Homeಮುಖಪುಟಜ್ಯೋತಿರಾಧಿತ್ಯ ಸಿಂಧಿಯಾರನ್ನು ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವುದು ಶ್ರೇಯವೇ?

ಜ್ಯೋತಿರಾಧಿತ್ಯ ಸಿಂಧಿಯಾರನ್ನು ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವುದು ಶ್ರೇಯವೇ?

- Advertisement -
- Advertisement -

ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಮೂಲಕ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚನೆಗೆ ಕಾರಣವಾಗಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಮತ್ತೆ ಕಾಂಗ್ರೆಸ್‌ಗೆ ಮರಳುವ ಸುದ್ಧಿ ಈಗ ಓಪನ್ ಸೀಕ್ರೆಟ್.

ಆದರೆ ಕಾಂಗ್ರೆಸ್ ಯಾವ ಕಾರಣಕ್ಕೂ ಸಿಂಧಿಯಾರನ್ನು ಮರಳಿ ಮನೆ ಸೇರಿಸದಿರುವುದು ಕಾಂಗ್ರೆಸ್ ಪಾಲಿಗೆ ಒಳಿತು.

ಕಮಲ್ ನಾಥ್ ಬಹಳ ಸಜ್ಜನ ರಾಜಕಾರಣಿಯೆಂದೇನೂ ನಾನು ಹೇಳಲಾರೆ. ಆದರೆ ಕಳೆದ ಅಸೆಂಬ್ಲಿ ಚುನಾವಣೆಯ ಬಳಿಕ ಕಮಲ್‌ನಾಥ್‌ಗೆ ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಹುದ್ದೆ ನೀಡಿದ್ದು ಅವರ ಸೀನಿಯಾರಿಟಿಯ ದೃಷ್ಟಿಯಿಂದ ಮತ್ತು ಪಕ್ಷಕ್ಕೆ ಅವರು ನೀಡಿದ ಸೇವೆಯ ದೃಷ್ಟಿಯಿಂದ ಅತ್ಯಂತ ಸೂಕ್ತ ಆಯ್ಕೆಯಾಗಿತ್ತು. ಸಿಂಧಿಯಾ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಅತೀ ಮುಖ್ಯ ಕಾರಣವೇ ತನಗೆ ಮುಖ್ಯಮಂತ್ರಿ ಪಟ್ಟ ನೀಡದಿದ್ದುದು.

ಕಮಲ್‌ನಾಥ್ ಜ್ಯೋತಿರಾಧಿತ್ಯರ ಅಪ್ಪ ಮಾಧವ್ ರಾವ್ ಅವರ ಸಮಕಾಲೀನ ನಾಯಕ. ಅವರು ರಾಜಕೀಯ ಬದುಕಿನ ಅರ್ಧದಷ್ಟು ರಾಜಕೀಯ ಅನುಭವವೂ ಜ್ಯೋತಿರಾಧಿತ್ಯರಿಗಿಲ್ಲ. ಕಾಂಗ್ರೆಸ್ ದೇಶದೆಲ್ಲೆಡೆ ಸೋತು ನಿರಾಶೆಯ ಛಾಯೆಯಲ್ಲಿದ್ದಾಗ ಮಧ್ಯಪ್ರದೇಶದಂತಹ ದೊಡ್ಡ ರಾಜ್ಯದಲ್ಲಿ ಅಧಿಕಾರ ಹಿಡಿದುದು ಕಾಂಗ್ರೆಸ್ ಪಾಲಿಗೆ ಕತ್ತಲ ಕಾಲದ ಕೋಲ್ಮಿಂಚಾಗಿತ್ತೆಂದರೂ ಸರಿಯೇ. ಅಷ್ಟು ಕಷ್ಟಪಟ್ಟು ಬಿಜೆಪಿಯನ್ನು ಉರುಳಿಸಿ ಅಧಿಕಾರ ಹಿಡಿದಿರುವಾಗ ತನ್ನ ಅಧಿಕಾರ ದಾಹಕ್ಕಾಗಿ ಸರಕಾರವನ್ನು ಉರುಳಿಸಿದ್ದು ಅಕ್ಷಮ್ಯ. ಬಿಜೆಪಿ ಅನೈತಿಕ ಮಾರ್ಗದಲ್ಲಿ  ಅಧಿಕಾರಕ್ಕೇರಲು ಬಾಗಿಲು ತೆರೆದುಕೊಟ್ಟದ್ದೇ ಜ್ಯೋತಿರಾಧಿತ್ಯ.

ಇದೊಂದು ಅವಧಿಗೆ ಕಮಲ್‌ನಾಥ್‌ರಿಗೆ ಒಳ್ಳೆಯ ಆಡಳಿತ ನೀಡಲು ಅವಕಾಶ ಮಾಡಿಕೊಟ್ಟಿದ್ದರೆ ಜ್ಯೋತಿರಾಧಿತ್ಯ ಕಳೆದುಕೊಳ್ಳುವುದೇನೂ‌ ಇರಲಿಲ್ಲ.  ನಾಳೆ ಇನ್ನೊಮ್ಮೆ  ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ನ ಸಹಜ ಆಯ್ಕೆ ಜ್ಯೋತಿರಾಧಿತ್ಯ ಎಂಬ ಬಗ್ಗೆ ಖುದ್ದು ಜ್ಯೋತಿರಾಧಿತ್ಯರಿಗೂ ಗೊತ್ತಿತ್ತು. ಅದಾಗ್ಯೂ ದಿಡೀರ್ ಮುಖ್ಯಮಂತ್ರಿಯಾಗಬೇಕೆಂಬ ದುರಾಶೆಗೆ ಪಕ್ಷದ ಬಿಡಿ ಸ್ವತಃ ತನ್ನ ಭವಿಷ್ಯದ ಬಗ್ಗೆಯೂ ಯೋಚಿಸದ ಜ್ಯೋತಿರಾಧಿತ್ಯರನ್ನು ಕಾಂಗ್ರೆಸ್ ಮತ್ತೆ ಯಾವ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳದಿರುವುದು ಕಾಂಗ್ರೆಸ್ ಪಾಲಿಗೆ ಅತ್ಯಂತ ಕ್ಷೇಮಕರ.

ಬಿಜೆಪಿಯಲ್ಲಿ ಉಸಿರುಗಟ್ಟಿಸುವ ವಾತಾವರಣವಿರಬಹುದು, ಆದರೆ ಜ್ಯೋತಿರಾಧಿತ್ಯ ಮತ್ತೆ ಮಾತೃಪಕ್ಷಕ್ಕೆ ಮರಳುವ ಬಗ್ಗೆ ಯೋಚಿಸಲು ಅದೊಂದೇ ಕಾರಣ ಖಂಡಿತಾ ಅಲ್ಲ. ಬಿಜೆಪಿ ಕೊರೋನಾದ ವಿಷಮಕಾಲದಲ್ಲಿ ಮಾಡಿದ ಚೀಪ್  ಪಾಲಿಟಿಕ್ಸ್‌‌ನಿಂದಾಗಿ ಮತ್ತು ಈಗಿನದು ಜನತೆಯ ಆಯ್ಕೆಯ ಸರಕಾರವಲ್ಲದಿರುವುದರಿಂದ ಅದು ಮುಂದಿನ ಅವಧಿಗೆ ಈಗ ಪಡೆದ ಅಧಿಕಾರ ಉಳಿಸಿಕೊಳ್ಳುವುದು ಬಹಳ ಕಷ್ಟ.

ಈಗಿಂದೀಗಲೇ ಕಾಂಗ್ರೆಸ್ ಸೇರಿದರೆ ಮುಂದೆ ತನ್ನ ಸ್ಥಾನವನ್ನು ಭದ್ರಗೊಳಿಸಬಹುದೆಂಬ ದೂರಾಲೋಚನೆಯೇ ಜ್ಯೋತಿರಾಧಿತ್ಯರನ್ನು ಇಂತಹ ನಿರ್ಧಾರಕ್ಕಿಳಿಸಿದೆ. ಅವರನ್ನು ಮತ್ತೆ ಸೇರಿಸಿಕೊಳ್ಳುವುದರಿಂದ ನಿಷ್ಟಾವಂತ ಕಾಂಗ್ರೆಸಿಗರಿಗೆ ಅನ್ಯಾಯ ಮಾಡಿದಂತಾಗಬಹುದು. ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿದರೂ ಅನ್ಯಾಯವಾಗಿ ಅವರು ಕೈ ತಪ್ಪಿಸಿದ ಅಧಿಕಾರ ಮತ್ತೆ ದಕ್ಕದು. ಅವರು ತನ್ನೊಂದಿಗೆ ಬಿಜೆಪಿಗೆ ಕೊಂಡೊಯ್ದ ಎಲ್ಲಾ ಶಾಸಕರೂ ಮತ್ತೆ ಕಾಂಗ್ರೆಸ್‌ಗೆ ಮರಳುವ ಸಾಧ್ಯತೆ ತೀರಾ ಕಡಿಮೆ. ಜ್ಯೋತಿರಾಧಿತ್ಯ ಕಾಂಗ್ರೆಸ್ ತೊರೆದಿದ್ದೂ ಅಧಿಕಾರ ಮೋಹದಿಂದ, ಮತ್ತೆ ಮರಳುತ್ತಿರುವುದೂ ಭವಿಷ್ಯದ ಅಧಿಕಾರ ಮೋಹಕ್ಕಾಗಿಯಷ್ಟೆ.

ನಾಳೆ ಅವರು ಮತ್ತೆ ಇನ್ನೇನಾದರೂ ಕಾರಣ ಮುಂದಿಟ್ಟು ಪಕ್ಷವನ್ನು ಬ್ಲ್ಯಾಕ್ ಮೇಲ್ ಮಾಡಲಾರರು ಎನ್ನಲು ಯಾವ ಖಚಿತತೆಯೂ ಇಲ್ಲ.

ಕಳೆದ ಪಾರ್ಲಿಮೆಂಟ್ ಚುನಾವಣೆಯಲ್ಲಿ ಲಕ್ಷಕ್ಕೂ ಅಧಿಕ ಮತಗಳಿಂದ ಜ್ಯೋತಿರಾಧಿತ್ಯ ಸೋತಿರುವುದು ಅವರು ತನ್ನ ಕ್ಷೇತ್ರದಲ್ಲೇ ಹಿಂದಿನಷ್ಟು ಪ್ರಭಾವಿಯಾಗುಳಿದಿಲ್ಲ ಎನ್ನುವುದನ್ನು ತೋರಿಸುತ್ತದೆ. ರಾಜ ಕುಟುಂಬ ಎನ್ನುವ ಕಾರಣಕ್ಕೆ ಅವರಿಗೆ ಮಣೆ ಹಾಕುವುದು ಪ್ರಜಾಪ್ರಭುತ್ವ ಕಾಲದ ಅತ್ಯಂತ ಅಸಹ್ಯ ನಡೆಯಾಗಬಹುದು.

ಜ್ಯೋತಿರಾಧಿತ್ಯ  ಮಾಧವ ರಾವ್ ಸಿಂಧಿಯಾ ಅವರ ಮಗನಲ್ಲದಿರುತ್ತಿದ್ದರೆ ಅವರು ರಾಜಕೀಯದಲ್ಲಿ ಏನೂ‌ ಆಗಿರುತ್ತಿರಲಿಲ್ಲ. ಅಷ್ಟಕ್ಕೂ ಅವರು ಇತರ ನಾಯಕರಂತೆ ಪಕ್ಷಕ್ಕಾಗಿ ದುಡಿದು ಮೇಲೇರಿದವರಲ್ಲ. ಅವರಪ್ಪನ ದಿಡೀರ್ ಸಾವು ಅವರನ್ನು ಉತ್ತರಾಧಿಕಾರಿಯಾಗಿಸಿತ್ತು. ರಾಹುಲ್ ಗಾಂಧಿಯವರು ಜ್ಯೋತಿರಾಧಿತ್ಯರನ್ನು ತನ್ನ ಆಪ್ತ ಬಳಗದಲ್ಲಿಟ್ಟುಕೊಂಡಿದ್ದರೂ ಅವರು ಪಕ್ಷದ ನಾಯಕತ್ವಕ್ಕೆ ನಿಷ್ಟೆ ತೋರಿಸದೇ ಬಿಜೆಪಿಗೆ ಹಾರಿ ಇತರ್ಯಾವುದೇ ನಾಯಕರು ಪಕ್ಷ ತೊರೆದು ಮಾಡಿರುವುದಕ್ಕಿಂತ ಅತೀ ಹೆಚ್ಚು ಹಾನಿಯನ್ನೂ ಪಕ್ಷಕ್ಕೆ ಮಾಡಿದರು.

ಜ್ಯೋತಿರಾಧಿತ್ಯ ಮರುಸೇರ್ಪಡೆಯಿಂದ ಸದ್ಯಕ್ಕೆ ಬಿಜೆಪಿಗೆ ಟಾಂಗ್ ಕೊಡಲು ಕಾಂಗ್ರೆಸ್‌ಗೆ ಅಸ್ತ್ರ‌ ಸಿಗಬಹುದೇ ಹೊರತು ಹೆಚ್ಚಿನ ಲಾಭವೇನೂ ಆಗದು. ಮತ್ತು ಅದೊಂದು ಕಾಂಗ್ರೆಸ್‌ನೊಳಗೆ ಕೆಟ್ಟ ಬೆಳವಣಿಗೆಗೆ ನಾಂದಿಯಾಗಬಹುದು..


ಇದನ್ನೂ ಓದಿ: ಮತ್ತೆ ವಿಚಾರಣೆಗೆ ಹಾಜರಾಗುವಂತೆ ಅರ್ನಾಬ್‌ಗೆ ನೋಟಿಸ್‌ ನೀಡಿದ ಮುಂಬೈ ಪೊಲೀಸ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...