Homeಮುಖಪುಟಸರ್ಕಾರದ ಪರವಾಗಿ ರಫೇಲ್, ಅಯೋಧ್ಯಾ, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು...

ಸರ್ಕಾರದ ಪರವಾಗಿ ರಫೇಲ್, ಅಯೋಧ್ಯಾ, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ಸಿಗುತ್ತದೆ: ಇದರ ಅರ್ಥವೇನು?

ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನಾ ಪ್ರಕರಣದಲ್ಲಿ ನ್ಯಾ. ಗೊಗೋಯ್ ವಿರುದ್ಧ  ವಕೀಲ ದುಷ್ಯಂತ್ ದವೆ ವಾಗ್ದಾಳಿ...

- Advertisement -
- Advertisement -

“ರಫೇಲ್ ವಿಚಾರ, ಅಯೋಧ್ಯಾ ತೀರ್ಪು, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ಸಿಗುತ್ತದೆ. ಇದು ಯಾವ ರೀತಿಯ ಅನಿಸಿಕೆ ಅಥವಾ ಚಿತ್ರಣವನ್ನು ಮೂಡಿಸುತ್ತದೆ?” ಎಂದು ಮಾಜಿ ಮುಖ್ಯ ನ್ಯಾಯಾಧೀಶ ಗೊಗೊಯ್ ವಿರುದ್ಧ ಸುಪ್ರೀಂಕೋರ್ಟ್ ವಕೀಲ ದುಷ್ಯಂತ್ ದವೆ ವಾಗ್ದಾಳಿ ನಡೆಸಿದ್ದಾರೆ.

ಸುಪ್ರೀಂಕೋರ್ಟ್ ವಕೀಲ ದುಷ್ಯಂತ್ ದವೆಯವರು ಬುಧವಾರ ನ್ಯಾಯಾಂಗ ನಿಂದನಾ ಪ್ರಕರಣದಲ್ಲಿ ಪ್ರಶಾಂತ್ ಭೂಷಣ್ ಪರವಾಗಿ ವಾದ ಮಂಡಿಸಿದರು. ಭಾರತದ ಮಾಜಿ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ಸೇರಿದಂತೆ ಕೆಲವು ನಿರ್ದಿಷ್ಟ ನ್ಯಾಯಾಧೀಶರ ಅಡಿಯಲ್ಲಿ ನ್ಯಾಯಾಂಗದ ಸಮಗ್ರತೆಯ ಕೊರತೆಯ ವಿಷಯದಲ್ಲಿ ಇರುವ ವ್ಯಾಪಕ ಅಭಿಪ್ರಾಯದ ಪ್ರಶ್ನೆಯನ್ನು ಅವರು ಎತ್ತಿದರು.

ನ್ಯಾಯಾಂಗವು ಪತನಗೊಂಡಂತೆ ಕಾಣುವ ಅತ್ಯಂತ ಮಹತ್ವದ ಮತ್ತು ರಾಜಕೀಯವಾಗಿ ಸೂಕ್ಷ್ಮವಾದ ಹಲವಾರು ಪ್ರಕರಣಗಳಲ್ಲಿ ನೀಡಲಾದ ತೀರ್ಪಿನ ಮೇಲೆ ದವೆಯವರು ನ್ಯಾಯಾಲಯದ ಗಮನ ಸೆಳೆದರು.

ಗೊಗೋಯ್ ಅವರನ್ನು ಉಲ್ಲೇಖಿಸಿದ ಅವರು, ರಫೇಲ್, ಅಯೋಧ್ಯಾ ಮತ್ತು ಸಿಬಿಐ ಪ್ರಕರಣಗಳಂತಹ ಹಲವಾರು ಪ್ರಕರಣಗಳಲ್ಲಿ ಕೇಂದ್ರ ಸರಕಾರದ ಪರವಾಗಿರುವ ತೀರ್ಪು ನೀಡಿದ ನಂತರ ರಾಜ್ಯಸಭಾ ನಾಮಕರಣ ಮತ್ತು ಝಡ್ ಶ್ರೇಣಿಯ ಭದ್ರತೆಯನ್ನು ಸ್ವೀಕರಿಸುವ ಮೂಲಕ ಮಾಜಿ ಮುಖ್ಯ ನ್ಯಾಯಾಧೀಶರು ನ್ಯಾಯಾಂಗದ ಬಗ್ಗೆ ಎಂತಹ ಒಂದು ಅಭಿಪ್ರಾಯ ಮೂಡಿಸಿದ್ದಾರೆ ಎಂದು ದವೆ ಪ್ರಶ್ನಿಸಿದರು.

“ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ಸಿಗುತ್ತದೆ…ಇದು ಯಾವ ಅಭಿಪ್ರಾಯ ಮೂಡಿಸುತ್ತದೆ?…ರಫೇಲ್ ತೀರ್ಪು, ಅಯೋಧ್ಯಾ ತೀರ್ಪು, ಸಿಬಿಐ ತೀರ್ಪು. ನೀವು ಈ ತೀರ್ಪುಗಳನ್ನು ನೀಡುತ್ತೀರಿ. ನಿಮಗೆ ಇಂತಹ ಸವಲತ್ತುಗಳು ಸಿಗುತ್ತವೆ. ಇವೆಲ್ಲವೂ ನ್ಯಾಯಾಂಗದ ಮೂಲಕ್ಕೇ ಹೊಡೆಯುವ ಗಂಭೀರವಾದ ವಿಷಯಗಳು” ಎಂದು ದವೆಯವರು ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಬಿ.ಆರ್. ಗವಾಯ್ ಮತ್ತು ಕೃಷ್ಢ ಮುರಾರಿ ಅವರನ್ನು ಒಳಗೊಂಡ ಸುಪ್ರೀಂಕೋರ್ಟ್ ಪೀಠಕ್ಕೆ ಹೇಳಿದರು.

ದವೆಯವರು ಅಲ್ಲಿಗೇ ನಿಲ್ಲಿಸಲಿಲ್ಲ. “ರಾಜಕೀಯವಾಗಿ ಸೂಕ್ಷ್ಮವಾದ ಪ್ರಕರಣಗಳು ಕೆಲವು ನಿರ್ದಿಷ್ಟ ನ್ಯಾಯಾಧೀಶರಿಗೆ ಮಾತ್ರ ಸಿಗುವುದು ಏಕೆ? ಉದಾಹರಣೆಗೆ ನ್ಯಾ. ನಾರಿಮನ್- ಅವರಿಗೆ ಎಂದೂ ಇಂತಹಾ ರಾಜಕೀಯ ಸೂಕ್ಷ್ಮ ಪ್ರಕರಣಗಳ ವಿಚಾರಣೆ ಸಿಗುವುದೇ ಇಲ್ಲ!” ಎಂದು ಅವರು ಪ್ರಶ್ನೆ ಮಾಡಿದರು.

‘ಲೈವ್ ಲಾ’ ವರದಿ ಪ್ರಕಾರ, ನ್ಯಾ. ಮಿಶ್ರಾ ಅವರು, “ನ್ಯಾ. ನಾರಿಮನ್ ಅವರು ಕೆಲವು ಸಾಂವಿಧಾನಿಕ ಪೀಠಗಳ ಭಾಗವಾಗಿದ್ದರು” ಎಂದು ಪ್ರತಿಯಾಡಿದರೆ, ನ್ಯಾ. ಗವಾಯ್ ಅವರು, ನ್ಯಾ. ನಾರಿಮನ್ ಅವರು ಮಣಿಪುರ ಪ್ರಕರಣದ ಭಾಗವಾಗಿದ್ದರು ಎಂದು ಹೇಳಿದರು.

ಇದಕ್ಕೆ ಪ್ರತಿಯಾಗಿ ದವೆಯವರು, ತಾನು ರಾಜಕೀಯವಾಗಿ ಸೂಕ್ಷ್ಮವಾಗಿರುವ ಪ್ರಕರಣಗಳ ಬಗ್ಗೆ ಮಾತನಾಡುತ್ತಿದ್ದು, ಬೇಕಾದರೆ ಇಂತಹ 50 ಪ್ರಕರಣಗಳ ಯಾದಿ ಕೊಡಬಲ್ಲೆ ಎಂದೂ ಸೇರಿಸಿದರು. ದೇಶದ 130 ಕೋಟಿ ಜನತೆಯ ಕುರಿತು ನ್ಯಾಯ ಪೀಠಕ್ಕೆ ಇರುವ ಜವಾಬ್ದಾರಿಯನ್ನು ಅವರು ನೆನಪಿಸಿದರು. “ನೀವು 130 ಕೋಟಿ ಜನರ ಹೆತ್ತವರಂತೆ. ನಮ್ಮ ದೇಶದ ರಾಜಕಾರಣಿಗಳ ಬಗ್ಗೆ ನಮಗೆ ಗೊತ್ತು. ನಾಗರಿಕರ ಹಕ್ಕುಗಳನ್ನು ಎತ್ತಿಹಿಡಿಯುವುದು ಸುಪ್ರೀಂಕೋರ್ಟಿಗೆ ಬಿಟ್ಟದ್ದು” ಎಂದು ಅವರು ಹೇಳಿದರು.

ತಾನು ಈ ಪೀಠದ ಮುಂದೆ ಬಹುಶಃ ಕೊನೆಯ ಬಾರಿ ಹಾಜರಾಗುತ್ತಿದ್ದೇನೆ ಎಂದು ಪ್ರಶಾಂತ್ ಭೂಷಣ್ ಅವರು ಸ್ಪಷ್ಟಪಡಿಸಿರುವಂತೆಯೇ, ಅವರು ಯಾವುದೇ ನ್ಯಾಯಾಂಗ ನಿಂದನೆ ಮಾಡಿಲ್ಲ ಎಂದು ಹೇಳುವ ಮೂಲಕ ಅವರು ತನ್ನ ವಾದವನ್ನು ಕೊನೆಗೊಳಿಸಿದರು.

ತನ್ನ ವಾದದ ವೇಳೆ ದವೆಯವರು, ಭಾರತೀಯ ನ್ಯಾಯಾಂಗಕ್ಕೆ ಪ್ರಶಾಂತ್ ಭೂಷಣ್ ಅವರು ನೀಡಿರುವ ಅಗಾಧವಾದ ಕೊಡುಗೆಯನ್ನು ನ್ಯಾಯಪೀಠಕ್ಕೆ ನೆನಪಿಸಿದರು. ವಿಚಾರಣೆಯನ್ನು ಮುಗಿಸಿದ ನ್ಯಾಯಪೀಠವು ತನ್ನ ಆದೇಶವನ್ನು ಕಾದಿರಿಸಿತು.

ಪ್ರಶಾಂತ್ ಭೂಷಣ ಅವರು ಹಿಂದಿನ ನಾಲ್ವರು ಮುಖ್ಯ ನ್ಯಾಯಾಧೀಶರ ನಡವಳಿಕೆಗಳನ್ನು ಉಲ್ಲೇಖಿಸಿ ನ್ಯಾಯಾಂಗದ ಸಮಗ್ರತೆಯ ಕುರಿತಂತೆ ಪ್ರಶ್ನೆಗಳನ್ನು ಎತ್ತುವ ಎರಡು ಟ್ವೀಟ್‌ಗಳನ್ನು ಮಾಡಿದ್ದಕ್ಕಾಗಿ ಸುಪ್ರೀಂಕೋರ್ಟ್ ಕಳೆದ ತಿಂಗಳು ಅವರ ವಿರುದ್ಧ ಸ್ವಯಂಪ್ರೇರಿತ ನ್ಯಾಯಾಂಗ ನಿಂದನಾ ವಿಚಾರಣೆಯನ್ನು ಆರಂಭಿಸಿತ್ತು. ಜೂನ್ 29ರ ಟ್ವೀಟ್‌ನಲ್ಲಿ  ಭೂಷಣ್ ಅವರು ಮುಖ್ಯ ನ್ಯಾಯಾಧೀಶ ಎಸ್.ಎ. ಬೋಬ್ಡೆ ಅವರು ನಾಗಪುರದಲ್ಲಿ ಬಿಜೆಪಿ ನಾಯಕನೊಬ್ಬನಿಗೆ ಸೇರಿದ ಐಷಾರಾಮಿ ಹ್ಯಾರ್ಲೀ ಡೇವಿಡ್‌ಸನ್ ಬೈಕಿನಲ್ಲಿ ಹೆಲ್ಮೆಟ್ ಮತ್ತು ಮಾಸ್ಕ್ ಇಲ್ಲದೇ ಕುಳಿತಿದ್ದಕ್ಕಾಗಿ ಅವರನ್ನು ಗುರಿಮಾಡಿ ಟೀಕಿಸಿದ್ದರು.

ಕೃಪೆ: ಜನತಾಕಿರಿಪೋರ್ಟರ್

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ಸುಪ್ರೀಂಕೋರ್ಟಿನ ನ್ಯಾಯಾಂಗ ನಿಂದನೆ ನೋಟೀಸಿಗೆ ವಕೀಲ ಪ್ರಶಾಂತ್ ಭೂಷಣ್ ಸ್ಫೋಟಕ ಉತ್ತರ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...