Homeಮುಖಪುಟರಂಜಾನ್‌‌ನಲ್ಲಿ ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಸಾರ್ವಜನಿಕವಾಗಿ ಆಹಾರ ಸೇವಿಸುವುದನ್ನು ನಿಷೇಧಿಸಿದರೆ ಸರಿಯೆ?: ಬಿಜೆಪಿಯ ಮಾಂಸ ನಿಷೇಧದ...

ರಂಜಾನ್‌‌ನಲ್ಲಿ ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಸಾರ್ವಜನಿಕವಾಗಿ ಆಹಾರ ಸೇವಿಸುವುದನ್ನು ನಿಷೇಧಿಸಿದರೆ ಸರಿಯೆ?: ಬಿಜೆಪಿಯ ಮಾಂಸ ನಿಷೇಧದ ಬಗ್ಗೆ ಒಮರ್‌‌ ಅಬ್ದುಲ್ಲಾ ಪ್ರತಿಕ್ರಿಯೆ

- Advertisement -
- Advertisement -

ನವರಾತ್ರಿಯ ಸಮಯದಲ್ಲಿ ಎಲ್ಲಾ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ದಕ್ಷಿಣ ದೆಹಲಿ ಬಿಜೆಪಿ ಮೇಯರ್ ಕರೆಗೆ ರಾಜಕೀಯ ವಲಯದಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ದೆಹಲಿಯ ಕೆಲವು ಮಾಂಸದ ಅಂಗಡಿಗಳು ಸ್ವಯಂ ಪ್ರೇರಿತವಾಗಿ ಮುಚ್ಚಿದ್ದರೆ, ಇನ್ನು ಕೆಲವು ಅಂಗಡಿಗಳನ್ನು ಭಯದಿಂದ ಮುಚ್ಚಲಾಗಿತ್ತು. ಇನ್ನೂ ಕೆಲವು ಅಂಗಡಿಗಳು ಮೇಯರ್‌ ಕರೆಗೆ ಗಮನ ಕೊಡಲಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.

ದಕ್ಷಿಣ ಎಂಸಿಡಿ ಮೇಯರ್ ಮುಕೇಶ್ ಸೂರ್ಯನ್ ಅವರು ತಮ್ಮ ಆಯುಕ್ತರಿಗೆ ಪತ್ರ ಬರೆದು ಏಪ್ರಿಲ್ 2 ರಿಂದ ಏಪ್ರಿಲ್ 11 ರವರೆಗೆ ನವರಾತ್ರಿ ಉತ್ಸವದ ಒಂಬತ್ತು ದಿನಗಳ ಅವಧಿಯಲ್ಲಿ ಎಲ್ಲಾ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಆದೇಶ ಹೊರಡಿಸುವಂತೆ ಒತ್ತಾಯಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೇಯರ್ ಸೂರ್ಯನ್ ಅವರು ನವರಾತ್ರಿಯ ಒಂಬತ್ತು ದಿನಗಳಲ್ಲಿ ಜನರು ಈರುಳ್ಳಿ ಮತ್ತು ಬೆಳ್ಳುಳ್ಳಿ ಬಳಕೆಯನ್ನು ಸಹ ತ್ಯಜಿಸುತ್ತಾರೆ. ಆದ್ದರಿಂದ ಮಾಂಸವನ್ನು ತೆರೆದು ಮಾರಾಟ ಮಾಡುವ ದೃಶ್ಯವು ಹಿಂದೂಗಳಿಗೆ ನೋವುಂಟು ಮಾಡುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ: ಹೆಚ್ಚಿದ ಕೋಮು ಉದ್ವಿಗ್ನತೆ ಹಿನ್ನಲೆ: ಕಂಪೆನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಸೆಳೆಯಲು ಪ್ರಯತ್ನಿಸುತ್ತಿರುವ ಡಿಎಂಕೆ ಸರ್ಕಾರ

ಅವರ ಈ ಬೇಡಿಕೆಯು ಬಹುಸಂಖ್ಯಾತವಾದ ಸಿದ್ಧಾಂತವನ್ನು ಆಧರಿಸಿದ್ದು, ಬಹುಸಂಖ್ಯಾತ ಜನರ ಸಲುವಾಗಿ ಅಲ್ಪಸಂಖ್ಯಾತರು ತಮ್ಮ ಅಭ್ಯಾಸದಿಂದ ದೂರವಿಡುವಂತೆ ಒತ್ತಾಯಿಸಲಾಗಿದೆ.

ತಮ್ಮ ಪಕ್ಷದ ಸಹೋದ್ಯೋಗಿಯ ಬೇಡಿಕೆಯನ್ನು ಬೆಂಬಲಿಸಿ, ಪಶ್ಚಿಮ ದೆಹಲಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿ ಸಂಸದ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ, ಅಸಾದುದ್ದೀನ್ ಓವೈಸಿಯಂತಹ ನಾಯಕರ ಪ್ರಚೋದನಕಾರಿ ಹೇಳಿಕೆಗಳಿಗೆ ಬಲಿ ಬೀಳದೆ ಹಿಂದೂಗಳ ಹಬ್ಬವನ್ನು ಗೌರವಿಸುವಂತೆ ಮುಸ್ಲಿಮರನ್ನು ಒತ್ತಾಯಿಸಿದ್ದರು.

ದೆಹಲಿಯ ದಕ್ಷಿಣ, ಪೂರ್ವ ಮತ್ತು ಉತ್ತರ ಕಾರ್ಪೋರೇಷನ್‌ ಅನ್ನು ಬಿಜೆಪಿ ಆಳುತ್ತಿದೆ. ಬಿಜೆಪಿ ಆಡಳಿತದ ಪಾಲಿಕೆಯ ಈ ತೀರ್ಮಾನಕ್ಕೆ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ರಾಜ್ಯದ ಆಡಳಿತ ಪಕ್ಷವಾದ ಎಎಪಿ, ಕಾಂಗ್ರೆಸ್ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಕೂಡ ಬಿಜೆಪಿ ಮೇಯರ್‌ ಅವರ ಸರ್ವಾಧಿಕಾರಿ ನೀತಿಗೆ ಕಿಡಿ ಕಾರಿದ್ದಾರೆ.

ಪರ್ವೇಶ್‌ ಸಾಹಿಬ್ ಸಿಂಗ್ ವರ್ಮಾ ಅವರ ಬಹುಸಂಖ್ಯಾತವಾದದ ಬೇಡಿಕೆಗೆ ಕಾಶ್ಮೀರದ ಮಾಜಿ ಸಿಎಂ ಅಬ್ದುಲ್ಲಾ ಉತ್ತರಿಸಿದ್ದು, “ಮುಸ್ಲಿಮರು ಪ್ರಾಬಲ್ಯವಿರುವ ಕಾಶ್ಮೀರದಲ್ಲಿ ರಂಜಾನ್ ಸಮಯ ತೆರೆದ ಸ್ಥಳದಲ್ಲಿ ಆಹಾರ ನೀಡುವುದನ್ನು ನಿಷೇಧಿಸುವುದು ಸೂಕ್ತವೇ?” ಎಂದು ವ್ಯಂಗ್ಯವಾಗಿ ಕೇಳಿದ್ದಾರೆ.

ಇದನ್ನೂ ಓದಿ: ’ಕಲ್ಲು ಹೂವಿನ ನೆರಳು’: ತಾಜಾ ನಿರೂಪಣೆಯ ಮತ್ತು ಸಂವೇದನೆಯುಳ್ಳ ಗ್ರಹಿಕೆಯ ಕಥೆಗಳು

“ರಂಜಾನ್ ಸಮಯದಲ್ಲಿ ನಾವು ಸೂರ್ಯೋದಯ ಮತ್ತು ಸೂರ್ಯಾಸ್ತದ ನಡುವೆ ಊಟ ಮಾಡುವುದಿಲ್ಲ. ಪ್ರತಿಯೊಬ್ಬ ಮುಸ್ಲಿಮೇತರ ನಿವಾಸಿಗಳು ಅಥವಾ ಪ್ರವಾಸಿಗರು ಸಾರ್ವಜನಿಕವಾಗಿ, ವಿಶೇಷವಾಗಿ ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ತಿನ್ನುವುದನ್ನು ನಾವು ನಿಷೇಧಿಸಿದರೆ ಅದು ಸರಿ ಎಂದು ನಾನು ಭಾವಿಸುತ್ತೇನೆ. ದಕ್ಷಿಣ ದೆಹಲಿಗೆ ಬಹುಸಂಖ್ಯಾತವಾದ ಸರಿಯಾಗಿದ್ದರೆ, ಜಮ್ಮು ಕಾಶ್ಮೀರಕ್ಕೂ ಅದು ಸರಿಯಾಗಿರುತ್ತದೆ” ಎಂದು ಒಮರ್‌‌ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ದೆಹಲಿ ಕಾಂಗ್ರೆಸ್ ಉಪಾಧ್ಯಕ್ಷ ಅಭಿಷೇಕ್ ದತ್ ಅವರು ಬಿಜೆಪಿ ಮೇಯರ್‌ ಬೇಡಿಕೆಯನ್ನು ಅಗ್ಗದ ಪ್ರಚಾರದ ಸ್ಟಂಟ್ ಎಂದು ಬಣ್ಣಿಸಿದ್ದಾರೆ. ಇಂತಹ ನಿಷೇಧವನ್ನು ವಿಧಿಸಲು ಅವರಿಗೆ ಯಾವುದೇ ಹಕ್ಕಿಲ್ಲ ಎಂದು ಅವರು ಹೇಳಿದ್ದಾರೆ.

ಎಎಪಿ ನಾಯಕ ದುರ್ಗೇಶ್ ಪಾಠಕ್ ಅವರು, ಇಂತಹ ನಿಷೇಧವನ್ನು ಬಿಜೆಪಿ ಆಡಳಿತದ ಉತ್ತರ ಪ್ರದೇಶ ಮತ್ತು ಹರಿಯಾಣದಲ್ಲಿ ವಿಧಿಸಲಿ ಎಂದು ಸವಾಲು ಹಾಕಿದ್ದಾರೆ.

ದಕ್ಷಿಣ ಎಂಸಿಡಿ ವ್ಯಾಪ್ತಿಯಲ್ಲಿ ಸುಮಾರು 1,500 ನೋಂದಾಯಿತ ಮಾಂಸದ ಅಂಗಡಿಗಳಿವೆ. ನವರಾತ್ರಿಯಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಪಾಲಿಕೆಯು ಇದೇ ಮೊದಲ ಬಾರಿಗೆ ಕೋರಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಪೊಲೀಸರು ಜನರ ಮೊಬೈಲ್ ಪರಿಶೀಲಿಸುವಂತಿಲ್ಲ : ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್ ಪಂತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...