Homeಮುಖಪುಟಸರ್ಕಾರದ ಪರವಾಗಿ ರಫೇಲ್, ಅಯೋಧ್ಯಾ, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು...

ಸರ್ಕಾರದ ಪರವಾಗಿ ರಫೇಲ್, ಅಯೋಧ್ಯಾ, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ಸಿಗುತ್ತದೆ: ಇದರ ಅರ್ಥವೇನು?

ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನಾ ಪ್ರಕರಣದಲ್ಲಿ ನ್ಯಾ. ಗೊಗೋಯ್ ವಿರುದ್ಧ  ವಕೀಲ ದುಷ್ಯಂತ್ ದವೆ ವಾಗ್ದಾಳಿ...

- Advertisement -
- Advertisement -

“ರಫೇಲ್ ವಿಚಾರ, ಅಯೋಧ್ಯಾ ತೀರ್ಪು, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ಸಿಗುತ್ತದೆ. ಇದು ಯಾವ ರೀತಿಯ ಅನಿಸಿಕೆ ಅಥವಾ ಚಿತ್ರಣವನ್ನು ಮೂಡಿಸುತ್ತದೆ?” ಎಂದು ಮಾಜಿ ಮುಖ್ಯ ನ್ಯಾಯಾಧೀಶ ಗೊಗೊಯ್ ವಿರುದ್ಧ ಸುಪ್ರೀಂಕೋರ್ಟ್ ವಕೀಲ ದುಷ್ಯಂತ್ ದವೆ ವಾಗ್ದಾಳಿ ನಡೆಸಿದ್ದಾರೆ.

ಸುಪ್ರೀಂಕೋರ್ಟ್ ವಕೀಲ ದುಷ್ಯಂತ್ ದವೆಯವರು ಬುಧವಾರ ನ್ಯಾಯಾಂಗ ನಿಂದನಾ ಪ್ರಕರಣದಲ್ಲಿ ಪ್ರಶಾಂತ್ ಭೂಷಣ್ ಪರವಾಗಿ ವಾದ ಮಂಡಿಸಿದರು. ಭಾರತದ ಮಾಜಿ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ಸೇರಿದಂತೆ ಕೆಲವು ನಿರ್ದಿಷ್ಟ ನ್ಯಾಯಾಧೀಶರ ಅಡಿಯಲ್ಲಿ ನ್ಯಾಯಾಂಗದ ಸಮಗ್ರತೆಯ ಕೊರತೆಯ ವಿಷಯದಲ್ಲಿ ಇರುವ ವ್ಯಾಪಕ ಅಭಿಪ್ರಾಯದ ಪ್ರಶ್ನೆಯನ್ನು ಅವರು ಎತ್ತಿದರು.

ನ್ಯಾಯಾಂಗವು ಪತನಗೊಂಡಂತೆ ಕಾಣುವ ಅತ್ಯಂತ ಮಹತ್ವದ ಮತ್ತು ರಾಜಕೀಯವಾಗಿ ಸೂಕ್ಷ್ಮವಾದ ಹಲವಾರು ಪ್ರಕರಣಗಳಲ್ಲಿ ನೀಡಲಾದ ತೀರ್ಪಿನ ಮೇಲೆ ದವೆಯವರು ನ್ಯಾಯಾಲಯದ ಗಮನ ಸೆಳೆದರು.

ಗೊಗೋಯ್ ಅವರನ್ನು ಉಲ್ಲೇಖಿಸಿದ ಅವರು, ರಫೇಲ್, ಅಯೋಧ್ಯಾ ಮತ್ತು ಸಿಬಿಐ ಪ್ರಕರಣಗಳಂತಹ ಹಲವಾರು ಪ್ರಕರಣಗಳಲ್ಲಿ ಕೇಂದ್ರ ಸರಕಾರದ ಪರವಾಗಿರುವ ತೀರ್ಪು ನೀಡಿದ ನಂತರ ರಾಜ್ಯಸಭಾ ನಾಮಕರಣ ಮತ್ತು ಝಡ್ ಶ್ರೇಣಿಯ ಭದ್ರತೆಯನ್ನು ಸ್ವೀಕರಿಸುವ ಮೂಲಕ ಮಾಜಿ ಮುಖ್ಯ ನ್ಯಾಯಾಧೀಶರು ನ್ಯಾಯಾಂಗದ ಬಗ್ಗೆ ಎಂತಹ ಒಂದು ಅಭಿಪ್ರಾಯ ಮೂಡಿಸಿದ್ದಾರೆ ಎಂದು ದವೆ ಪ್ರಶ್ನಿಸಿದರು.

“ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ಸಿಗುತ್ತದೆ…ಇದು ಯಾವ ಅಭಿಪ್ರಾಯ ಮೂಡಿಸುತ್ತದೆ?…ರಫೇಲ್ ತೀರ್ಪು, ಅಯೋಧ್ಯಾ ತೀರ್ಪು, ಸಿಬಿಐ ತೀರ್ಪು. ನೀವು ಈ ತೀರ್ಪುಗಳನ್ನು ನೀಡುತ್ತೀರಿ. ನಿಮಗೆ ಇಂತಹ ಸವಲತ್ತುಗಳು ಸಿಗುತ್ತವೆ. ಇವೆಲ್ಲವೂ ನ್ಯಾಯಾಂಗದ ಮೂಲಕ್ಕೇ ಹೊಡೆಯುವ ಗಂಭೀರವಾದ ವಿಷಯಗಳು” ಎಂದು ದವೆಯವರು ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಬಿ.ಆರ್. ಗವಾಯ್ ಮತ್ತು ಕೃಷ್ಢ ಮುರಾರಿ ಅವರನ್ನು ಒಳಗೊಂಡ ಸುಪ್ರೀಂಕೋರ್ಟ್ ಪೀಠಕ್ಕೆ ಹೇಳಿದರು.

ದವೆಯವರು ಅಲ್ಲಿಗೇ ನಿಲ್ಲಿಸಲಿಲ್ಲ. “ರಾಜಕೀಯವಾಗಿ ಸೂಕ್ಷ್ಮವಾದ ಪ್ರಕರಣಗಳು ಕೆಲವು ನಿರ್ದಿಷ್ಟ ನ್ಯಾಯಾಧೀಶರಿಗೆ ಮಾತ್ರ ಸಿಗುವುದು ಏಕೆ? ಉದಾಹರಣೆಗೆ ನ್ಯಾ. ನಾರಿಮನ್- ಅವರಿಗೆ ಎಂದೂ ಇಂತಹಾ ರಾಜಕೀಯ ಸೂಕ್ಷ್ಮ ಪ್ರಕರಣಗಳ ವಿಚಾರಣೆ ಸಿಗುವುದೇ ಇಲ್ಲ!” ಎಂದು ಅವರು ಪ್ರಶ್ನೆ ಮಾಡಿದರು.

‘ಲೈವ್ ಲಾ’ ವರದಿ ಪ್ರಕಾರ, ನ್ಯಾ. ಮಿಶ್ರಾ ಅವರು, “ನ್ಯಾ. ನಾರಿಮನ್ ಅವರು ಕೆಲವು ಸಾಂವಿಧಾನಿಕ ಪೀಠಗಳ ಭಾಗವಾಗಿದ್ದರು” ಎಂದು ಪ್ರತಿಯಾಡಿದರೆ, ನ್ಯಾ. ಗವಾಯ್ ಅವರು, ನ್ಯಾ. ನಾರಿಮನ್ ಅವರು ಮಣಿಪುರ ಪ್ರಕರಣದ ಭಾಗವಾಗಿದ್ದರು ಎಂದು ಹೇಳಿದರು.

ಇದಕ್ಕೆ ಪ್ರತಿಯಾಗಿ ದವೆಯವರು, ತಾನು ರಾಜಕೀಯವಾಗಿ ಸೂಕ್ಷ್ಮವಾಗಿರುವ ಪ್ರಕರಣಗಳ ಬಗ್ಗೆ ಮಾತನಾಡುತ್ತಿದ್ದು, ಬೇಕಾದರೆ ಇಂತಹ 50 ಪ್ರಕರಣಗಳ ಯಾದಿ ಕೊಡಬಲ್ಲೆ ಎಂದೂ ಸೇರಿಸಿದರು. ದೇಶದ 130 ಕೋಟಿ ಜನತೆಯ ಕುರಿತು ನ್ಯಾಯ ಪೀಠಕ್ಕೆ ಇರುವ ಜವಾಬ್ದಾರಿಯನ್ನು ಅವರು ನೆನಪಿಸಿದರು. “ನೀವು 130 ಕೋಟಿ ಜನರ ಹೆತ್ತವರಂತೆ. ನಮ್ಮ ದೇಶದ ರಾಜಕಾರಣಿಗಳ ಬಗ್ಗೆ ನಮಗೆ ಗೊತ್ತು. ನಾಗರಿಕರ ಹಕ್ಕುಗಳನ್ನು ಎತ್ತಿಹಿಡಿಯುವುದು ಸುಪ್ರೀಂಕೋರ್ಟಿಗೆ ಬಿಟ್ಟದ್ದು” ಎಂದು ಅವರು ಹೇಳಿದರು.

ತಾನು ಈ ಪೀಠದ ಮುಂದೆ ಬಹುಶಃ ಕೊನೆಯ ಬಾರಿ ಹಾಜರಾಗುತ್ತಿದ್ದೇನೆ ಎಂದು ಪ್ರಶಾಂತ್ ಭೂಷಣ್ ಅವರು ಸ್ಪಷ್ಟಪಡಿಸಿರುವಂತೆಯೇ, ಅವರು ಯಾವುದೇ ನ್ಯಾಯಾಂಗ ನಿಂದನೆ ಮಾಡಿಲ್ಲ ಎಂದು ಹೇಳುವ ಮೂಲಕ ಅವರು ತನ್ನ ವಾದವನ್ನು ಕೊನೆಗೊಳಿಸಿದರು.

ತನ್ನ ವಾದದ ವೇಳೆ ದವೆಯವರು, ಭಾರತೀಯ ನ್ಯಾಯಾಂಗಕ್ಕೆ ಪ್ರಶಾಂತ್ ಭೂಷಣ್ ಅವರು ನೀಡಿರುವ ಅಗಾಧವಾದ ಕೊಡುಗೆಯನ್ನು ನ್ಯಾಯಪೀಠಕ್ಕೆ ನೆನಪಿಸಿದರು. ವಿಚಾರಣೆಯನ್ನು ಮುಗಿಸಿದ ನ್ಯಾಯಪೀಠವು ತನ್ನ ಆದೇಶವನ್ನು ಕಾದಿರಿಸಿತು.

ಪ್ರಶಾಂತ್ ಭೂಷಣ ಅವರು ಹಿಂದಿನ ನಾಲ್ವರು ಮುಖ್ಯ ನ್ಯಾಯಾಧೀಶರ ನಡವಳಿಕೆಗಳನ್ನು ಉಲ್ಲೇಖಿಸಿ ನ್ಯಾಯಾಂಗದ ಸಮಗ್ರತೆಯ ಕುರಿತಂತೆ ಪ್ರಶ್ನೆಗಳನ್ನು ಎತ್ತುವ ಎರಡು ಟ್ವೀಟ್‌ಗಳನ್ನು ಮಾಡಿದ್ದಕ್ಕಾಗಿ ಸುಪ್ರೀಂಕೋರ್ಟ್ ಕಳೆದ ತಿಂಗಳು ಅವರ ವಿರುದ್ಧ ಸ್ವಯಂಪ್ರೇರಿತ ನ್ಯಾಯಾಂಗ ನಿಂದನಾ ವಿಚಾರಣೆಯನ್ನು ಆರಂಭಿಸಿತ್ತು. ಜೂನ್ 29ರ ಟ್ವೀಟ್‌ನಲ್ಲಿ  ಭೂಷಣ್ ಅವರು ಮುಖ್ಯ ನ್ಯಾಯಾಧೀಶ ಎಸ್.ಎ. ಬೋಬ್ಡೆ ಅವರು ನಾಗಪುರದಲ್ಲಿ ಬಿಜೆಪಿ ನಾಯಕನೊಬ್ಬನಿಗೆ ಸೇರಿದ ಐಷಾರಾಮಿ ಹ್ಯಾರ್ಲೀ ಡೇವಿಡ್‌ಸನ್ ಬೈಕಿನಲ್ಲಿ ಹೆಲ್ಮೆಟ್ ಮತ್ತು ಮಾಸ್ಕ್ ಇಲ್ಲದೇ ಕುಳಿತಿದ್ದಕ್ಕಾಗಿ ಅವರನ್ನು ಗುರಿಮಾಡಿ ಟೀಕಿಸಿದ್ದರು.

ಕೃಪೆ: ಜನತಾಕಿರಿಪೋರ್ಟರ್

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ಸುಪ್ರೀಂಕೋರ್ಟಿನ ನ್ಯಾಯಾಂಗ ನಿಂದನೆ ನೋಟೀಸಿಗೆ ವಕೀಲ ಪ್ರಶಾಂತ್ ಭೂಷಣ್ ಸ್ಫೋಟಕ ಉತ್ತರ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...