Homeಮುಖಪುಟ140 ಕೋಟಿ ಜನರಲ್ಲಿ 100 ಜನ ಮಾತ್ರ ಅತೀ ಶ್ರೀಮಂತರಾಗುವುದು ನ್ಯಾಯವೆ?- ರಾಹುಲ್ ಗಾಂಧಿ ಪ್ರಶ್ನೆ

140 ಕೋಟಿ ಜನರಲ್ಲಿ 100 ಜನ ಮಾತ್ರ ಅತೀ ಶ್ರೀಮಂತರಾಗುವುದು ನ್ಯಾಯವೆ?- ರಾಹುಲ್ ಗಾಂಧಿ ಪ್ರಶ್ನೆ

"ಮೋದಿ ಸರ್ಕಾರವು ಎರಡು ಭಾರತಗಳನ್ನು ಸೃಷ್ಟಿಸಿದೆ. ಒಂದು ಬಡವರು ಮತ್ತು ಸಾಮಾನ್ಯ ಜನರು ವಾಸಿಸುವ ಭಾರತ. ಮತ್ತೊಂದು ಎಲ್ಲಾ ಸಂಪತ್ತನ್ನು ಹೊಂದಿರುವ ಕೇವಲ 200-300 ಜನರು ವಾಸಿಸುವ ಭಾರತವಾಗಿದೆ.

- Advertisement -
- Advertisement -

ಭಾರತ ದೇಶದ 140 ಕೋಟಿ ಜನರಲ್ಲಿ ಕೇವಲ 100 ಜನ ಮಾತ್ರ ಅತೀ ಶ್ರೀಮಂತರಾಗುವುದು ನ್ಯಾಯವೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಭಾರತ್ ಜೋಡೋ ಜಾತ್ರೆಯ 112ನೇ ದಿನವಾದ ಇಂದು ಉತ್ತರ ಪ್ರದೇಶದಿಂದ ಹರಿಯಾಣ ರಾಜ್ಯ ಪ್ರವೇಶಿಸಿ ಪಾಣಿಪತ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನನ್ನ ಮನಸ್ಸಿನಲ್ಲಿ ಒಂದು ಪ್ರಶ್ನೆ ಇದೆ. ದೇಶದ ಜನಸಂಖ್ಯೆ 140 ಕೋಟಿ ಇದೆ. ಆದರೆ ದೇಶದ ಒಟ್ಟು ಸಂಪತ್ತಿನ ಶೇಕಡ 50 ರಷ್ಟನ್ನು ದೇಶದ ಕೇವಲ 100 ಶ್ರೀಮಂತರು ಮಾತ್ರ ಹೊಂದಿದ್ದಾರೆ. ನಿಮಗೆ ಇದರಲ್ಲಿ ನ್ಯಾಯ ಕಾಣುತ್ತಿದೆಯೇ? ಇದು ನರೇಂದ್ರ ಮೋದಿಯವರ ಭಾರತದ ವಾಸ್ತವಸ್ಥಿತಿ” ಎಂದು ಹೇಳಿದ್ದಾರೆ.

“ನೀವು ಭಾರತದ ಎಲ್ಲಾ ಕಾರ್ಪೊರೇಟ್ ಲಾಭಗಳನ್ನು ನೋಡಿದರೆ, 90 ಪ್ರತಿಶತದಷ್ಟು ಲಾಭವು ಕೇವಲ 20 ಕಾರ್ಪೊರೇಟ್‌ಗಳಿಗೆ ಮಾತ್ರ ದಕ್ಕುಕತ್ತಿದೆ ಮತ್ತು ಈ ದೇಶದ ಅರ್ಧದಷ್ಟು ಸಂಪತ್ತು ಕೇವಲ 100 ಜನರ ಕೈಯಲ್ಲಿದೆ. ಇದು ನರೇಂದ್ರ ಮೋದಿಯವರ ಭಾರತದ ಸತ್ಯದರ್ಶನ” ಎಂದು ಅವರು ಹೇಳಿದ್ದಾರೆ.

“ಮೋದಿ ಸರ್ಕಾರವು ಎರಡು ಭಾರತಗಳನ್ನು ಸೃಷ್ಟಿಸಿದೆ. ಒಂದು ಬಡವರು ಮತ್ತು ಸಾಮಾನ್ಯ ಜನರು ವಾಸಿಸುವ ಭಾರತ. ಮತ್ತೊಂದು ಎಲ್ಲಾ ಸಂಪತ್ತನ್ನು ಹೊಂದಿರುವ ಕೇವಲ 200-300 ಜನರು ವಾಸಿಸುವ ಭಾರತವಾಗಿದೆ. ನಿಮ್ಮ ಬಳಿ ಏನೂ ಇಲ್ಲ. ನಿಮ್ಮ ಬಳಿ ಕೇವಲ ಪಾಣಿಪತ್‌ ನೀಡುವ ಗಾಳಿ ಮಾತ್ರ ಇದೆ ಅದು ಸಹ ಉಸಿರಾಡಲು ಕಷ್ಟವಾದ ಗಾಳಿಯಾಗಿದ್ದು, ಅದರಿಂದ ಕ್ಯಾನ್ಸರ್ ಬರುತ್ತದೆ” ಎಂದು ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಾಣಿಪತ್ ಅತಿ ಸಣ್ಣ ಕೈಗಾರಿಕೆಗಳ ಕೇಂದ್ರವಾಗಿದೆ. ಆದರೆ ನೋಟು ಅಮಾನ್ಯೀಕರಣ ಮತ್ತು ಜಿಎಸ್‌ಟಿ ಸಣ್ಣ ಮತ್ತು ಮಧ್ಯಮ ವ್ಯವಹಾರಗಳನ್ನು ಹಾಳುಮಾಡಿದೆ. ಇದು ಪಾಣಿಪತ್ ಕಥೆ ಮಾತ್ರವಲ್ಲ ಬದಲಿಗೆ ಇಡೀ ದೇಶದ ಕಥೆಯಾಗಿದೆ. ಜಿಎಸ್‌ಟಿ ಮತ್ತು ನೋಟು ನಿಷೇಧ ದೇಶದ ಬೆನ್ನೆಲುಬು ಮುರಿದಿದೆ. ನಿರುದ್ಯೋಗದಲ್ಲಿ ಶೇ.38 ರಷ್ಟು ಹೆಚ್ಚಿರುವ ಹರಿಯಾಣ ದೇಶದಲ್ಲೇ ಅಗ್ರಸ್ಥಾನದಲ್ಲಿದೆ ಎಂದರು.

ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ ಜಮ್ಮು ಕಾಶ್ಮೀರ ಮುಖಂಡರು

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಜಮ್ಮು ಕಾಶ್ಮೀರ ರಾಜ್ಯಕ್ಕೆ ಪ್ರವೇಶಿಸುವ ಮುನ್ನವೇ ಕಾಂಗ್ರೆಸ್ ತೊರೆದು ಗುಲಾಮ್ ನಬಿ ಆಜಾದ್ ಅವರ ಡೆಮಾಕ್ರಟಿಕ್ ಆಜಾದ್ ಪಕ್ಷ ಸೇರಿದ್ದ ಮಾಜಿ ಉಪ ಮುಖ್ಯಮಂತ್ರಿ ತಾರಾ ಚಂದ್, ಮಾಜಿ ಸಚಿವರಾದ ಪೀರ್ಜಾದಾ ಮೊಹಮ್ಮದ್ ಸಯೀದ್, ಬಲ್ವಾನ್ ಸಿಂಗ್ ಸೇರಿದಂತೆ ಇತರ ಪ್ರಮುಖ ನಾಯಕರು ಇಂದು ಮತ್ತೆ ಕಾಂಗ್ರೆಸಿಗೆ ವಾಪಸ್ಸಾಗಿದ್ದಾರೆ. ಇದು ಕಾಂಗ್ರೆಸ್ ಪಕ್ಷಕ್ಕೆ ಬಲ ತರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...