Homeಮುಖಪುಟ140 ಕೋಟಿ ಜನರಲ್ಲಿ 100 ಜನ ಮಾತ್ರ ಅತೀ ಶ್ರೀಮಂತರಾಗುವುದು ನ್ಯಾಯವೆ?- ರಾಹುಲ್ ಗಾಂಧಿ ಪ್ರಶ್ನೆ

140 ಕೋಟಿ ಜನರಲ್ಲಿ 100 ಜನ ಮಾತ್ರ ಅತೀ ಶ್ರೀಮಂತರಾಗುವುದು ನ್ಯಾಯವೆ?- ರಾಹುಲ್ ಗಾಂಧಿ ಪ್ರಶ್ನೆ

"ಮೋದಿ ಸರ್ಕಾರವು ಎರಡು ಭಾರತಗಳನ್ನು ಸೃಷ್ಟಿಸಿದೆ. ಒಂದು ಬಡವರು ಮತ್ತು ಸಾಮಾನ್ಯ ಜನರು ವಾಸಿಸುವ ಭಾರತ. ಮತ್ತೊಂದು ಎಲ್ಲಾ ಸಂಪತ್ತನ್ನು ಹೊಂದಿರುವ ಕೇವಲ 200-300 ಜನರು ವಾಸಿಸುವ ಭಾರತವಾಗಿದೆ.

- Advertisement -
- Advertisement -

ಭಾರತ ದೇಶದ 140 ಕೋಟಿ ಜನರಲ್ಲಿ ಕೇವಲ 100 ಜನ ಮಾತ್ರ ಅತೀ ಶ್ರೀಮಂತರಾಗುವುದು ನ್ಯಾಯವೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಭಾರತ್ ಜೋಡೋ ಜಾತ್ರೆಯ 112ನೇ ದಿನವಾದ ಇಂದು ಉತ್ತರ ಪ್ರದೇಶದಿಂದ ಹರಿಯಾಣ ರಾಜ್ಯ ಪ್ರವೇಶಿಸಿ ಪಾಣಿಪತ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನನ್ನ ಮನಸ್ಸಿನಲ್ಲಿ ಒಂದು ಪ್ರಶ್ನೆ ಇದೆ. ದೇಶದ ಜನಸಂಖ್ಯೆ 140 ಕೋಟಿ ಇದೆ. ಆದರೆ ದೇಶದ ಒಟ್ಟು ಸಂಪತ್ತಿನ ಶೇಕಡ 50 ರಷ್ಟನ್ನು ದೇಶದ ಕೇವಲ 100 ಶ್ರೀಮಂತರು ಮಾತ್ರ ಹೊಂದಿದ್ದಾರೆ. ನಿಮಗೆ ಇದರಲ್ಲಿ ನ್ಯಾಯ ಕಾಣುತ್ತಿದೆಯೇ? ಇದು ನರೇಂದ್ರ ಮೋದಿಯವರ ಭಾರತದ ವಾಸ್ತವಸ್ಥಿತಿ” ಎಂದು ಹೇಳಿದ್ದಾರೆ.

“ನೀವು ಭಾರತದ ಎಲ್ಲಾ ಕಾರ್ಪೊರೇಟ್ ಲಾಭಗಳನ್ನು ನೋಡಿದರೆ, 90 ಪ್ರತಿಶತದಷ್ಟು ಲಾಭವು ಕೇವಲ 20 ಕಾರ್ಪೊರೇಟ್‌ಗಳಿಗೆ ಮಾತ್ರ ದಕ್ಕುಕತ್ತಿದೆ ಮತ್ತು ಈ ದೇಶದ ಅರ್ಧದಷ್ಟು ಸಂಪತ್ತು ಕೇವಲ 100 ಜನರ ಕೈಯಲ್ಲಿದೆ. ಇದು ನರೇಂದ್ರ ಮೋದಿಯವರ ಭಾರತದ ಸತ್ಯದರ್ಶನ” ಎಂದು ಅವರು ಹೇಳಿದ್ದಾರೆ.

“ಮೋದಿ ಸರ್ಕಾರವು ಎರಡು ಭಾರತಗಳನ್ನು ಸೃಷ್ಟಿಸಿದೆ. ಒಂದು ಬಡವರು ಮತ್ತು ಸಾಮಾನ್ಯ ಜನರು ವಾಸಿಸುವ ಭಾರತ. ಮತ್ತೊಂದು ಎಲ್ಲಾ ಸಂಪತ್ತನ್ನು ಹೊಂದಿರುವ ಕೇವಲ 200-300 ಜನರು ವಾಸಿಸುವ ಭಾರತವಾಗಿದೆ. ನಿಮ್ಮ ಬಳಿ ಏನೂ ಇಲ್ಲ. ನಿಮ್ಮ ಬಳಿ ಕೇವಲ ಪಾಣಿಪತ್‌ ನೀಡುವ ಗಾಳಿ ಮಾತ್ರ ಇದೆ ಅದು ಸಹ ಉಸಿರಾಡಲು ಕಷ್ಟವಾದ ಗಾಳಿಯಾಗಿದ್ದು, ಅದರಿಂದ ಕ್ಯಾನ್ಸರ್ ಬರುತ್ತದೆ” ಎಂದು ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಾಣಿಪತ್ ಅತಿ ಸಣ್ಣ ಕೈಗಾರಿಕೆಗಳ ಕೇಂದ್ರವಾಗಿದೆ. ಆದರೆ ನೋಟು ಅಮಾನ್ಯೀಕರಣ ಮತ್ತು ಜಿಎಸ್‌ಟಿ ಸಣ್ಣ ಮತ್ತು ಮಧ್ಯಮ ವ್ಯವಹಾರಗಳನ್ನು ಹಾಳುಮಾಡಿದೆ. ಇದು ಪಾಣಿಪತ್ ಕಥೆ ಮಾತ್ರವಲ್ಲ ಬದಲಿಗೆ ಇಡೀ ದೇಶದ ಕಥೆಯಾಗಿದೆ. ಜಿಎಸ್‌ಟಿ ಮತ್ತು ನೋಟು ನಿಷೇಧ ದೇಶದ ಬೆನ್ನೆಲುಬು ಮುರಿದಿದೆ. ನಿರುದ್ಯೋಗದಲ್ಲಿ ಶೇ.38 ರಷ್ಟು ಹೆಚ್ಚಿರುವ ಹರಿಯಾಣ ದೇಶದಲ್ಲೇ ಅಗ್ರಸ್ಥಾನದಲ್ಲಿದೆ ಎಂದರು.

ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ ಜಮ್ಮು ಕಾಶ್ಮೀರ ಮುಖಂಡರು

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಜಮ್ಮು ಕಾಶ್ಮೀರ ರಾಜ್ಯಕ್ಕೆ ಪ್ರವೇಶಿಸುವ ಮುನ್ನವೇ ಕಾಂಗ್ರೆಸ್ ತೊರೆದು ಗುಲಾಮ್ ನಬಿ ಆಜಾದ್ ಅವರ ಡೆಮಾಕ್ರಟಿಕ್ ಆಜಾದ್ ಪಕ್ಷ ಸೇರಿದ್ದ ಮಾಜಿ ಉಪ ಮುಖ್ಯಮಂತ್ರಿ ತಾರಾ ಚಂದ್, ಮಾಜಿ ಸಚಿವರಾದ ಪೀರ್ಜಾದಾ ಮೊಹಮ್ಮದ್ ಸಯೀದ್, ಬಲ್ವಾನ್ ಸಿಂಗ್ ಸೇರಿದಂತೆ ಇತರ ಪ್ರಮುಖ ನಾಯಕರು ಇಂದು ಮತ್ತೆ ಕಾಂಗ್ರೆಸಿಗೆ ವಾಪಸ್ಸಾಗಿದ್ದಾರೆ. ಇದು ಕಾಂಗ್ರೆಸ್ ಪಕ್ಷಕ್ಕೆ ಬಲ ತರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...