Homeಕರ್ನಾಟಕಇದು ಶಿಕ್ಷಣ ಇಲಾಖೆಯೋ, ತುಘಲಕ್ ಮಾದರಿ ಆಡಳಿತವೋ?: ಡಾ.ವಿ.ಪಿ.ನಿರಂಜನಾರಾಧ್ಯ

ಇದು ಶಿಕ್ಷಣ ಇಲಾಖೆಯೋ, ತುಘಲಕ್ ಮಾದರಿ ಆಡಳಿತವೋ?: ಡಾ.ವಿ.ಪಿ.ನಿರಂಜನಾರಾಧ್ಯ

- Advertisement -
- Advertisement -

“ಶಿಕ್ಷಣ ಇಲಾಖೆಯು ತನ್ನ ಗೊಂದಲದ ನಿರ್ಧಾರಗಳಿಂದ ಹೊರಬರುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ಇದು ಶಿಕ್ಷಣ ಇಲಾಖೆಯೋ ಅಥವಾ ತುಘಲಕ್ ಮಾದರಿ ಆಡಳಿತವೋ ತಿಳಿಯುತ್ತಿಲ್ಲ” ಎಂದು ಕರ್ನಾಟಕ ರಾಜ್ಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಸಂಸ್ಥಾಪಕ ಮಹಾಪೋಷಕರಾದ ಡಾ.ವಿ.ಪಿ.ನಿರಂಜನಾರಾಧ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪಠ್ಯದಿಂದ ಹೊರಗಿಡಲಾಗಿದ್ದ ಪಾಠ, ಪದ್ಯಗಳನ್ನು ಮತ್ತೆ ಸೇರಿಸಲು ಸುತ್ತೋಲೆ ಹೊರಡಿಸಿರುವುದರಿಂದ ಗೊಂದಲ ಸೃಷ್ಟಿಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಮಕ್ಕಳ ಪ್ರವೇಶ ವಯಸ್ಸು, 5 ಹಾಗೂ 8ನೇ ತರಗಳಿಗೆ ಪಬ್ಲಿಕ್ ಪರೀಕ್ಷೆ, ಉಚಿತ ಕಡ್ಡಾಯ ಶಿಕ್ಷಣಕ್ಕೆ ಸಂವಿಧಾನ ಬಾಹಿರವಾಗಿ ಪಾಲಕರಿಂದ ಶುಲ್ಕ, ಇತ್ಯಾದಿ ಮಕ್ಕಳ ಹಾಗೂ ಪಾಲಕ ವಿರೋಧಿ ತೀರ್ಮಾನಗಳಿಗೆ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅವುಗಳನ್ನು ಹಿಂಪಡೆಯಲಾಗಿತ್ತು. ಇದು ಮಕ್ಕಳು ಹಾಗೂ ಪಾಲಕರ ಮನಸ್ಸಿನಲ್ಲಿ ಇನ್ನು ಹಸಿಯಾಗಿರುವ ಬೆನ್ನಲ್ಲೇ ಮತ್ತೊಂದು ಹೊಸ ವಿವಾದಿತ ಸುತ್ತೋಲೆಯನ್ನು ಇಲಾಖೆ ಹೊರಡಿಸಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹೊಸ ಸುತ್ತೋಲೆ ಅನ್ವಯ ಈ ಹಿಂದೆ ಮೌಲ್ಯಮಾಪನದಿಂದ ಕೈಬಿಟ್ಟಿದ್ದ ಪಾಠಗಳನ್ನು ಮತ್ತೆ ಸೇರಿಸುವ ಮೂಲಕ ಮಕ್ಕಳು ಪಾಲಕರಲ್ಲಿ ಗೊಂದಲ ಸೃಷ್ಟಿಸಿದೆ. ಈ ಹಿಂದೆ 10ನೇ ತರಗತಿ ಮತ್ತು ಇತರ ಕೆಲವು ತರಗತಿಗಳ ಕನ್ನಡ ಪಠ್ಯಗಳ ಕೆಲವು ಪಾಠಗಳನ್ನು, ಲೇಖಕರು ಪಠ್ಯ ಪರಿಷ್ಕರಣಾ ವಿವಾದದ ಹಿನ್ನೆಲೆಯಲ್ಲಿ ತಮ್ಮ ಹಕ್ಕು ಸ್ವಾಮ್ಯವನ್ನು ಹಿಂತೆಗೆದುಕೊಂಡಿದ್ದರು. ಆದ ಕಾರಣ ಪಠ್ಯದಿಂದ ಕೈಬಿಟ್ಟು ಕಲಿಕೆ ಹಾಗೂ ಮೌಲ್ಯಮಾಪನಕ್ಕೆ
ಪರಿಗಣಿಸಬಾರದೆಂದು ಸುತ್ತೋಲೆ ಹೊರಡಿಸಲಾಗಿತ್ತು. ಅದರಂತೆ ಆ ಪಾಠಗಳನ್ನು ಶಿಕ್ಷಕರು ಕಲಿಕೆ ಮತ್ತು ಮೌಲ್ಯಮಾಪನ ಪರಿಧಿಯಿಂದ ಹೊರಗಿಟ್ಟಿದ್ದರು. ಈಗ ಸರ್ಕಾರ ಮತ್ತೊಮ್ಮೆ ಸುತ್ತೋಲೆಯನ್ನು ಹೊರಡಿಸಿ ಈ ಹಿಂದೆ ಕೈ ಬಿಟ್ಟ ಪಾಠಗಳನ್ನು ಮತ್ತೆ 2022-23ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಬೋಧನೆ ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸುವಂತೆ ಹೇಳಿದೆ. ಈ ಪಾಠಗಳನ್ನು ಮತ್ತೆ ಬೋಧನೆ ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸುವಂತೆ ಹೊರಡಿಸಿರುವ ಈ ಸುತ್ತೋಲೆ ಮಕ್ಕಳಲ್ಲಿ, ಪೋಷಕರಲ್ಲಿ ಹಾಗೂ ಶಿಕ್ಷಕರಲ್ಲಿ ಗೊಂದಲ ಉಂಟುಮಾಡಿದೆ. ಇದು ಶಿಕ್ಷಣ ಇಲಾಖೆಯೋ ಅಥವಾ ತುಘಲಕ್ ಮಾದರಿ ಆಡಳಿತವೋ ತಿಳಿಯುತ್ತಿಲ್ಲ” ಎಂದು ಟೀಕಿಸಿದ್ದಾರೆ.

ಎಲ್ಲಕ್ಕಿಂತ ಮಿಗಿಲಾಗಿ ಈಗಾಗಲೇ ಕನ್ನಡ ಕಲಿಯುವ ಮಕ್ಕಳಲ್ಲಿ ಕನ್ನಡದ ಪಾಠಗಳು ನಿರಾಸಕ್ತಿಯನ್ನು ಉಂಟು ಮಾಡಿದ್ದು, ‘ಹೆಚ್ಚು ಪಾಠಗಳಿರುವ ಭಾಷೆ ಕನ್ನಡ ಎಂತಲೂʼ, ಈ ಪಾಠಗಳನ್ನು ಶಿಕ್ಷಕರು ಒಂದು ಶೈಕ್ಷಣಿಕ ಅವಧಿಯಲ್ಲಿ ಕಲಿಸಲು ಅಸಾಧ್ಯವೆಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ ಎಂದು ತಿಳಿಸಿದ್ದಾರೆ.

“ಅಲ್ಲದೆ 2021-22ನೇ ಸಾಇನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಆರು ವಿಷಯಗಳ ಪ್ರಗತಿ ನೋಡಿದಾಗ, ಪ್ರಥಮ ಭಾಷೆ ಕನ್ನಡದ ಫಲಿತಾಂಶ 4ನೇ ಸ್ಥಾನಕ್ಕೆ ಕುಸಿದಿದೆ. ಮಕ್ಕಳು ಮತ್ತು ಪೋಷಕರು ಪ್ರಥಮ ಭಾಷೆ ಕನ್ನಡ ಆಯ್ಕೆಯಿಂದ ವಿಮುಖರಾಗಿ ಭಾಷೆಗಳನ್ನು ಅಂಕಗಳಿಕೆ ದೃಷ್ಟಿಯಿಂದ ಇತರ ಭಾಷೆಗಳಾದ ಸಂಸ್ಕೃತ , ಇಂಗ್ಲಿಷ್, ಹಿಂದಿ ಆಯ್ಕೆ ಮಾಡುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಸುತ್ತೋಲೆ ಹೊರಡಿಸಿ ವಾಪಸ್‌ ಪಡೆಯುವ ಸರ್ಕಾರ: ಒಂದೇ ತಿಂಗಳಲ್ಲಿ ಮೂರು ಪ್ರಕರಣ

‘ಕನಿಷ್ಠ ಪಠ್ಯ ಗರಿಷ್ಠ ಕಲಿಕೆ’ ಎಂಬ ತತ್ವದ ಆಧಾರದಲ್ಲಿ ಮಕ್ಕಳಲ್ಲಿ ವಿಷಯದ ಬಗ್ಗೆ ಹೆಚ್ಚು ಆಸಕ್ತಿ ಮೂಡಿಸಿರುವ ಈ ಸಂದರ್ಭದಲ್ಲಿ ಮತ್ತೆ ಕೈಬಿಟ್ಟ ಪಾಠಗಳನ್ನು ಕಲಿಯಿರಿ ಎಂದು ಹೊರಡಿಸಿರುವ ಈ ಸುತ್ತೋಲೆ ಮಕ್ಕಳು ಹಾಗು ಪಾಲಕರಲ್ಲಿ ಆತಂಕ ಮೂಡಿಸಿದೆ. ಜೊತೆಗೆ 10ನೇ ತರಗತಿಯ ಪಬ್ಲಿಕ್ ಪರೀಕ್ಷೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಇಂಥಹ ತೀರ್ಮಾನ ಸ್ವಾಭಾವಿಕವಾಗಿ ಮಕ್ಕಳು ಹಾಗು ಪಾಲಕರಲ್ಲಿ ಆತಂಕ ಮೂಡಿಸುತ್ತದೆ ಎಂದು ಹೇಳಿದ್ದಾರೆ.

ಈ ರೀತಿ ಮಕ್ಕಳ ಬದುಕಿನ ಜೊತೆ ಚೆಲ್ಲಾಟವಾಡುವುದನ್ನು ಬಿಟ್ಟು ಈ ಕೂಡಲೇ ಹಿಂದಿನ ತೀರ್ಮಾನಕ್ಕೆ ಬದ್ಧವಾಗಿ ಮೌಲ್ಯಮಾಪನ/ಪರೀಕ್ಷೆ ಸರಳಗೊಳಿಸಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಬೇಕಿದೆ. ಈಗಾಗಲೇ ಪಠ್ಯದಿಂದ ಕೈಬಿಟ್ಟ ಪಠ್ಯಗಳನ್ನು ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸಬಾರದೆಂದು ಹೊರಡಿಸಿದ್ದ ಸುತ್ತೋಲೆಯನ್ನು ಮಾನ್ಯಗೊಳಿಸಿ ಮಕ್ಕಳ ಆತಂಕವನ್ನು ದೂರ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...