Homeಮುಖಪುಟ140 ಕೋಟಿ ಜನರಲ್ಲಿ 100 ಜನ ಮಾತ್ರ ಅತೀ ಶ್ರೀಮಂತರಾಗುವುದು ನ್ಯಾಯವೆ?- ರಾಹುಲ್ ಗಾಂಧಿ ಪ್ರಶ್ನೆ

140 ಕೋಟಿ ಜನರಲ್ಲಿ 100 ಜನ ಮಾತ್ರ ಅತೀ ಶ್ರೀಮಂತರಾಗುವುದು ನ್ಯಾಯವೆ?- ರಾಹುಲ್ ಗಾಂಧಿ ಪ್ರಶ್ನೆ

"ಮೋದಿ ಸರ್ಕಾರವು ಎರಡು ಭಾರತಗಳನ್ನು ಸೃಷ್ಟಿಸಿದೆ. ಒಂದು ಬಡವರು ಮತ್ತು ಸಾಮಾನ್ಯ ಜನರು ವಾಸಿಸುವ ಭಾರತ. ಮತ್ತೊಂದು ಎಲ್ಲಾ ಸಂಪತ್ತನ್ನು ಹೊಂದಿರುವ ಕೇವಲ 200-300 ಜನರು ವಾಸಿಸುವ ಭಾರತವಾಗಿದೆ.

- Advertisement -
- Advertisement -

ಭಾರತ ದೇಶದ 140 ಕೋಟಿ ಜನರಲ್ಲಿ ಕೇವಲ 100 ಜನ ಮಾತ್ರ ಅತೀ ಶ್ರೀಮಂತರಾಗುವುದು ನ್ಯಾಯವೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಭಾರತ್ ಜೋಡೋ ಜಾತ್ರೆಯ 112ನೇ ದಿನವಾದ ಇಂದು ಉತ್ತರ ಪ್ರದೇಶದಿಂದ ಹರಿಯಾಣ ರಾಜ್ಯ ಪ್ರವೇಶಿಸಿ ಪಾಣಿಪತ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನನ್ನ ಮನಸ್ಸಿನಲ್ಲಿ ಒಂದು ಪ್ರಶ್ನೆ ಇದೆ. ದೇಶದ ಜನಸಂಖ್ಯೆ 140 ಕೋಟಿ ಇದೆ. ಆದರೆ ದೇಶದ ಒಟ್ಟು ಸಂಪತ್ತಿನ ಶೇಕಡ 50 ರಷ್ಟನ್ನು ದೇಶದ ಕೇವಲ 100 ಶ್ರೀಮಂತರು ಮಾತ್ರ ಹೊಂದಿದ್ದಾರೆ. ನಿಮಗೆ ಇದರಲ್ಲಿ ನ್ಯಾಯ ಕಾಣುತ್ತಿದೆಯೇ? ಇದು ನರೇಂದ್ರ ಮೋದಿಯವರ ಭಾರತದ ವಾಸ್ತವಸ್ಥಿತಿ” ಎಂದು ಹೇಳಿದ್ದಾರೆ.

“ನೀವು ಭಾರತದ ಎಲ್ಲಾ ಕಾರ್ಪೊರೇಟ್ ಲಾಭಗಳನ್ನು ನೋಡಿದರೆ, 90 ಪ್ರತಿಶತದಷ್ಟು ಲಾಭವು ಕೇವಲ 20 ಕಾರ್ಪೊರೇಟ್‌ಗಳಿಗೆ ಮಾತ್ರ ದಕ್ಕುಕತ್ತಿದೆ ಮತ್ತು ಈ ದೇಶದ ಅರ್ಧದಷ್ಟು ಸಂಪತ್ತು ಕೇವಲ 100 ಜನರ ಕೈಯಲ್ಲಿದೆ. ಇದು ನರೇಂದ್ರ ಮೋದಿಯವರ ಭಾರತದ ಸತ್ಯದರ್ಶನ” ಎಂದು ಅವರು ಹೇಳಿದ್ದಾರೆ.

“ಮೋದಿ ಸರ್ಕಾರವು ಎರಡು ಭಾರತಗಳನ್ನು ಸೃಷ್ಟಿಸಿದೆ. ಒಂದು ಬಡವರು ಮತ್ತು ಸಾಮಾನ್ಯ ಜನರು ವಾಸಿಸುವ ಭಾರತ. ಮತ್ತೊಂದು ಎಲ್ಲಾ ಸಂಪತ್ತನ್ನು ಹೊಂದಿರುವ ಕೇವಲ 200-300 ಜನರು ವಾಸಿಸುವ ಭಾರತವಾಗಿದೆ. ನಿಮ್ಮ ಬಳಿ ಏನೂ ಇಲ್ಲ. ನಿಮ್ಮ ಬಳಿ ಕೇವಲ ಪಾಣಿಪತ್‌ ನೀಡುವ ಗಾಳಿ ಮಾತ್ರ ಇದೆ ಅದು ಸಹ ಉಸಿರಾಡಲು ಕಷ್ಟವಾದ ಗಾಳಿಯಾಗಿದ್ದು, ಅದರಿಂದ ಕ್ಯಾನ್ಸರ್ ಬರುತ್ತದೆ” ಎಂದು ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಾಣಿಪತ್ ಅತಿ ಸಣ್ಣ ಕೈಗಾರಿಕೆಗಳ ಕೇಂದ್ರವಾಗಿದೆ. ಆದರೆ ನೋಟು ಅಮಾನ್ಯೀಕರಣ ಮತ್ತು ಜಿಎಸ್‌ಟಿ ಸಣ್ಣ ಮತ್ತು ಮಧ್ಯಮ ವ್ಯವಹಾರಗಳನ್ನು ಹಾಳುಮಾಡಿದೆ. ಇದು ಪಾಣಿಪತ್ ಕಥೆ ಮಾತ್ರವಲ್ಲ ಬದಲಿಗೆ ಇಡೀ ದೇಶದ ಕಥೆಯಾಗಿದೆ. ಜಿಎಸ್‌ಟಿ ಮತ್ತು ನೋಟು ನಿಷೇಧ ದೇಶದ ಬೆನ್ನೆಲುಬು ಮುರಿದಿದೆ. ನಿರುದ್ಯೋಗದಲ್ಲಿ ಶೇ.38 ರಷ್ಟು ಹೆಚ್ಚಿರುವ ಹರಿಯಾಣ ದೇಶದಲ್ಲೇ ಅಗ್ರಸ್ಥಾನದಲ್ಲಿದೆ ಎಂದರು.

ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ ಜಮ್ಮು ಕಾಶ್ಮೀರ ಮುಖಂಡರು

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಜಮ್ಮು ಕಾಶ್ಮೀರ ರಾಜ್ಯಕ್ಕೆ ಪ್ರವೇಶಿಸುವ ಮುನ್ನವೇ ಕಾಂಗ್ರೆಸ್ ತೊರೆದು ಗುಲಾಮ್ ನಬಿ ಆಜಾದ್ ಅವರ ಡೆಮಾಕ್ರಟಿಕ್ ಆಜಾದ್ ಪಕ್ಷ ಸೇರಿದ್ದ ಮಾಜಿ ಉಪ ಮುಖ್ಯಮಂತ್ರಿ ತಾರಾ ಚಂದ್, ಮಾಜಿ ಸಚಿವರಾದ ಪೀರ್ಜಾದಾ ಮೊಹಮ್ಮದ್ ಸಯೀದ್, ಬಲ್ವಾನ್ ಸಿಂಗ್ ಸೇರಿದಂತೆ ಇತರ ಪ್ರಮುಖ ನಾಯಕರು ಇಂದು ಮತ್ತೆ ಕಾಂಗ್ರೆಸಿಗೆ ವಾಪಸ್ಸಾಗಿದ್ದಾರೆ. ಇದು ಕಾಂಗ್ರೆಸ್ ಪಕ್ಷಕ್ಕೆ ಬಲ ತರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....