Homeಮುಖಪುಟಜ್ಯೋತಿರಾಧಿತ್ಯ ಸಿಂಧಿಯಾರನ್ನು ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವುದು ಶ್ರೇಯವೇ?

ಜ್ಯೋತಿರಾಧಿತ್ಯ ಸಿಂಧಿಯಾರನ್ನು ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವುದು ಶ್ರೇಯವೇ?

- Advertisement -
- Advertisement -

ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಮೂಲಕ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚನೆಗೆ ಕಾರಣವಾಗಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಮತ್ತೆ ಕಾಂಗ್ರೆಸ್‌ಗೆ ಮರಳುವ ಸುದ್ಧಿ ಈಗ ಓಪನ್ ಸೀಕ್ರೆಟ್.

ಆದರೆ ಕಾಂಗ್ರೆಸ್ ಯಾವ ಕಾರಣಕ್ಕೂ ಸಿಂಧಿಯಾರನ್ನು ಮರಳಿ ಮನೆ ಸೇರಿಸದಿರುವುದು ಕಾಂಗ್ರೆಸ್ ಪಾಲಿಗೆ ಒಳಿತು.

ಕಮಲ್ ನಾಥ್ ಬಹಳ ಸಜ್ಜನ ರಾಜಕಾರಣಿಯೆಂದೇನೂ ನಾನು ಹೇಳಲಾರೆ. ಆದರೆ ಕಳೆದ ಅಸೆಂಬ್ಲಿ ಚುನಾವಣೆಯ ಬಳಿಕ ಕಮಲ್‌ನಾಥ್‌ಗೆ ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಹುದ್ದೆ ನೀಡಿದ್ದು ಅವರ ಸೀನಿಯಾರಿಟಿಯ ದೃಷ್ಟಿಯಿಂದ ಮತ್ತು ಪಕ್ಷಕ್ಕೆ ಅವರು ನೀಡಿದ ಸೇವೆಯ ದೃಷ್ಟಿಯಿಂದ ಅತ್ಯಂತ ಸೂಕ್ತ ಆಯ್ಕೆಯಾಗಿತ್ತು. ಸಿಂಧಿಯಾ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಅತೀ ಮುಖ್ಯ ಕಾರಣವೇ ತನಗೆ ಮುಖ್ಯಮಂತ್ರಿ ಪಟ್ಟ ನೀಡದಿದ್ದುದು.

ಕಮಲ್‌ನಾಥ್ ಜ್ಯೋತಿರಾಧಿತ್ಯರ ಅಪ್ಪ ಮಾಧವ್ ರಾವ್ ಅವರ ಸಮಕಾಲೀನ ನಾಯಕ. ಅವರು ರಾಜಕೀಯ ಬದುಕಿನ ಅರ್ಧದಷ್ಟು ರಾಜಕೀಯ ಅನುಭವವೂ ಜ್ಯೋತಿರಾಧಿತ್ಯರಿಗಿಲ್ಲ. ಕಾಂಗ್ರೆಸ್ ದೇಶದೆಲ್ಲೆಡೆ ಸೋತು ನಿರಾಶೆಯ ಛಾಯೆಯಲ್ಲಿದ್ದಾಗ ಮಧ್ಯಪ್ರದೇಶದಂತಹ ದೊಡ್ಡ ರಾಜ್ಯದಲ್ಲಿ ಅಧಿಕಾರ ಹಿಡಿದುದು ಕಾಂಗ್ರೆಸ್ ಪಾಲಿಗೆ ಕತ್ತಲ ಕಾಲದ ಕೋಲ್ಮಿಂಚಾಗಿತ್ತೆಂದರೂ ಸರಿಯೇ. ಅಷ್ಟು ಕಷ್ಟಪಟ್ಟು ಬಿಜೆಪಿಯನ್ನು ಉರುಳಿಸಿ ಅಧಿಕಾರ ಹಿಡಿದಿರುವಾಗ ತನ್ನ ಅಧಿಕಾರ ದಾಹಕ್ಕಾಗಿ ಸರಕಾರವನ್ನು ಉರುಳಿಸಿದ್ದು ಅಕ್ಷಮ್ಯ. ಬಿಜೆಪಿ ಅನೈತಿಕ ಮಾರ್ಗದಲ್ಲಿ  ಅಧಿಕಾರಕ್ಕೇರಲು ಬಾಗಿಲು ತೆರೆದುಕೊಟ್ಟದ್ದೇ ಜ್ಯೋತಿರಾಧಿತ್ಯ.

ಇದೊಂದು ಅವಧಿಗೆ ಕಮಲ್‌ನಾಥ್‌ರಿಗೆ ಒಳ್ಳೆಯ ಆಡಳಿತ ನೀಡಲು ಅವಕಾಶ ಮಾಡಿಕೊಟ್ಟಿದ್ದರೆ ಜ್ಯೋತಿರಾಧಿತ್ಯ ಕಳೆದುಕೊಳ್ಳುವುದೇನೂ‌ ಇರಲಿಲ್ಲ.  ನಾಳೆ ಇನ್ನೊಮ್ಮೆ  ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ನ ಸಹಜ ಆಯ್ಕೆ ಜ್ಯೋತಿರಾಧಿತ್ಯ ಎಂಬ ಬಗ್ಗೆ ಖುದ್ದು ಜ್ಯೋತಿರಾಧಿತ್ಯರಿಗೂ ಗೊತ್ತಿತ್ತು. ಅದಾಗ್ಯೂ ದಿಡೀರ್ ಮುಖ್ಯಮಂತ್ರಿಯಾಗಬೇಕೆಂಬ ದುರಾಶೆಗೆ ಪಕ್ಷದ ಬಿಡಿ ಸ್ವತಃ ತನ್ನ ಭವಿಷ್ಯದ ಬಗ್ಗೆಯೂ ಯೋಚಿಸದ ಜ್ಯೋತಿರಾಧಿತ್ಯರನ್ನು ಕಾಂಗ್ರೆಸ್ ಮತ್ತೆ ಯಾವ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳದಿರುವುದು ಕಾಂಗ್ರೆಸ್ ಪಾಲಿಗೆ ಅತ್ಯಂತ ಕ್ಷೇಮಕರ.

ಬಿಜೆಪಿಯಲ್ಲಿ ಉಸಿರುಗಟ್ಟಿಸುವ ವಾತಾವರಣವಿರಬಹುದು, ಆದರೆ ಜ್ಯೋತಿರಾಧಿತ್ಯ ಮತ್ತೆ ಮಾತೃಪಕ್ಷಕ್ಕೆ ಮರಳುವ ಬಗ್ಗೆ ಯೋಚಿಸಲು ಅದೊಂದೇ ಕಾರಣ ಖಂಡಿತಾ ಅಲ್ಲ. ಬಿಜೆಪಿ ಕೊರೋನಾದ ವಿಷಮಕಾಲದಲ್ಲಿ ಮಾಡಿದ ಚೀಪ್  ಪಾಲಿಟಿಕ್ಸ್‌‌ನಿಂದಾಗಿ ಮತ್ತು ಈಗಿನದು ಜನತೆಯ ಆಯ್ಕೆಯ ಸರಕಾರವಲ್ಲದಿರುವುದರಿಂದ ಅದು ಮುಂದಿನ ಅವಧಿಗೆ ಈಗ ಪಡೆದ ಅಧಿಕಾರ ಉಳಿಸಿಕೊಳ್ಳುವುದು ಬಹಳ ಕಷ್ಟ.

ಈಗಿಂದೀಗಲೇ ಕಾಂಗ್ರೆಸ್ ಸೇರಿದರೆ ಮುಂದೆ ತನ್ನ ಸ್ಥಾನವನ್ನು ಭದ್ರಗೊಳಿಸಬಹುದೆಂಬ ದೂರಾಲೋಚನೆಯೇ ಜ್ಯೋತಿರಾಧಿತ್ಯರನ್ನು ಇಂತಹ ನಿರ್ಧಾರಕ್ಕಿಳಿಸಿದೆ. ಅವರನ್ನು ಮತ್ತೆ ಸೇರಿಸಿಕೊಳ್ಳುವುದರಿಂದ ನಿಷ್ಟಾವಂತ ಕಾಂಗ್ರೆಸಿಗರಿಗೆ ಅನ್ಯಾಯ ಮಾಡಿದಂತಾಗಬಹುದು. ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿದರೂ ಅನ್ಯಾಯವಾಗಿ ಅವರು ಕೈ ತಪ್ಪಿಸಿದ ಅಧಿಕಾರ ಮತ್ತೆ ದಕ್ಕದು. ಅವರು ತನ್ನೊಂದಿಗೆ ಬಿಜೆಪಿಗೆ ಕೊಂಡೊಯ್ದ ಎಲ್ಲಾ ಶಾಸಕರೂ ಮತ್ತೆ ಕಾಂಗ್ರೆಸ್‌ಗೆ ಮರಳುವ ಸಾಧ್ಯತೆ ತೀರಾ ಕಡಿಮೆ. ಜ್ಯೋತಿರಾಧಿತ್ಯ ಕಾಂಗ್ರೆಸ್ ತೊರೆದಿದ್ದೂ ಅಧಿಕಾರ ಮೋಹದಿಂದ, ಮತ್ತೆ ಮರಳುತ್ತಿರುವುದೂ ಭವಿಷ್ಯದ ಅಧಿಕಾರ ಮೋಹಕ್ಕಾಗಿಯಷ್ಟೆ.

ನಾಳೆ ಅವರು ಮತ್ತೆ ಇನ್ನೇನಾದರೂ ಕಾರಣ ಮುಂದಿಟ್ಟು ಪಕ್ಷವನ್ನು ಬ್ಲ್ಯಾಕ್ ಮೇಲ್ ಮಾಡಲಾರರು ಎನ್ನಲು ಯಾವ ಖಚಿತತೆಯೂ ಇಲ್ಲ.

ಕಳೆದ ಪಾರ್ಲಿಮೆಂಟ್ ಚುನಾವಣೆಯಲ್ಲಿ ಲಕ್ಷಕ್ಕೂ ಅಧಿಕ ಮತಗಳಿಂದ ಜ್ಯೋತಿರಾಧಿತ್ಯ ಸೋತಿರುವುದು ಅವರು ತನ್ನ ಕ್ಷೇತ್ರದಲ್ಲೇ ಹಿಂದಿನಷ್ಟು ಪ್ರಭಾವಿಯಾಗುಳಿದಿಲ್ಲ ಎನ್ನುವುದನ್ನು ತೋರಿಸುತ್ತದೆ. ರಾಜ ಕುಟುಂಬ ಎನ್ನುವ ಕಾರಣಕ್ಕೆ ಅವರಿಗೆ ಮಣೆ ಹಾಕುವುದು ಪ್ರಜಾಪ್ರಭುತ್ವ ಕಾಲದ ಅತ್ಯಂತ ಅಸಹ್ಯ ನಡೆಯಾಗಬಹುದು.

ಜ್ಯೋತಿರಾಧಿತ್ಯ  ಮಾಧವ ರಾವ್ ಸಿಂಧಿಯಾ ಅವರ ಮಗನಲ್ಲದಿರುತ್ತಿದ್ದರೆ ಅವರು ರಾಜಕೀಯದಲ್ಲಿ ಏನೂ‌ ಆಗಿರುತ್ತಿರಲಿಲ್ಲ. ಅಷ್ಟಕ್ಕೂ ಅವರು ಇತರ ನಾಯಕರಂತೆ ಪಕ್ಷಕ್ಕಾಗಿ ದುಡಿದು ಮೇಲೇರಿದವರಲ್ಲ. ಅವರಪ್ಪನ ದಿಡೀರ್ ಸಾವು ಅವರನ್ನು ಉತ್ತರಾಧಿಕಾರಿಯಾಗಿಸಿತ್ತು. ರಾಹುಲ್ ಗಾಂಧಿಯವರು ಜ್ಯೋತಿರಾಧಿತ್ಯರನ್ನು ತನ್ನ ಆಪ್ತ ಬಳಗದಲ್ಲಿಟ್ಟುಕೊಂಡಿದ್ದರೂ ಅವರು ಪಕ್ಷದ ನಾಯಕತ್ವಕ್ಕೆ ನಿಷ್ಟೆ ತೋರಿಸದೇ ಬಿಜೆಪಿಗೆ ಹಾರಿ ಇತರ್ಯಾವುದೇ ನಾಯಕರು ಪಕ್ಷ ತೊರೆದು ಮಾಡಿರುವುದಕ್ಕಿಂತ ಅತೀ ಹೆಚ್ಚು ಹಾನಿಯನ್ನೂ ಪಕ್ಷಕ್ಕೆ ಮಾಡಿದರು.

ಜ್ಯೋತಿರಾಧಿತ್ಯ ಮರುಸೇರ್ಪಡೆಯಿಂದ ಸದ್ಯಕ್ಕೆ ಬಿಜೆಪಿಗೆ ಟಾಂಗ್ ಕೊಡಲು ಕಾಂಗ್ರೆಸ್‌ಗೆ ಅಸ್ತ್ರ‌ ಸಿಗಬಹುದೇ ಹೊರತು ಹೆಚ್ಚಿನ ಲಾಭವೇನೂ ಆಗದು. ಮತ್ತು ಅದೊಂದು ಕಾಂಗ್ರೆಸ್‌ನೊಳಗೆ ಕೆಟ್ಟ ಬೆಳವಣಿಗೆಗೆ ನಾಂದಿಯಾಗಬಹುದು..


ಇದನ್ನೂ ಓದಿ: ಮತ್ತೆ ವಿಚಾರಣೆಗೆ ಹಾಜರಾಗುವಂತೆ ಅರ್ನಾಬ್‌ಗೆ ನೋಟಿಸ್‌ ನೀಡಿದ ಮುಂಬೈ ಪೊಲೀಸ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...