Homeಫ್ಯಾಕ್ಟ್‌ಚೆಕ್ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

- Advertisement -
- Advertisement -

ನ್ಯೂಯಾರ್ಕ್ ಮೂಲದ ಜಾಹೀರಾತು ಸಂಸ್ಥೆಯೊಂದು ರಾಮನ ಚಿತ್ರಗಳನ್ನು ಟೈಮ್ಸ್ ಸ್ಕ್ವೇರ್‌ನಲ್ಲಿ ಜಾಹೀರಾತು ಫಲಕಗಳಲ್ಲಿ ಪ್ರಸಾರ ಮಾಡಲು ನಿರಾಕರಿಸಿದ ನಂತರ, ಹಲವಾರು ಸುದ್ದಿ ವೆಬ್‌ಸೈಟ್‌ಗಳು, ಇದು ಅಮೆರಿಕಾದಲ್ಲಿನ “ಮುಸ್ಲಿಂ ಗುಂಪುಗಳು” ನಡೆಸಿದ ಅಭಿಯಾನದ ಫಲಿತಾಂಶವಾಗಿದೆ ಎಂದು ವರದಿ ಮಾಡಿವೆ.

ಆದರೆ ನಿಜವೇನೆಂದರೆ ಈ ವರದಿಗಳಿಗೆ ವಿರುದ್ದವಾಗಿ ಜಾಹೀರಾತುಗಳನ್ನು ಹಾಕದಂತೆ ಪ್ರತಿಭಟಿಸಿರುವವರಲ್ಲಿ ಹಿಂದೂಗಳು ಸೇರಿದಂತೆ ಎಲ್ಲಾ ಧರ್ಮಗಳ ನಾಗರಿಕ ಹಕ್ಕುಗಳ ಸಂಘಟನೆಯ ಜನರು ಇದ್ದರು ಎಂಬುವುದಾಗಿದೆ.

ಒಪಿಇಂಡಿಯಾ ಮತ್ತು ಇಂಡಿಯಾ.ಕಾಂನಂತಹ ಸುದ್ದಿ ಸಂಸ್ಥೆಗಳು ನಾಸ್ಡಾಕ್ ಬಿಲ್‌ಬೋರ್ಡ್ ಅನ್ನು ನಿರ್ವಹಿಸುವ ಜಾಹೀರಾತು ಕಂಪನಿಯಾದ ಬ್ರಾಂಡೆಡ್ ಸಿಟೀಸ್ ನೆಟ್ವರ್ಕ್ ಮುಸ್ಲಿಂ ಸಂಘಟನೆಗಳು ಇದರ ವಿರುದ್ಧ ಅರ್ಜಿಯನ್ನು ಸಲ್ಲಿಸಿದ ನಂತರ ಬಿಲ್‌ಬೋರ್ಡ್ ನೀಡಲು ನಿರಾಕರಿಸಿದೆ ಎಂದು ವರದಿಗಳನ್ನು ಪ್ರಕಟಿಸಿತು.

ದಕ್ಷಿಣ ಏಷ್ಯಾದ ನಾಗರಿಕ ಹಕ್ಕುಗಳ ಗುಂಪುಗಳ ಒಕ್ಕೂಟದ ಪ್ರತಿಭಟನೆಯಿಂದಾಗಿ ಜಾಹೀರಾತುಗಳನ್ನು ಹಾಕಲು ಕಂಪನಿ ನಿರಾಕರಿಸಿದ ನಂತರ ಸುಳ್ಳು ಹೇಳಿಕೆಗಳನ್ನು ಒಳಗೊಂಡ ಸುದ್ದಿಗಳನ್ನು ಈ ವೆಬ್‌ಸೈಟ್‌ಗಳು ವರದಿ ಮಾಡುತ್ತುದೆ.

ನಡೆದದ್ದೇನು ಅಥವಾ ಧ್ವೇಷ ಅಭಿಯಾನ ನಡೆಸುವ ವೆಬ್‌ಸೈಟ್ ಹೇಳಿದ್ದೇನು?

ಬಲಪಂಥೀಯ ವೆಬ್‌ಸೈಟ್‌ಗಳಾದ ಒಪಿಂಡಿಯಾ ಮತ್ತು ಇಂಡಿಯಾ.ಕಾಮ್ ತಮ್ಮ ವರದಿಗಳಲ್ಲಿ ಹೀಗೆ ಬರೆದಿದೆ “ಭಾರತೀಯ ಅಲ್ಪಸಂಖ್ಯಾತರ ವಕೀಲರ ನೆಟ್‌ವರ್ಕ್- (ಇಮಾನ್‌ನೆಟ್), ಜಸ್ಟಿಸ್ ಫಾರ್ ಆಲ್, ಕೊಯಿಲಿಷನ್ ಆಫ್ ಅಮೆರಿಕನ್ ಫಾರ್‌ ಪ್ಲೂರಲಿಸಂ ಇನ್ ಇಂಡಿಯಾ (ಸಿಎಪಿಐ), ಉತ್ತರ ಅಮೆರಿಕಾದ ಭಾರತೀಯ ಮುಸ್ಲಿಂ ಸಂಘ (ನೈಮಾ), ಇಸ್ಲಾಮಿಕ್ ಸರ್ಕಲ್ ಆಫ್ ನಾರ್ಥ್ ಅಮೆರಿಕಾ-ಸೋಷಿಯಲ್ ಜಸ್ಟಿಸ್ (ಐಸಿಎನ್‌ಎಎಸ್‌ಜೆ) ಮತ್ತು ದಿ ಇಂಟರ್‌ನ್ಯಾಷನಲ್ ಸೊಸೈಟಿ ಫಾರ್ ಪೀಸ್ ಅಂಡ್ ಜಸ್ಟೀಸ್ ಈ ಅರ್ಜಿಯನ್ನು ಸಲ್ಲಿಸಿ ಜಾಹೀರಾತು ಫಲಕಗಳಲ್ಲಿ ರಾಮನ ಚಿತ್ರ ಬಾರದಂತೆ ತಡೆ ಹಿಡಿದಿದ್ದಾರೆ”.

ಆದರೆ ಈ ಕ್ರಮವನ್ನು ವಿರೋಧಿಸುವ ಇತರ ಸಂಘಟನೆಗಳ ಬಗ್ಗೆ ವರದಿಯು ಮೌನವಾಗಿದೆ. ಆ ಮೂಲಕ ಕೇವಲ ಮುಸ್ಲಿಂ ಸಂಘಟನೆಗಳನ್ನು ಮಾತ್ರ ತನ್ನ ದ್ವೇಷ ಪ್ರಚಾರದ ಗುರಿಯಾಗಿಸಿಕೊಂಡಿದೆ.

ಕಂಪನಿಯು ಜಾಹಿರಾತು ಹಾಕುವುದನ್ನು ನಿರಾಕರಿಸಿರುವುದು “ಜಿಹಾದಿ ಪಡೆಗಳಿಗೆ” ತಲೆಬಾಗುವುದನ್ನು ಸಂಕೇತಿಸುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಈ ವರದಿಯನ್ನು ಉಲ್ಲೇಖಿಸಿ ಹೇಳಲಾಗುತ್ತಿದೆ.

ಬಿಲ್‌ಬೋರ್ಡ್ ವಿರುದ್ದ ಪ್ರತಿಭಟಿಸಿದ ನಾಗರಿಕ ಹಕ್ಕುಗಳ ಸಂಘಟನೆ

ಜುಲೈ 31 ರಂದು ಅಮೆರಿಕಾದ ಹಲವಾರು ನಾಗರಿಕ ಹಕ್ಕುಗಳ ಸಂಘಟನೆಗಳಾದ ಅಮೆರಿಕನ್ ಇಂಡಿಯನ್ ಪಬ್ಲಿಕ್ ಅಫೇರ್ಸ್ ಕಮಿಟಿ (ಎಐಪಿಎಸಿ) ನ್ಯೂಯಾರ್ಕ್ ನಗರದ ಮೇಯರ್‌ಗೆ ಆಗಸ್ಟ್ 5 ರಂದು ಟೈಮ್ಸ್ ಸ್ಕ್ವೇರ್‌ನಲ್ಲಿ “ಇಸ್ಲಾಮೋಫೋಬಿಕ್” ಬಿಲ್‌ಬೋರ್ಡ್ ಅನ್ನು ಪ್ರದರ್ಶಿಸುವುದನ್ನು ತಡೆಯುವಂತೆ ಕೇಳಿಕೊಂಡಿದ್ದವು.

ಟೈಮ್ಸ್ ಸ್ಕ್ವೇರ್ನಲ್ಲಿ ಹಾಕಲಾಗುವ ಜಾಹೀರಾತುಗಳ ಪ್ರದರ್ಶನವು “ನಂಬಿಕೆಯ ಆಚರಣೆಯಲ್ಲ ಆದರೆ ದ್ವೇಷದ ಆಚರಣೆಯಾಗಿದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇವುಗಳಲ್ಲಿ ಕೊಯಿಲಿಷನ್ ಅಗೈನ್ಸ್ಟ್‌ ಫ್ಯಾಸಿಸಂ ಇನ್ ಇಂಡಿಯಾ (ಸಿಎಎಫ್‌ಐ), ಹಿಂದೂಸ್ ಫಾರ್‌ ಹ್ಯೂಮನ್ ರೈಟ್ (ಎಚ್‌ಎಫ್‌ಹೆಚ್ಆರ್), ಗ್ಲೋಬಲ್ ಇಂಡಿಯನ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಜಿಪಿಎ), ಅಸೋಸಿಯೇಷನ್ ಆಫ್ ಇಂಡಿಯನ್ ಮುಸ್ಲಿಸ್, ಸಾಧನಾ: ಕೊಲಿಷನ್ ಆಫ್ ಪ್ರೋಗ್ರೆಸಿವ್‌ ಹಿಂದೂಸ್ ಮತ್ತು ಇತರವು ಸೇರಿವೆ.

ಹಿಂದೂಸ್ ಫಾರ್‌ ಹ್ಯೂಮನ್ ರೈಟ್ (ಎಚ್‌ಎಫ್‌ಹೆಚ್‌ಆರ್) ಸಂಘಟನೆಯ ಸಹ-ಸಂಸ್ಥಾಪಕಿ ಮತ್ತು ಮಂಡಳಿಯ ಸದಸ್ಯೆ ಸುನೀತಾ ವಿಶ್ವನಾಥ್ ಅವರು “ಕೆಲವನ್ನು ಹೊರತುಪಡಿಸಿ ಎಲ್ಲಾ ಸಂಘಟನೆಗಳು ಮುಸ್ಲಿಮರದ್ದಲ್ಲ. ನಾವೆಲ್ಲರೂ ನ್ಯೂಯಾರ್ಕ್ ಚುನಾಯಿತ ಅಧಿಕಾರಿಗಳಿಗೆ ಜಾಹೀರಾತು ಫಲಕಗಳ ಮಾಲೀಕರ ಮೇಲೆ ಒತ್ತಡ ಹೇರಿದ್ದೇವೆ ಮತ್ತು ನಮ್ಮ ಧ್ವನಿಯನ್ನು ಗಟ್ಟಿಯಾದ ರೀತಿಯಲ್ಲಿ ಎತ್ತಿದ್ದೇವೆ” ಎಂದಿದ್ದಾರೆ

“ವಿವಿಧ ರೀತಿಯ ಭಾರತೀಯ ವಲಸೆಗಾರರು ಭಾರತೀಯ ಪ್ರಜಾಪ್ರಭುತ್ವಕ್ಕಾಗಿ ಮಾತನಾಡಲು ಒಂದಾಗಬೇಕು ಮತ್ತು ಸಂಘಪರಿವಾರವನ್ನು ಸೋಲಿಸಲು ಸಹಾಯ ಮಾಡಬೇಕು. ಪ್ರತಿರೋಧ ಚಳವಳಿಯು ಹಿಂದೂ ಎಂದು ಗುರುತಿಸುವವರು ಸೇರಿದಂತೆ ಎಲ್ಲರನ್ನೂ ಸೇರಿಸುವ ಅಗತ್ಯವಿದೆ” ಎಂದು ಸುನಿತಾ ವಿಶ್ವನಾಥ್ ಹೇಳಿದ್ದಾರೆ.

ಒಕ್ಕೂಟದ ಭಾಗವಾಗಿದ್ದ ಗ್ಲೋಬಲ್ ಇಂಡಿಯಾ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಜಿಐಪಿಎ) ಯ ಪ್ರತಿನಿಧಿ ಪ್ರತಿಭಟನೆಗಳು ಭಾರತೀಯ-ಅಮೇರಿಕನ್ ವಲಸೆಗಾರರಿಂದಲೇ ಹೊರತು ಯಾವುದೇ ಒಂದು ನಿರ್ದಿಷ್ಟ ನಂಬಿಕೆ ಅಥವಾ ಧರ್ಮದ ಜನರಿಂದ ಅಲ್ಲ ಎಂದು ಹೇಳಿದರು.

ಆಗಸ್ಟ್ 5 ರಂದು ನ್ಯೂಯಾರ್ಕ್‌ನ ಟೈಮ್ಸ್‌ ಸ್ಕ್ವೇರ್‌ನಲ್ಲಿ ರಾಮ ಮಂದಿರದ ಜಾಹಿರಾತು ಹಾಕದಿರುವಂತೆ ನಾಗರಿಕ ಹಕ್ಕುಗಳ ಗುಂಪು ಒತ್ತಡ ಹಾಕಿದ್ದರಿಂದ ಜಾಹೀರಾತು ಸಂಸ್ಥೆ ಜಾಹಿರಾತು ಪ್ರಸಾರ ಮಾಡಲು ನಿರಾಕರಿಸಿತು. ಆದರೆ ಈ ಪ್ರತಿಭಟನೆಯು ವಿವಿಧ ನಾಗರಿಕ ಹಕ್ಕುಗಳ ಗುಂಪುಗಳ ಸಾಮೂಹಿಕ ಪ್ರಯತ್ನವಾಗಿತ್ತು ಹಾಗೂ ಅದು ಕೇವಲ ಮುಸ್ಲಿಮರ ಗುಂಪುಗಳದ್ದು ಮಾತ್ರವಾಗಿರಲಿಲ್ಲ.

ಕೃಪೆ: ದಿ ಕ್ವಿಂಟ್


ಓದಿ: ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...