Homeಮುಖಪುಟಸರ್ಕಾರದ ಪರವಾಗಿ ರಫೇಲ್, ಅಯೋಧ್ಯಾ, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು...

ಸರ್ಕಾರದ ಪರವಾಗಿ ರಫೇಲ್, ಅಯೋಧ್ಯಾ, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ಸಿಗುತ್ತದೆ: ಇದರ ಅರ್ಥವೇನು?

ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನಾ ಪ್ರಕರಣದಲ್ಲಿ ನ್ಯಾ. ಗೊಗೋಯ್ ವಿರುದ್ಧ  ವಕೀಲ ದುಷ್ಯಂತ್ ದವೆ ವಾಗ್ದಾಳಿ...

- Advertisement -
- Advertisement -

“ರಫೇಲ್ ವಿಚಾರ, ಅಯೋಧ್ಯಾ ತೀರ್ಪು, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ಸಿಗುತ್ತದೆ. ಇದು ಯಾವ ರೀತಿಯ ಅನಿಸಿಕೆ ಅಥವಾ ಚಿತ್ರಣವನ್ನು ಮೂಡಿಸುತ್ತದೆ?” ಎಂದು ಮಾಜಿ ಮುಖ್ಯ ನ್ಯಾಯಾಧೀಶ ಗೊಗೊಯ್ ವಿರುದ್ಧ ಸುಪ್ರೀಂಕೋರ್ಟ್ ವಕೀಲ ದುಷ್ಯಂತ್ ದವೆ ವಾಗ್ದಾಳಿ ನಡೆಸಿದ್ದಾರೆ.

ಸುಪ್ರೀಂಕೋರ್ಟ್ ವಕೀಲ ದುಷ್ಯಂತ್ ದವೆಯವರು ಬುಧವಾರ ನ್ಯಾಯಾಂಗ ನಿಂದನಾ ಪ್ರಕರಣದಲ್ಲಿ ಪ್ರಶಾಂತ್ ಭೂಷಣ್ ಪರವಾಗಿ ವಾದ ಮಂಡಿಸಿದರು. ಭಾರತದ ಮಾಜಿ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ಸೇರಿದಂತೆ ಕೆಲವು ನಿರ್ದಿಷ್ಟ ನ್ಯಾಯಾಧೀಶರ ಅಡಿಯಲ್ಲಿ ನ್ಯಾಯಾಂಗದ ಸಮಗ್ರತೆಯ ಕೊರತೆಯ ವಿಷಯದಲ್ಲಿ ಇರುವ ವ್ಯಾಪಕ ಅಭಿಪ್ರಾಯದ ಪ್ರಶ್ನೆಯನ್ನು ಅವರು ಎತ್ತಿದರು.

ನ್ಯಾಯಾಂಗವು ಪತನಗೊಂಡಂತೆ ಕಾಣುವ ಅತ್ಯಂತ ಮಹತ್ವದ ಮತ್ತು ರಾಜಕೀಯವಾಗಿ ಸೂಕ್ಷ್ಮವಾದ ಹಲವಾರು ಪ್ರಕರಣಗಳಲ್ಲಿ ನೀಡಲಾದ ತೀರ್ಪಿನ ಮೇಲೆ ದವೆಯವರು ನ್ಯಾಯಾಲಯದ ಗಮನ ಸೆಳೆದರು.

ಗೊಗೋಯ್ ಅವರನ್ನು ಉಲ್ಲೇಖಿಸಿದ ಅವರು, ರಫೇಲ್, ಅಯೋಧ್ಯಾ ಮತ್ತು ಸಿಬಿಐ ಪ್ರಕರಣಗಳಂತಹ ಹಲವಾರು ಪ್ರಕರಣಗಳಲ್ಲಿ ಕೇಂದ್ರ ಸರಕಾರದ ಪರವಾಗಿರುವ ತೀರ್ಪು ನೀಡಿದ ನಂತರ ರಾಜ್ಯಸಭಾ ನಾಮಕರಣ ಮತ್ತು ಝಡ್ ಶ್ರೇಣಿಯ ಭದ್ರತೆಯನ್ನು ಸ್ವೀಕರಿಸುವ ಮೂಲಕ ಮಾಜಿ ಮುಖ್ಯ ನ್ಯಾಯಾಧೀಶರು ನ್ಯಾಯಾಂಗದ ಬಗ್ಗೆ ಎಂತಹ ಒಂದು ಅಭಿಪ್ರಾಯ ಮೂಡಿಸಿದ್ದಾರೆ ಎಂದು ದವೆ ಪ್ರಶ್ನಿಸಿದರು.

“ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ಸಿಗುತ್ತದೆ…ಇದು ಯಾವ ಅಭಿಪ್ರಾಯ ಮೂಡಿಸುತ್ತದೆ?…ರಫೇಲ್ ತೀರ್ಪು, ಅಯೋಧ್ಯಾ ತೀರ್ಪು, ಸಿಬಿಐ ತೀರ್ಪು. ನೀವು ಈ ತೀರ್ಪುಗಳನ್ನು ನೀಡುತ್ತೀರಿ. ನಿಮಗೆ ಇಂತಹ ಸವಲತ್ತುಗಳು ಸಿಗುತ್ತವೆ. ಇವೆಲ್ಲವೂ ನ್ಯಾಯಾಂಗದ ಮೂಲಕ್ಕೇ ಹೊಡೆಯುವ ಗಂಭೀರವಾದ ವಿಷಯಗಳು” ಎಂದು ದವೆಯವರು ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಬಿ.ಆರ್. ಗವಾಯ್ ಮತ್ತು ಕೃಷ್ಢ ಮುರಾರಿ ಅವರನ್ನು ಒಳಗೊಂಡ ಸುಪ್ರೀಂಕೋರ್ಟ್ ಪೀಠಕ್ಕೆ ಹೇಳಿದರು.

ದವೆಯವರು ಅಲ್ಲಿಗೇ ನಿಲ್ಲಿಸಲಿಲ್ಲ. “ರಾಜಕೀಯವಾಗಿ ಸೂಕ್ಷ್ಮವಾದ ಪ್ರಕರಣಗಳು ಕೆಲವು ನಿರ್ದಿಷ್ಟ ನ್ಯಾಯಾಧೀಶರಿಗೆ ಮಾತ್ರ ಸಿಗುವುದು ಏಕೆ? ಉದಾಹರಣೆಗೆ ನ್ಯಾ. ನಾರಿಮನ್- ಅವರಿಗೆ ಎಂದೂ ಇಂತಹಾ ರಾಜಕೀಯ ಸೂಕ್ಷ್ಮ ಪ್ರಕರಣಗಳ ವಿಚಾರಣೆ ಸಿಗುವುದೇ ಇಲ್ಲ!” ಎಂದು ಅವರು ಪ್ರಶ್ನೆ ಮಾಡಿದರು.

‘ಲೈವ್ ಲಾ’ ವರದಿ ಪ್ರಕಾರ, ನ್ಯಾ. ಮಿಶ್ರಾ ಅವರು, “ನ್ಯಾ. ನಾರಿಮನ್ ಅವರು ಕೆಲವು ಸಾಂವಿಧಾನಿಕ ಪೀಠಗಳ ಭಾಗವಾಗಿದ್ದರು” ಎಂದು ಪ್ರತಿಯಾಡಿದರೆ, ನ್ಯಾ. ಗವಾಯ್ ಅವರು, ನ್ಯಾ. ನಾರಿಮನ್ ಅವರು ಮಣಿಪುರ ಪ್ರಕರಣದ ಭಾಗವಾಗಿದ್ದರು ಎಂದು ಹೇಳಿದರು.

ಇದಕ್ಕೆ ಪ್ರತಿಯಾಗಿ ದವೆಯವರು, ತಾನು ರಾಜಕೀಯವಾಗಿ ಸೂಕ್ಷ್ಮವಾಗಿರುವ ಪ್ರಕರಣಗಳ ಬಗ್ಗೆ ಮಾತನಾಡುತ್ತಿದ್ದು, ಬೇಕಾದರೆ ಇಂತಹ 50 ಪ್ರಕರಣಗಳ ಯಾದಿ ಕೊಡಬಲ್ಲೆ ಎಂದೂ ಸೇರಿಸಿದರು. ದೇಶದ 130 ಕೋಟಿ ಜನತೆಯ ಕುರಿತು ನ್ಯಾಯ ಪೀಠಕ್ಕೆ ಇರುವ ಜವಾಬ್ದಾರಿಯನ್ನು ಅವರು ನೆನಪಿಸಿದರು. “ನೀವು 130 ಕೋಟಿ ಜನರ ಹೆತ್ತವರಂತೆ. ನಮ್ಮ ದೇಶದ ರಾಜಕಾರಣಿಗಳ ಬಗ್ಗೆ ನಮಗೆ ಗೊತ್ತು. ನಾಗರಿಕರ ಹಕ್ಕುಗಳನ್ನು ಎತ್ತಿಹಿಡಿಯುವುದು ಸುಪ್ರೀಂಕೋರ್ಟಿಗೆ ಬಿಟ್ಟದ್ದು” ಎಂದು ಅವರು ಹೇಳಿದರು.

ತಾನು ಈ ಪೀಠದ ಮುಂದೆ ಬಹುಶಃ ಕೊನೆಯ ಬಾರಿ ಹಾಜರಾಗುತ್ತಿದ್ದೇನೆ ಎಂದು ಪ್ರಶಾಂತ್ ಭೂಷಣ್ ಅವರು ಸ್ಪಷ್ಟಪಡಿಸಿರುವಂತೆಯೇ, ಅವರು ಯಾವುದೇ ನ್ಯಾಯಾಂಗ ನಿಂದನೆ ಮಾಡಿಲ್ಲ ಎಂದು ಹೇಳುವ ಮೂಲಕ ಅವರು ತನ್ನ ವಾದವನ್ನು ಕೊನೆಗೊಳಿಸಿದರು.

ತನ್ನ ವಾದದ ವೇಳೆ ದವೆಯವರು, ಭಾರತೀಯ ನ್ಯಾಯಾಂಗಕ್ಕೆ ಪ್ರಶಾಂತ್ ಭೂಷಣ್ ಅವರು ನೀಡಿರುವ ಅಗಾಧವಾದ ಕೊಡುಗೆಯನ್ನು ನ್ಯಾಯಪೀಠಕ್ಕೆ ನೆನಪಿಸಿದರು. ವಿಚಾರಣೆಯನ್ನು ಮುಗಿಸಿದ ನ್ಯಾಯಪೀಠವು ತನ್ನ ಆದೇಶವನ್ನು ಕಾದಿರಿಸಿತು.

ಪ್ರಶಾಂತ್ ಭೂಷಣ ಅವರು ಹಿಂದಿನ ನಾಲ್ವರು ಮುಖ್ಯ ನ್ಯಾಯಾಧೀಶರ ನಡವಳಿಕೆಗಳನ್ನು ಉಲ್ಲೇಖಿಸಿ ನ್ಯಾಯಾಂಗದ ಸಮಗ್ರತೆಯ ಕುರಿತಂತೆ ಪ್ರಶ್ನೆಗಳನ್ನು ಎತ್ತುವ ಎರಡು ಟ್ವೀಟ್‌ಗಳನ್ನು ಮಾಡಿದ್ದಕ್ಕಾಗಿ ಸುಪ್ರೀಂಕೋರ್ಟ್ ಕಳೆದ ತಿಂಗಳು ಅವರ ವಿರುದ್ಧ ಸ್ವಯಂಪ್ರೇರಿತ ನ್ಯಾಯಾಂಗ ನಿಂದನಾ ವಿಚಾರಣೆಯನ್ನು ಆರಂಭಿಸಿತ್ತು. ಜೂನ್ 29ರ ಟ್ವೀಟ್‌ನಲ್ಲಿ  ಭೂಷಣ್ ಅವರು ಮುಖ್ಯ ನ್ಯಾಯಾಧೀಶ ಎಸ್.ಎ. ಬೋಬ್ಡೆ ಅವರು ನಾಗಪುರದಲ್ಲಿ ಬಿಜೆಪಿ ನಾಯಕನೊಬ್ಬನಿಗೆ ಸೇರಿದ ಐಷಾರಾಮಿ ಹ್ಯಾರ್ಲೀ ಡೇವಿಡ್‌ಸನ್ ಬೈಕಿನಲ್ಲಿ ಹೆಲ್ಮೆಟ್ ಮತ್ತು ಮಾಸ್ಕ್ ಇಲ್ಲದೇ ಕುಳಿತಿದ್ದಕ್ಕಾಗಿ ಅವರನ್ನು ಗುರಿಮಾಡಿ ಟೀಕಿಸಿದ್ದರು.

ಕೃಪೆ: ಜನತಾಕಿರಿಪೋರ್ಟರ್

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ಸುಪ್ರೀಂಕೋರ್ಟಿನ ನ್ಯಾಯಾಂಗ ನಿಂದನೆ ನೋಟೀಸಿಗೆ ವಕೀಲ ಪ್ರಶಾಂತ್ ಭೂಷಣ್ ಸ್ಫೋಟಕ ಉತ್ತರ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...