Homeಕರ್ನಾಟಕಇದು ಶಿಕ್ಷಣ ಇಲಾಖೆಯೋ, ತುಘಲಕ್ ಮಾದರಿ ಆಡಳಿತವೋ?: ಡಾ.ವಿ.ಪಿ.ನಿರಂಜನಾರಾಧ್ಯ

ಇದು ಶಿಕ್ಷಣ ಇಲಾಖೆಯೋ, ತುಘಲಕ್ ಮಾದರಿ ಆಡಳಿತವೋ?: ಡಾ.ವಿ.ಪಿ.ನಿರಂಜನಾರಾಧ್ಯ

- Advertisement -
- Advertisement -

“ಶಿಕ್ಷಣ ಇಲಾಖೆಯು ತನ್ನ ಗೊಂದಲದ ನಿರ್ಧಾರಗಳಿಂದ ಹೊರಬರುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ಇದು ಶಿಕ್ಷಣ ಇಲಾಖೆಯೋ ಅಥವಾ ತುಘಲಕ್ ಮಾದರಿ ಆಡಳಿತವೋ ತಿಳಿಯುತ್ತಿಲ್ಲ” ಎಂದು ಕರ್ನಾಟಕ ರಾಜ್ಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಸಂಸ್ಥಾಪಕ ಮಹಾಪೋಷಕರಾದ ಡಾ.ವಿ.ಪಿ.ನಿರಂಜನಾರಾಧ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪಠ್ಯದಿಂದ ಹೊರಗಿಡಲಾಗಿದ್ದ ಪಾಠ, ಪದ್ಯಗಳನ್ನು ಮತ್ತೆ ಸೇರಿಸಲು ಸುತ್ತೋಲೆ ಹೊರಡಿಸಿರುವುದರಿಂದ ಗೊಂದಲ ಸೃಷ್ಟಿಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಮಕ್ಕಳ ಪ್ರವೇಶ ವಯಸ್ಸು, 5 ಹಾಗೂ 8ನೇ ತರಗಳಿಗೆ ಪಬ್ಲಿಕ್ ಪರೀಕ್ಷೆ, ಉಚಿತ ಕಡ್ಡಾಯ ಶಿಕ್ಷಣಕ್ಕೆ ಸಂವಿಧಾನ ಬಾಹಿರವಾಗಿ ಪಾಲಕರಿಂದ ಶುಲ್ಕ, ಇತ್ಯಾದಿ ಮಕ್ಕಳ ಹಾಗೂ ಪಾಲಕ ವಿರೋಧಿ ತೀರ್ಮಾನಗಳಿಗೆ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅವುಗಳನ್ನು ಹಿಂಪಡೆಯಲಾಗಿತ್ತು. ಇದು ಮಕ್ಕಳು ಹಾಗೂ ಪಾಲಕರ ಮನಸ್ಸಿನಲ್ಲಿ ಇನ್ನು ಹಸಿಯಾಗಿರುವ ಬೆನ್ನಲ್ಲೇ ಮತ್ತೊಂದು ಹೊಸ ವಿವಾದಿತ ಸುತ್ತೋಲೆಯನ್ನು ಇಲಾಖೆ ಹೊರಡಿಸಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹೊಸ ಸುತ್ತೋಲೆ ಅನ್ವಯ ಈ ಹಿಂದೆ ಮೌಲ್ಯಮಾಪನದಿಂದ ಕೈಬಿಟ್ಟಿದ್ದ ಪಾಠಗಳನ್ನು ಮತ್ತೆ ಸೇರಿಸುವ ಮೂಲಕ ಮಕ್ಕಳು ಪಾಲಕರಲ್ಲಿ ಗೊಂದಲ ಸೃಷ್ಟಿಸಿದೆ. ಈ ಹಿಂದೆ 10ನೇ ತರಗತಿ ಮತ್ತು ಇತರ ಕೆಲವು ತರಗತಿಗಳ ಕನ್ನಡ ಪಠ್ಯಗಳ ಕೆಲವು ಪಾಠಗಳನ್ನು, ಲೇಖಕರು ಪಠ್ಯ ಪರಿಷ್ಕರಣಾ ವಿವಾದದ ಹಿನ್ನೆಲೆಯಲ್ಲಿ ತಮ್ಮ ಹಕ್ಕು ಸ್ವಾಮ್ಯವನ್ನು ಹಿಂತೆಗೆದುಕೊಂಡಿದ್ದರು. ಆದ ಕಾರಣ ಪಠ್ಯದಿಂದ ಕೈಬಿಟ್ಟು ಕಲಿಕೆ ಹಾಗೂ ಮೌಲ್ಯಮಾಪನಕ್ಕೆ
ಪರಿಗಣಿಸಬಾರದೆಂದು ಸುತ್ತೋಲೆ ಹೊರಡಿಸಲಾಗಿತ್ತು. ಅದರಂತೆ ಆ ಪಾಠಗಳನ್ನು ಶಿಕ್ಷಕರು ಕಲಿಕೆ ಮತ್ತು ಮೌಲ್ಯಮಾಪನ ಪರಿಧಿಯಿಂದ ಹೊರಗಿಟ್ಟಿದ್ದರು. ಈಗ ಸರ್ಕಾರ ಮತ್ತೊಮ್ಮೆ ಸುತ್ತೋಲೆಯನ್ನು ಹೊರಡಿಸಿ ಈ ಹಿಂದೆ ಕೈ ಬಿಟ್ಟ ಪಾಠಗಳನ್ನು ಮತ್ತೆ 2022-23ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಬೋಧನೆ ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸುವಂತೆ ಹೇಳಿದೆ. ಈ ಪಾಠಗಳನ್ನು ಮತ್ತೆ ಬೋಧನೆ ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸುವಂತೆ ಹೊರಡಿಸಿರುವ ಈ ಸುತ್ತೋಲೆ ಮಕ್ಕಳಲ್ಲಿ, ಪೋಷಕರಲ್ಲಿ ಹಾಗೂ ಶಿಕ್ಷಕರಲ್ಲಿ ಗೊಂದಲ ಉಂಟುಮಾಡಿದೆ. ಇದು ಶಿಕ್ಷಣ ಇಲಾಖೆಯೋ ಅಥವಾ ತುಘಲಕ್ ಮಾದರಿ ಆಡಳಿತವೋ ತಿಳಿಯುತ್ತಿಲ್ಲ” ಎಂದು ಟೀಕಿಸಿದ್ದಾರೆ.

ಎಲ್ಲಕ್ಕಿಂತ ಮಿಗಿಲಾಗಿ ಈಗಾಗಲೇ ಕನ್ನಡ ಕಲಿಯುವ ಮಕ್ಕಳಲ್ಲಿ ಕನ್ನಡದ ಪಾಠಗಳು ನಿರಾಸಕ್ತಿಯನ್ನು ಉಂಟು ಮಾಡಿದ್ದು, ‘ಹೆಚ್ಚು ಪಾಠಗಳಿರುವ ಭಾಷೆ ಕನ್ನಡ ಎಂತಲೂʼ, ಈ ಪಾಠಗಳನ್ನು ಶಿಕ್ಷಕರು ಒಂದು ಶೈಕ್ಷಣಿಕ ಅವಧಿಯಲ್ಲಿ ಕಲಿಸಲು ಅಸಾಧ್ಯವೆಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ ಎಂದು ತಿಳಿಸಿದ್ದಾರೆ.

“ಅಲ್ಲದೆ 2021-22ನೇ ಸಾಇನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಆರು ವಿಷಯಗಳ ಪ್ರಗತಿ ನೋಡಿದಾಗ, ಪ್ರಥಮ ಭಾಷೆ ಕನ್ನಡದ ಫಲಿತಾಂಶ 4ನೇ ಸ್ಥಾನಕ್ಕೆ ಕುಸಿದಿದೆ. ಮಕ್ಕಳು ಮತ್ತು ಪೋಷಕರು ಪ್ರಥಮ ಭಾಷೆ ಕನ್ನಡ ಆಯ್ಕೆಯಿಂದ ವಿಮುಖರಾಗಿ ಭಾಷೆಗಳನ್ನು ಅಂಕಗಳಿಕೆ ದೃಷ್ಟಿಯಿಂದ ಇತರ ಭಾಷೆಗಳಾದ ಸಂಸ್ಕೃತ , ಇಂಗ್ಲಿಷ್, ಹಿಂದಿ ಆಯ್ಕೆ ಮಾಡುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಸುತ್ತೋಲೆ ಹೊರಡಿಸಿ ವಾಪಸ್‌ ಪಡೆಯುವ ಸರ್ಕಾರ: ಒಂದೇ ತಿಂಗಳಲ್ಲಿ ಮೂರು ಪ್ರಕರಣ

‘ಕನಿಷ್ಠ ಪಠ್ಯ ಗರಿಷ್ಠ ಕಲಿಕೆ’ ಎಂಬ ತತ್ವದ ಆಧಾರದಲ್ಲಿ ಮಕ್ಕಳಲ್ಲಿ ವಿಷಯದ ಬಗ್ಗೆ ಹೆಚ್ಚು ಆಸಕ್ತಿ ಮೂಡಿಸಿರುವ ಈ ಸಂದರ್ಭದಲ್ಲಿ ಮತ್ತೆ ಕೈಬಿಟ್ಟ ಪಾಠಗಳನ್ನು ಕಲಿಯಿರಿ ಎಂದು ಹೊರಡಿಸಿರುವ ಈ ಸುತ್ತೋಲೆ ಮಕ್ಕಳು ಹಾಗು ಪಾಲಕರಲ್ಲಿ ಆತಂಕ ಮೂಡಿಸಿದೆ. ಜೊತೆಗೆ 10ನೇ ತರಗತಿಯ ಪಬ್ಲಿಕ್ ಪರೀಕ್ಷೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಇಂಥಹ ತೀರ್ಮಾನ ಸ್ವಾಭಾವಿಕವಾಗಿ ಮಕ್ಕಳು ಹಾಗು ಪಾಲಕರಲ್ಲಿ ಆತಂಕ ಮೂಡಿಸುತ್ತದೆ ಎಂದು ಹೇಳಿದ್ದಾರೆ.

ಈ ರೀತಿ ಮಕ್ಕಳ ಬದುಕಿನ ಜೊತೆ ಚೆಲ್ಲಾಟವಾಡುವುದನ್ನು ಬಿಟ್ಟು ಈ ಕೂಡಲೇ ಹಿಂದಿನ ತೀರ್ಮಾನಕ್ಕೆ ಬದ್ಧವಾಗಿ ಮೌಲ್ಯಮಾಪನ/ಪರೀಕ್ಷೆ ಸರಳಗೊಳಿಸಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಬೇಕಿದೆ. ಈಗಾಗಲೇ ಪಠ್ಯದಿಂದ ಕೈಬಿಟ್ಟ ಪಠ್ಯಗಳನ್ನು ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸಬಾರದೆಂದು ಹೊರಡಿಸಿದ್ದ ಸುತ್ತೋಲೆಯನ್ನು ಮಾನ್ಯಗೊಳಿಸಿ ಮಕ್ಕಳ ಆತಂಕವನ್ನು ದೂರ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...