Homeಮುಖಪುಟಸರ್ಕಾರದ ಪರವಾಗಿ ರಫೇಲ್, ಅಯೋಧ್ಯಾ, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು...

ಸರ್ಕಾರದ ಪರವಾಗಿ ರಫೇಲ್, ಅಯೋಧ್ಯಾ, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ಸಿಗುತ್ತದೆ: ಇದರ ಅರ್ಥವೇನು?

ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನಾ ಪ್ರಕರಣದಲ್ಲಿ ನ್ಯಾ. ಗೊಗೋಯ್ ವಿರುದ್ಧ  ವಕೀಲ ದುಷ್ಯಂತ್ ದವೆ ವಾಗ್ದಾಳಿ...

- Advertisement -
- Advertisement -

“ರಫೇಲ್ ವಿಚಾರ, ಅಯೋಧ್ಯಾ ತೀರ್ಪು, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ಸಿಗುತ್ತದೆ. ಇದು ಯಾವ ರೀತಿಯ ಅನಿಸಿಕೆ ಅಥವಾ ಚಿತ್ರಣವನ್ನು ಮೂಡಿಸುತ್ತದೆ?” ಎಂದು ಮಾಜಿ ಮುಖ್ಯ ನ್ಯಾಯಾಧೀಶ ಗೊಗೊಯ್ ವಿರುದ್ಧ ಸುಪ್ರೀಂಕೋರ್ಟ್ ವಕೀಲ ದುಷ್ಯಂತ್ ದವೆ ವಾಗ್ದಾಳಿ ನಡೆಸಿದ್ದಾರೆ.

ಸುಪ್ರೀಂಕೋರ್ಟ್ ವಕೀಲ ದುಷ್ಯಂತ್ ದವೆಯವರು ಬುಧವಾರ ನ್ಯಾಯಾಂಗ ನಿಂದನಾ ಪ್ರಕರಣದಲ್ಲಿ ಪ್ರಶಾಂತ್ ಭೂಷಣ್ ಪರವಾಗಿ ವಾದ ಮಂಡಿಸಿದರು. ಭಾರತದ ಮಾಜಿ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ಸೇರಿದಂತೆ ಕೆಲವು ನಿರ್ದಿಷ್ಟ ನ್ಯಾಯಾಧೀಶರ ಅಡಿಯಲ್ಲಿ ನ್ಯಾಯಾಂಗದ ಸಮಗ್ರತೆಯ ಕೊರತೆಯ ವಿಷಯದಲ್ಲಿ ಇರುವ ವ್ಯಾಪಕ ಅಭಿಪ್ರಾಯದ ಪ್ರಶ್ನೆಯನ್ನು ಅವರು ಎತ್ತಿದರು.

ನ್ಯಾಯಾಂಗವು ಪತನಗೊಂಡಂತೆ ಕಾಣುವ ಅತ್ಯಂತ ಮಹತ್ವದ ಮತ್ತು ರಾಜಕೀಯವಾಗಿ ಸೂಕ್ಷ್ಮವಾದ ಹಲವಾರು ಪ್ರಕರಣಗಳಲ್ಲಿ ನೀಡಲಾದ ತೀರ್ಪಿನ ಮೇಲೆ ದವೆಯವರು ನ್ಯಾಯಾಲಯದ ಗಮನ ಸೆಳೆದರು.

ಗೊಗೋಯ್ ಅವರನ್ನು ಉಲ್ಲೇಖಿಸಿದ ಅವರು, ರಫೇಲ್, ಅಯೋಧ್ಯಾ ಮತ್ತು ಸಿಬಿಐ ಪ್ರಕರಣಗಳಂತಹ ಹಲವಾರು ಪ್ರಕರಣಗಳಲ್ಲಿ ಕೇಂದ್ರ ಸರಕಾರದ ಪರವಾಗಿರುವ ತೀರ್ಪು ನೀಡಿದ ನಂತರ ರಾಜ್ಯಸಭಾ ನಾಮಕರಣ ಮತ್ತು ಝಡ್ ಶ್ರೇಣಿಯ ಭದ್ರತೆಯನ್ನು ಸ್ವೀಕರಿಸುವ ಮೂಲಕ ಮಾಜಿ ಮುಖ್ಯ ನ್ಯಾಯಾಧೀಶರು ನ್ಯಾಯಾಂಗದ ಬಗ್ಗೆ ಎಂತಹ ಒಂದು ಅಭಿಪ್ರಾಯ ಮೂಡಿಸಿದ್ದಾರೆ ಎಂದು ದವೆ ಪ್ರಶ್ನಿಸಿದರು.

“ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ಸಿಗುತ್ತದೆ…ಇದು ಯಾವ ಅಭಿಪ್ರಾಯ ಮೂಡಿಸುತ್ತದೆ?…ರಫೇಲ್ ತೀರ್ಪು, ಅಯೋಧ್ಯಾ ತೀರ್ಪು, ಸಿಬಿಐ ತೀರ್ಪು. ನೀವು ಈ ತೀರ್ಪುಗಳನ್ನು ನೀಡುತ್ತೀರಿ. ನಿಮಗೆ ಇಂತಹ ಸವಲತ್ತುಗಳು ಸಿಗುತ್ತವೆ. ಇವೆಲ್ಲವೂ ನ್ಯಾಯಾಂಗದ ಮೂಲಕ್ಕೇ ಹೊಡೆಯುವ ಗಂಭೀರವಾದ ವಿಷಯಗಳು” ಎಂದು ದವೆಯವರು ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಬಿ.ಆರ್. ಗವಾಯ್ ಮತ್ತು ಕೃಷ್ಢ ಮುರಾರಿ ಅವರನ್ನು ಒಳಗೊಂಡ ಸುಪ್ರೀಂಕೋರ್ಟ್ ಪೀಠಕ್ಕೆ ಹೇಳಿದರು.

ದವೆಯವರು ಅಲ್ಲಿಗೇ ನಿಲ್ಲಿಸಲಿಲ್ಲ. “ರಾಜಕೀಯವಾಗಿ ಸೂಕ್ಷ್ಮವಾದ ಪ್ರಕರಣಗಳು ಕೆಲವು ನಿರ್ದಿಷ್ಟ ನ್ಯಾಯಾಧೀಶರಿಗೆ ಮಾತ್ರ ಸಿಗುವುದು ಏಕೆ? ಉದಾಹರಣೆಗೆ ನ್ಯಾ. ನಾರಿಮನ್- ಅವರಿಗೆ ಎಂದೂ ಇಂತಹಾ ರಾಜಕೀಯ ಸೂಕ್ಷ್ಮ ಪ್ರಕರಣಗಳ ವಿಚಾರಣೆ ಸಿಗುವುದೇ ಇಲ್ಲ!” ಎಂದು ಅವರು ಪ್ರಶ್ನೆ ಮಾಡಿದರು.

‘ಲೈವ್ ಲಾ’ ವರದಿ ಪ್ರಕಾರ, ನ್ಯಾ. ಮಿಶ್ರಾ ಅವರು, “ನ್ಯಾ. ನಾರಿಮನ್ ಅವರು ಕೆಲವು ಸಾಂವಿಧಾನಿಕ ಪೀಠಗಳ ಭಾಗವಾಗಿದ್ದರು” ಎಂದು ಪ್ರತಿಯಾಡಿದರೆ, ನ್ಯಾ. ಗವಾಯ್ ಅವರು, ನ್ಯಾ. ನಾರಿಮನ್ ಅವರು ಮಣಿಪುರ ಪ್ರಕರಣದ ಭಾಗವಾಗಿದ್ದರು ಎಂದು ಹೇಳಿದರು.

ಇದಕ್ಕೆ ಪ್ರತಿಯಾಗಿ ದವೆಯವರು, ತಾನು ರಾಜಕೀಯವಾಗಿ ಸೂಕ್ಷ್ಮವಾಗಿರುವ ಪ್ರಕರಣಗಳ ಬಗ್ಗೆ ಮಾತನಾಡುತ್ತಿದ್ದು, ಬೇಕಾದರೆ ಇಂತಹ 50 ಪ್ರಕರಣಗಳ ಯಾದಿ ಕೊಡಬಲ್ಲೆ ಎಂದೂ ಸೇರಿಸಿದರು. ದೇಶದ 130 ಕೋಟಿ ಜನತೆಯ ಕುರಿತು ನ್ಯಾಯ ಪೀಠಕ್ಕೆ ಇರುವ ಜವಾಬ್ದಾರಿಯನ್ನು ಅವರು ನೆನಪಿಸಿದರು. “ನೀವು 130 ಕೋಟಿ ಜನರ ಹೆತ್ತವರಂತೆ. ನಮ್ಮ ದೇಶದ ರಾಜಕಾರಣಿಗಳ ಬಗ್ಗೆ ನಮಗೆ ಗೊತ್ತು. ನಾಗರಿಕರ ಹಕ್ಕುಗಳನ್ನು ಎತ್ತಿಹಿಡಿಯುವುದು ಸುಪ್ರೀಂಕೋರ್ಟಿಗೆ ಬಿಟ್ಟದ್ದು” ಎಂದು ಅವರು ಹೇಳಿದರು.

ತಾನು ಈ ಪೀಠದ ಮುಂದೆ ಬಹುಶಃ ಕೊನೆಯ ಬಾರಿ ಹಾಜರಾಗುತ್ತಿದ್ದೇನೆ ಎಂದು ಪ್ರಶಾಂತ್ ಭೂಷಣ್ ಅವರು ಸ್ಪಷ್ಟಪಡಿಸಿರುವಂತೆಯೇ, ಅವರು ಯಾವುದೇ ನ್ಯಾಯಾಂಗ ನಿಂದನೆ ಮಾಡಿಲ್ಲ ಎಂದು ಹೇಳುವ ಮೂಲಕ ಅವರು ತನ್ನ ವಾದವನ್ನು ಕೊನೆಗೊಳಿಸಿದರು.

ತನ್ನ ವಾದದ ವೇಳೆ ದವೆಯವರು, ಭಾರತೀಯ ನ್ಯಾಯಾಂಗಕ್ಕೆ ಪ್ರಶಾಂತ್ ಭೂಷಣ್ ಅವರು ನೀಡಿರುವ ಅಗಾಧವಾದ ಕೊಡುಗೆಯನ್ನು ನ್ಯಾಯಪೀಠಕ್ಕೆ ನೆನಪಿಸಿದರು. ವಿಚಾರಣೆಯನ್ನು ಮುಗಿಸಿದ ನ್ಯಾಯಪೀಠವು ತನ್ನ ಆದೇಶವನ್ನು ಕಾದಿರಿಸಿತು.

ಪ್ರಶಾಂತ್ ಭೂಷಣ ಅವರು ಹಿಂದಿನ ನಾಲ್ವರು ಮುಖ್ಯ ನ್ಯಾಯಾಧೀಶರ ನಡವಳಿಕೆಗಳನ್ನು ಉಲ್ಲೇಖಿಸಿ ನ್ಯಾಯಾಂಗದ ಸಮಗ್ರತೆಯ ಕುರಿತಂತೆ ಪ್ರಶ್ನೆಗಳನ್ನು ಎತ್ತುವ ಎರಡು ಟ್ವೀಟ್‌ಗಳನ್ನು ಮಾಡಿದ್ದಕ್ಕಾಗಿ ಸುಪ್ರೀಂಕೋರ್ಟ್ ಕಳೆದ ತಿಂಗಳು ಅವರ ವಿರುದ್ಧ ಸ್ವಯಂಪ್ರೇರಿತ ನ್ಯಾಯಾಂಗ ನಿಂದನಾ ವಿಚಾರಣೆಯನ್ನು ಆರಂಭಿಸಿತ್ತು. ಜೂನ್ 29ರ ಟ್ವೀಟ್‌ನಲ್ಲಿ  ಭೂಷಣ್ ಅವರು ಮುಖ್ಯ ನ್ಯಾಯಾಧೀಶ ಎಸ್.ಎ. ಬೋಬ್ಡೆ ಅವರು ನಾಗಪುರದಲ್ಲಿ ಬಿಜೆಪಿ ನಾಯಕನೊಬ್ಬನಿಗೆ ಸೇರಿದ ಐಷಾರಾಮಿ ಹ್ಯಾರ್ಲೀ ಡೇವಿಡ್‌ಸನ್ ಬೈಕಿನಲ್ಲಿ ಹೆಲ್ಮೆಟ್ ಮತ್ತು ಮಾಸ್ಕ್ ಇಲ್ಲದೇ ಕುಳಿತಿದ್ದಕ್ಕಾಗಿ ಅವರನ್ನು ಗುರಿಮಾಡಿ ಟೀಕಿಸಿದ್ದರು.

ಕೃಪೆ: ಜನತಾಕಿರಿಪೋರ್ಟರ್

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ಸುಪ್ರೀಂಕೋರ್ಟಿನ ನ್ಯಾಯಾಂಗ ನಿಂದನೆ ನೋಟೀಸಿಗೆ ವಕೀಲ ಪ್ರಶಾಂತ್ ಭೂಷಣ್ ಸ್ಫೋಟಕ ಉತ್ತರ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...