Homeಕರ್ನಾಟಕಇದು ಶಿಕ್ಷಣ ಇಲಾಖೆಯೋ, ತುಘಲಕ್ ಮಾದರಿ ಆಡಳಿತವೋ?: ಡಾ.ವಿ.ಪಿ.ನಿರಂಜನಾರಾಧ್ಯ

ಇದು ಶಿಕ್ಷಣ ಇಲಾಖೆಯೋ, ತುಘಲಕ್ ಮಾದರಿ ಆಡಳಿತವೋ?: ಡಾ.ವಿ.ಪಿ.ನಿರಂಜನಾರಾಧ್ಯ

- Advertisement -
- Advertisement -

“ಶಿಕ್ಷಣ ಇಲಾಖೆಯು ತನ್ನ ಗೊಂದಲದ ನಿರ್ಧಾರಗಳಿಂದ ಹೊರಬರುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ಇದು ಶಿಕ್ಷಣ ಇಲಾಖೆಯೋ ಅಥವಾ ತುಘಲಕ್ ಮಾದರಿ ಆಡಳಿತವೋ ತಿಳಿಯುತ್ತಿಲ್ಲ” ಎಂದು ಕರ್ನಾಟಕ ರಾಜ್ಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಸಂಸ್ಥಾಪಕ ಮಹಾಪೋಷಕರಾದ ಡಾ.ವಿ.ಪಿ.ನಿರಂಜನಾರಾಧ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪಠ್ಯದಿಂದ ಹೊರಗಿಡಲಾಗಿದ್ದ ಪಾಠ, ಪದ್ಯಗಳನ್ನು ಮತ್ತೆ ಸೇರಿಸಲು ಸುತ್ತೋಲೆ ಹೊರಡಿಸಿರುವುದರಿಂದ ಗೊಂದಲ ಸೃಷ್ಟಿಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಮಕ್ಕಳ ಪ್ರವೇಶ ವಯಸ್ಸು, 5 ಹಾಗೂ 8ನೇ ತರಗಳಿಗೆ ಪಬ್ಲಿಕ್ ಪರೀಕ್ಷೆ, ಉಚಿತ ಕಡ್ಡಾಯ ಶಿಕ್ಷಣಕ್ಕೆ ಸಂವಿಧಾನ ಬಾಹಿರವಾಗಿ ಪಾಲಕರಿಂದ ಶುಲ್ಕ, ಇತ್ಯಾದಿ ಮಕ್ಕಳ ಹಾಗೂ ಪಾಲಕ ವಿರೋಧಿ ತೀರ್ಮಾನಗಳಿಗೆ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅವುಗಳನ್ನು ಹಿಂಪಡೆಯಲಾಗಿತ್ತು. ಇದು ಮಕ್ಕಳು ಹಾಗೂ ಪಾಲಕರ ಮನಸ್ಸಿನಲ್ಲಿ ಇನ್ನು ಹಸಿಯಾಗಿರುವ ಬೆನ್ನಲ್ಲೇ ಮತ್ತೊಂದು ಹೊಸ ವಿವಾದಿತ ಸುತ್ತೋಲೆಯನ್ನು ಇಲಾಖೆ ಹೊರಡಿಸಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹೊಸ ಸುತ್ತೋಲೆ ಅನ್ವಯ ಈ ಹಿಂದೆ ಮೌಲ್ಯಮಾಪನದಿಂದ ಕೈಬಿಟ್ಟಿದ್ದ ಪಾಠಗಳನ್ನು ಮತ್ತೆ ಸೇರಿಸುವ ಮೂಲಕ ಮಕ್ಕಳು ಪಾಲಕರಲ್ಲಿ ಗೊಂದಲ ಸೃಷ್ಟಿಸಿದೆ. ಈ ಹಿಂದೆ 10ನೇ ತರಗತಿ ಮತ್ತು ಇತರ ಕೆಲವು ತರಗತಿಗಳ ಕನ್ನಡ ಪಠ್ಯಗಳ ಕೆಲವು ಪಾಠಗಳನ್ನು, ಲೇಖಕರು ಪಠ್ಯ ಪರಿಷ್ಕರಣಾ ವಿವಾದದ ಹಿನ್ನೆಲೆಯಲ್ಲಿ ತಮ್ಮ ಹಕ್ಕು ಸ್ವಾಮ್ಯವನ್ನು ಹಿಂತೆಗೆದುಕೊಂಡಿದ್ದರು. ಆದ ಕಾರಣ ಪಠ್ಯದಿಂದ ಕೈಬಿಟ್ಟು ಕಲಿಕೆ ಹಾಗೂ ಮೌಲ್ಯಮಾಪನಕ್ಕೆ
ಪರಿಗಣಿಸಬಾರದೆಂದು ಸುತ್ತೋಲೆ ಹೊರಡಿಸಲಾಗಿತ್ತು. ಅದರಂತೆ ಆ ಪಾಠಗಳನ್ನು ಶಿಕ್ಷಕರು ಕಲಿಕೆ ಮತ್ತು ಮೌಲ್ಯಮಾಪನ ಪರಿಧಿಯಿಂದ ಹೊರಗಿಟ್ಟಿದ್ದರು. ಈಗ ಸರ್ಕಾರ ಮತ್ತೊಮ್ಮೆ ಸುತ್ತೋಲೆಯನ್ನು ಹೊರಡಿಸಿ ಈ ಹಿಂದೆ ಕೈ ಬಿಟ್ಟ ಪಾಠಗಳನ್ನು ಮತ್ತೆ 2022-23ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಬೋಧನೆ ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸುವಂತೆ ಹೇಳಿದೆ. ಈ ಪಾಠಗಳನ್ನು ಮತ್ತೆ ಬೋಧನೆ ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸುವಂತೆ ಹೊರಡಿಸಿರುವ ಈ ಸುತ್ತೋಲೆ ಮಕ್ಕಳಲ್ಲಿ, ಪೋಷಕರಲ್ಲಿ ಹಾಗೂ ಶಿಕ್ಷಕರಲ್ಲಿ ಗೊಂದಲ ಉಂಟುಮಾಡಿದೆ. ಇದು ಶಿಕ್ಷಣ ಇಲಾಖೆಯೋ ಅಥವಾ ತುಘಲಕ್ ಮಾದರಿ ಆಡಳಿತವೋ ತಿಳಿಯುತ್ತಿಲ್ಲ” ಎಂದು ಟೀಕಿಸಿದ್ದಾರೆ.

ಎಲ್ಲಕ್ಕಿಂತ ಮಿಗಿಲಾಗಿ ಈಗಾಗಲೇ ಕನ್ನಡ ಕಲಿಯುವ ಮಕ್ಕಳಲ್ಲಿ ಕನ್ನಡದ ಪಾಠಗಳು ನಿರಾಸಕ್ತಿಯನ್ನು ಉಂಟು ಮಾಡಿದ್ದು, ‘ಹೆಚ್ಚು ಪಾಠಗಳಿರುವ ಭಾಷೆ ಕನ್ನಡ ಎಂತಲೂʼ, ಈ ಪಾಠಗಳನ್ನು ಶಿಕ್ಷಕರು ಒಂದು ಶೈಕ್ಷಣಿಕ ಅವಧಿಯಲ್ಲಿ ಕಲಿಸಲು ಅಸಾಧ್ಯವೆಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ ಎಂದು ತಿಳಿಸಿದ್ದಾರೆ.

“ಅಲ್ಲದೆ 2021-22ನೇ ಸಾಇನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಆರು ವಿಷಯಗಳ ಪ್ರಗತಿ ನೋಡಿದಾಗ, ಪ್ರಥಮ ಭಾಷೆ ಕನ್ನಡದ ಫಲಿತಾಂಶ 4ನೇ ಸ್ಥಾನಕ್ಕೆ ಕುಸಿದಿದೆ. ಮಕ್ಕಳು ಮತ್ತು ಪೋಷಕರು ಪ್ರಥಮ ಭಾಷೆ ಕನ್ನಡ ಆಯ್ಕೆಯಿಂದ ವಿಮುಖರಾಗಿ ಭಾಷೆಗಳನ್ನು ಅಂಕಗಳಿಕೆ ದೃಷ್ಟಿಯಿಂದ ಇತರ ಭಾಷೆಗಳಾದ ಸಂಸ್ಕೃತ , ಇಂಗ್ಲಿಷ್, ಹಿಂದಿ ಆಯ್ಕೆ ಮಾಡುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಸುತ್ತೋಲೆ ಹೊರಡಿಸಿ ವಾಪಸ್‌ ಪಡೆಯುವ ಸರ್ಕಾರ: ಒಂದೇ ತಿಂಗಳಲ್ಲಿ ಮೂರು ಪ್ರಕರಣ

‘ಕನಿಷ್ಠ ಪಠ್ಯ ಗರಿಷ್ಠ ಕಲಿಕೆ’ ಎಂಬ ತತ್ವದ ಆಧಾರದಲ್ಲಿ ಮಕ್ಕಳಲ್ಲಿ ವಿಷಯದ ಬಗ್ಗೆ ಹೆಚ್ಚು ಆಸಕ್ತಿ ಮೂಡಿಸಿರುವ ಈ ಸಂದರ್ಭದಲ್ಲಿ ಮತ್ತೆ ಕೈಬಿಟ್ಟ ಪಾಠಗಳನ್ನು ಕಲಿಯಿರಿ ಎಂದು ಹೊರಡಿಸಿರುವ ಈ ಸುತ್ತೋಲೆ ಮಕ್ಕಳು ಹಾಗು ಪಾಲಕರಲ್ಲಿ ಆತಂಕ ಮೂಡಿಸಿದೆ. ಜೊತೆಗೆ 10ನೇ ತರಗತಿಯ ಪಬ್ಲಿಕ್ ಪರೀಕ್ಷೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಇಂಥಹ ತೀರ್ಮಾನ ಸ್ವಾಭಾವಿಕವಾಗಿ ಮಕ್ಕಳು ಹಾಗು ಪಾಲಕರಲ್ಲಿ ಆತಂಕ ಮೂಡಿಸುತ್ತದೆ ಎಂದು ಹೇಳಿದ್ದಾರೆ.

ಈ ರೀತಿ ಮಕ್ಕಳ ಬದುಕಿನ ಜೊತೆ ಚೆಲ್ಲಾಟವಾಡುವುದನ್ನು ಬಿಟ್ಟು ಈ ಕೂಡಲೇ ಹಿಂದಿನ ತೀರ್ಮಾನಕ್ಕೆ ಬದ್ಧವಾಗಿ ಮೌಲ್ಯಮಾಪನ/ಪರೀಕ್ಷೆ ಸರಳಗೊಳಿಸಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಬೇಕಿದೆ. ಈಗಾಗಲೇ ಪಠ್ಯದಿಂದ ಕೈಬಿಟ್ಟ ಪಠ್ಯಗಳನ್ನು ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸಬಾರದೆಂದು ಹೊರಡಿಸಿದ್ದ ಸುತ್ತೋಲೆಯನ್ನು ಮಾನ್ಯಗೊಳಿಸಿ ಮಕ್ಕಳ ಆತಂಕವನ್ನು ದೂರ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...