Homeಮುಖಪುಟಸರ್ಕಾರದ ಪರವಾಗಿ ರಫೇಲ್, ಅಯೋಧ್ಯಾ, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು...

ಸರ್ಕಾರದ ಪರವಾಗಿ ರಫೇಲ್, ಅಯೋಧ್ಯಾ, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ಸಿಗುತ್ತದೆ: ಇದರ ಅರ್ಥವೇನು?

ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನಾ ಪ್ರಕರಣದಲ್ಲಿ ನ್ಯಾ. ಗೊಗೋಯ್ ವಿರುದ್ಧ  ವಕೀಲ ದುಷ್ಯಂತ್ ದವೆ ವಾಗ್ದಾಳಿ...

- Advertisement -
- Advertisement -

“ರಫೇಲ್ ವಿಚಾರ, ಅಯೋಧ್ಯಾ ತೀರ್ಪು, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ಸಿಗುತ್ತದೆ. ಇದು ಯಾವ ರೀತಿಯ ಅನಿಸಿಕೆ ಅಥವಾ ಚಿತ್ರಣವನ್ನು ಮೂಡಿಸುತ್ತದೆ?” ಎಂದು ಮಾಜಿ ಮುಖ್ಯ ನ್ಯಾಯಾಧೀಶ ಗೊಗೊಯ್ ವಿರುದ್ಧ ಸುಪ್ರೀಂಕೋರ್ಟ್ ವಕೀಲ ದುಷ್ಯಂತ್ ದವೆ ವಾಗ್ದಾಳಿ ನಡೆಸಿದ್ದಾರೆ.

ಸುಪ್ರೀಂಕೋರ್ಟ್ ವಕೀಲ ದುಷ್ಯಂತ್ ದವೆಯವರು ಬುಧವಾರ ನ್ಯಾಯಾಂಗ ನಿಂದನಾ ಪ್ರಕರಣದಲ್ಲಿ ಪ್ರಶಾಂತ್ ಭೂಷಣ್ ಪರವಾಗಿ ವಾದ ಮಂಡಿಸಿದರು. ಭಾರತದ ಮಾಜಿ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ಸೇರಿದಂತೆ ಕೆಲವು ನಿರ್ದಿಷ್ಟ ನ್ಯಾಯಾಧೀಶರ ಅಡಿಯಲ್ಲಿ ನ್ಯಾಯಾಂಗದ ಸಮಗ್ರತೆಯ ಕೊರತೆಯ ವಿಷಯದಲ್ಲಿ ಇರುವ ವ್ಯಾಪಕ ಅಭಿಪ್ರಾಯದ ಪ್ರಶ್ನೆಯನ್ನು ಅವರು ಎತ್ತಿದರು.

ನ್ಯಾಯಾಂಗವು ಪತನಗೊಂಡಂತೆ ಕಾಣುವ ಅತ್ಯಂತ ಮಹತ್ವದ ಮತ್ತು ರಾಜಕೀಯವಾಗಿ ಸೂಕ್ಷ್ಮವಾದ ಹಲವಾರು ಪ್ರಕರಣಗಳಲ್ಲಿ ನೀಡಲಾದ ತೀರ್ಪಿನ ಮೇಲೆ ದವೆಯವರು ನ್ಯಾಯಾಲಯದ ಗಮನ ಸೆಳೆದರು.

ಗೊಗೋಯ್ ಅವರನ್ನು ಉಲ್ಲೇಖಿಸಿದ ಅವರು, ರಫೇಲ್, ಅಯೋಧ್ಯಾ ಮತ್ತು ಸಿಬಿಐ ಪ್ರಕರಣಗಳಂತಹ ಹಲವಾರು ಪ್ರಕರಣಗಳಲ್ಲಿ ಕೇಂದ್ರ ಸರಕಾರದ ಪರವಾಗಿರುವ ತೀರ್ಪು ನೀಡಿದ ನಂತರ ರಾಜ್ಯಸಭಾ ನಾಮಕರಣ ಮತ್ತು ಝಡ್ ಶ್ರೇಣಿಯ ಭದ್ರತೆಯನ್ನು ಸ್ವೀಕರಿಸುವ ಮೂಲಕ ಮಾಜಿ ಮುಖ್ಯ ನ್ಯಾಯಾಧೀಶರು ನ್ಯಾಯಾಂಗದ ಬಗ್ಗೆ ಎಂತಹ ಒಂದು ಅಭಿಪ್ರಾಯ ಮೂಡಿಸಿದ್ದಾರೆ ಎಂದು ದವೆ ಪ್ರಶ್ನಿಸಿದರು.

“ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ಸಿಗುತ್ತದೆ…ಇದು ಯಾವ ಅಭಿಪ್ರಾಯ ಮೂಡಿಸುತ್ತದೆ?…ರಫೇಲ್ ತೀರ್ಪು, ಅಯೋಧ್ಯಾ ತೀರ್ಪು, ಸಿಬಿಐ ತೀರ್ಪು. ನೀವು ಈ ತೀರ್ಪುಗಳನ್ನು ನೀಡುತ್ತೀರಿ. ನಿಮಗೆ ಇಂತಹ ಸವಲತ್ತುಗಳು ಸಿಗುತ್ತವೆ. ಇವೆಲ್ಲವೂ ನ್ಯಾಯಾಂಗದ ಮೂಲಕ್ಕೇ ಹೊಡೆಯುವ ಗಂಭೀರವಾದ ವಿಷಯಗಳು” ಎಂದು ದವೆಯವರು ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಬಿ.ಆರ್. ಗವಾಯ್ ಮತ್ತು ಕೃಷ್ಢ ಮುರಾರಿ ಅವರನ್ನು ಒಳಗೊಂಡ ಸುಪ್ರೀಂಕೋರ್ಟ್ ಪೀಠಕ್ಕೆ ಹೇಳಿದರು.

ದವೆಯವರು ಅಲ್ಲಿಗೇ ನಿಲ್ಲಿಸಲಿಲ್ಲ. “ರಾಜಕೀಯವಾಗಿ ಸೂಕ್ಷ್ಮವಾದ ಪ್ರಕರಣಗಳು ಕೆಲವು ನಿರ್ದಿಷ್ಟ ನ್ಯಾಯಾಧೀಶರಿಗೆ ಮಾತ್ರ ಸಿಗುವುದು ಏಕೆ? ಉದಾಹರಣೆಗೆ ನ್ಯಾ. ನಾರಿಮನ್- ಅವರಿಗೆ ಎಂದೂ ಇಂತಹಾ ರಾಜಕೀಯ ಸೂಕ್ಷ್ಮ ಪ್ರಕರಣಗಳ ವಿಚಾರಣೆ ಸಿಗುವುದೇ ಇಲ್ಲ!” ಎಂದು ಅವರು ಪ್ರಶ್ನೆ ಮಾಡಿದರು.

‘ಲೈವ್ ಲಾ’ ವರದಿ ಪ್ರಕಾರ, ನ್ಯಾ. ಮಿಶ್ರಾ ಅವರು, “ನ್ಯಾ. ನಾರಿಮನ್ ಅವರು ಕೆಲವು ಸಾಂವಿಧಾನಿಕ ಪೀಠಗಳ ಭಾಗವಾಗಿದ್ದರು” ಎಂದು ಪ್ರತಿಯಾಡಿದರೆ, ನ್ಯಾ. ಗವಾಯ್ ಅವರು, ನ್ಯಾ. ನಾರಿಮನ್ ಅವರು ಮಣಿಪುರ ಪ್ರಕರಣದ ಭಾಗವಾಗಿದ್ದರು ಎಂದು ಹೇಳಿದರು.

ಇದಕ್ಕೆ ಪ್ರತಿಯಾಗಿ ದವೆಯವರು, ತಾನು ರಾಜಕೀಯವಾಗಿ ಸೂಕ್ಷ್ಮವಾಗಿರುವ ಪ್ರಕರಣಗಳ ಬಗ್ಗೆ ಮಾತನಾಡುತ್ತಿದ್ದು, ಬೇಕಾದರೆ ಇಂತಹ 50 ಪ್ರಕರಣಗಳ ಯಾದಿ ಕೊಡಬಲ್ಲೆ ಎಂದೂ ಸೇರಿಸಿದರು. ದೇಶದ 130 ಕೋಟಿ ಜನತೆಯ ಕುರಿತು ನ್ಯಾಯ ಪೀಠಕ್ಕೆ ಇರುವ ಜವಾಬ್ದಾರಿಯನ್ನು ಅವರು ನೆನಪಿಸಿದರು. “ನೀವು 130 ಕೋಟಿ ಜನರ ಹೆತ್ತವರಂತೆ. ನಮ್ಮ ದೇಶದ ರಾಜಕಾರಣಿಗಳ ಬಗ್ಗೆ ನಮಗೆ ಗೊತ್ತು. ನಾಗರಿಕರ ಹಕ್ಕುಗಳನ್ನು ಎತ್ತಿಹಿಡಿಯುವುದು ಸುಪ್ರೀಂಕೋರ್ಟಿಗೆ ಬಿಟ್ಟದ್ದು” ಎಂದು ಅವರು ಹೇಳಿದರು.

ತಾನು ಈ ಪೀಠದ ಮುಂದೆ ಬಹುಶಃ ಕೊನೆಯ ಬಾರಿ ಹಾಜರಾಗುತ್ತಿದ್ದೇನೆ ಎಂದು ಪ್ರಶಾಂತ್ ಭೂಷಣ್ ಅವರು ಸ್ಪಷ್ಟಪಡಿಸಿರುವಂತೆಯೇ, ಅವರು ಯಾವುದೇ ನ್ಯಾಯಾಂಗ ನಿಂದನೆ ಮಾಡಿಲ್ಲ ಎಂದು ಹೇಳುವ ಮೂಲಕ ಅವರು ತನ್ನ ವಾದವನ್ನು ಕೊನೆಗೊಳಿಸಿದರು.

ತನ್ನ ವಾದದ ವೇಳೆ ದವೆಯವರು, ಭಾರತೀಯ ನ್ಯಾಯಾಂಗಕ್ಕೆ ಪ್ರಶಾಂತ್ ಭೂಷಣ್ ಅವರು ನೀಡಿರುವ ಅಗಾಧವಾದ ಕೊಡುಗೆಯನ್ನು ನ್ಯಾಯಪೀಠಕ್ಕೆ ನೆನಪಿಸಿದರು. ವಿಚಾರಣೆಯನ್ನು ಮುಗಿಸಿದ ನ್ಯಾಯಪೀಠವು ತನ್ನ ಆದೇಶವನ್ನು ಕಾದಿರಿಸಿತು.

ಪ್ರಶಾಂತ್ ಭೂಷಣ ಅವರು ಹಿಂದಿನ ನಾಲ್ವರು ಮುಖ್ಯ ನ್ಯಾಯಾಧೀಶರ ನಡವಳಿಕೆಗಳನ್ನು ಉಲ್ಲೇಖಿಸಿ ನ್ಯಾಯಾಂಗದ ಸಮಗ್ರತೆಯ ಕುರಿತಂತೆ ಪ್ರಶ್ನೆಗಳನ್ನು ಎತ್ತುವ ಎರಡು ಟ್ವೀಟ್‌ಗಳನ್ನು ಮಾಡಿದ್ದಕ್ಕಾಗಿ ಸುಪ್ರೀಂಕೋರ್ಟ್ ಕಳೆದ ತಿಂಗಳು ಅವರ ವಿರುದ್ಧ ಸ್ವಯಂಪ್ರೇರಿತ ನ್ಯಾಯಾಂಗ ನಿಂದನಾ ವಿಚಾರಣೆಯನ್ನು ಆರಂಭಿಸಿತ್ತು. ಜೂನ್ 29ರ ಟ್ವೀಟ್‌ನಲ್ಲಿ  ಭೂಷಣ್ ಅವರು ಮುಖ್ಯ ನ್ಯಾಯಾಧೀಶ ಎಸ್.ಎ. ಬೋಬ್ಡೆ ಅವರು ನಾಗಪುರದಲ್ಲಿ ಬಿಜೆಪಿ ನಾಯಕನೊಬ್ಬನಿಗೆ ಸೇರಿದ ಐಷಾರಾಮಿ ಹ್ಯಾರ್ಲೀ ಡೇವಿಡ್‌ಸನ್ ಬೈಕಿನಲ್ಲಿ ಹೆಲ್ಮೆಟ್ ಮತ್ತು ಮಾಸ್ಕ್ ಇಲ್ಲದೇ ಕುಳಿತಿದ್ದಕ್ಕಾಗಿ ಅವರನ್ನು ಗುರಿಮಾಡಿ ಟೀಕಿಸಿದ್ದರು.

ಕೃಪೆ: ಜನತಾಕಿರಿಪೋರ್ಟರ್

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ಸುಪ್ರೀಂಕೋರ್ಟಿನ ನ್ಯಾಯಾಂಗ ನಿಂದನೆ ನೋಟೀಸಿಗೆ ವಕೀಲ ಪ್ರಶಾಂತ್ ಭೂಷಣ್ ಸ್ಫೋಟಕ ಉತ್ತರ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...