Homeಮುಖಪುಟಜ್ಯೋತಿರಾಧಿತ್ಯ ಸಿಂಧಿಯಾರನ್ನು ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವುದು ಶ್ರೇಯವೇ?

ಜ್ಯೋತಿರಾಧಿತ್ಯ ಸಿಂಧಿಯಾರನ್ನು ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವುದು ಶ್ರೇಯವೇ?

- Advertisement -
- Advertisement -

ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಮೂಲಕ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚನೆಗೆ ಕಾರಣವಾಗಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಮತ್ತೆ ಕಾಂಗ್ರೆಸ್‌ಗೆ ಮರಳುವ ಸುದ್ಧಿ ಈಗ ಓಪನ್ ಸೀಕ್ರೆಟ್.

ಆದರೆ ಕಾಂಗ್ರೆಸ್ ಯಾವ ಕಾರಣಕ್ಕೂ ಸಿಂಧಿಯಾರನ್ನು ಮರಳಿ ಮನೆ ಸೇರಿಸದಿರುವುದು ಕಾಂಗ್ರೆಸ್ ಪಾಲಿಗೆ ಒಳಿತು.

ಕಮಲ್ ನಾಥ್ ಬಹಳ ಸಜ್ಜನ ರಾಜಕಾರಣಿಯೆಂದೇನೂ ನಾನು ಹೇಳಲಾರೆ. ಆದರೆ ಕಳೆದ ಅಸೆಂಬ್ಲಿ ಚುನಾವಣೆಯ ಬಳಿಕ ಕಮಲ್‌ನಾಥ್‌ಗೆ ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಹುದ್ದೆ ನೀಡಿದ್ದು ಅವರ ಸೀನಿಯಾರಿಟಿಯ ದೃಷ್ಟಿಯಿಂದ ಮತ್ತು ಪಕ್ಷಕ್ಕೆ ಅವರು ನೀಡಿದ ಸೇವೆಯ ದೃಷ್ಟಿಯಿಂದ ಅತ್ಯಂತ ಸೂಕ್ತ ಆಯ್ಕೆಯಾಗಿತ್ತು. ಸಿಂಧಿಯಾ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಅತೀ ಮುಖ್ಯ ಕಾರಣವೇ ತನಗೆ ಮುಖ್ಯಮಂತ್ರಿ ಪಟ್ಟ ನೀಡದಿದ್ದುದು.

ಕಮಲ್‌ನಾಥ್ ಜ್ಯೋತಿರಾಧಿತ್ಯರ ಅಪ್ಪ ಮಾಧವ್ ರಾವ್ ಅವರ ಸಮಕಾಲೀನ ನಾಯಕ. ಅವರು ರಾಜಕೀಯ ಬದುಕಿನ ಅರ್ಧದಷ್ಟು ರಾಜಕೀಯ ಅನುಭವವೂ ಜ್ಯೋತಿರಾಧಿತ್ಯರಿಗಿಲ್ಲ. ಕಾಂಗ್ರೆಸ್ ದೇಶದೆಲ್ಲೆಡೆ ಸೋತು ನಿರಾಶೆಯ ಛಾಯೆಯಲ್ಲಿದ್ದಾಗ ಮಧ್ಯಪ್ರದೇಶದಂತಹ ದೊಡ್ಡ ರಾಜ್ಯದಲ್ಲಿ ಅಧಿಕಾರ ಹಿಡಿದುದು ಕಾಂಗ್ರೆಸ್ ಪಾಲಿಗೆ ಕತ್ತಲ ಕಾಲದ ಕೋಲ್ಮಿಂಚಾಗಿತ್ತೆಂದರೂ ಸರಿಯೇ. ಅಷ್ಟು ಕಷ್ಟಪಟ್ಟು ಬಿಜೆಪಿಯನ್ನು ಉರುಳಿಸಿ ಅಧಿಕಾರ ಹಿಡಿದಿರುವಾಗ ತನ್ನ ಅಧಿಕಾರ ದಾಹಕ್ಕಾಗಿ ಸರಕಾರವನ್ನು ಉರುಳಿಸಿದ್ದು ಅಕ್ಷಮ್ಯ. ಬಿಜೆಪಿ ಅನೈತಿಕ ಮಾರ್ಗದಲ್ಲಿ  ಅಧಿಕಾರಕ್ಕೇರಲು ಬಾಗಿಲು ತೆರೆದುಕೊಟ್ಟದ್ದೇ ಜ್ಯೋತಿರಾಧಿತ್ಯ.

ಇದೊಂದು ಅವಧಿಗೆ ಕಮಲ್‌ನಾಥ್‌ರಿಗೆ ಒಳ್ಳೆಯ ಆಡಳಿತ ನೀಡಲು ಅವಕಾಶ ಮಾಡಿಕೊಟ್ಟಿದ್ದರೆ ಜ್ಯೋತಿರಾಧಿತ್ಯ ಕಳೆದುಕೊಳ್ಳುವುದೇನೂ‌ ಇರಲಿಲ್ಲ.  ನಾಳೆ ಇನ್ನೊಮ್ಮೆ  ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ನ ಸಹಜ ಆಯ್ಕೆ ಜ್ಯೋತಿರಾಧಿತ್ಯ ಎಂಬ ಬಗ್ಗೆ ಖುದ್ದು ಜ್ಯೋತಿರಾಧಿತ್ಯರಿಗೂ ಗೊತ್ತಿತ್ತು. ಅದಾಗ್ಯೂ ದಿಡೀರ್ ಮುಖ್ಯಮಂತ್ರಿಯಾಗಬೇಕೆಂಬ ದುರಾಶೆಗೆ ಪಕ್ಷದ ಬಿಡಿ ಸ್ವತಃ ತನ್ನ ಭವಿಷ್ಯದ ಬಗ್ಗೆಯೂ ಯೋಚಿಸದ ಜ್ಯೋತಿರಾಧಿತ್ಯರನ್ನು ಕಾಂಗ್ರೆಸ್ ಮತ್ತೆ ಯಾವ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳದಿರುವುದು ಕಾಂಗ್ರೆಸ್ ಪಾಲಿಗೆ ಅತ್ಯಂತ ಕ್ಷೇಮಕರ.

ಬಿಜೆಪಿಯಲ್ಲಿ ಉಸಿರುಗಟ್ಟಿಸುವ ವಾತಾವರಣವಿರಬಹುದು, ಆದರೆ ಜ್ಯೋತಿರಾಧಿತ್ಯ ಮತ್ತೆ ಮಾತೃಪಕ್ಷಕ್ಕೆ ಮರಳುವ ಬಗ್ಗೆ ಯೋಚಿಸಲು ಅದೊಂದೇ ಕಾರಣ ಖಂಡಿತಾ ಅಲ್ಲ. ಬಿಜೆಪಿ ಕೊರೋನಾದ ವಿಷಮಕಾಲದಲ್ಲಿ ಮಾಡಿದ ಚೀಪ್  ಪಾಲಿಟಿಕ್ಸ್‌‌ನಿಂದಾಗಿ ಮತ್ತು ಈಗಿನದು ಜನತೆಯ ಆಯ್ಕೆಯ ಸರಕಾರವಲ್ಲದಿರುವುದರಿಂದ ಅದು ಮುಂದಿನ ಅವಧಿಗೆ ಈಗ ಪಡೆದ ಅಧಿಕಾರ ಉಳಿಸಿಕೊಳ್ಳುವುದು ಬಹಳ ಕಷ್ಟ.

ಈಗಿಂದೀಗಲೇ ಕಾಂಗ್ರೆಸ್ ಸೇರಿದರೆ ಮುಂದೆ ತನ್ನ ಸ್ಥಾನವನ್ನು ಭದ್ರಗೊಳಿಸಬಹುದೆಂಬ ದೂರಾಲೋಚನೆಯೇ ಜ್ಯೋತಿರಾಧಿತ್ಯರನ್ನು ಇಂತಹ ನಿರ್ಧಾರಕ್ಕಿಳಿಸಿದೆ. ಅವರನ್ನು ಮತ್ತೆ ಸೇರಿಸಿಕೊಳ್ಳುವುದರಿಂದ ನಿಷ್ಟಾವಂತ ಕಾಂಗ್ರೆಸಿಗರಿಗೆ ಅನ್ಯಾಯ ಮಾಡಿದಂತಾಗಬಹುದು. ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿದರೂ ಅನ್ಯಾಯವಾಗಿ ಅವರು ಕೈ ತಪ್ಪಿಸಿದ ಅಧಿಕಾರ ಮತ್ತೆ ದಕ್ಕದು. ಅವರು ತನ್ನೊಂದಿಗೆ ಬಿಜೆಪಿಗೆ ಕೊಂಡೊಯ್ದ ಎಲ್ಲಾ ಶಾಸಕರೂ ಮತ್ತೆ ಕಾಂಗ್ರೆಸ್‌ಗೆ ಮರಳುವ ಸಾಧ್ಯತೆ ತೀರಾ ಕಡಿಮೆ. ಜ್ಯೋತಿರಾಧಿತ್ಯ ಕಾಂಗ್ರೆಸ್ ತೊರೆದಿದ್ದೂ ಅಧಿಕಾರ ಮೋಹದಿಂದ, ಮತ್ತೆ ಮರಳುತ್ತಿರುವುದೂ ಭವಿಷ್ಯದ ಅಧಿಕಾರ ಮೋಹಕ್ಕಾಗಿಯಷ್ಟೆ.

ನಾಳೆ ಅವರು ಮತ್ತೆ ಇನ್ನೇನಾದರೂ ಕಾರಣ ಮುಂದಿಟ್ಟು ಪಕ್ಷವನ್ನು ಬ್ಲ್ಯಾಕ್ ಮೇಲ್ ಮಾಡಲಾರರು ಎನ್ನಲು ಯಾವ ಖಚಿತತೆಯೂ ಇಲ್ಲ.

ಕಳೆದ ಪಾರ್ಲಿಮೆಂಟ್ ಚುನಾವಣೆಯಲ್ಲಿ ಲಕ್ಷಕ್ಕೂ ಅಧಿಕ ಮತಗಳಿಂದ ಜ್ಯೋತಿರಾಧಿತ್ಯ ಸೋತಿರುವುದು ಅವರು ತನ್ನ ಕ್ಷೇತ್ರದಲ್ಲೇ ಹಿಂದಿನಷ್ಟು ಪ್ರಭಾವಿಯಾಗುಳಿದಿಲ್ಲ ಎನ್ನುವುದನ್ನು ತೋರಿಸುತ್ತದೆ. ರಾಜ ಕುಟುಂಬ ಎನ್ನುವ ಕಾರಣಕ್ಕೆ ಅವರಿಗೆ ಮಣೆ ಹಾಕುವುದು ಪ್ರಜಾಪ್ರಭುತ್ವ ಕಾಲದ ಅತ್ಯಂತ ಅಸಹ್ಯ ನಡೆಯಾಗಬಹುದು.

ಜ್ಯೋತಿರಾಧಿತ್ಯ  ಮಾಧವ ರಾವ್ ಸಿಂಧಿಯಾ ಅವರ ಮಗನಲ್ಲದಿರುತ್ತಿದ್ದರೆ ಅವರು ರಾಜಕೀಯದಲ್ಲಿ ಏನೂ‌ ಆಗಿರುತ್ತಿರಲಿಲ್ಲ. ಅಷ್ಟಕ್ಕೂ ಅವರು ಇತರ ನಾಯಕರಂತೆ ಪಕ್ಷಕ್ಕಾಗಿ ದುಡಿದು ಮೇಲೇರಿದವರಲ್ಲ. ಅವರಪ್ಪನ ದಿಡೀರ್ ಸಾವು ಅವರನ್ನು ಉತ್ತರಾಧಿಕಾರಿಯಾಗಿಸಿತ್ತು. ರಾಹುಲ್ ಗಾಂಧಿಯವರು ಜ್ಯೋತಿರಾಧಿತ್ಯರನ್ನು ತನ್ನ ಆಪ್ತ ಬಳಗದಲ್ಲಿಟ್ಟುಕೊಂಡಿದ್ದರೂ ಅವರು ಪಕ್ಷದ ನಾಯಕತ್ವಕ್ಕೆ ನಿಷ್ಟೆ ತೋರಿಸದೇ ಬಿಜೆಪಿಗೆ ಹಾರಿ ಇತರ್ಯಾವುದೇ ನಾಯಕರು ಪಕ್ಷ ತೊರೆದು ಮಾಡಿರುವುದಕ್ಕಿಂತ ಅತೀ ಹೆಚ್ಚು ಹಾನಿಯನ್ನೂ ಪಕ್ಷಕ್ಕೆ ಮಾಡಿದರು.

ಜ್ಯೋತಿರಾಧಿತ್ಯ ಮರುಸೇರ್ಪಡೆಯಿಂದ ಸದ್ಯಕ್ಕೆ ಬಿಜೆಪಿಗೆ ಟಾಂಗ್ ಕೊಡಲು ಕಾಂಗ್ರೆಸ್‌ಗೆ ಅಸ್ತ್ರ‌ ಸಿಗಬಹುದೇ ಹೊರತು ಹೆಚ್ಚಿನ ಲಾಭವೇನೂ ಆಗದು. ಮತ್ತು ಅದೊಂದು ಕಾಂಗ್ರೆಸ್‌ನೊಳಗೆ ಕೆಟ್ಟ ಬೆಳವಣಿಗೆಗೆ ನಾಂದಿಯಾಗಬಹುದು..


ಇದನ್ನೂ ಓದಿ: ಮತ್ತೆ ವಿಚಾರಣೆಗೆ ಹಾಜರಾಗುವಂತೆ ಅರ್ನಾಬ್‌ಗೆ ನೋಟಿಸ್‌ ನೀಡಿದ ಮುಂಬೈ ಪೊಲೀಸ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...