Homeಮುಖಪುಟಸರ್ಕಾರದ ಪರವಾಗಿ ರಫೇಲ್, ಅಯೋಧ್ಯಾ, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು...

ಸರ್ಕಾರದ ಪರವಾಗಿ ರಫೇಲ್, ಅಯೋಧ್ಯಾ, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ಸಿಗುತ್ತದೆ: ಇದರ ಅರ್ಥವೇನು?

ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನಾ ಪ್ರಕರಣದಲ್ಲಿ ನ್ಯಾ. ಗೊಗೋಯ್ ವಿರುದ್ಧ  ವಕೀಲ ದುಷ್ಯಂತ್ ದವೆ ವಾಗ್ದಾಳಿ...

- Advertisement -
- Advertisement -

“ರಫೇಲ್ ವಿಚಾರ, ಅಯೋಧ್ಯಾ ತೀರ್ಪು, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ಸಿಗುತ್ತದೆ. ಇದು ಯಾವ ರೀತಿಯ ಅನಿಸಿಕೆ ಅಥವಾ ಚಿತ್ರಣವನ್ನು ಮೂಡಿಸುತ್ತದೆ?” ಎಂದು ಮಾಜಿ ಮುಖ್ಯ ನ್ಯಾಯಾಧೀಶ ಗೊಗೊಯ್ ವಿರುದ್ಧ ಸುಪ್ರೀಂಕೋರ್ಟ್ ವಕೀಲ ದುಷ್ಯಂತ್ ದವೆ ವಾಗ್ದಾಳಿ ನಡೆಸಿದ್ದಾರೆ.

ಸುಪ್ರೀಂಕೋರ್ಟ್ ವಕೀಲ ದುಷ್ಯಂತ್ ದವೆಯವರು ಬುಧವಾರ ನ್ಯಾಯಾಂಗ ನಿಂದನಾ ಪ್ರಕರಣದಲ್ಲಿ ಪ್ರಶಾಂತ್ ಭೂಷಣ್ ಪರವಾಗಿ ವಾದ ಮಂಡಿಸಿದರು. ಭಾರತದ ಮಾಜಿ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ಸೇರಿದಂತೆ ಕೆಲವು ನಿರ್ದಿಷ್ಟ ನ್ಯಾಯಾಧೀಶರ ಅಡಿಯಲ್ಲಿ ನ್ಯಾಯಾಂಗದ ಸಮಗ್ರತೆಯ ಕೊರತೆಯ ವಿಷಯದಲ್ಲಿ ಇರುವ ವ್ಯಾಪಕ ಅಭಿಪ್ರಾಯದ ಪ್ರಶ್ನೆಯನ್ನು ಅವರು ಎತ್ತಿದರು.

ನ್ಯಾಯಾಂಗವು ಪತನಗೊಂಡಂತೆ ಕಾಣುವ ಅತ್ಯಂತ ಮಹತ್ವದ ಮತ್ತು ರಾಜಕೀಯವಾಗಿ ಸೂಕ್ಷ್ಮವಾದ ಹಲವಾರು ಪ್ರಕರಣಗಳಲ್ಲಿ ನೀಡಲಾದ ತೀರ್ಪಿನ ಮೇಲೆ ದವೆಯವರು ನ್ಯಾಯಾಲಯದ ಗಮನ ಸೆಳೆದರು.

ಗೊಗೋಯ್ ಅವರನ್ನು ಉಲ್ಲೇಖಿಸಿದ ಅವರು, ರಫೇಲ್, ಅಯೋಧ್ಯಾ ಮತ್ತು ಸಿಬಿಐ ಪ್ರಕರಣಗಳಂತಹ ಹಲವಾರು ಪ್ರಕರಣಗಳಲ್ಲಿ ಕೇಂದ್ರ ಸರಕಾರದ ಪರವಾಗಿರುವ ತೀರ್ಪು ನೀಡಿದ ನಂತರ ರಾಜ್ಯಸಭಾ ನಾಮಕರಣ ಮತ್ತು ಝಡ್ ಶ್ರೇಣಿಯ ಭದ್ರತೆಯನ್ನು ಸ್ವೀಕರಿಸುವ ಮೂಲಕ ಮಾಜಿ ಮುಖ್ಯ ನ್ಯಾಯಾಧೀಶರು ನ್ಯಾಯಾಂಗದ ಬಗ್ಗೆ ಎಂತಹ ಒಂದು ಅಭಿಪ್ರಾಯ ಮೂಡಿಸಿದ್ದಾರೆ ಎಂದು ದವೆ ಪ್ರಶ್ನಿಸಿದರು.

“ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ಸಿಗುತ್ತದೆ…ಇದು ಯಾವ ಅಭಿಪ್ರಾಯ ಮೂಡಿಸುತ್ತದೆ?…ರಫೇಲ್ ತೀರ್ಪು, ಅಯೋಧ್ಯಾ ತೀರ್ಪು, ಸಿಬಿಐ ತೀರ್ಪು. ನೀವು ಈ ತೀರ್ಪುಗಳನ್ನು ನೀಡುತ್ತೀರಿ. ನಿಮಗೆ ಇಂತಹ ಸವಲತ್ತುಗಳು ಸಿಗುತ್ತವೆ. ಇವೆಲ್ಲವೂ ನ್ಯಾಯಾಂಗದ ಮೂಲಕ್ಕೇ ಹೊಡೆಯುವ ಗಂಭೀರವಾದ ವಿಷಯಗಳು” ಎಂದು ದವೆಯವರು ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಬಿ.ಆರ್. ಗವಾಯ್ ಮತ್ತು ಕೃಷ್ಢ ಮುರಾರಿ ಅವರನ್ನು ಒಳಗೊಂಡ ಸುಪ್ರೀಂಕೋರ್ಟ್ ಪೀಠಕ್ಕೆ ಹೇಳಿದರು.

ದವೆಯವರು ಅಲ್ಲಿಗೇ ನಿಲ್ಲಿಸಲಿಲ್ಲ. “ರಾಜಕೀಯವಾಗಿ ಸೂಕ್ಷ್ಮವಾದ ಪ್ರಕರಣಗಳು ಕೆಲವು ನಿರ್ದಿಷ್ಟ ನ್ಯಾಯಾಧೀಶರಿಗೆ ಮಾತ್ರ ಸಿಗುವುದು ಏಕೆ? ಉದಾಹರಣೆಗೆ ನ್ಯಾ. ನಾರಿಮನ್- ಅವರಿಗೆ ಎಂದೂ ಇಂತಹಾ ರಾಜಕೀಯ ಸೂಕ್ಷ್ಮ ಪ್ರಕರಣಗಳ ವಿಚಾರಣೆ ಸಿಗುವುದೇ ಇಲ್ಲ!” ಎಂದು ಅವರು ಪ್ರಶ್ನೆ ಮಾಡಿದರು.

‘ಲೈವ್ ಲಾ’ ವರದಿ ಪ್ರಕಾರ, ನ್ಯಾ. ಮಿಶ್ರಾ ಅವರು, “ನ್ಯಾ. ನಾರಿಮನ್ ಅವರು ಕೆಲವು ಸಾಂವಿಧಾನಿಕ ಪೀಠಗಳ ಭಾಗವಾಗಿದ್ದರು” ಎಂದು ಪ್ರತಿಯಾಡಿದರೆ, ನ್ಯಾ. ಗವಾಯ್ ಅವರು, ನ್ಯಾ. ನಾರಿಮನ್ ಅವರು ಮಣಿಪುರ ಪ್ರಕರಣದ ಭಾಗವಾಗಿದ್ದರು ಎಂದು ಹೇಳಿದರು.

ಇದಕ್ಕೆ ಪ್ರತಿಯಾಗಿ ದವೆಯವರು, ತಾನು ರಾಜಕೀಯವಾಗಿ ಸೂಕ್ಷ್ಮವಾಗಿರುವ ಪ್ರಕರಣಗಳ ಬಗ್ಗೆ ಮಾತನಾಡುತ್ತಿದ್ದು, ಬೇಕಾದರೆ ಇಂತಹ 50 ಪ್ರಕರಣಗಳ ಯಾದಿ ಕೊಡಬಲ್ಲೆ ಎಂದೂ ಸೇರಿಸಿದರು. ದೇಶದ 130 ಕೋಟಿ ಜನತೆಯ ಕುರಿತು ನ್ಯಾಯ ಪೀಠಕ್ಕೆ ಇರುವ ಜವಾಬ್ದಾರಿಯನ್ನು ಅವರು ನೆನಪಿಸಿದರು. “ನೀವು 130 ಕೋಟಿ ಜನರ ಹೆತ್ತವರಂತೆ. ನಮ್ಮ ದೇಶದ ರಾಜಕಾರಣಿಗಳ ಬಗ್ಗೆ ನಮಗೆ ಗೊತ್ತು. ನಾಗರಿಕರ ಹಕ್ಕುಗಳನ್ನು ಎತ್ತಿಹಿಡಿಯುವುದು ಸುಪ್ರೀಂಕೋರ್ಟಿಗೆ ಬಿಟ್ಟದ್ದು” ಎಂದು ಅವರು ಹೇಳಿದರು.

ತಾನು ಈ ಪೀಠದ ಮುಂದೆ ಬಹುಶಃ ಕೊನೆಯ ಬಾರಿ ಹಾಜರಾಗುತ್ತಿದ್ದೇನೆ ಎಂದು ಪ್ರಶಾಂತ್ ಭೂಷಣ್ ಅವರು ಸ್ಪಷ್ಟಪಡಿಸಿರುವಂತೆಯೇ, ಅವರು ಯಾವುದೇ ನ್ಯಾಯಾಂಗ ನಿಂದನೆ ಮಾಡಿಲ್ಲ ಎಂದು ಹೇಳುವ ಮೂಲಕ ಅವರು ತನ್ನ ವಾದವನ್ನು ಕೊನೆಗೊಳಿಸಿದರು.

ತನ್ನ ವಾದದ ವೇಳೆ ದವೆಯವರು, ಭಾರತೀಯ ನ್ಯಾಯಾಂಗಕ್ಕೆ ಪ್ರಶಾಂತ್ ಭೂಷಣ್ ಅವರು ನೀಡಿರುವ ಅಗಾಧವಾದ ಕೊಡುಗೆಯನ್ನು ನ್ಯಾಯಪೀಠಕ್ಕೆ ನೆನಪಿಸಿದರು. ವಿಚಾರಣೆಯನ್ನು ಮುಗಿಸಿದ ನ್ಯಾಯಪೀಠವು ತನ್ನ ಆದೇಶವನ್ನು ಕಾದಿರಿಸಿತು.

ಪ್ರಶಾಂತ್ ಭೂಷಣ ಅವರು ಹಿಂದಿನ ನಾಲ್ವರು ಮುಖ್ಯ ನ್ಯಾಯಾಧೀಶರ ನಡವಳಿಕೆಗಳನ್ನು ಉಲ್ಲೇಖಿಸಿ ನ್ಯಾಯಾಂಗದ ಸಮಗ್ರತೆಯ ಕುರಿತಂತೆ ಪ್ರಶ್ನೆಗಳನ್ನು ಎತ್ತುವ ಎರಡು ಟ್ವೀಟ್‌ಗಳನ್ನು ಮಾಡಿದ್ದಕ್ಕಾಗಿ ಸುಪ್ರೀಂಕೋರ್ಟ್ ಕಳೆದ ತಿಂಗಳು ಅವರ ವಿರುದ್ಧ ಸ್ವಯಂಪ್ರೇರಿತ ನ್ಯಾಯಾಂಗ ನಿಂದನಾ ವಿಚಾರಣೆಯನ್ನು ಆರಂಭಿಸಿತ್ತು. ಜೂನ್ 29ರ ಟ್ವೀಟ್‌ನಲ್ಲಿ  ಭೂಷಣ್ ಅವರು ಮುಖ್ಯ ನ್ಯಾಯಾಧೀಶ ಎಸ್.ಎ. ಬೋಬ್ಡೆ ಅವರು ನಾಗಪುರದಲ್ಲಿ ಬಿಜೆಪಿ ನಾಯಕನೊಬ್ಬನಿಗೆ ಸೇರಿದ ಐಷಾರಾಮಿ ಹ್ಯಾರ್ಲೀ ಡೇವಿಡ್‌ಸನ್ ಬೈಕಿನಲ್ಲಿ ಹೆಲ್ಮೆಟ್ ಮತ್ತು ಮಾಸ್ಕ್ ಇಲ್ಲದೇ ಕುಳಿತಿದ್ದಕ್ಕಾಗಿ ಅವರನ್ನು ಗುರಿಮಾಡಿ ಟೀಕಿಸಿದ್ದರು.

ಕೃಪೆ: ಜನತಾಕಿರಿಪೋರ್ಟರ್

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ಸುಪ್ರೀಂಕೋರ್ಟಿನ ನ್ಯಾಯಾಂಗ ನಿಂದನೆ ನೋಟೀಸಿಗೆ ವಕೀಲ ಪ್ರಶಾಂತ್ ಭೂಷಣ್ ಸ್ಫೋಟಕ ಉತ್ತರ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...