Homeಕರ್ನಾಟಕಈಗ ದೇಶ ಬಿಟ್ಟು ಓಡುವುದು ಅದಾನಿ ಸರದಿಯೇ?: ದಿನೇಶ್‌ ಗೂಂಡೂರಾವ್

ಈಗ ದೇಶ ಬಿಟ್ಟು ಓಡುವುದು ಅದಾನಿ ಸರದಿಯೇ?: ದಿನೇಶ್‌ ಗೂಂಡೂರಾವ್

- Advertisement -
- Advertisement -

ಅದಾನಿ ಹಗರಣ ಹೊರಬಿದ್ದ ಬೆನ್ನಲ್ಲೇ ಕಾಂಗ್ರೆಸ್‌ ಪ್ರಶ್ನೆಗಳ ಅಭಿಯಾನ ಆರಂಭಿಸಿದ್ದು, “ಈಗ ದೇಶ ಬಿಟ್ಟು ಓಡುವುದು ಅದಾನಿ ಸರಿದಿಯೇ?” ಎಂದು ಕಾಂಗ್ರೆಸ್ ನಾಯಕ ದಿನೇಶ್ ಗೂಂಡೂರಾವ್ ಪ್ರಶ್ನಿಸಿದ್ದಾರೆ.

ಟ್ವಿಟರ್‌ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, “ಭಾಗ್ ಮಿಲ್ಕಾ ಭಾಗ್ ಎಂಬಂತೆ‌ ಮೋದಿ ಆಡಳಿತದಲ್ಲಿ ಮೆಹುಲ್ ಚೋಕ್ಸಿ, ನೀರವ್ ಮೋದಿ, ಲಲಿತ್ ಮೋದಿ, ಮಲ್ಯ ಸೇರಿದಂತೆ ಸಾರ್ವಜನಿಕರ ಹಣ ಕೊಳ್ಳೆ ಹೊಡೆದವರು ಓಡಿ ಹೋಗಿದ್ದಾರೆ. ಈಗ ದೇಶ ಬಿಟ್ಟು ಓಡುವುದು ಅದಾನಿ ಸರದಿಯೇ?” ಎಂದು ಕೇಳಿದ್ದಾರೆ.

“ಅದಾನಿ ಸಮೂಹದಲ್ಲಿ ಹೂಡಿಕೆ ಮಾಡಿದ್ದ LICಯ 23 ಸಾವಿರ ಕೋಟಿ ರೂ., SBI ಕೊಟ್ಟ ಸಾವಿರಾರು ಕೋಟಿ ರೂ. ಸಾಲಕ್ಕೆ ಪಂಗನಾಮ ಗ್ಯಾರಂಟಿಯೇ?” ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

“ಅದಾನಿ ಸಮೂಹದ ಮೆಗಾ ಹಗರಣದ ಬಗ್ಗೆ ಪ್ರಧಾನಿ ಮೋದಿಯವರು ಮೌನವಾಗಿರುವುದೇಕೆ? ಅದಾನಿ ವಂಚನೆಯ ಬಗ್ಗೆ ಮಾತಾಡಲು‌ ಮೋದಿಯವರಿಗೆ ಸ್ನೇಹ ಅಡ್ಡಿಯಾಗುತ್ತಿದೆಯೇ?” ಎಂದು ಕುಟುಕಿದ್ದಾರೆ.

“ಸ್ನೇಹಕ್ಕಾಗಿ ದೇಶದ ಲಕ್ಷಾಂತರ ಜನರ ಹೂಡಿಕೆ ಹಣವನ್ನು ಅಪಾಯದಲ್ಲಿಡುತ್ತಿದ್ದಾರೆಯೇ ಮೋದಿ? ಪ್ರಧಾನಿ ಮೋದಿಯವರಿಗೆ ದೇಶದ ಜನರ ಹಿತ ಮುಖ್ಯವೋ ಅಥವಾ ಗೌತಮ್ ಅದಾನಿ ಗೆಳೆತನ ಮುಖ್ಯವೋ?” ಎಂದು ಹರಿಹಾಯ್ದಿದ್ದಾರೆ.

“ಆರ್ಥಿಕ ಅಪರಾಧಗಳ ಬಗ್ಗೆ ತಮ್ಮದು ಝೀರೋ ಟಾಲರೆನ್ಸ್ ನಿಲುವು ಎಂದು ಮೋದಿಯವರು ಹೇಳುತ್ತಾರೆ. ಆದರೆ ಅದಾನಿ ಎಸಗಿದ ಆರ್ಥಿಕ ಅಪರಾಧದ ಬಗ್ಗೆ ಮೋದಿಯವರ ವ್ಯಾಖ್ಯಾನವೇನು? ED, CBI ಮತ್ತು IT ಸಂಸ್ಥೆಗಳು ಕೇವಲ ರಾಜಕೀಯ ವಿರೋಧಿಗಳ ವಿರುದ್ಧ ತನಿಖೆ ಮಾಡುವ ಸಂಸ್ಥೆಗಳೆ? ಮೋದಿಯವರ ಅತ್ಯಾಪ್ತರಿಗೆ ಈ ತನಿಖಾ ಸಂಸ್ಥೆಗಳಿಂದ ವಿನಾಯಿತಿ ಇದೆಯೇ?” ಎಂದಿದ್ದಾರೆ.

“ಸಾರ್ವಜನಿಕರ ಜೀವನ ಭದ್ರತೆಗಾಗಿ ಕಾಂಗ್ರೆಸ್‌ 1956ರಲ್ಲಿ LIC ಸ್ಥಾಪಿಸಿತ್ತು. 2021ರವರೆಗೆ LICಯಲ್ಲಿದ್ದ ಜನರ ಹಣ ಸುಭದ್ರವಾಗಿತ್ತು. ಆದರೆ 2021ರಲ್ಲಿ ಈ ಸರ್ಕಾರ LIC ಹಣವನ್ನು ಷೇರುಪೇಟೆಯಲ್ಲಿ ಹೂಡಿಕೆ ಮಾಡುವ ನಿರ್ಧಾರ ಮಾಡಿತ್ತು. LIC‌ ಹಣವನ್ನು ಷೇರುಪೇಟೆಯಲ್ಲಿ ಹೂಡಿಕೆ ಮಾಡುವ ನಿರ್ಧಾರ ಮಾಡಿದ್ದು ಯಾರ ಅನುಕೂಲಕ್ಕಾಗಿ ಮೋದಿಯವರೆ?” ಎಂದು ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Adani company is running and functioning as it was. No problem for his company business. His company shares has gone down it will not give problems to company. Why we are giving preference to other contries organisation views.
    Our contry people,leaders should not support this research reports. LIC invested its .1% and SBI has given loan for the business and compan net worth. When company is running as usual then what more we want

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...