೂಂಡೂರಾವ್

ಈಗ ದೇಶ ಬಿಟ್ಟು ಓಡುವುದು ಅದಾನಿ ಸರದಿಯೇ?: ದಿನೇಶ್‌ ಗೂಂಡೂರಾವ್

- Advertisement -
- Advertisement -

ಅದಾನಿ ಹಗರಣ ಹೊರಬಿದ್ದ ಬೆನ್ನಲ್ಲೇ ಕಾಂಗ್ರೆಸ್‌ ಪ್ರಶ್ನೆಗಳ ಅಭಿಯಾನ ಆರಂಭಿಸಿದ್ದು, “ಈಗ ದೇಶ ಬಿಟ್ಟು ಓಡುವುದು ಅದಾನಿ ಸರಿದಿಯೇ?” ಎಂದು ಕಾಂಗ್ರೆಸ್ ನಾಯಕ ದಿನೇಶ್ ಗೂಂಡೂರಾವ್ ಪ್ರಶ್ನಿಸಿದ್ದಾರೆ.

ಟ್ವಿಟರ್‌ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, “ಭಾಗ್ ಮಿಲ್ಕಾ ಭಾಗ್ ಎಂಬಂತೆ‌ ಮೋದಿ ಆಡಳಿತದಲ್ಲಿ ಮೆಹುಲ್ ಚೋಕ್ಸಿ, ನೀರವ್ ಮೋದಿ, ಲಲಿತ್ ಮೋದಿ, ಮಲ್ಯ ಸೇರಿದಂತೆ ಸಾರ್ವಜನಿಕರ ಹಣ ಕೊಳ್ಳೆ ಹೊಡೆದವರು ಓಡಿ ಹೋಗಿದ್ದಾರೆ. ಈಗ ದೇಶ ಬಿಟ್ಟು ಓಡುವುದು ಅದಾನಿ ಸರದಿಯೇ?” ಎಂದು ಕೇಳಿದ್ದಾರೆ.

“ಅದಾನಿ ಸಮೂಹದಲ್ಲಿ ಹೂಡಿಕೆ ಮಾಡಿದ್ದ LICಯ 23 ಸಾವಿರ ಕೋಟಿ ರೂ., SBI ಕೊಟ್ಟ ಸಾವಿರಾರು ಕೋಟಿ ರೂ. ಸಾಲಕ್ಕೆ ಪಂಗನಾಮ ಗ್ಯಾರಂಟಿಯೇ?” ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

“ಅದಾನಿ ಸಮೂಹದ ಮೆಗಾ ಹಗರಣದ ಬಗ್ಗೆ ಪ್ರಧಾನಿ ಮೋದಿಯವರು ಮೌನವಾಗಿರುವುದೇಕೆ? ಅದಾನಿ ವಂಚನೆಯ ಬಗ್ಗೆ ಮಾತಾಡಲು‌ ಮೋದಿಯವರಿಗೆ ಸ್ನೇಹ ಅಡ್ಡಿಯಾಗುತ್ತಿದೆಯೇ?” ಎಂದು ಕುಟುಕಿದ್ದಾರೆ.

“ಸ್ನೇಹಕ್ಕಾಗಿ ದೇಶದ ಲಕ್ಷಾಂತರ ಜನರ ಹೂಡಿಕೆ ಹಣವನ್ನು ಅಪಾಯದಲ್ಲಿಡುತ್ತಿದ್ದಾರೆಯೇ ಮೋದಿ? ಪ್ರಧಾನಿ ಮೋದಿಯವರಿಗೆ ದೇಶದ ಜನರ ಹಿತ ಮುಖ್ಯವೋ ಅಥವಾ ಗೌತಮ್ ಅದಾನಿ ಗೆಳೆತನ ಮುಖ್ಯವೋ?” ಎಂದು ಹರಿಹಾಯ್ದಿದ್ದಾರೆ.

“ಆರ್ಥಿಕ ಅಪರಾಧಗಳ ಬಗ್ಗೆ ತಮ್ಮದು ಝೀರೋ ಟಾಲರೆನ್ಸ್ ನಿಲುವು ಎಂದು ಮೋದಿಯವರು ಹೇಳುತ್ತಾರೆ. ಆದರೆ ಅದಾನಿ ಎಸಗಿದ ಆರ್ಥಿಕ ಅಪರಾಧದ ಬಗ್ಗೆ ಮೋದಿಯವರ ವ್ಯಾಖ್ಯಾನವೇನು? ED, CBI ಮತ್ತು IT ಸಂಸ್ಥೆಗಳು ಕೇವಲ ರಾಜಕೀಯ ವಿರೋಧಿಗಳ ವಿರುದ್ಧ ತನಿಖೆ ಮಾಡುವ ಸಂಸ್ಥೆಗಳೆ? ಮೋದಿಯವರ ಅತ್ಯಾಪ್ತರಿಗೆ ಈ ತನಿಖಾ ಸಂಸ್ಥೆಗಳಿಂದ ವಿನಾಯಿತಿ ಇದೆಯೇ?” ಎಂದಿದ್ದಾರೆ.

“ಸಾರ್ವಜನಿಕರ ಜೀವನ ಭದ್ರತೆಗಾಗಿ ಕಾಂಗ್ರೆಸ್‌ 1956ರಲ್ಲಿ LIC ಸ್ಥಾಪಿಸಿತ್ತು. 2021ರವರೆಗೆ LICಯಲ್ಲಿದ್ದ ಜನರ ಹಣ ಸುಭದ್ರವಾಗಿತ್ತು. ಆದರೆ 2021ರಲ್ಲಿ ಈ ಸರ್ಕಾರ LIC ಹಣವನ್ನು ಷೇರುಪೇಟೆಯಲ್ಲಿ ಹೂಡಿಕೆ ಮಾಡುವ ನಿರ್ಧಾರ ಮಾಡಿತ್ತು. LIC‌ ಹಣವನ್ನು ಷೇರುಪೇಟೆಯಲ್ಲಿ ಹೂಡಿಕೆ ಮಾಡುವ ನಿರ್ಧಾರ ಮಾಡಿದ್ದು ಯಾರ ಅನುಕೂಲಕ್ಕಾಗಿ ಮೋದಿಯವರೆ?” ಎಂದು ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Adani company is running and functioning as it was. No problem for his company business. His company shares has gone down it will not give problems to company. Why we are giving preference to other contries organisation views.
    Our contry people,leaders should not support this research reports. LIC invested its .1% and SBI has given loan for the business and compan net worth. When company is running as usual then what more we want

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...