Homeಮುಖಪುಟಜ್ಯೋತಿರಾಧಿತ್ಯ ಸಿಂಧಿಯಾರನ್ನು ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವುದು ಶ್ರೇಯವೇ?

ಜ್ಯೋತಿರಾಧಿತ್ಯ ಸಿಂಧಿಯಾರನ್ನು ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವುದು ಶ್ರೇಯವೇ?

- Advertisement -
- Advertisement -

ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಮೂಲಕ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚನೆಗೆ ಕಾರಣವಾಗಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಮತ್ತೆ ಕಾಂಗ್ರೆಸ್‌ಗೆ ಮರಳುವ ಸುದ್ಧಿ ಈಗ ಓಪನ್ ಸೀಕ್ರೆಟ್.

ಆದರೆ ಕಾಂಗ್ರೆಸ್ ಯಾವ ಕಾರಣಕ್ಕೂ ಸಿಂಧಿಯಾರನ್ನು ಮರಳಿ ಮನೆ ಸೇರಿಸದಿರುವುದು ಕಾಂಗ್ರೆಸ್ ಪಾಲಿಗೆ ಒಳಿತು.

ಕಮಲ್ ನಾಥ್ ಬಹಳ ಸಜ್ಜನ ರಾಜಕಾರಣಿಯೆಂದೇನೂ ನಾನು ಹೇಳಲಾರೆ. ಆದರೆ ಕಳೆದ ಅಸೆಂಬ್ಲಿ ಚುನಾವಣೆಯ ಬಳಿಕ ಕಮಲ್‌ನಾಥ್‌ಗೆ ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಹುದ್ದೆ ನೀಡಿದ್ದು ಅವರ ಸೀನಿಯಾರಿಟಿಯ ದೃಷ್ಟಿಯಿಂದ ಮತ್ತು ಪಕ್ಷಕ್ಕೆ ಅವರು ನೀಡಿದ ಸೇವೆಯ ದೃಷ್ಟಿಯಿಂದ ಅತ್ಯಂತ ಸೂಕ್ತ ಆಯ್ಕೆಯಾಗಿತ್ತು. ಸಿಂಧಿಯಾ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಅತೀ ಮುಖ್ಯ ಕಾರಣವೇ ತನಗೆ ಮುಖ್ಯಮಂತ್ರಿ ಪಟ್ಟ ನೀಡದಿದ್ದುದು.

ಕಮಲ್‌ನಾಥ್ ಜ್ಯೋತಿರಾಧಿತ್ಯರ ಅಪ್ಪ ಮಾಧವ್ ರಾವ್ ಅವರ ಸಮಕಾಲೀನ ನಾಯಕ. ಅವರು ರಾಜಕೀಯ ಬದುಕಿನ ಅರ್ಧದಷ್ಟು ರಾಜಕೀಯ ಅನುಭವವೂ ಜ್ಯೋತಿರಾಧಿತ್ಯರಿಗಿಲ್ಲ. ಕಾಂಗ್ರೆಸ್ ದೇಶದೆಲ್ಲೆಡೆ ಸೋತು ನಿರಾಶೆಯ ಛಾಯೆಯಲ್ಲಿದ್ದಾಗ ಮಧ್ಯಪ್ರದೇಶದಂತಹ ದೊಡ್ಡ ರಾಜ್ಯದಲ್ಲಿ ಅಧಿಕಾರ ಹಿಡಿದುದು ಕಾಂಗ್ರೆಸ್ ಪಾಲಿಗೆ ಕತ್ತಲ ಕಾಲದ ಕೋಲ್ಮಿಂಚಾಗಿತ್ತೆಂದರೂ ಸರಿಯೇ. ಅಷ್ಟು ಕಷ್ಟಪಟ್ಟು ಬಿಜೆಪಿಯನ್ನು ಉರುಳಿಸಿ ಅಧಿಕಾರ ಹಿಡಿದಿರುವಾಗ ತನ್ನ ಅಧಿಕಾರ ದಾಹಕ್ಕಾಗಿ ಸರಕಾರವನ್ನು ಉರುಳಿಸಿದ್ದು ಅಕ್ಷಮ್ಯ. ಬಿಜೆಪಿ ಅನೈತಿಕ ಮಾರ್ಗದಲ್ಲಿ  ಅಧಿಕಾರಕ್ಕೇರಲು ಬಾಗಿಲು ತೆರೆದುಕೊಟ್ಟದ್ದೇ ಜ್ಯೋತಿರಾಧಿತ್ಯ.

ಇದೊಂದು ಅವಧಿಗೆ ಕಮಲ್‌ನಾಥ್‌ರಿಗೆ ಒಳ್ಳೆಯ ಆಡಳಿತ ನೀಡಲು ಅವಕಾಶ ಮಾಡಿಕೊಟ್ಟಿದ್ದರೆ ಜ್ಯೋತಿರಾಧಿತ್ಯ ಕಳೆದುಕೊಳ್ಳುವುದೇನೂ‌ ಇರಲಿಲ್ಲ.  ನಾಳೆ ಇನ್ನೊಮ್ಮೆ  ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ನ ಸಹಜ ಆಯ್ಕೆ ಜ್ಯೋತಿರಾಧಿತ್ಯ ಎಂಬ ಬಗ್ಗೆ ಖುದ್ದು ಜ್ಯೋತಿರಾಧಿತ್ಯರಿಗೂ ಗೊತ್ತಿತ್ತು. ಅದಾಗ್ಯೂ ದಿಡೀರ್ ಮುಖ್ಯಮಂತ್ರಿಯಾಗಬೇಕೆಂಬ ದುರಾಶೆಗೆ ಪಕ್ಷದ ಬಿಡಿ ಸ್ವತಃ ತನ್ನ ಭವಿಷ್ಯದ ಬಗ್ಗೆಯೂ ಯೋಚಿಸದ ಜ್ಯೋತಿರಾಧಿತ್ಯರನ್ನು ಕಾಂಗ್ರೆಸ್ ಮತ್ತೆ ಯಾವ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳದಿರುವುದು ಕಾಂಗ್ರೆಸ್ ಪಾಲಿಗೆ ಅತ್ಯಂತ ಕ್ಷೇಮಕರ.

ಬಿಜೆಪಿಯಲ್ಲಿ ಉಸಿರುಗಟ್ಟಿಸುವ ವಾತಾವರಣವಿರಬಹುದು, ಆದರೆ ಜ್ಯೋತಿರಾಧಿತ್ಯ ಮತ್ತೆ ಮಾತೃಪಕ್ಷಕ್ಕೆ ಮರಳುವ ಬಗ್ಗೆ ಯೋಚಿಸಲು ಅದೊಂದೇ ಕಾರಣ ಖಂಡಿತಾ ಅಲ್ಲ. ಬಿಜೆಪಿ ಕೊರೋನಾದ ವಿಷಮಕಾಲದಲ್ಲಿ ಮಾಡಿದ ಚೀಪ್  ಪಾಲಿಟಿಕ್ಸ್‌‌ನಿಂದಾಗಿ ಮತ್ತು ಈಗಿನದು ಜನತೆಯ ಆಯ್ಕೆಯ ಸರಕಾರವಲ್ಲದಿರುವುದರಿಂದ ಅದು ಮುಂದಿನ ಅವಧಿಗೆ ಈಗ ಪಡೆದ ಅಧಿಕಾರ ಉಳಿಸಿಕೊಳ್ಳುವುದು ಬಹಳ ಕಷ್ಟ.

ಈಗಿಂದೀಗಲೇ ಕಾಂಗ್ರೆಸ್ ಸೇರಿದರೆ ಮುಂದೆ ತನ್ನ ಸ್ಥಾನವನ್ನು ಭದ್ರಗೊಳಿಸಬಹುದೆಂಬ ದೂರಾಲೋಚನೆಯೇ ಜ್ಯೋತಿರಾಧಿತ್ಯರನ್ನು ಇಂತಹ ನಿರ್ಧಾರಕ್ಕಿಳಿಸಿದೆ. ಅವರನ್ನು ಮತ್ತೆ ಸೇರಿಸಿಕೊಳ್ಳುವುದರಿಂದ ನಿಷ್ಟಾವಂತ ಕಾಂಗ್ರೆಸಿಗರಿಗೆ ಅನ್ಯಾಯ ಮಾಡಿದಂತಾಗಬಹುದು. ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿದರೂ ಅನ್ಯಾಯವಾಗಿ ಅವರು ಕೈ ತಪ್ಪಿಸಿದ ಅಧಿಕಾರ ಮತ್ತೆ ದಕ್ಕದು. ಅವರು ತನ್ನೊಂದಿಗೆ ಬಿಜೆಪಿಗೆ ಕೊಂಡೊಯ್ದ ಎಲ್ಲಾ ಶಾಸಕರೂ ಮತ್ತೆ ಕಾಂಗ್ರೆಸ್‌ಗೆ ಮರಳುವ ಸಾಧ್ಯತೆ ತೀರಾ ಕಡಿಮೆ. ಜ್ಯೋತಿರಾಧಿತ್ಯ ಕಾಂಗ್ರೆಸ್ ತೊರೆದಿದ್ದೂ ಅಧಿಕಾರ ಮೋಹದಿಂದ, ಮತ್ತೆ ಮರಳುತ್ತಿರುವುದೂ ಭವಿಷ್ಯದ ಅಧಿಕಾರ ಮೋಹಕ್ಕಾಗಿಯಷ್ಟೆ.

ನಾಳೆ ಅವರು ಮತ್ತೆ ಇನ್ನೇನಾದರೂ ಕಾರಣ ಮುಂದಿಟ್ಟು ಪಕ್ಷವನ್ನು ಬ್ಲ್ಯಾಕ್ ಮೇಲ್ ಮಾಡಲಾರರು ಎನ್ನಲು ಯಾವ ಖಚಿತತೆಯೂ ಇಲ್ಲ.

ಕಳೆದ ಪಾರ್ಲಿಮೆಂಟ್ ಚುನಾವಣೆಯಲ್ಲಿ ಲಕ್ಷಕ್ಕೂ ಅಧಿಕ ಮತಗಳಿಂದ ಜ್ಯೋತಿರಾಧಿತ್ಯ ಸೋತಿರುವುದು ಅವರು ತನ್ನ ಕ್ಷೇತ್ರದಲ್ಲೇ ಹಿಂದಿನಷ್ಟು ಪ್ರಭಾವಿಯಾಗುಳಿದಿಲ್ಲ ಎನ್ನುವುದನ್ನು ತೋರಿಸುತ್ತದೆ. ರಾಜ ಕುಟುಂಬ ಎನ್ನುವ ಕಾರಣಕ್ಕೆ ಅವರಿಗೆ ಮಣೆ ಹಾಕುವುದು ಪ್ರಜಾಪ್ರಭುತ್ವ ಕಾಲದ ಅತ್ಯಂತ ಅಸಹ್ಯ ನಡೆಯಾಗಬಹುದು.

ಜ್ಯೋತಿರಾಧಿತ್ಯ  ಮಾಧವ ರಾವ್ ಸಿಂಧಿಯಾ ಅವರ ಮಗನಲ್ಲದಿರುತ್ತಿದ್ದರೆ ಅವರು ರಾಜಕೀಯದಲ್ಲಿ ಏನೂ‌ ಆಗಿರುತ್ತಿರಲಿಲ್ಲ. ಅಷ್ಟಕ್ಕೂ ಅವರು ಇತರ ನಾಯಕರಂತೆ ಪಕ್ಷಕ್ಕಾಗಿ ದುಡಿದು ಮೇಲೇರಿದವರಲ್ಲ. ಅವರಪ್ಪನ ದಿಡೀರ್ ಸಾವು ಅವರನ್ನು ಉತ್ತರಾಧಿಕಾರಿಯಾಗಿಸಿತ್ತು. ರಾಹುಲ್ ಗಾಂಧಿಯವರು ಜ್ಯೋತಿರಾಧಿತ್ಯರನ್ನು ತನ್ನ ಆಪ್ತ ಬಳಗದಲ್ಲಿಟ್ಟುಕೊಂಡಿದ್ದರೂ ಅವರು ಪಕ್ಷದ ನಾಯಕತ್ವಕ್ಕೆ ನಿಷ್ಟೆ ತೋರಿಸದೇ ಬಿಜೆಪಿಗೆ ಹಾರಿ ಇತರ್ಯಾವುದೇ ನಾಯಕರು ಪಕ್ಷ ತೊರೆದು ಮಾಡಿರುವುದಕ್ಕಿಂತ ಅತೀ ಹೆಚ್ಚು ಹಾನಿಯನ್ನೂ ಪಕ್ಷಕ್ಕೆ ಮಾಡಿದರು.

ಜ್ಯೋತಿರಾಧಿತ್ಯ ಮರುಸೇರ್ಪಡೆಯಿಂದ ಸದ್ಯಕ್ಕೆ ಬಿಜೆಪಿಗೆ ಟಾಂಗ್ ಕೊಡಲು ಕಾಂಗ್ರೆಸ್‌ಗೆ ಅಸ್ತ್ರ‌ ಸಿಗಬಹುದೇ ಹೊರತು ಹೆಚ್ಚಿನ ಲಾಭವೇನೂ ಆಗದು. ಮತ್ತು ಅದೊಂದು ಕಾಂಗ್ರೆಸ್‌ನೊಳಗೆ ಕೆಟ್ಟ ಬೆಳವಣಿಗೆಗೆ ನಾಂದಿಯಾಗಬಹುದು..


ಇದನ್ನೂ ಓದಿ: ಮತ್ತೆ ವಿಚಾರಣೆಗೆ ಹಾಜರಾಗುವಂತೆ ಅರ್ನಾಬ್‌ಗೆ ನೋಟಿಸ್‌ ನೀಡಿದ ಮುಂಬೈ ಪೊಲೀಸ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...